Tag: ಕೆನರಾಟಿವಿ ನ್ಯೂಸ್‌

LATEST NEWS

*ಬೈಲೂರು: ಊರು ಬೋಡು ಪುದರ್ ಬೊಡ್ಚಿ ನಾಟಕದ ಶುಭಮುಹೂರ್ತ*

ಕಾರ್ಕಳ: ಚೈತನ್ಯ ಕಲಾವಿದರು ಬೈಲೂರು ಇವರ ಈ ವರ್ಷದ ತುಳು ಹಾಸ್ಯಮಯ ನಾಟಕ “ಊರು ಬೋಡು ಪುದರ್ ಬೊಡ್ಚಿ” ಇದರ ಶುಭ ಮುಹೂರ್ತ ಕಾರ್ಯಕ್ರಮ ಜುಲೈ 16ರಂದು ಬೈಲೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಿತು. ಅರ್ಚಕರಾದ ನಾರಾಯಣ ಭಟ್ ಕೌಡೂರು ನಾಟಕ ಮುಹೂರ್ತದ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿ ನಾಟಕದ ಯಶಸ್ವಿಗಾಗಿ ದೇವರಲ್ಲಿ ಪ್ರಾರ್ಥಿಸಿದರು. ತಂಡದ ಸಾರಥಿ ನಾಟಕದ ಕರ್ತೃ ಪ್ರಸನ್ನ ಶೆಟ್ಟಿ ಬೈಲೂರು , ಪದ್ಮರಾಜ ಹೆಗ್ಡೆ, ಹರೀಶ್ ಶೆಟ್ಟಿ, ಹರಿಜೀವನ ಹೆಗ್ಡೆ, ಕುಟ್ಟಿ ಶೇರಿಗಾರ್, ಗುಣಕರ […]

COMMUNITY NEWS LATEST NEWS

ನಿಡ್ಡೋಡಿ ಚರ್ಚಿನಲ್ಲಿ ಕಥೊಲಿಕ್ ಸಭಾದಿಂದ ವನಮಹೋತ್ಸವ: ನೆಟ್ಟ ಗಿಡಗಳ ನಿರ್ವಹಣೆಗೆ ಶ್ರಮದಾನ

ಮೂಡಬಿದ್ರೆ : ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ನಿಡ್ಡೋಡಿ ಘಟಕದ ನೇತೃತ್ವದಲ್ಲಿ ವನಮಹೋತ್ಸವ ಹಾಗೂ ನೆಟ್ಟ ಗಿಡಗಳ ನಿರ್ವಹಣಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಚರ್ಚಿನ ಧರ್ಮಗುರುಗಳಾದ ವಂದನೀಯ ಲಿಯೋ ವಿಲಿಯಂ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಕೇವಲ ಗಿಡಗಳನ್ನು ನೆಡುವುದಷ್ಟೇ ವನಮಹೋತ್ಸವದ ಉದ್ದೇಶವಾಗಬಾರದು, ಬದಲಿಗೆ ಅವುಗಳನ್ನು ನಿರಂತರವಾಗಿ ಪೋಷಿಸಿ, ಬೆಳೆಸಿ ಹೆಮ್ಮರವಾಗಿಸುವ […]

LATEST NEWS

ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ: ಮಂಗಳೂರಿನಲ್ಲಿ ಬೃಹತ್ ಬೈಕ್ ರ್ಯಾಲಿ

ಮಂಗಳೂರು, ಜು.18 :- ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಸ್ವೀಪ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ ಆಶ್ರಯದಲ್ಲಿ ವಿಶೇಷ ಜಾಗೃತಿ ಅಭಿಯಾನದ ಅಂಗವಾಗಿ ಶನಿವಾರ ಬೃಹತ್ ಬೈಕ್ ರ್ಯಾಲಿ ನಡೆಯಿತು. ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ರ್ಯಾಲಿ ಆಯೋಜಿಸಲಾಗಿದ್ದು, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಲಾಲ್‍ಬಾಗ್ ಮಂಗಳೂರು ಮಹಾನಗರಪಾಲಿಕೆ ಆವರಣದಿಂದ ಪ್ರಾರಂಭಗೊಂಡ ಬೈಕ್ ರ್ಯಾಲಿ ಕದ್ರಿ ಉದ್ಯಾನವನದವರೆಗೆ ನಡೆಯಿತು. ಈ ಸಂದರ್ಭದಲ್ಲಿ […]

