Tag: ಕೆನರಾಟಿವಿ ನ್ಯೂಸ್‌

DAKSHINA KANNADA HOME LATEST NEWS

ಕುತ್ತಿಗೆಗೆ ಶೂ ಲೇಸ್‌ನಿಂದ ಬಿಗಿದು ಇಂಟರ್‌ಲಾಕ್‌ಗೆ ಕಟ್ಟಿದ ಸ್ಥಿತಿಯಲ್ಲಿ ಕೊಳೆತ ಶವ ಪತ್ತೆ

ಮಂಗಳೂರು: ಕುತ್ತಿಗೆಗೆ ಶೂ ಲೇಸ್ ನಿಂದ ಬಿಗಿದು ಇಂಟರ್ ಲಾಕ್ ಕಲ್ಲಿಗೆ ಕಟ್ಟಿದ ಸ್ಥಿತಿಯಲ್ಲಿ ಕೊಳೆತ ಶವವೊಂದು ಮಂಗಳೂರಿನ ಫಲ್ಗುಣಿ ನದಿ ತೀರದಲ್ಲಿ ಪತ್ತೆಯಾದ ಬಗ್ಗೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಫೆ.8 ರಂದು ರಿಯಾಸ್ ಫೆರಾವೊ ಎಂಬವರು KIOCL-ತೋಕೂರು ರಸ್ತೆಯಲ್ಲಿ ತಮ್ಮ ಮನೆಯ ಕಡೆಗೆ ಹೋಗುತ್ತಿದ್ದ ವೇಳೆ KISCO ಗೇಟಿನ ಮುಂಭಾಗದಲ್ಲಿ ಫಲ್ಗುಣಿ ನದಿ ತೀರದ ಅನ್ನೋಡಿ ಎಂಬಲ್ಲಿ ನೀರಿನಲ್ಲಿ ಒಂದು ಮೃತದೇಹ ತೇಲುತ್ತಿರುವುದನ್ನು ಕಂಡು ಬಂದಿದೆ. ತಕ್ಷಣ ಅವರು ಪೊಲೀಸರಿಗೆ […]

HOME LATEST NEWS UDUPI

ಉಡುಪಿ: ಫೆ.11ರಂದು ತೊಟ್ಟಂನಲ್ಲಿ ನವೀಕೃತಗೊಂಡ ಸಂತ ಅನ್ನಮ್ಮ ಚಾಪೆಲ್ ಉದ್ಘಾಟನೆ

ಉಡುಪಿ: ಇಲ್ಲಿನ ಮಲ್ಪೆ ಸಮೀಪದ ತೊಟ್ಟಂ ನಲ್ಲಿ ನವೀಕೃತಗೊಂಡ ಸಂತ ಅನ್ನಮ್ಮ ಚಾಪೆಲ್ (ಕಿರು ದೇವಾಲಯ)ನ ಉದ್ಘಾಟನೆ ಕಾರ್ಯಕ್ರಮ  ಫೆಬ್ರವರಿ 11ರಂದು ನಡೆಯಲಿದೆ. ನವೀಕೃತ ಚಾಪೆಲ್ ಅನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಉದ್ಘಾಟಿಸಿ ಪವಿತ್ರ ಬಲಿಪೂಜೆಯೊಂದಿಗೆ ಆಶೀರ್ವಚನಗೈಯ್ಯಲಿದ್ದಾರೆ. ಬಲಿಪೂಜೆಯ ಬಳಿಕ ಜಪಸರ ಪ್ರಾರ್ಥನೆ ಜರುಗಲಿದ್ದು, ತದನಂತರ ಕಿರು ದೇವಾಲಯದಿಂದ ಮುಖ್ಯ ದೇವಾಲಯದ ವರೆಗೆ ಮೇಣದ ಬತ್ತಿಗಳನ್ನು ಹಿಡಿದು ಮೆರವಣಿಗೆ ನಡೆಯಲಿದೆ. ಬಳಿಕ ಕಿರು ಸಭಾ ಕಾರ್ಯಕ್ರಮದಲ್ಲಿ ಕಿರು ದೇವಾಲಯದ ನವೀಕರಣಕ್ಕೆ […]

DAKSHINA KANNADA HOME LATEST NEWS

ಉಪ್ಪಿನಂಗಡಿ: ಮಂಚದ ಕೆಳಗೆ ಗಾಯಗೊಂಡು ಮೃತಪಟ್ಟ ಸ್ಥಿತಿಯಲ್ಲಿ ವೃದ್ಧ ಪತ್ತೆ

ಉಪ್ಪಿನಂಗಡಿ: 73ರ ವರ್ಷದ ವೃದ್ದರೋರ್ವರು ಮಂಚದ ಕೆಳಗೆ ಗಾಯಗೊಂಡು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೂರಿನಲ್ಲಿ ಏನಿದೆ? ಕಡಬ ತಾಲೂಕಿನ ಕೆ.ವಿ. ತೋಮಸ್ ಅವರು ಫೆ.8 ರಂದು ತಮ್ಮ ತಾಯಿಯನ್ನು ಚಿಕಿತ್ಸೆಗಾಗಿ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ರಾತ್ರಿ 8:00 ಗಂಟೆಗೆ ಹತ್ತಿರದಲ್ಲೇ ಇದ್ದ ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದರು. ಈ ವೇಳೆ ತೋಮಸ್ ಅವರ 73 ವರ್ಷದ ತಂದೆ ಮನೆಯಲ್ಲಿ ಒಬ್ಬರೇ ಇದ್ದರು. ಅಂದು ರಾತ್ರಿ 11:00 ಗಂಟೆಗೆ ಕಡಬದಮನೆಗೆ ಬಂದಾಗ […]

