Tag: ಕೆನರಾಟಿವಿ ನ್ಯೂಸ್‌

HOME LATEST NEWS

ಶ್ರೀ ಕ್ಷೇತ್ರ ಕಾರಿಂಜದಲ್ಲಿ ಸಂಸದ ಕ್ಯಾ. ಚೌಟ ನೇತೃತ್ವದ ೩ನೇ ಆವೃತ್ತಿಯ ʼಯೋಗ ವಿದ್‌ ಯೋಧʼ ಕಾರ್ಯಕ್ರಮ

ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರ ಬೆಟ್ಟದ ಆವರಣದಲ್ಲಿ 3ನೇ ಆವೃತ್ತಿಯ ’ಯೋಗ ವಿದ್ ಯೋಧ’ ಬೃಹತ್ ಯೋಗಾಭ್ಯಾಸ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಪ್ರಕೃತಿ ಹಾಗೂ ದೈವಿಕತೆಯ ಮಡಿಲಲ್ಲಿ ಮನಸ್ಸನ್ನು ಶಾಂತಗೊಳಿಸಿ, ದೇಹವನ್ನು ಹತೋಟಿಗೆ ತರುವ ಈ ಅಪೂರ್ವ ಯೋಗಾಭ್ಯಾಸಕ್ಕೆ ಪ್ರಕೃತಿ ರುದ್ರ ರಮಣೀಯ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿ ಸಾಕ್ಷಿಯಾಯಿತು. ದ.ಕ. ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ನೂರಾರು […]

LATEST NEWS

ರಚನಾ’ ಸಂಸ್ಥೆಯಿಂದ ಹೊಸ ಆದಾಯ ತೆರಿಗೆ ಕಾಯ್ದೆ 2025 ಕುರಿತು ಮಾಹಿತಿ ಕಾರ್ಯಾಗಾರ

ಮಂಗಳೂರು:ಕ್ಯಾಥೊಲಿಕ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಾದ ‘ರಚನಾ’ ತನ್ನ ಸದಸ್ಯರ ಮಹಾಸಭೆಯನ್ನು ಇತ್ತೀಚೆಗೆ ಬೆಂದೂರಿನ ಸೇಂಟ್ ಸೆಬಾಸ್ಟಿಯನ್ ಚರ್ಚ್ ಕಮ್ಯುನಿಟಿ ಹಾಲ್‌ನಲ್ಲಿ ಹಮ್ಮಿಕೊಂಡಿತ್ತು. ಕಾರ್ಯಕ್ರಮದಲ್ಲಿ “ಹೊಸ ಆದಾಯ ತೆರಿಗೆ ಕಾಯ್ದೆ 2025” ಕುರಿತು ವಿಶೇಷ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿದ್ದ ಮಂಗಳೂರಿನ ಆದಾಯ ತೆರಿಗೆ ಉಪ ಆಯುಕ್ತರಾದ (IRS) ಶ್ರೀ ವೈಶಾಖ್ ಪಿ.ಆರ್. ಅವರು ಮಾತನಾಡಿ, “ದೇಶದ ಪ್ರಗತಿ ಮತ್ತು ಸಾರ್ವಜನಿಕರ ಕಲ್ಯಾಣದಲ್ಲಿ ನಾವು ಕಟ್ಟುವ ತೆರಿಗೆ ಹಣ ಪ್ರಮುಖ […]

HOME LATEST NEWS

ಕಲುಷಿತ ನೀರು ಪೂರೈಕೆ ಹಿನ್ನೆಲೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳ ತುರ್ತು ಸಭೆ

ಮಂಗಳೂರು, ಜೂನ್.19: ಮಂಗಳೂರು ನಗರದ ಬಿಜೈ 31ನೇ ವಾರ್ಡಿನ ನೋಡು ಬಟ್ಟಗುಡ್ಡೆ ಪರಿಸರದಲ್ಲಿ ಕಲುಷಿತ ನೀರು ಪೂರೈಕೆಯಾಗಿ ಹಲವರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ, ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಸಾರ್ವಜನಿಕರ ಮತ್ತು ಪಾಲಿಕೆ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಯಿತು. ನೋಡು ಬಟ್ಟಗುಡ್ಡೆ ರಾಮಕೃಷ್ಣ ಭಜನಾ ಮಂದಿರದ ಆವರಣದಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು. ಸ್ಥಳ ತಪಾಸಣೆ ಮತ್ತು ನೀರಿನ ಪರೀಕ್ಷೆ: ಕುಡಿಯುವ ನೀರಿಗೆ ಡ್ರೈನೇಜ್ ನೀರು ಸೇರಿರುವ ದೂರು ಬಂದ ತಕ್ಷಣ ಶಾಸಕರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ […]

