Tag: ಕೆನರಾಟಿವಿ ನ್ಯೂಸ್‌

DAKSHINA KANNADA HOME LATEST NEWS NATIONAL STATE

ಬರೋಬ್ಬರಿ 8 ಜನರನ್ನು ವರಿಸಿ 9ನೇ ಮದುವೆಗೆ ರೆಡಿಯಾಗುತ್ತಿದ್ದ ಆಂಟಿ ಅರೆಸ್ಟ್‌

ಮುಂಬೈ: 35 ವರ್ಷದ ಮಹಿಳೆಯೊಬ್ಬಳು ಬರೋಬ್ಬರಿ 8 ಸಲ ಮದುವೆಯಾಗಿ, ಅದೇ ಗಂಡಂದಿರಿಗೆ ಮೂರು ನಾಮ ಇಕ್ಕು 9ನೇ ಮದುವೆಯಾಗಲು ಸಿದ್ಧತೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 35ರ ಹರೆಯದ ಸಮೀರಾ ಫಾತಿಮಾ ಈ ಪ್ರಕರಣದ ಆರೋಪಿತೆ.  ವಿಶೇಷ ಅಂದರೆ ಫಾತಿಮಾ ವೃತ್ತಿಯಲ್ಲಿ ಶಾಲಾ ಶಿಕ್ಷಕಿಯಾಗಿದ್ದು, 12 ವರ್ಷದ ಮಗುವನ್ನು ಹೊಂದಿದ್ದಾಳೆ. ಆ ಮಗು ಯಾವ ಗಂಡನದ್ದು ಎಂದು ತಿಳಿದುಬಂದಿಲ್ಲ. ಸಮೀರಾ ಫಾತಿಮಾ ಮ್ಯಾಟ್ರಿಮೊನಿ ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ […]

DAKSHINA KANNADA HOME LATEST NEWS STATE

ಧರ್ಮಸ್ಥಳ ಪ್ರಕರಣ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ

ಬೆಂಗಳೂರು : ಧರ್ಮಸ್ಥಳದ ತಲೆಬುರುಡೆ ಪ್ರಕರಣ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ತನಿಖೆ ಹಂತದಲ್ಲಿದೆ. ಹೀಗಾಗಿ, ಸುಳ್ಳು ಸುದ್ದಿ ಹಬ್ಬಿಸುವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು. ಈ ಸಂಬಂಧ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ಇರಿಸಿದ್ದಾರೆ ಎಂದು ತಿಳಿಸಿದರು. ಎಸ್‍ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ತನಿಖೆ ಮಾಡುತ್ತಿದ್ದಾರೆ. […]

DAKSHINA KANNADA HOME LATEST NEWS

ವಿಟ್ಲ: ಸೈಂಟ್ ರೀಟಾ ವಿದ್ಯಾ ಸಂಸ್ಥೆಯಲ್ಲಿ ‘ಆಟಿದ ತಿರ್ಲ್’ ವಿನೂತನ ಕಾರ್ಯಕ್ರಮ

ಬಂಟ್ವಾಳ,ಆಗಸ್ಟ್ 1: ತಾಲೂಕಿನ ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯಲ್ಲಿ ಗುರುವಾರ “ಆಟಿದ ತಿರ್ಲ್” ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕ ವಂದನೀಯ ಐವನ್ ಮೈಕಲ್ ರೋಡ್ರಿಗಸ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕ ವಂದನೀಯ ಅಮಿತ್ ಪ್ರಕಾಶ್ ರೋಡ್ರಿಗಸ್ ಮಾತನಾಡಿ, ತುಳುನಾಡಿನ ವಿಶೇಷತೆ ಕುರಿತು ಅರಿವು ಮೂಡಿಸಿದರು. ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಶ್ವೇತಾ ಪಾಯ್ಸ್, ಧರ್ಮ ಭಗಿನಿಯರಾದ ಮರಿನಾ ಹಾಗೂ ಜಾನೆಟ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತುಳುನಾಡಿನ ವಿಶೇಷತೆಯನ್ನು ಹಾಡು, ನೃತ್ಯ, ಪ್ರದರ್ಶನ, ಔಷಧೀಯ ಸಸ್ಯಗಳ ವಿವರಿಸುವ […]

