ಮಂಗಳೂರು ಸೆ 26: ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಶಾಲೆಟ್ ಪಿಂಟೋರವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ಅಭಿವೃದ್ಧಿಶೀಲ ರಾಷ್ಟ್ರ ನಿರ್ಮಾಣದಲ್ಲಿ ತಮ್ಮ ವಿಶಿಷ್ಟ ಸಾಮರ್ಥ್ಯ ಹಾಗೂ ಅನುಭವವನ್ನು ಹೊಂದಿರುವ ಶಾಲೆಟ್ ಪಿಂಟೋ ಅವರ ನೇಮಕವನ್ನು ಕಾಂಗ್ರೆಸ್ ಪಕ್ಷದವರು ಸಂತೋಷದಿಂದ ಸ್ವಾಗತಿಸಿದ್ದಾರೆ.
ಅಂಜಲೋರ್ ಚರ್ಚ್ ನಲ್ಲಿ ಜನಿಸಿದ ಶಾಲೆಟ್ ಪಿಂಟೊ, ಅಂಬೋಸ್ ವಾಸ್ ಹಾಗೂ ಲೀನಾ ವಾಸ್ ದಂಪತಿಯ ಪುತ್ರಿಯಾಗಿದ್ದಾರೆ. ಎಸ್.ಡಿ.ಎಂ. ಲಾ ಕಾಲೇಜಿನಲ್ಲಿ ಬಿ.ಎ. ಲಾ, ಎಲ್.ಎಲ್.ಬಿ. ಪದವಿ ಪಡೆದಿರುವ ಇವರು, ಜೊಸ್ಸಿ ಪಿಂಟೋರವರನ್ನು ವಿವಾಹವಾಗಿದ್ದಾರೆ. ಜೊಸ್ಸಿ ಪಿಂಟೋರವರು ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಿನ್ನಿಗೋಳಿ ವಲ್ಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.