LATEST NEWS

ಮಂಗಳೂರು ದಕ್ಷಿಣ ಜೆಡಿಎಸ್ ಕ್ಷೇತ್ರ ಸಮಿತಿ ಸಭೆ ಯಶಸ್ವಿ: ಸಂಘಟನೆ ಬಲವರ್ಧನೆಗೆ ಸಂಕಲ್ಪ

ಮಂಗಳೂರು, ಜೂನ್ 19: ಜನತಾದಳ (ಜಾತ್ಯತೀತ) ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ–203ರ ಮಹತ್ವದ ಸಂಘಟನಾ ಸಭೆಯು ಕ್ಷೇತ್ರಾಧ್ಯಕ್ಷರಾದ ಎನ್.ಪಿ. ಪುಷ್ಪರಾಜನ್ ಅವರ ಅಧ್ಯಕ್ಷತೆಯಲ್ಲಿ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಕ್ಷೇತ್ರದ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವುದು, ಸದಸ್ಯತ್ವ ಅಭಿಯಾನವನ್ನು ತೀವ್ರಗೊಳಿಸುವುದು, ಮುಂಬರುವ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸುವುದು ಮತ್ತು ಜನಸಾಮಾನ್ಯರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಸಭೆಯ ಆರಂಭದಲ್ಲಿ ಪಕ್ಷದ ಬೆಳವಣಿಗೆ, ಸಂಘಟನಾ ಚಟುವಟಿಕೆಗಳು ಹಾಗೂ ಕ್ಷೇತ್ರದ ರಾಜಕೀಯ […]

LATEST NEWS

ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತು ಉದ್ಘಾಟನೆ: ನಾಯಕತ್ವದ ಗುಣ ಬೆಳೆಸಿಕೊಳ್ಳಲು ಗಣ್ಯರ ಕರೆ.ಅನಿಲ್ ಲೋಬೊ

ಮಂಗಳೂರು : ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-2027 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರುಗಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ಮುಖ್ಯ ಅತಿಥಿ, ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೊ ಅವರು ಮಾತನಾಡಿ, “ವಿದ್ಯಾರ್ಥಿಗಳು ಕೇವಲ ಓದಿಗೆ ಸೀಮಿತವಾಗಬಾರದು. ಕಲಿಕೆಯ ಜೊತೆಗೆ ಒಳ್ಳೆಯ ನಾಯಕತ್ವದ ಗುಣಗಳನ್ನು […]

HOME LATEST NEWS

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ಮಹತ್ವದ ಸಭೆ:

ಬೆಂಗಳೂರು, ಜೂನ್ 19: ಕರ್ನಾಟಕದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಮತ್ತು ಉದ್ಯಮಿಗಳಿಗೆ ಎದುರಾಗುತ್ತಿರುವ ತಾಂತ್ರಿಕ ತೊಂದರೆಗಳನ್ನು ನಿವಾರಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಭೆಯಲ್ಲಿ ಅವರು ಮಾತನಾಡಿದರು. ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌) ಮತ್ತು ಅರಣ್ಯ ಇಲಾಖೆಯಿಂದ ಆಗುತ್ತಿರುವ ತಾಂತ್ರಿಕ ತೊಂದರೆಗಳ ಬಗ್ಗೆ ಮುಂದಿನ ೧೫ ರಿಂದ ೨೦ ದಿನಗಳಲ್ಲಿ ಸಂಪೂರ್ಣ ವರದಿ ಸಿದ್ಧಪಡಿಸಬೇಕು. ಸಮಸ್ಯೆಗಳ ಜೊತೆಗೆ ಅವುಗಳಿಗೆ ಸೂಕ್ತ ಪರಿಹಾರಗಳನ್ನು […]

HOME LATEST NEWS

MRG ಸಮೂಹದ ಮುಕುಟಕ್ಕೆ ಮತ್ತೊಂದು ಗರಿ: ಉದ್ಯಮಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರಿಂದ ಅತ್ಯಾಧುನಿಕ ಖಾಸಗಿ ವಿಮಾನ ಖರೀದಿ

