ಶ್ರೀ ಕ್ಷೇತ್ರ ಕಾರಿಂಜದಲ್ಲಿ ಸಂಸದ ಕ್ಯಾ. ಚೌಟ ನೇತೃತ್ವದ ೩ನೇ ಆವೃತ್ತಿಯ ʼಯೋಗ ವಿದ್ ಯೋಧʼ ಕಾರ್ಯಕ್ರಮ
ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರ ಬೆಟ್ಟದ ಆವರಣದಲ್ಲಿ 3ನೇ ಆವೃತ್ತಿಯ ’ಯೋಗ ವಿದ್ ಯೋಧ’ ಬೃಹತ್ ಯೋಗಾಭ್ಯಾಸ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಪ್ರಕೃತಿ ಹಾಗೂ ದೈವಿಕತೆಯ ಮಡಿಲಲ್ಲಿ ಮನಸ್ಸನ್ನು ಶಾಂತಗೊಳಿಸಿ, ದೇಹವನ್ನು ಹತೋಟಿಗೆ ತರುವ ಈ ಅಪೂರ್ವ ಯೋಗಾಭ್ಯಾಸಕ್ಕೆ ಪ್ರಕೃತಿ ರುದ್ರ ರಮಣೀಯ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿ ಸಾಕ್ಷಿಯಾಯಿತು. ದ.ಕ. ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ನೂರಾರು […]











