Tag: ಕೆನರಾಟಿವಿ

LATEST NEWS

ಸೇಂಟ್ ಅಲೋಶಿಯಸ್ ಎಐಎಂಐಟಿ ಕ್ಯಾಂಪಸ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026

ಮಂಗಳೂರು: ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್‌ಮೆಂಟ್‌ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು ಕೊಟೇಕಾರಿನ ಎಐಎಂಐಟಿ (AIMIT) ಕ್ಯಾಂಪಸ್‌ನ ಆರ್ಥರ್ ಶೆನಾಯ್ ಸ್ಮಾರಕ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು. ಬೆಳಿಗ್ಗೆ 9:00 ರಿಂದ ಸಂಜೆ 4:15 ರವರೆಗೆ ನಡೆದ ಈ ದಿನಪೂರ್ತಿ ಕಾರ್ಯಕ್ರಮದಲ್ಲಿ ಪ್ರಮುಖ ಉದ್ಯಮ ಮುಖಂಡರು, ಅಧ್ಯಾಪಕರು ಹಾಗೂ ಉದ್ಯಮಿಯಾಗಬಯಸುವ ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಿ ವಿಚಾರ ವಿನಿಮಯ ನಡೆಸಿದರು. […]

DAKSHINA KANNADA HOME LATEST NEWS

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಇಬ್ಬರಿಗೆ ಗಾಯ

ವಿಟ್ಲ: ಇಬ್ಬರು ಐಟಿಐ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿ ಚೂರಿ ಇರಿತಗೊಂಡ ಘಟನೆ ವಿಟ್ಲದ ಐಟಿಐ ತರಗತಿ ಒಳಗಡೆ ಸಂಭವಿಸಿದೆ. ಚೂರಿ ಇರಿತದಿಂದ ಇಬ್ಬರು ಅಪ್ರಾಪ್ತರು ಗಾಯೊಂಡಿದ್ದಾರೆ, ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಥಮ ವರ್ಷದ ಎಲೆಕ್ಟಿಷಿಯನ್ ಐಟಿಐ ಕಲಿಯುತ್ತಿರುವ ಅಪ್ರಾಪ್ತ ಮತ್ತು ವಿಟ್ಲ ನಿವಾಸಿ ಹೇಮಂತ್ ಎಂಬವರ ನಡುವೆ ಜಗಳ ಉಂಟಾಗಿತ್ತು. ಬಳಿಕ ಹೇಮಂತ್ ಚೂರಿ ತಂದಿದ್ದು, ಅದರಿಂದ ಅಪ್ರಾಪ್ತನಿಗೆ ಇರಿದಿದ್ದಾನೆ. ಅದನ್ನು ತಡೆಯಲು ಬಂದ ಮತ್ತೋರ್ವ ವಿದ್ಯಾರ್ಥಿಗೂ ಗಾಯವಾಗಿದೆ. […]

DAKSHINA KANNADA HOME LATEST NEWS

9 ಯುವತಿಯರಿಗೆ ವಂಚನೆ: ಇಬ್ಬರ ಜೊತೆ ಮದುವೆಯಾದ ‘ಮ್ಯಾಟ್ರಿಮೋನಿ’ ಮಾವ-ಅಳಿಯನ ಬಂಧನ

ಮಂಗಳೂರು: ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (Matrimony) ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದ್ದು, ಈತನ ವಂಚನೆಗೆ ಸಾಥ್ ನೀಡಿದ್ದ ಮುಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಸುಶಾಂತ್ ತನ್ನ ಅಳಿಯ ಎಂದು ಹೇಳಿ ಸಂತ್ರಸ್ತೆಯ ಕುಟುಂಬದವರಿಗೆ ನಂಬಿಕೆ ಮೂಡಿಸಲು ಭಾಸ್ಕರ್ ಧಾರ್ಮಿಕ ವಿಧಿವಿಧಾನಗಳಲ್ಲೂ ಭಾಗವಹಿಸಿದ್ದಾನೆ […]

DAKSHINA KANNADA HOME LATEST NEWS

ಮಂಗಳೂರು-ಮೂಡಬಿದ್ರೆ ಹೆದ್ದಾರಿ ದುರಸ್ತಿ: 30 ದಿನ ಬದಲಿ ರಸ್ತೆ ಉಪಯೋಗಿಸಲು ಸಲಹೆ

ಮಂಗಳೂರು: ತಾಲೂಕಿನ ಬಜ್ಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಇದೀಗ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಹಾಗೂ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ವಾಹನಗಳ ಓಡಾಟಕ್ಕೆ ಇದ್ದ ಹಳೆ ರಸ್ತೆಯು ಘನ ವಾಹನಗಳ ಓಡಾಟದಿಂದಾಗಿ ಬಿರುಕು ಬಿಟ್ಟು ಅಲ್ಲಲ್ಲಿ ಕುಸಿಯಲು ಪ್ರಾರಂಭಿಸಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆ. 12ರಿಂದ ಮಾ.13ರವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿದೆ. ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಠಿಯಿಂದ […]

DAKSHINA KANNADA HOME LATEST NEWS

ಹಿಂದೂ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು: ವಿಚಾರಣೆಗೆ ಹಾಜರಾಗುವಂತೆ ಆದೇಶ