DAKSHINA KANNADA HOME LATEST NEWS

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಹಿತ ಮೂವರ ಬಂಧನ

ಮಂಗಳೂರು: ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಹಿತ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಆಡೂರಿನ ಮಸೂದ್ ಎಂ.ಕೆ. (45), ಕಾಸರಗೋಡು ಜಿಲ್ಲೆಯ ದೇಲಂಪಾಡಿಯ ಮುಹಮ್ಮದ್ ಆಶಿಕ್ (24) ಮತ್ತು ಸುಬೇರ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಎರಡು ಕಾರು ಮತ್ತು 123 ಕೆ.ಜಿ. ಗಾಂಜಾ ಹಾಗೂ 5 ಮೊಬೈಲ್ ಫೋನ್‌ಗಳನ್ನು ವಶಪಡಿಸಲಾಗಿದೆ. ಆರೋಪಿಗಳು ಗಾಂಜಾವನ್ನು ಆಂಧ್ರಪ್ರದೇಶದಿಂದ ತಂದು ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಮಾರಾಟ […]

DAKSHINA KANNADA HOME LATEST NEWS

ವಾಟ್ಸಪ್‌ ಸ್ಟೇಟಸ್‌ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ: ಓರ್ವನ ವಿರುದ್ಧ FIR

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಓರ್ವನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ರಕ್ಷಿತ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ ರಕ್ಷಿತ್‌ ಶೆಟ್ಟಿ ಎಂಬಾತನು ತನ್ನ ವಾಟ್ಸಪ್‌ ಸ್ಟೇಟಸ್‌ ನಲ್ಲಿ ಧರ್ಮ‌ಧರ್ಮಗಳ ನಡುವೆ ವೈಮನಸ್ಯ ಉಂಟಾಗುವಂತೆ ಹಾಗೂ ಭೀತಿಯನ್ನು ಹುಟ್ಟಿಸುವಂತಹ ಸಂದೇಶವನ್ನು ಹಾಕಿದ್ದು, ಈ  ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 69/2025, ಕಲಂ:353(1)(ಬಿ), 353(2) ಬಿಎನ್‌ ಎಸ್ 2023 ರಂತೆ ಪ್ರಕರಣ ದಾಖಲಾಗಿದ್ದು, […]

DAKSHINA KANNADA HOME LATEST NEWS

ಕ್ರೈಸ್ತ ಸನ್ಯಾಸಿಯರ ಬಂಧನ ಖಂಡಿಸಿ ಆ.4ರಂದು ಕಥೋಲಿಕ್‌ ಸಭಾದಿಂದ ಬೃಹತ್‌ ಪ್ರತಿಭಟನೆ

ಮಂಗಳೂರು: ಛತ್ತೀಸ್‌ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರನ್ನು ಮತಾಂತರ ಆರೋಪ ಹೊರಿಸಿ ಬಂಧಿಸಿರುವುದು ಖಂಡನೀಯ. ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಆ.4 ರಂದು ಮಂಗಳೂರಿನಲ್ಲಿ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ (ರಿ) ಇದರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಅಧ್ಯಕ್ಷ ಸಂತೋಷ್ ಡಿಸೋಜಾ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ದೇಶಾದ್ಯಂತ ಕ್ರೈಸ್ತ ಧರ್ಮಗುರುಗಳು, ಧರ್ಮ ಭಗಿನಿಯರು ಹಾಗೂ ಕ್ರೈಸ್ತ ಸಮುದಾಯದವರು ಶಾಂತಿ ಪ್ರಿಯರಾಗಿದ್ದು ದೇಶ ಭಕ್ತಿಯನ್ನು ಹೊಂದಿದವರಾಗಿರುತ್ತಾರೆ. […]

