Tag: ಕೆನರಾಟಿವಿ ನ್ಯೂಸ್‌

DAKSHINA KANNADA HOME LATEST NEWS

ಡ್ಯೂಟಿಯಲ್ಲಿದ್ದ ಮಂಗಳೂರು ಟ್ರಾಫಿಕ್‌ ಪೊಲೀಸರ ಬೈಕ್‌ ಕಳ್ಳತನ: ಅರ್ಧ ಗಂಟೆಯ ಕೈಚಳಕ

ಮಂಗಳೂರು: ಕರ್ತವ್ಯದಲ್ಲಿದ್ದ ಟ್ರಾಫಿಕ್‌ ಪೊಲೀಸರೊಬ್ಬರು ಪಾರ್ಕ್‌ ಮಾಡಿದ ಅರ್ಧಗಂಟೆಯೊಳಗೆ ಬೈಕು ಕಳವು ನಡೆಸಿದ ಬಗ್ಗೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಪುನೀತ್‌ ಬಿ.ವೈ ಎಂಬುವವರು ಮಂಗಳೂರು ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಜ.5 ರಂದು ಮಂಗಳೂರು ಕೆ.ಬಿ.ಕಟ್ಟೆಯಲ್ಲಿ ಸಂಚಾರ ನಿಯಂತ್ರಣ  ಕರ್ತವ್ಯಕ್ಕೆ ನೇಮಿಸಿದಂತೆ ಸಂಜೆ 5:30 ಗಂಟೆಗೆ ತನ್ನ ತಂದೆಯ ಹೆಸರಿನಲ್ಲಿರುವ KA-13-EG 3008  ನೋಂದಣಿಯ ಹೋಂಡಾ ಶೈನ್‌ […]

DAKSHINA KANNADA HOME LATEST NEWS

ವಿಟ್ಲ: ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್ ಮೂಡಿಗೆರೆಗೆ ಗಡಿಪಾರು

ವಿಟ್ಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕ್ರಿಮಿನಲ್ ಹಿನ್ನೆಲೆಯುಳ್ಳ ಅಬ್ದುಲ್ ಖಾದರ್ ಯಾನೆ ಶೌಕತ್ ಎಂಬಾತನನ್ನು ಗಡಿಪಾರು ಮಾಡಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮ ನಿವಾಸಿ ಅಬ್ದುಲ್ ಖಾದರ್ ವಿರುದ್ಧ ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಏನ್ ಡಿ ಪಿ ಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿತ್ತು. ಈ ಪ್ರಕರಣಗಳ ದಾಖಲಾತಿ ಮೇಲೆ ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿ ಮಂಗಳೂರು ರವರು ದಕ್ಷಿಣ […]

DAKSHINA KANNADA HOME LATEST NEWS

ವಿಟ್ಲ: ಪೆರುವಾಯಿ ದನ ಕಳ್ಳನತದ ಆರೋಪಿ ಬಂಧನ- ಉಳಿದವರಿಗಾಗಿ ಶೋಧ

ವಿಟ್ಲ: ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ದನ ಕಳ್ಳತನ ಮಾಡಿದ ಆರೋಪದಲ್ಲಿ ಉಳ್ಳಾಲದ ಓರ್ವ ಆರೋಪಿಯನ್ನು ತಿಂಗಳ ಬಳಿಕ ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಝುಲ್ಫಾನ್ ಮಾಲಿಕ್ (30) ಬಂಧಿತ ಆರೋಪಿ. ಘಟನೆ ವಿವರ 18-11-2025 ರಂದು ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಲ್ಲಿ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಅವರ 4 ದನಗಳು ಮೇಯುತ್ತಿದ್ದವು. ರಾತ್ರಿ ವೇಳೆ ಅಲ್ಲಿಯೇ ಮಲಗಿದ್ದ […]

DAKSHINA KANNADA HOME LATEST NEWS

ಮಂಗಳೂರು: ಬಾಲ ಯೇಸುವಿನ ವಾರ್ಷಿಕ ಮಹೋತ್ಸವ- ಹೊರೆ ಕಾಣಿಕೆ ಮೆರವಣಿಗೆ

ಮಂಗಳೂರು: ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜ 3 ರಂದು , ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ವಂ. ವಿಜಯ್ ಮೊಂತೆರೋ, (ಸಹಾಯಕ ಧರ್ಮಗುರು , ಕೊರ್ಡೆಲ್ ಚರ್ಚ್) ಆಶೀರ್ವಾದ ನೀಡಿ, ಶ್ರೀಮತಿ ರೂತ್ ಕ್ಯಾಸ್ಟೆಲಿನೊ, (ಉಪಾಧ್ಯಕ್ಷೆ, ಕೊರ್ಡೆಲ್ ಚರ್ಚ್) ಮೆರವಣಿಗೆಗೆ ಧ್ವಜ ಹಾರಿಸಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಸಾಮಾಜಿಕ […]

HOME LATEST NEWS

ರಸ್ತೆಗಳೆಲ್ಲವೂ ಕಪ್ಪು ಬಣ್ಣದ್ದೇ ಆಗಿರುತ್ತದೆ ಏಕೆ..? ಏನಿದರ ವಿಶೇಷತೆ….!

