Tag: ಕೆನರಾಟಿವಿನ್ಯೂಸ್‌

COMMUNITY NEWS HOME LATEST NEWS

ವಿಟ್ಲ: ದೇಲಂತಬೇಟ್ಟು ಚರ್ಚ್‌ಗೆ ನೂತನ ಧರ್ಮಗುರು ಆಗಮನ- ವಂ. ಸುನೀಲ್‌ ಪಿಂಟೋಗೆ ವಿದಾಯ

ವಿಟ್ಲ: ಸಂತ ಪೌಲರ ದೇವಾಲಯ ದೇಲಂತ ಬೇಟ್ಟು ಇಲ್ಲಿಗೆ ನೂತನ ಧರ್ಮ ಗುರುಗಳಾಗಿ ಫಾದರ್ ರಿಚಾರ್ಜ್ ಡಿಸೋಜ ಅವರು ಮೇ 27 ರಂದು ಆಗಮಿಸಿದರು. ಈ ವೇಳೆ ಅವರನ್ನು ಭಕ್ತಾದಿಗಳು ಸ್ವಾಗತಿಸಿದರು. ನಿರ್ಗಮಿತ ಧರ್ಮಗುರು ವಂ. ಸುನೀಲ್‌ ಅವರು ನೂತನ ಧರ್ಮಗುರುಗಳಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮಿತ ಧರ್ಮಗುರುಗಳಿಗೆ ವಿದಾಯ ಸಂತ ಪೌಲರ ದೇವಾಲಯದಲ್ಲಿ ಆರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಧರ್ಮಗುರು ವಂ. ಸುನೀಲ್‌ ಅವರನ್ನು ಚರ್ಚ್‌ ಭಕ್ತಾಧಿಗಳು ಭಾರವಾದ ಮನಸ್ಸಿನಿಂದ ವಿದಾಯ ಹೇಳಿದರು. ಈ ವೇಳೆ ಅವರು […]

COMMUNITY NEWS HOME INETRNATIONAL LATEST NEWS

267ನೇ ಪೋಪ್‌ ಆಗಿ ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ನೇಮಕ

ವ್ಯಾಟಿಕನ್‌ ಸಿಟಿ: ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ಅವರು 267ನೇ ನೂತನ ಪೋಪ್‌ ಆಗಿ ಆಯ್ಕೆಯಾಗಿದ್ದಾರೆ. ಅವರನ್ನು ಲೀಯೋ XIV ಆಗಿ ಮರುನಾಮಕರಣ ಮಾಡಲಾಗಿದೆ. ಅಮೇರಿಕ ಮೂಲದವರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ…..     ಮತದಾನದ ವೇಳಿನ ದೃಶ್ಯ

DAKSHINA KANNADA HOME LATEST NEWS

ಉಳ್ಳಾಲದಲ್ಲಿ ಯುವತಿಯ ಗ್ಯಾಂಗ್‌ರೇ*ಪ್‌ ಆರೋಪ: ಮೂವರ ಬಂಧನ

ಮಂಗಳೂರು: ನಗರ ಹೊರವಲಯದ ಉಳ್ಳಾಲದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.   ಬಂಧಿತ ಪ್ರಭುರಾಜ್ ಹಾಗೂ ಮಿಥುನ್ ಬಂಧಿತರನ್ನು ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು. ಇವರು ಮೂವರು ಸ್ನೇಹಿತರಾಗಿದ್ದು, ಮೂಲ್ಕಿ ಮೂಲದ ಪ್ರಭುರಾಜ್ ಆಟೋ ಚಾಲಕನಾಗಿದ್ದು, ಉಳ್ಳಾಲ ಕುಂಪಲದ ಮಿಥುನ್ ಎಲೆಕ್ಟ್ರೀಷಿಯನ್‌ ಆಗಿ ವೃತ್ತಿ […]