ಮಂಗಳೂರು: ದೇಶದ ಪ್ರಮುಖ ಉದ್ಯಮ ಸಂಸ್ಥೆಯಾದ ಎಂಆರ್‌ಜಿ (MRG) ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಯಶಸ್ವಿ ಉದ್ಯಮ ಪಯಣದಲ್ಲಿ ಮತ್ತೊಂದು ಅಪೂರ್ವ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಎಂಆರ್‌ಜಿ ಕುಟುಂಬದ ಜಾಗತಿಕ ಬೆಳವಣಿಗೆಯ ಪ್ರತೀಕವಾಗಿ, ಅಮೆರಿಕದಿಂದ ತರಿಸಲಾದ 14 ಆಸನಗಳ ಅತ್ಯಾಧುನಿಕ ‘ಎಂಬ್ರೇಯರ್ ಲೆಗಸಿ 650’ ಖಾಸಗಿ ವಿಮಾನವನ್ನು ಸಂಸ್ಥೆಗೆ ಸೇರ್ಪಡೆ ಗೊಳಿಸಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಮಂತ್ರಾಲಯ ಶ್ರೀ […]

LATEST NEWS

ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ

ಮಂಗಳೂರು, ಜೂನ್ 19: ಮಂಗಳೂರು ನಗರದ ಕೆಲವು ಕಡೆಗಳಲ್ಲಿ ಕಲುಷಿತ ನೀರು ಪೂರೈಕೆಯಾಗಿ ಸಾರ್ವಜನಿಕರ ಆರೋಗ್ಯ ಹದಗೆಟ್ಟಿದೆ ಎಂಬ ಸ್ಥಳೀಯ ಶಾಸಕ ವೇದವ್ಯಾಸ್ ಕಾಮತ್ ಅವರ ಆರೋಪ ಸಂಪೂರ್ಣ ರಾಜಕೀಯ ಪ್ರೇರಿತ ಎಂದು ವಿಧಾನಪರಿಷತ್ ಶಾಸಕ ಐವನ್ ಡಿ’ಸೋಜಾ ಅವರು ತೀವ್ರವಾಗಿ ಖಂಡಿಸಿದ್ದಾರೆ. ಕುಡಿಯುವ ನೀರಿನಂತಹ ಸೂಕ್ಷ್ಮ ವಿಚಾರದಲ್ಲಿ ಜನರ ಮನಸ್ಸಿನಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಬೇಡಿ ಎಂದು ಅವರು ಎಚ್ಚರಿಸಿದ್ದಾರೆ. ನಗರದ ಜನರಿಗೆ ಶುದ್ಧ ಕುಡಿಯುವ ನೀರು ಕೊಡುವುದು ಮತ್ತು ನೀರಿನಲ್ಲಿ ಯಾವುದೇ ತೊಂದರೆ ಬಾರದಂತೆ […]

LATEST NEWS

ಹೈಕಮಾಂಡ್ ಬುಲಾವ್- ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಅಶೋಕ್ ರೈ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆಗಳು ಮತ್ತೆ ದಟ್ಟವಾಗಿವೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಶಾಸಕರು ಶುಕ್ರವಾರ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆಯೇ ಅಶೋಕ್ ರೈ ಅವರಿಗೆ ಮೊದಲ ಹಂತದಲ್ಲಿಯೇ ಸಚಿವ ಸ್ಥಾನ ಸಿಗಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಆ ಸಮಯದಲ್ಲಿ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಶಾಸಕರಿಗೆ ಸಚಿವ ಸ್ಥಾನ ಸಿಗಲಿ ಎಂದು […]

LATEST NEWS

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಮಂಗಳೂರು: ಕರ್ನಾಟಕ ನಾಯರ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆ.ಪಿ.ಟಿ ಬಳಿಯಿರುವ ಎಸ್‌. ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ಜರುಗಿತು, ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಶ್ರೀ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್‌ ಪುನರಾಯ್ಕೆಗೊಂಡರು. ಖಜಾಂಚಿಯಾಗಿ ಶ್ರೀ ಅಜಯಕುಮಾರ್‌ , ಉಪಾಧ್ಯಕ್ಷರಾಗಿ ಶ್ರೀಮತಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್‌, ಬೋರ್ಡ್ ಮೆಂಬರುಗಳಾಗಿ ಶ್ರೀ ವಿಜಯಕುಮಾರ್‌, ಎಮ್.ವಿ. ರಾಜನ್‌, ಎ.ಎಸ್.ಮೋಹನ್‌ ರವರು, […]