ನಾವು ಮನೆಯಿಂದ ಹೊರಗೆ ಕಾಲಿಟ್ಟ ತಕ್ಷಣವೇ ಸಾಮಾನ್ಯವಾಗಿ ಮೊದಲು ಕಾಣಿಸುವುದೇ ಡಾಂಬಾರು ರಸ್ತೆಗಳು. ನಮ್ಮ ಊರಿನಿಂದ ಬೇರೆ ಎಲ್ಲಾದರೂ ಪ್ರಯಾಣಿಸುವುದಾದರೂ ನಾವು ಹೋಗುವುದು ರಸ್ತೆಗಳಲ್ಲೇ, ಆದರೆ ಆ ಹೆಚ್ಚಿನ ರಸ್ತೆಗಳೆಲ್ಲವೂ ಕಪ್ಪು ಬಣ್ಣದ್ದೇ ಆಗಿರುತ್ತದೆ ಏಕೆ ಎಂದು ಕುತೂಹಲ ಹುಟ್ಟಿದುವುಂಟು. ಅದಕ್ಕೆ ಉತ್ತರ ಇಲ್ಲಿದೆ ನೋಡಿ. ಪ್ರಪಂಚದ ಹೆಚ್ಚಿನ ರಸ್ತೆಗಳು ಬಿಟುಮೆನ್ ಎಂಬ ವಸ್ತುವಿನಿಂದ ನಿರ್ಮಿಸಲ್ಪಟ್ಟಿವೆ. ಬಿಟುಮೆನ್ ಎನ್ನುವುದು ಕಚ್ಚಾ ತೈಲದಿಂದ ದೊರೆಯುವ ಒಂದು ದಪ್ಪ ದ್ರವ ಪದಾರ್ಥವಾಗಿದ್ದು, ಇದು ನೈಸರ್ಗಿಕವಾಗಿ ಕಪ್ಪು ಅಥವಾ ಗಾಢ ಕಂದು […]

DAKSHINA KANNADA HOME LATEST NEWS

ಸುಳ್ಯದಲ್ಲಿ ತಾಯಿ & 3 ವರ್ಷದ ಮಗುವಿನ ಮೃತದೇಹ ಕೆರೆಯಲ್ಲಿ ಪತ್ತೆ-ಆತ್ಮಹತ್ಯೆ ಶಂಕೆ

ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತನ್ನ ತಂದೆ, ತಾಯಿ, ಪತ್ನಿ, ಮಗುವಿನೊಂದಿಗ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ರವಿವಾರ ಬೆಳಗ್ಗೆ ಕಾಣದೇ […]

HOME

ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ: ಕಾಂಗ್ರೆಸ್ಸಿಗರ ಮೇಲೆ ಶಾಸಕ ಸುನೀಲ್‌ ಗರಂ

ಮಂಗಳೂರು: ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ ನಡೆದಿದೆ ಎಂಬ ಬಗ್ಗೆ ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಅವರು ಆರೋಪಿಸಿದ್ದು, ಇದಕ್ಕೆಲ್ಲಾ ಸ್ಥಳೀಯ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿಯವರ ದ್ವೇಷ ಹಾಗೂ ಅಸೂಯೆಯ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ ಅವರು, ಕಾರ್ಕಳದ ಪ್ರವಾಸೋದ್ಯಮಕ್ಕೆ ಕೊಳ್ಳಿ ಇಟ್ಟ ಕಾಂಗ್ರೆಸ್ ನಾಯಕರನ್ನು ಇತಿಹಾಸ ಕ್ಷಮಿಸದು ಎಂದೂ ಆರೋಪಿಸಿದ್ದಾರೆ. ಏನಿದೆ ಅವರ ಪೋಸ್ಟ್‌ನಲ್ಲಿ ಥೀಂ ಪಾರ್ಕ್ ನ ಬಾಗಿಲನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು […]