DAKSHINA KANNADA HOME LATEST NEWS

19 ವರ್ಷದ ಒಳಗಿನ ಮಕ್ಕಳಿಗೆ ಜಂತುಹುಳ ಮಾತ್ರೆ: ಇಂದಿನಿಂದ ವಿತರಣೆ

ಮಂಗಳೂರು: ಇಂದಿನ ಮಕ್ಕಳು ಭವಿಷ್ಯದಲ್ಲಿ ಗುಣಮಟ್ಟದ ಜೀವನ ನಡೆಸಲು ಉತ್ತಮ ಶಿಕ್ಷಣ ಲಭಿಸಬೇಕಾಗಿದ್ದು, ಇದಕ್ಕಾಗಿ ಪೌಷ್ಠಿಕಯುಕ್ತವಾದ ಸುಧಾರಿತ ಆರೋಗ್ಯ ಹೊಂದಿರಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಂತುಹುಳಗಳು ಮನುಷ್ಯನ ಕರುಳಿನಿಂದ ಆಹಾರವನ್ನು ಪಡೆದು ಜೀವಿಸುವಂತಹ ಉಪಜೀವಿಗಳಾಗಿವೆ. ಫೆಬ್ರವರಿ 10 ರಂದು ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತದೆ. 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಜಂತುಹುಳ ಕಾಣಿಸಿಕೊಳ್ಳುತ್ತಿರುವುದರಿಂದ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ […]

DAKSHINA KANNADA HOME LATEST NEWS

ಬೆಳ್ತಂಗಡಿ: ಶಾಲೆಗೆ ಹೋಗುತ್ತಿದ್ದ ಬಾಲಕಿಯ ಕಿಡ್ನಾಪ್ ಯತ್ನ

ಬೆಳ್ತಂಗಡಿ: ಶಾಲೆಗೆ ತೆರಳುತ್ತಿದ್ದ  ಬಾಲಕಿಯೋರ್ವಳನ್ನು ಕಿಡ್ನಾಪ್ ಮಾಡಲು ವಿಫಲ ಯತ್ನ ನಡೆಸಿ ಬಾಲಕಿಗೆ ಚಾಕುವಿನಿಂದ ಇರಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಫೆ.9 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಕಟ್ಟೆ ಬಳಿ ಬೆಳಗ್ಗೆ 8:30 ಗಂಟೆಗೆ ತನ್ನ ತಂದೆಯ ಜೊತೆ ಶಾಲೆಗೆ ಸ್ಕೂಟಿಯಲ್ಲಿ ‌ತೆರಳಿ ಬಸ್ ನಿಲ್ದಾಣದಿಂದ ಬಸ್ ಗಾಗಿ ಕಾಯುತ್ತಿದ್ದ ವೇಳೆ ತನ್ನ ಮನೆಯ 300 ಮೀಟರ್ ದೂರದಲ್ಲಿ, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ […]

DAKSHINA KANNADA HOME LATEST NEWS

ಮಡಂತ್ಯಾರಿನಲ್ಲಿ ಬಾಲ್ಯವಿವಾಹಕ್ಕೆ ತಡೆ

ಬೆಳ್ತಂಗಡಿ: ಇಲ್ಲಿನ ಮಡಂತ್ಯಾರಿನಲ್ಲಿ ಬಾಲ್ಯವಿವಾಹ ನಡೆಯುವ ಸಂದರ್ಭದಲ್ಲಿ ಮಂಗಳೂರು ಮಹಿಳಾ ಮತ್ತು ಮಕ್ಕಳ ರಕ್ಷಣಾ ಇಲಾಖೆಯ ನೇತೃತ್ವದಲ್ಲಿ ತಡೆಗಟ್ಟಿದ ಘಟನೆ ಫೆ.8 ರಂದು ನಡೆಯಿತು. ಕಳಿಯ ಗ್ರಾಮದ ಜನತಾ ಕಾಲೋನಿ ನಿವಾಸಿ ಅಸ್ಮಾ ಮತ್ತು ಆಶ್ರಫ್ ದಂಪತಿಗಳ ಪುತ್ರಿಯ ಮದುವೆ ಹಮ್ಮಿಕೊಂಡಿದ್ದರು. ಅದರಂತೆ ಮಸೀದಿಯಲ್ಲಿ ಮದುವೆ ನಡೆಸಲು ತಯಾರಿ ನಡೆದಿದೆ. ಮದುವೆಯಾಗುವ ಹುಡುಗಿಗೆ 18 ವರ್ಷ ಪೂರ್ಣ ಅಗದಿರುವ ಬಗ್ಗೆ ಮಂಗಳೂರು ಮಕ್ಕಳ ರಕ್ಷಣಾ ಇಲಾಖೆಗೆ ಮಾಹಿತಿ ತಿಳಿಯಿತು. ಈ ವೇಳೆ ಸ್ಥಳಕ್ಕೆ ಧಾವಿಸಿದ ಕಳಿಯ ಗ್ರಾಮ ಪಂಚಾಯತ್ […]

