Tag: ಕೆನರಾಟಿವಿ ನ್ಯೂಸ್‌

DAKSHINA KANNADA

ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ:- ಶಾಸಕ ಕಾಮತ್

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಇಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ ಕಾರಣ, ತುರ್ತಾಗಿ ನಡೆಯಬೇಕಿರುವ ಕಾರ್ಯ, ಭವಿಷ್ಯದಲ್ಲಿ ಪ್ರವಾಹ ಮರುಕಳಿಸದಂತೆ […]

DAKSHINA KANNADA HOME LATEST NEWS

ಬೆಳ್ತಂಗಡಿ: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಪಾರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಆದಿತ್ಯವಾರ ನಡೆದಿದೆ. ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ […]

DAKSHINA KANNADA HOME LATEST NEWS

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿ ನೇಣಿಗೆ ಶರಣು..!

ಪುತ್ತೂರು: ಏಳು ತಿಂಗಳ ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ. ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ […]

DAKSHINA KANNADA HOME LATEST NEWS

Updated: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಪಿಯು ಕಾಲೇಜಿಗೆ ಇಂದು ರಜೆ

ಮಂಗಳೂರು: ಭಾರೀ ಮಳೆಯ ಹಿನ್ನೆಲೆ ಜೂ.16 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ನಿನ್ನೆ ರಾತ್ರಿ ವೇಳೆಗೆ ನೀಡಿದ ಆದೇಶವನ್ನು ಮಾರ್ಪಡಿಸಿ ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಸುಳ್ಯ-ಪುತ್ತೂರು, ಬೆಳ್ತಂಗಡಿ ತಾಲೂಕನ್ನು ಹೊರತುಪಡಿಸಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು.ಇಂದು ಬೆಳಿಗ್ಗೆ ಈ ಆದೇಶವನ್ನು ಮಾರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ […]

DAKSHINA KANNADA HOME LATEST NEWS

ಉಜಿರೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- ಇಬ್ಬರ ಬಂಧನ

ಉಜಿರೆ: ವೇಶ್ಯಾವಾಟಿಕೆ ಚಟುವಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಹಿನ್ನೆಲೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್‌ ಇನ್‌ಸ್ಪೆಕ್ಟರ್‌ ಸುಬ್ಬಾಪುರ್ ಮಠ ನೇತೃತ್ವದಲ್ಲಿ ಪೊಲೀಸರು ಶನಿವಾರ ರಾತ್ರಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಖಾಸಗಿ ವಸತಿಗೃಹಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಉಜಿರೆಯ ಬಸ್‌ನಿಲ್ದಾಣದ ಬಳಿ ಇರುವ ಶ್ರೀದುರ್ಗಾ ವಸತಿಗೃಹದಲ್ಲಿ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ವಸತಿಗೃಹದ ಮ್ಯಾನೇಜರ್ ಸತೀಶ್ ಪೂಜಾರಿ ಮತ್ತು ಕನ್ಯಾಡಿ ನಿವಾಸಿ ಯೋಗೀಶ್ ಆಚಾರ್ಯ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. […]

DAKSHINA KANNADA HOME LATEST NEWS

ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

ಮಂಗಳೂರು: ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜೂ.14 ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ ಇವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ವಂದನೀಯ ವಲೇರಿಯ ಡಿಸೋಜ […]

COMMUNITY NEWS HOME

ಮೈಸೂರು: ಡೋರ್ನಹಳ್ಳಿ ಸಂತ ಅಂತೋಣಿಯ ವಾರ್ಷಿಕ ಮಹೋತ್ಸವ ಸಂಪನ್ನ

ಮೈಸೂರು: ಕ್ರೈಸ್ತ ಸಮುದಾಯದ ವಿಶ್ವ ವಿಖ್ಯಾತ ಪವಾಡ ಪುರುಷ ಡೋರ್ನಹಳ್ಳಿ ಸಂತ ಅಂತೋಣಿಯ ವಾರ್ಷಿಕ ಮಹೋತ್ಸವ ಜೂ.13ರಂದು ನಡೆಯಿತು. ಜೂ.4 ರಂದು ಸಂಜೆ 5:30ಕ್ಕೆ ಧ್ವಜಾರೋಹಣದ ಮೂಲಕ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

HOME LATEST NEWS STATE UDUPI

ಜೂ. 15 ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ

ಉಡುಪಿ : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ […]

DAKSHINA KANNADA HOME LATEST NEWS

ಅಹಮದಾಬಾದ್‌ ವಿಮಾನ ದುರಂತ: ಮಂಗಳೂರು ಬಿಷಪ್ ದಿಗ್ಭ್ರಮೆ, ಸಂತಾಪ

ಮಂಗಳೂರು: ಗುಜರಾತಿನ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಅಪಾರ ಸಾವು ನೋವು ಸಂಭವಿಸಿದ ಬಗ್ಗೆ ಆಘಾತ ವ್ಯಕ್ತ ಪಡಿಸಿರುವ ಅವರು ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಮೃತ ಪಟ್ಟವರ ಆತ್ಮಗಳಿಗೆ ದೇವರು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ದುರಂತದಲ್ಲಿ ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

DAKSHINA KANNADA HOME LATEST NEWS

ನಾಳೆಯಿಂದ ಪಿಲಿಕುಳದಲ್ಲಿ ಹಣ್ಣುಗಳ ಮೇಳ

ಮಂಗಳೂರು: ರೈತರು ಹಾಗೂ ಉತ್ಪಾದಕರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ನಾನಾ ಮೇಳಗಳು ಮತ್ತು ವಸ್ತು ಪ್ರದರ್ಶನಗಳನ್ನು ಆಯೋಜಿಸುತ್ತಾ ಬಂದಿದೆ. ಕಳೆದ ದಶಕದಿಂದ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳವನ್ನು ಯಶಸ್ವಿಯಾಗಿ ನಡೆಸುತ್ತಾ ಬಂದಿದ್ದು, ಸಾರ್ವಜನಿಕರಿಂದ ವಿಶಿಷ್ಟ ಮೆಚ್ಚುಗೆಗಳನ್ನು ಗಳಿಸಿದೆ. ಈ ಬಾರಿ ಹಣ್ಣುಗಳ ಮೇಳವನ್ನು ಜೂನ್ 14 ಮತ್ತು 15 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಪಿಲಿಕುಳದ ಅರ್ಬನ್ ಹಾಥ್ ಮಳಿಗೆಗಳ ಸಂಕೀರ್ಣ, ಡಾ. ಶಿವರಾಮ ಕಾರಂತ […]