DAKSHINA KANNADA HOME LATEST NEWS

ಕೊಣಾಜೆ: ಯುವತಿ ನಾಪತ್ತೆ

ಕೊಣಾಜೆ:  ಇಲ್ಲಿನ ಠಾಣಾ‌ ವ್ಯಾಪ್ತಿಯ ಮಹಿಳಾ ಆಶ್ರಯ ಕೇಂದ್ರದಲ್ಲಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಒಡಿಷಾ ಮೂಲದ ತ್ರಿಶಾ (22) ಎಂಬಾಕೆಯೇ ನಾಪತ್ತೆಯಾದ ಯುವತಿಯಾಗಿದ್ದು, ಈಕೆ ಜುಲೈ 30ರಂದು ರಾತ್ರಿ 8 ಗಂಟೆಯ ಸುಮಾರಿಗೆ ನಾಪತ್ತೆಯಾಗಿದ್ದಾಳೆ.  ಕಳೆದ‌ ವರ್ಷ ತ್ರಿಶಾ ಉದ್ಯೋಗದ ಹುಡುಕಾಟದಲ್ಲಿ ಮಂಗಳೂರಿಗೆ ಬಂದಿದ್ದಳು ಎನ್ನಲಾಗಿದ್ದು‌ ಬಳಿಕ, ಇತ್ತೀಚೆಗೆ ಮಡಿಪುವಿನ ಪ್ರಜ್ಞಾ ಆಶ್ರಯ ಮಂದಿರದಲ್ಲಿ ವಾಸವಾಗಿದ್ದಳು. ಈಕೆ ಜುಲೈ 30 ರಂದು ರಾತ್ರಿ ಅಡುಗೆ ಕೋಣೆಯ ಬಾಗಿಲು ತೆರೆದು ಕೌಂಪೌಂಡು ಹಾರಿ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ. […]

HOME

ಬೆಂಗಳೂರು: ಸೇಂಟ್ ಜೋಸೆಫ್ಸ್ ವಿವಿಯಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ (OBE) ಕಾರ್ಯಾಗಾರ

ಬೆಂಗಳೂರು: ವೇಗವಾಗಿ ಬದಲಾಗುತ್ತಿರುವ ಶಿಕ್ಷಣ ಮತ್ತು ಉದ್ಯೋಗ ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು, ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯವು 2025 ರ ಜುಲೈನಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ (OBE) ಕುರಿತು ಕಾರ್ಯಾಗಾರ ಸರಣಿಯನ್ನು ಆಯೋಜಿಸಿತ್ತು. ಈ ಕಾರ್ಯಾಗಾರಗಳು ಸ್ಪಷ್ಟ ಕಲಿಕಾ ಫಲಿತಾಂಶಗಳನ್ನು ವ್ಯಾಖ್ಯಾನಿಸಲು ಮತ್ತು ಅವುಗಳನ್ನು ಪಠ್ಯಕ್ರಮ, ಬೋಧನೆ ಮತ್ತು ಮೌಲ್ಯಮಾಪನದೊಂದಿಗೆ ಜೋಡಿಸಲು ಬೋಧಕರಿಗೆ ಸಹಾಯ ಮಾಡಲು ಉದ್ದೇಶಿಸಲಾಗಿತ್ತು. ಪ್ರೊ. ಡಾ. ರೊನಾಲ್ಡ್ ಜೆ. ಮಸ್ಕರೇನ್ಹಸ್ ಅವರ ನಾಯಕತ್ವದಲ್ಲಿ ಮತ್ತು ಡಾ. ಡಬ್ಲ್ಯೂ. ಜ್ಯೋತಿ ಅವರ ಸಂಯೋಜನೆಯಲ್ಲಿ ನಡೆದ ಈ […]

HOME

ಮಂಗಳೂರು: 1300 ಕೋ.ರೂ ವ್ಯವಹಾರದ 113 ವರ್ಷಗಳ ಇತಿಹಾಸದ MCC ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ

ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಸಹಕಾರ ರತ್ನ ಅನಿಲ್ ಲೋಬೊ ಅವರು ತಿಳಿಸಿದರು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯು ಪ್ರಸ್ತುತ ಆಡಳಿತ […]

DAKSHINA KANNADA HOME LATEST NEWS

ಭಾರೀ ಮಳೆ: ಉಳ್ಳಾಲ ತಾಲೂಕಿನ ಶಾಲೆಗಳಿಗೆ ಇಂದು ರಜೆ

ಮಂಗಳೂರು: ಉಳ್ಳಾಲ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ15.07.2025 ರಂದು ರಜೆ ಘೋಷಿಸಲಾಗಿದೆ.

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678