HOME LATEST NEWS

ಸೂಸೈಡ್‌ ವೇಳೆ ದೇಹದಿಂದ ಬೇರ್ಪಟ್ಟ ರುಂಡ……!

ಉಡುಪಿ:  ಬಾವಿಗೆ ಹಾರಿ ಆತ್ಮಹತ್ಯೆ ವೇಳೆ ದೇಹದಿಂದ ರುಂಡ ಬೇರ್ಪಟ್ಟ ಹೃದಯ ವಿದ್ರಾವಕ ಘಟನೆ ಅಂಬಾಗಿಲು ಸಮೀಪದ ಕಕ್ಕುಂಜೆ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಕಕ್ಕುಂಜೆ ನಿವಾಸಿ ಪುರುಷೋತ್ತಮ ನಾಯಕ್ (52) ದುರಂತ ರೀತಿಯಲ್ಲಿ ಆತ್ಮಹತ್ಯೆ ಶರಣಾದ ವ್ಯಕ್ತಿ. ಇವರು ನಿನ್ನೆ ತಡರಾತ್ರಿ ಮನೆಯ ಬಾವಿಯ ನೈಲಾನ್ ಹಗ್ಗ ಬಿಗಿದುಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿ ದೇಹದಿಂದ ರುಂಡ ಬೇರ್ಪಟ್ಟಿದೆ. ಇವರು ಅರ್ಚಕ ವಾಸುದೇವ ನಾಯಕ್ ಅವರ ದ್ವಿತೀಯ ಪುತ್ರ. ಮಣಿಪಾಲದ ವ್ಯಾಲಿವ್ಯೂ ಹೋಟೆಲಿನಲ್ಲಿ ಎಲೆಕ್ಟ್ರಿಶಿಯನ್ […]

DAKSHINA KANNADA HOME LATEST NEWS STATE

ಸೌಜನ್ಯ ಕೊಲೆ ಪ್ರಕರಣ: ಕಳಪೆ ತನಿಖೆ ನಡೆಸಿರುವವರ ವಿರುದ್ಧ ಕ್ರಮ- CBIಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣದಲ್ಲಿ ಕಳಪೆ ಮತ್ತು ದೋಷಪೂರಿತ ತನಿಖೆ ನಡೆಸಿ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಖುಲಾಸೆ ಸಮಿತಿಯ ಮುಂದೆ ಇಡಬೇಕು ಎಂದು ವಿಶೇಷ ಸಿಬಿಐ ನ್ಯಾಯಾಲಯ ನೀಡಿದ್ದ ತೀರ್ಪಿನಲ್ಲಿನ ನಿರ್ದೇಶನ ಜಾರಿಗೊಳಿಸುವಂತೆ ಕೋರಿದ್ದ ಅರ್ಜಿಯ ಸಂಬಂಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಸಿಬಿಐ ಚೆನ್ನೈನ ವಿಶೇಷ ತನಿಖಾ ದಳಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಸಿಬಿಐ ವಿಶೇಷ ನ್ಯಾಯಾಲಯವು 16.06.2023ರಂದು ಹೊರಡಿಸಿದ್ದ ತೀರ್ಪಿನಲ್ಲಿನ ನಿರ್ದೇಶನ ಜಾರಿಗೊಳಿಸಲು ಸಿಬಿಐಗೆ ನಿರ್ದೇಶಿಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ […]

DAKSHINA KANNADA HOME LATEST NEWS

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಕೋಮು ದ್ವೇಷದ ಮಾತುಗಳನ್ನಾಡಿದ ಆರೋಪ ಹಾಗೂ ಯೂಟ್ಯೂಬ್‌ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರಭಾಕರ್‌ ಭಟ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ”ಪ್ರಭಾಕರ್‌ಭಟ್‌ ಭಾಷಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದಕ್ಕೆ ಸಂಬಂಧಿಸಿದ […]

DAKSHINA KANNADA HOME LATEST NEWS

ವಿಟ್ಲ: ರಸ್ತೆ ದಾಟುತ್ತಿದ್ದಾಗ ಮಹಿಳೆಗೆ ಬೈಕ್‌ ಢಿಕ್ಕಿಯಾಗಿ ಸಾವು- ಸವಾರ ಗಂಭೀರ

ವಿಟ್ಲ: ಪಾದಾಚಾರಿ ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. .ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.