Tag: ಕೆನರಾಟಿವಿ

DAKSHINA KANNADA HOME

ಏ.3 ರಂದು ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ 35ನೇ ಪದವಿ ಪ್ರದಾನ

ಮಂಗಳೂರು: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಒಂದು ಘಟಕವಾದ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ತನ್ನ 35 ನೇ ಪದವಿ ಪ್ರದಾನ ಸಮಾರಂಭವನ್ನು ಏ. 3 ರಂದು ಬೆಳಿಗ್ಗೆ 10:00 ಗಂಟೆಗೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಿದೆ ಎಂದು ಫಾದರ್‌ ಮುಲ್ಲರ್‌ ಚಾರಿಟೇಬಲ್‌ ಸಂಸ್ಥೆಯ ನಿರ್ದೇಶಕ ವ.ಫಾ ರಿಚರ್ಡ್‌ ಅಲೋಶಿಯಸ್‌ ಕೊವೆಲ್ಲೋ ಅವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಅವರು ‘ಈ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಹಾಗೂ […]

HOME LATEST NEWS STATE

ನಾಳೆಯಿಂದ ರಾಜ್ಯದಲ್ಲಿ ಡೀಸೆಲ್‌ ದರ ಹೆಚ್ಚಳ: ಮಧ್ಯರಾತ್ರಿಯಿಂದಲೇ ಜಾರಿ!

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಹಾಲು ಮತ್ತು ಕರೆಂಟ್ ದರ ಹೆಚ್ಚಳವಾಗಿದ್ದು, ಇದರ ಮಧ್ಯೆ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2.73ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ, ಡೀಸೆಲ್ ಬೆಲೆ ಲೀಟರ್‌ಗೆ 2 ರಿಂದ 3 ರೂಪಾಯಿಗಳಷ್ಟು ಹೆಚ್ಚಾಗಲಿದೆ. ಈ ಹಿಂದೆ ಶೇ 18.44ರಷ್ಟು ಇದ್ದ ತೆರಿಗೆ, ಇದೀಗ ಶೇಕಡ 21.17ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಡಿಸೇಲ್​ 88.99 ರೂಪಾಯಿಗೆ ಮಾರಾಟವಾಗುತ್ತಿದೆ. ರಾಜ್ಯ ಸರ್ಕಾರ ಕಳೆದ ವರ್ಷವೂ ಪೆಟ್ರೋಲ್​ ಮತ್ತು ಡೀಸೆಲ್​ […]

HOME LATEST NEWS UDUPI

ಕ್ರೈಸ್ತ ಯುವತಿಯ ಕಿಡ್ನಾಪ್‌ ಕೇಸ್: ಹೈಕೋರ್ಟ್‌ ಮೊರೆ ಹೋದ ಪೋಷಕರು

ಉಡುಪಿ: ಕ್ರೈಸ್ತ ಧರ್ಮದ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಪೋಷಕರು ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಇದರ ಮಧ್ಯೆ ಇವರಿಬ್ಬರೂ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ ಆಗುವುದಾಗಿ ಅರ್ಜಿ ಸಲ್ಲಿಸಿದ್ದಾರೆ. ಘಟನೆ ವಿವರ ಮಾ.20ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಂತೆ ತನ್ನ ಮಗಳು ಜಿನ ಮೆರಿಲ್ (19) ಎಂಬಾಕೆಯನ್ನು ಮುಹಮ್ಮದ್ ಅಕ್ರಮ್ ಎಂಬಾತ ಅಪಹರಿಸಿರುವುದಾಗಿ ಯುವತಿ ತಂದೆ ಗೋಡ್ವಿನ್ ದೇವದಾಸ್ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ […]

DAKSHINA KANNADA HOME LATEST NEWS

70 ರೂ.ಗೆ ಏರಿದ ಎಳನೀರು ದರ: ಮತ್ತಷ್ಟು ಏರಿಕೆಯಾಗುವ ಸಂಭವ

ಮಂಗಳೂರು: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪ ಏರುತ್ತಿದ್ದು, ಇದರ ಜೊತೆಗೆ ಸೀಯಾಳ ದರವೂ 50 ರು.ನಿಂದ 70 ರು.ಗೆ ಏರಿಕೆಯಾಗಿದೆ. ಮತ್ತಷ್ಟು ಏರಿಕೆಯಾಗುವ ಸಂಭವವಿದೆ. ನಗರದ ಪ್ರದೇಶಗಳಲ್ಲಿ ಶರೀರ ತಂಪಾಗಿಸಿಕೊಳ್ಳಲು ಎಳನೀರು ಸೇವಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡು ತಿಂಗಳ ಹಿಂದಷ್ಟೇ 50 ರು. ಆಗಿದ್ದ ಎಳನೀರಿನ ಬೆಲೆ, ಕಳೆದ ತಿಂಗಳು 60 ರು. ಮತ್ತು ಈ ತಿಂಗಳು 70 ರು.ಗೆ ಏರಿಕೆಯಾಗಿದೆ. ಜೊತೆಗೆ ಕರಾವಳಿಯಲ್ಲಿ ಈ […]

DAKSHINA KANNADA HOME LATEST NEWS

ಮಾ. 28 ರಿಂದ ಮಾ. 29 ರವರೆಗೆ ಮದ್ಯದಂಗಡಿ ಬಂದ್‌ಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಹಾಗೂ ಸಾನಿಧ್ಯ ದೈವಸ್ಥಾನಗಳ ಆಡಳಿತ ಸಮಿತಿ ವತಿಯಿಂದ ಮಾ. 28 ರಿಂದ ಮಾ. 29 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ. ಸಾವಿರಾರು ಜನ ಭಕ್ತಾಧಿಗಳು ಸೇರುವ ನಿರೀಕ್ಷೆ ಇರುತ್ತದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ […]