DAKSHINA KANNADA HOME LATEST NEWS

ರೈತರಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

ಮಂಗಳೂರು : ರೈತರಿಗೆ ಪ್ರೋತ್ಸಾಹಧನ ನೀಡಲು ತೋಟಗಾರಿಕೆ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಠ ಅರ್ಧ ಎಕರೆಯಿಂದ 5 ಎಕರೆವರೆಗೆ ಕಾಳುಮೆಣಸು, ಕೋಕೊ, ಗೇರು, ತಾಳೆಬೆಳೆ, ರಾಂಬೂಟಾನ್, ಡ್ರಾಗನ್ ಫ್ರೂಟ್, ಮ್ಯಾಂಗೋಸ್ಟಿನ್, ತೆಂಗಿನ ತೋಟದಲ್ಲಿ ಅಂತರ ಬೆಳೆಯಾಗಿ ದಾಲ್ಚಿನ್ನಿ(ಚಕ್ಕೆ) ಬೆಳೆಗಳ ಪ್ರದೇಶ ವಿಸ್ತರಣೆಗೆ (ಹೊಸ ತೋಟ) ಶೇ 40ರ ಸಹಾಯಧನ, ಕಾಳುಮೆಣಸು ಪುನಶ್ಚೇತನಕ್ಕೆ ಶೇ 50 ಸಹಾಯಧನ, ನೀರು ಸಂಗ್ರಹಣಾ ಘಟಕಗಳ ಸ್ಥಾಪನೆಗೆ ಸಹಾಯಧನ, ಜೇನು ಸಾಕಾಣಿಕೆ ಯೋಜನೆಯಡಿ ಜೇನುಪೆಟ್ಟಿಗೆ ಹಾಗೂ ಜೇನು ಕುಟುಂಬ ಖರೀದಿಗೆ ಶೇ 75 […]

DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರಿಂದ ‘ಗರಿಗಳ ಭಾನುವಾರ’ ಆಚರಣೆ

ಮಂಗಳೂರು: ಇಂದು ಗರಿಗಳ ಭಾನುವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಭಾನುವಾರ ಆರಂಭಗೊಂಡಿದೆ. ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿ ಕೊಂಡಿದ್ದರೆಂದು ಬೈಬಲ್ ಉಲ್ಲೇಖ. ಇದರ ಸಂಕೇತವಾಗಿ ಕರಾವಳಿಯ ಎಲ್ಲಾ ಚರ್ಚುಗಳಲ್ಲಿ ತೆಂಗಿನ ಗರಿಗಳನ್ನು ಹಿಡಿದು ಏ.13 (ಇಂದು) ಕ್ರೈಸ್ತರು ಭಾನುವಾರದ ಬಲಿ ಪೂಜೆಯಲ್ಲಿ ಪಾಲ್ಗೊಂಡರು. ಮಂಗಳೂರು ನಗರದ ಮಿಲಾಗ್ರಿಸ್‌ ಚರ್ಚ್‌ನಲ್ಲಿ ನಡೆದ ಮೆರವಣಿಗೆ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಏ.29 ರಂದು ಬೃಹತ್‌ ಪ್ರತಿಭಟನೆ

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ಮಂಗಳೂರು ಹೊರವಲಯದ ಅಡ್ಯಾರ್‌ ಕಣ್ಣೂರಿನಲ್ಲಿ ಎ.29ರಂದು ಬೃಹತ್‌ ಪ್ರತಿಭಟನೆ ನಡೆಯಲಿದೆ. ಅಂದು ಸಂಜೆ 3 ಗಂಟೆಗೆ ಮಂಗಳೂರು ಹೊರವಲಯದ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿ ಕೊಳ್ಳಲಾಗಿದೆ.ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್‌ರ ನೇತೃತ್ವದಲ್ಲಿ ಶನಿವಾರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಪ್ರತಿಭಟನೆಯಲ್ಲಿ ದ.ಕ- ಉಡುಪಿ ಜಿಲ್ಲೆಯ ಲಕ್ಷಾಂತರ ಜನರ ಜೊತೆಗೆ […]

