ಮಂಗಳೂರು ನಗರದ ಕದ್ರಿ ಜೋಗಿ ಮಠ ಸಮೀಪದ ಉಳ್ಳಾಲ ಶ್ರೀನಿವಾಸ ಮಲ್ಯ ಉದ್ಯಾವನದಲ್ಲಿ ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.
ಈ ಸಂಧರ್ಭದಲ್ಲಿ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಯುತ ಅರ್ಜುನ್ ಭಂಡಾರ್ಕರ್ ರವರನ್ನು ಹಾಗೂ ಮಲ್ಯ ಕುಟುಂಬಸ್ಥರಾದ ಉಳ್ಳಾಲ ನರಹರಿ ಮಲ್ಯರವರನ್ನು ಗೌರವಿಸಲಾಯಿತು.

ಸಮಿತಿಯ ಸಂಚಾಲಕಿ ಶ್ರೀಮತಿ ಮಂಜುಳಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀನಿವಾಸ್ ಮಲ್ಯರ ಕೊಡುಗೆಯನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಶ್ರೀಯುತ ಶ್ರೀನಿವಾಸ್ ಮಲ್ಯರ ಕುಟುಂಬಸ್ಥರಾದ ನರಹರಿ ಮಲ್ಯ, ಸಮಿತಿಯ ಗೌರವಾದ್ಯಕ್ಷರು,ಮಾಜಿ ಸಚಿವರಾದ ರಾಮನಾಥ್ ರೈ , ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಮಾಜಿ ರಾಜ್ಯ ಸಭಾ ಸದಸ್ಯ ಬಿ.ಇಮ್ರಾಹಿಂ,ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸ್ಟ್ಯಾನಿ ಅಲ್ವಾರಿಸ್ , ಮೂಡದ ಅಧ್ಯಕ್ಷರಾದ ಸದಾಶಿವ ಉಳ್ಳಾಲ, ಕರಾವಳಿ ಪ್ರಾಧಿಕಾರ ಮಂಡಳಿಯ ಅಧ್ಯಕ್ಷರಾದ ಎಂ. ಎ . ಗಫೂರ್, ಕುದ್ರೋಳಿ ದೇವಸ್ಥಾನದ ಕಾಜಾಂಚಿ ಪದ್ಮರಾಜ್ .ಪೂಜಾರಿ, ಮಾಜಿ ಶಾಸಕರಾದ ಜಿ.ಆರ್.lobo , ಕೊಂಕಣಿ ಅಕಾಡೆಮಿ ಸದಸ್ಯ ಸಮರ್ಥ ಭಟ್,ಮಾಜಿ ಮಹಾಪೌರರಾದ ಶಶಿಧರ್ ಹೆಗ್ಡೆ, ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ನಂದನ್ ಮಲ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ , ಬ್ಲಾಕ್ ಅಧ್ಯಕ್ಷರಾದ ಪ್ರಕಾಶ್.ಬಿ. ಸಾಲಿಯಾನ್ , ಪುರುಷೋತ್ತಮ ಚಿತ್ರಾಪುರ ಮಾಜಿ ಪಾಲಿಕೆ ಸದಸ್ಯರಾದ ನಾಗವೇಣಿ , ಪದ್ಮನಾಭ್ ಪನಿಕರ್ , ಪದ್ಮನಾಭ ಅಮೀನ್, ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಕಲಾ ಜೋಗಿ, ರೂಪಾ ಚೇತನ್, ಮಲ್ಯ ಜನ್ಮ ದಿನ ಆಚರಣ ಸಮಿತಿಯ ಪದಾಧಿಕಾರಿಗಳಾದ ನೀತ್ ಶರಣ್, ರಾಜೇಶ್ ದೇವಾಡಿಗ,ಟಿಸಿ ಗಣೇಶ್ , ಹೊನಯ್ಯ , ಯೋಗೀಶ್ ನಾಯಕ್, ಮಮತಾ ಕುಡ್ವ , ವಿದ್ಯಾ ಶೆಣೈ , ನಿನಾ ಕೆ.ಸಿ ಮತ್ತಿತರು ಉಪಸ್ಥಿತರಿದ್ದರು.