HOME LATEST NEWS UDUPI

ಉಡುಪಿ: ಮುಸ್ಲಿಂ ಯುವಕನಿಂದ ಕ್ರೈಸ್ತ ಯುವತಿಯ ಕಿಡ್ನಾಪ್‌

ಉಡುಪಿ: ಮುಸ್ಲಿಂ ಯುವಕನೋರ್ವ ಕ್ರೈಸ್ತ ಧರ್ಮದ ಯುವತಿಯನ್ನು ಅಪಹರಿಸಿದ್ದಾನೆ ಎಂದು ಯುವತಿಯ ತಂದೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿತ ಮುಸ್ಲಿಂ ಯುವಕ ಉಡುಪಿಯ ಉಪ ನೊಂದಾವಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬಾತ ಮಾ. 20 ರಂದು ಕಾಲೇಜಿನಿಂದ ವಾಪಾಸು ಮನೆಗೆ ತೆರಳುತ್ತಿದ್ದಾಗ ಕ್ರೈಸ್ತ ಧರ್ಮಕ್ಕೆ ಸೇರಿದ ಯುವತಿಯ ಅಪಹರಣವಾಗಿದೆ ಎಂದು ತಂದೆ ಗಾಡ್ವಿನ್ ದೇವದಾಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದಾದ […]

DAKSHINA KANNADA HISTORY HOME

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿ ಮಹೇಶ್‌ ಭಟ್‌ ಬಂಧನಕ್ಕೆ ಒತ್ತಾಯ

ಬಂಟ್ವಾಳ: ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದಲಿತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು  ಸಮಗ್ರ ತನಿಖೆಗೊಳಪಡಿಸಬೇಕು ಮತ್ತು ಆರೋಪಿ ಮಹೇಶ್ ಭಟ್‌ನನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಡಿವೈಎಫ್‌ಐ, ಡಿಎಚ್‌ಎಸ್, ಜೆಎಮ್‌ಎಸ್, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಎಸ್‌ಎಫ್‌ಐ ದ.ಕ. ಜಿಲ್ಲಾ ಸಮಿತಿಗಳ ಮುಖಂಡರು ದ.ಕ. ಜಿಲ್ಲಾ ಎಸ್ಪಿಯನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು. ಆರೋಪಿಯ ವಿರುದ್ಧ ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೂ ಕೂಡ ಆತನನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಅಲ್ಲದೆ […]

HOME STATE

ಹಾಲಿನ ದರ ಪ್ರತಿ ಲೀ.ಗೆ ₹4 ಏರಿಕೆ: ಸಚಿವ ಸಂಪುಟದ ಅನುಮೋದನೆ

ಬೆಂಗಳೂರು: ಗ್ರಾಹಕರಿಗೆ ನಂದಿನ ಹಾಲಿನ ಬೆಲೆಏರಿಕೆ ಬಿಸಿ ತಟ್ಟಿದ್ದು,  ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ನಡೆದ  ಸಚಿವ ಸಂಪುಟದಲ್ಲಿ ಹಾಲು ಒಕ್ಕೂಟಗಳ ಮನವಿಗೆ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನ ದರ ಏರಿಕೆ ಮಾಡಿದಂತಾಗಿದೆ. ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್​ಗೆ  2 ರೂ ಏರಿಕೆ ಮಾಡಲಾಗಿತ್ತು. ಇದೀಗ ಲೀಟರ್​ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ […]

HOME LATEST NEWS STATE

ನಂದಿನಿ ಹಾಲು ದರ ₹5 ಏರಿಕೆ : ಇಂದು ಮುಖ್ಯಮಂತ್ರಿಗಳಿಂದ ನಿರ್ಧಾರ

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 5 ರೂ. ಹೆಚ್ಚಳ ಮಾಡುವಂತೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್‌) ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಇಂದು ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ  ಮುಖ್ಯಮಂತ್ರಿಗಳು ಹಾಲಿನ ಬೆಲೆ ಹೆಚ್ಚಳಕ್ಕೆ ಸಮ್ಮತಿಸುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಇಂದು ಸರ್ಕಾರ ತೀರ್ಮಾನ ಕೈಗೊಳ್ಳಲಿದ್ದು, ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಾಗುವ ಸಾಧ್ಯತೆ ಇವೆ ಎನ್ನಲಾಗಿದೆ. ಹೈನುಗಾರಿಕೆಯ ಖರ್ಚು ವೆಚ್ಚಗಳ ಹೆಚ್ಚಳದಿಂದಾಗಿ ಹಾಲಿನ ಬೆಲೆ ಏರಿಸಬೇಕಾದ […]

HOME LATEST NEWS STATE

BJPಯಿಂದ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಉಚ್ಛಾಟನೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಕೊನೆಗೂ ಪಕ್ಷದಿಂದ ಉಚ್ಛಾಟಿಸಿದೆ. ಯತ್ನಾಳ್‌ ಅವರು ಉಚ್ಛಾಟನೆಯಾಗುತ್ತಿರುವುದು ಇದು ಎರಡನೇ ಬಾರಿ. ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ ಹಾಕಿದೆ. ಪಕ್ಷದ ಕೇಂದ್ರ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678