COMMUNITY NEWS DAKSHINA KANNADA HOME LATEST NEWS

ಮಂಗಳೂರು ಧರ್ಮಕ್ಷೇತ್ರದ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆ: ಮಕ್ಕಳ ವರ್ಷ ಘೋಷಣೆ

ಮಂಗಳೂರು: ಯೇಸು ಕ್ರಿಸ್ತರ ದೈವದರ್ಶನ ಮಹೋತ್ಸವದ (ಎಪಿಫನಿ) ಪ್ರಯುಕ್ತ ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಭಾನುವಾರ ವಾರ್ಷಿಕ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು. ಮಿಲಾಗ್ರಿಸ್ ಚರ್ಚ್‌ನಿಂದ ಆರಂಭಗೊಂಡು ರೊಸಾರಿಯೊ ಕೆಥೆಡ್ರಲ್ ವರೆಗೆ ಮೆರವಣಿಗೆಯು ನಡೆಯಿತು.     ಕಾರ್ಯಕ್ರಮವು ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಅಧ್ಯಕ್ಷತೆಯಲ್ಲಿ ಮಿಲಾಗ್ರಿಸ್ ಚರ್ಚ್‌ನಲ್ಲಿ ನಡೆದ ಸಾಮೂಹಿಕ ಬಲಿಪೂಜೆಯೊಂದಿಗೆ ಪ್ರಾರಂಭವಾಯಿತು. ಈ ಹಬ್ಬವು ಜ್ಯೋತಿಷಿಗಳ ಭೇಟಿಯ ಮೂಲಕ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ಕಾರಿನ ಟೈಯರ್ ಬ್ಲಾಸ್ಟ್: ಅದೃಷ್ಟವಶಾತ್ ಪಾರಾದ ಬೋಂದೆಲ್ ಚರ್ಚ್ ಪಾದ್ರಿ

ಮಂಗಳೂರು: ಕಾರಿನ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಎಸೆಯಲ್ಪಟ್ಟ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಾವೂರು ಬಳಿಯ ಮರಕಡದಲ್ಲಿ ಜನವರಿ 1 ರಂದು ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಬೋಂದೆಲ್ ಚರ್ಚ್ ಪಾದ್ರಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಪಾದ್ರಿಯಾಗಿರುವ ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಅಪಾಯದಿಂದ ಪಾರಾದವರು.‌ ಜನವರಿ 1ರಂದು ಕಿನ್ನಿಗೋಳಿಯ ನೀರುಡೆಯಲ್ಲಿರುವ ತಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮಧ್ಯಾಹ್ನ […]

DAKSHINA KANNADA HOME LATEST NEWS

ದೇಶವ್ಯಾಪ್ತಿ ಕ್ರೈಸ್ತರ ಮೇಲೆ ನಡೆದ ದಾಳಿ ಖಂಡಿಸಿ ಮಂಗಳೂರಿನಲ್ಲಿ ಮೌನ ಪ್ರತಿಭಟನೆ

ಮಂಗಳೂರು: ಕ್ರಿಸ್‌ಮಸ್ ಹಬ್ಬದ ವೇಳೆ ದೇಶವ್ಯಾಪ್ತಿ ಕ್ರೈಸ್ತರ ಮೇಲೆ ನಡೆದ ದಾಳಿಗಳನ್ನು ಖಂಡಿಸಿ, ಸಂತ ಸೆಬಾಸ್ಟಿಯನ್ ಚರ್ಚ್, ಬೆಂದೂರು, ಮಂಗಳೂರು ವತಿಯಿಂದ ಜ.3ರಂದು ಸಂಜೆ 6 ಗಂಟೆಗೆ ಚರ್ಚಿನ ಮುಂಭಾಗದಲ್ಲಿ ಮೌನ ಪ್ರತಿಭಟನೆ ಆಯೋಜಿಸಲಾಯಿತು. ಈ ಮೌನ ಪ್ರತಿಭಟನೆಯಲ್ಲಿ ಚರ್ಚಿನ ಧರ್ಮಗುರುಗಳಾದ ವಂ. ವಾಲ್ಟರ್ ಡಿಸೋಜಾ, ಸಹಾಯಕ ಧರ್ಮಗುರುಗಳಾದ ವಂ. ವಿವೇಕ್ ಪಿಂಟೋ ಹಾಗೂ ವಂ. ಓಜ್ಮೊಂಡ್ ಡಿಸೋಜಾ, ವಂ. ಅರುಣ್ ಲೋಬೊ (ಪ್ರಾಂಶುಪಾಲರು), ಉಪಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ವಂ. ವಾಲ್ಟರ್ ಡಿಸೋಜಾ […]