DAKSHINA KANNADA HOME LATEST NEWS

ಇಂದು ಸುರತ್ಕಲ್‌, ಕೃಷ್ಣಾಪುರ ಸೇರಿ ಹಲವೆಡೆ ವಿದ್ಯುತ್‌ ನಿಲುಗಡೆ

ಮಂಗಳೂರು: ಸುರತ್ಕಲ್ ಇಂಡಸ್ಟ್ರಿಯಲ್ ಫೀಡರ್ ಹಾಗೂ ಕಾಟಿಪಳ್ಳ ಉಪಕೇಂದ್ರದ ವ್ಯಾಪ್ತಿಯ ಪ್ರದೇಶಗಳಲ್ಲಿ ಎ.10ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಸುರತ್ಕಲ್, ಕಾನ, ಕಟ್ಲ, ತಡಂಬೈಲ್, ಮುಂಚೂರು, ಮುಕ್ಕ, ಸಸಿಹಿತ್ಲು, ಚೇಳ್ಯಾರು, ಮಧ್ಯ, ಕೃಷ್ಣಾಪುರ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್, 5ನೇ ಬ್ಲಾಕ್, 6ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, 9ನೇ ಬ್ಲಾಕ್ ಕೃಷ್ಣಾಪುರ, ಚೊಕ್ಕಬೆಟ್ಟು, ಕೋಟೆ, ಕುತ್ತೆತ್ತೂರು, ಆದರ್ಶನಗರ, ರಾಜೀವನಗರ, ಸೂರಿಂಜೆ, ಶಿಬರೂರು, ಬಾಳ, ಮಂಗಳಪೇಟೆ, ಹಾಗೂ ಸುತ್ತಮುತ್ತಲಿನಪ್ರದೇಶಗಳಲ್ಲಿ ವಿದ್ಯುತ್ […]

DAKSHINA KANNADA HOME LATEST NEWS

ಮಂಗಳೂರು: ಸಿಇಟಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ 8 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ – 2025, ಏಪ್ರಿಲ್ 16 ಮತ್ತು 17ರಂದು ನಡೆಯಲಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಯನ್ನು ಶಾಂತಿಯುತವಾಗಿ ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೆೀಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ. […]

DAKSHINA KANNADA HOME LATEST NEWS

ಕರಿಮಣ ಸರ ಕಳವುಗೈದ ಪ್ರಕರಣ: ಆರೋಪಿ ಬಂಧನ

ಮಂಗಳೂರು:  ತಾಲೂಕಿನ  ಬೆಳುವಾಯಿಯಲ್ಲಿ ಮಾ.31ರಂದು ಮಹಿಳೆಯೊಬ್ಬರ ಕುತ್ತಿಗೆಯಿಂದ   ಚಿನ್ನದ ಕರಿಮಣ ಸರ ಕಳವುಗೈದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು  ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕಾಂತಾವರದ ಕಂದಿಲ ನಿವಾಸಿ  ಆರೋಪಿ ಪ್ರಶಾಂತ್ ಸಾಲಿಯನ್   ಯಾನೆ ಪಚ್ಚು (34) ಬಂಧಿತ ಆರೋಪಿ.   ಆರೋಪಿ  ಕೈಯಿಂದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಬೈಕನ್ನು   ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೈಯಿಂದ  ವಶಪಡಿಸಿಕೊಂಡ  ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,30,000 ರೂ.  ಆಗಬಹುದು […]

HOME INETRNATIONAL LATEST NEWS NATIONAL

ಭಾರತಕ್ಕೆ ಬಂದಿಳಿದ ದುಬೈ ಯುವರಾಜ: ಪ್ರಧಾನಿ ಮೋದಿ ಭೇಟಿ

ಹೊಸದಿಲ್ಲಿ: ದುಬೈನ ಯುವರಾಜ ಹಮ್ದಾನ್ ಬಿನ್ ಮುಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಅವರು ಮಂಗಳವಾರ ತಮ್ಮ ಮೊದಲ ಅಧಿಕೃತ ಭೇಟಿಗಾಗಿ ಹೊಸದಿಲ್ಲಿಗೆ ಆಗಮಿಸಿದ್ದು, ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ದಿಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ದುಬೈ ಯುವರಾಜ ಮುಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಅವರನ್ನು ಕೇಂದ್ರ ಪ್ರವಾಸೋದ್ಯಮ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಖಾತೆ ಸಚಿವ ಸುರೇಶ್ ಗೋಪಿ ಸ್ವಾಗತಿಸಿದರು. ಬಳಿಕ ದುಬೈ ಯುವರಾಜನಿಗೆ ವಿದ್ಯುಕ್ತವಾಗಿ ಸರಕಾರಿ ಗೌರವವನ್ನು ನೀಡಲಾಗಿದೆ.  […]