LATEST NEWS

ಸಾಹಿತ್ಯ ಮತ್ತು ಶಿಕ್ಷಣದ ಮೂಲಕವೇ ಸಂಸ್ಕಾರಯುತ ನಾಗರಿಕ ಸಮಾಜ ನಿರ್ಮಾಣ ಸಾಧ್ಯ: ಸಾಹಿತಿ ಚಂದ್ರಕಲಾ ನಂದಾವರ

ಮಂಗಳೂರು, ಜುಲೈ:18: ಮಂಗಳೂರಿನ ಕೋರ್ಟ್ ಗುಡ್ಡೆಯ ಆಲದ ಮರದಡಿಯಲ್ಲಿ ಸಮಾನ ಸಾಹಿತ್ಯಾಸಕ್ತರು, ಕನ್ನಡ ಭಾಷಾ ಪಂಡಿತರ ಸಾಹಿತ್ಯ ಚರ್ಚೆಯಲ್ಲಿ ಆರಂಭವಾದ ಮಿತ್ರ ಮಂಡಳಿ ಸಾಹಿತ್ಯ ಲೋಕಕ್ಕೆ ದಿಗ್ಗಜ ಸಾಹಿತಿಗಳನ್ನು ನೀಡಿದೆ. ಮಿತ್ರ ಮಂಡಳಿಯಿಂದ ಬಿಡುಗಡೆಯಾದ ಪುಸ್ತಕಗಳು ಚರಿತ್ರೆಯ ಪುಟಗಳಲ್ಲಿ ಶ್ರೇಷ್ಟ ಸಾಹಿತ್ಯ ಪ್ರಕಾರಗಳಾಗಿ ದಾಖಲಾಗಿವೆ. ಇದರಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರ, ವಿದ್ಯಾರ್ಥಿಗಳ ಕೊಡುಗೆ ದೊಡ್ಡದಿದೆ. ಆ ನಿಟ್ಟಿನಲ್ಲಿ ಮಿತ್ರ ಮಂಡಳಿಯನ್ನು ಮತ್ತೇ ಪುನರುಜ್ಜೀನವನಗೊಳಿಸುವ ಕಾರ್ಯವನ್ನು ಕೆನರಾ ಶಿಕ್ಷಣ ಸಂಸ್ಥೆ ಮಾಡಿರುವುದು ಉತ್ತಮ ಹೆಜ್ಜೆ ಎಂದು ಖ್ಯಾತ […]

DAKSHINA KANNADA HOME LATEST NEWS

ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ – ರೈತರ ನೋಂದಣಿಗೆ ಜುಲೈ 31 ಕೊನೆಯ ದಿನ

ಮಂಗಳೂರು, ಜುಲೈ 18:- ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾವಣೆ ಗೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ […]

LATEST NEWS

ಬಿ.ಸಿ. ರೋಡ್ ಲಾವಣ್ಯ ಹತ್ಯೆ ಅತ್ಯಂತ ಪೈಶಾಚಿಕ ಕೃತ್ಯ; ಆರೋಪಿಗೆ ಗಲ್ಲು ಶಿಕ್ಷೆ ಅಥವಾ ಎನ್‌ಕೌಂಟರ್ ಮಾಡಿ: ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಪುತ್ತೂರು: ಬಿ.ಸಿ. ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ದುಷ್ಕರ್ಮಿಯಿಂದ ಬರ್ಬರವಾಗಿ ಹತ್ಯೆಯಾದ ಯುವತಿ ಲಾವಣ್ಯ ಅವರ ನಿವಾಸಕ್ಕೆ ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ಭೇಟಿ ನೀಡಿ, ಶೋಕತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಘಟನೆಯ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಶಾಸಕರು, ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಸಮಾಜದ ಮಾನಸಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸಮಾಜದ ಜಡತ್ವಕ್ಕೆ ಶಾಸಕರ ಬೇಸರ: “ನಡುಹಗಲಲ್ಲೇ ಹೆಣ್ಣುಮಗಳೊಬ್ಬಳಿಗೆ ರಕ್ಷಣೆ ಇಲ್ಲ […]

LATEST NEWS

ಉರ್ವಾ ಸುಂಕದಕಟ್ಟೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ: ಸ್ಥಳಕ್ಕೆ ಐವನ್ ಡಿ’ಸೋಜಾ ಭೇಟಿ 24 ಗಂಟೆ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚನೆ

ಮಂಗಳೂರು, ಜುಲೈ 18: ಮಂಗಳೂರು ನಗರದ ಉರ್ವಾ ಸ್ಫೋರ್ ಸಮೀಪದ ಸುಂಕದಕಟ್ಟೆ ಪ್ರದೇಶದಲ್ಲಿ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ನೀರು ಸರಬರಾಜು ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ನಿರಂತರ ಮಳೆಯಾಗುತ್ತಿದ್ದರೂ ಪ್ರದೇಶದಲ್ಲಿ ಕುಡಿಯುವ ನೀರನ್ನು ರೇಷನಿಂಗ್ ಪದ್ಧತಿಯಲ್ಲಿ ಮಾತ್ರ ಪೂರೈಸಲಾಗುತ್ತಿದ್ದು, ಅದೂ ರಾತ್ರಿ 12 […]

LATEST NEWS

‘ಸ್ವಚ್ಛ ಭಾರತ್’ ಬಸ್ ತಂಗುದಾಣದಲ್ಲಿ ಗ್ಲಾಸ್ ಚೂರುಗಳ ರಾಶಿ: ವಿದ್ಯಾರ್ಥಿಗಳ ಸುರಕ್ಷತೆಗೆ ಧಕ್ಕೆ, ಪಾಲಿಕೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ

ಮಂಗಳೂರು:ನಗರದ ಹೃದಯಭಾಗದಲ್ಲಿರುವ ಬೆಂದೂರ್ ಸೇಂಟ್ ಆಗ್ನೆಸ್ ಶಾಲಾ-ಕಾಲೇಜು ಸಮೀಪದ ಬಸ್ ತಂಗುದಾಣವು ಪ್ರಸ್ತುತ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಪಾಲಿಗೆ ಅಪಾಯಕಾರಿಯಾಗಿ ಮಾರ್ಪಟ್ಟಿದ್ದು, ಮಂಗಳೂರು ಮಹಾನಗರ ಪಾಲಿಕೆಯ ತೀವ್ರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ ಸಂಭವಿಸಿದ ಮರ ಬಿದ್ದ ಘಟನೆಯಿಂದಾಗಿ ಈ ಸುಸಜ್ಜಿತ ಬಸ್ ತಂಗುದಾಣದ ಗ್ಲಾಸ್‌ಗಳು ಒಡೆದು ಚೂರುಚೂರಾಗಿವೆ. ಆದರೆ, ಘಟನೆ ನಡೆದು ಹಲವು ದಿನಗಳು ಕಳೆದರೂ ಒಡೆದ ಗ್ಲಾಸ್ ಚೂರುಗಳನ್ನು ಸ್ಥಳದಿಂದ ತೆರವುಗೊಳಿಸದೆ ಹಾಗೆಯೇ ಬಿಡಲಾಗಿದೆ. ಬಸ್ ತಂಗುದಾಣದ ಆಸನಗಳು ಹಾಗೂ ನೆಲದಾದ್ಯಂತ ಈ […]

LATEST NEWS

ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್‌ಗೆ ಭಾವಪೂರ್ಣ ನುಡಿನಮನ

ಮಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಪರಮಾನಂದ ಸಾಲ್ಯಾನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜಂಟಿಯಾಗಿ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, “ಸಾಲ್ಯಾನ್ ಅವರು ಪತ್ರಿಕೋದ್ಯಮದ ಜೊತೆಗೆ ತುಳು ರಂಗಭೂಮಿ ಮತ್ತು ಜಾನಪದ ಕ್ಷೇತ್ರದಲ್ಲಿ ಅಗಾಧ ಜ್ಞಾನ ಹೊಂದಿದ್ದರು. ಭೂತಾರಾಧನೆ, ನಾಟಕ ಹಾಗೂ […]

DAKSHINA KANNADA HOME LATEST NEWS

ಮಂಗನ ಕಾಯಿಲೆ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ: ಆರೋಗ್ಯ ಸಚಿವರ ನೇತೃತ್ವದ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ

ಪುತ್ತೂರು: ರಾಜ್ಯಾದ್ಯಂತ ಕೆಲವೊಂದು ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಹಾಗೂ ಮುನ್ನೆಚ್ಚರಿಕೆಯನ್ನು ನೀಡುವ ಕುರಿತು ಆರೋಗ್ಯ ಸಚಿವ ಯು ಟಿ ಖಾದರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆದಿದ್ದು ಈ ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರು ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯು ಆರೋಗ್ಯ ಸಚಿವ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಜ್ಯದ ಕೆಲವೊಂದು ಕಡೆಗಳಲ್ಲಿ ಅಪಾಯಕಾರಿ ಮಂಗನ ಕಾಯಿಲೆ ಕಂಡು ಬಂದಿದ್ದು ಇದರ […]