ಪುತ್ತೂರು: ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆಬ್ರವರಿ […]

HOME LATEST NEWS STATE

ವೃದ್ಧ ತಂದೆಯನ್ನು ನೋಡಿಕೊಳ್ಳದ ಮಕ್ಕಳು: ಆಸ್ತಿ ಮತ್ತೆ ತಂದೆಗೆ ವರ್ಗಾಯಿಸಿದ ಹೈಕೋರ್ಟ್‌

ಬೆಂಗಳೂರು: ಆಸ್ತಿ ಭಾಗವಾದ ಮೇಲೆ ವೃದ್ಧ ತಂದೆಯೋರ್ವರನ್ನು ಸರಿಯಾಗಿ ನೋಡಿಕೊಳ್ಳದ ಮಕ್ಕಳ ಹೆಸರಿಗೆ ವರ್ಗಾವಣೆಯಾದ ಗಿಫ್ಟ್‌ ಡೀಡ್‌ ಅನ್ನು ಮತ್ತೆ ತಂದೆಯ ಹೆಸರಿಗೆ ವರ್ಗಾವಣೆ ಮಾಡಿ ಹೈಕೋರ್ಟ್‌ ಆದೇಶ ನೀಡಿದೆ. ತುಮಕೂರಿನ ಹೆಬ್ಬೂರು ಹೋಬಳಿಯ ದೊಡ್ಡ ಗೊಲ್ಲಹಳ್ಳಿಯ ವೆಂಕಟಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ. 2007ರ ಹಿರಿಯ ನಾಗರಿಕರ ಮತ್ತು ಪೋಷಕರ ನಿರ್ವಹಣಾ ಮತ್ತು ಕಲ್ಯಾಣ ಕಾಯಿದೆ ಅನ್ವಯ ಕೃಷಿ ಭೂಮಿಯನ್ನು ಪುತ್ರಿಯರ ಹೆಸರಿಗೆ […]

DAKSHINA KANNADA HOME LATEST NEWS

ಕುತ್ತಿಗೆಗೆ ಶೂ ಲೇಸ್‌ನಿಂದ ಬಿಗಿದು ಇಂಟರ್‌ಲಾಕ್‌ಗೆ ಕಟ್ಟಿದ ಸ್ಥಿತಿಯಲ್ಲಿ ಕೊಳೆತ ಶವ ಪತ್ತೆ

ಮಂಗಳೂರು: ಕುತ್ತಿಗೆಗೆ ಶೂ ಲೇಸ್ ನಿಂದ ಬಿಗಿದು ಇಂಟರ್ ಲಾಕ್ ಕಲ್ಲಿಗೆ ಕಟ್ಟಿದ ಸ್ಥಿತಿಯಲ್ಲಿ ಕೊಳೆತ ಶವವೊಂದು ಮಂಗಳೂರಿನ ಫಲ್ಗುಣಿ ನದಿ ತೀರದಲ್ಲಿ ಪತ್ತೆಯಾದ ಬಗ್ಗೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಫೆ.8 ರಂದು ರಿಯಾಸ್ ಫೆರಾವೊ ಎಂಬವರು KIOCL-ತೋಕೂರು ರಸ್ತೆಯಲ್ಲಿ ತಮ್ಮ ಮನೆಯ ಕಡೆಗೆ ಹೋಗುತ್ತಿದ್ದ ವೇಳೆ KISCO ಗೇಟಿನ ಮುಂಭಾಗದಲ್ಲಿ ಫಲ್ಗುಣಿ ನದಿ ತೀರದ ಅನ್ನೋಡಿ ಎಂಬಲ್ಲಿ ನೀರಿನಲ್ಲಿ ಒಂದು ಮೃತದೇಹ ತೇಲುತ್ತಿರುವುದನ್ನು ಕಂಡು ಬಂದಿದೆ. ತಕ್ಷಣ ಅವರು ಪೊಲೀಸರಿಗೆ […]

HOME LATEST NEWS UDUPI

ಉಡುಪಿ: ಫೆ.11ರಂದು ತೊಟ್ಟಂನಲ್ಲಿ ನವೀಕೃತಗೊಂಡ ಸಂತ ಅನ್ನಮ್ಮ ಚಾಪೆಲ್ ಉದ್ಘಾಟನೆ

ಉಡುಪಿ: ಇಲ್ಲಿನ ಮಲ್ಪೆ ಸಮೀಪದ ತೊಟ್ಟಂ ನಲ್ಲಿ ನವೀಕೃತಗೊಂಡ ಸಂತ ಅನ್ನಮ್ಮ ಚಾಪೆಲ್ (ಕಿರು ದೇವಾಲಯ)ನ ಉದ್ಘಾಟನೆ ಕಾರ್ಯಕ್ರಮ  ಫೆಬ್ರವರಿ 11ರಂದು ನಡೆಯಲಿದೆ. ನವೀಕೃತ ಚಾಪೆಲ್ ಅನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಉದ್ಘಾಟಿಸಿ ಪವಿತ್ರ ಬಲಿಪೂಜೆಯೊಂದಿಗೆ ಆಶೀರ್ವಚನಗೈಯ್ಯಲಿದ್ದಾರೆ. ಬಲಿಪೂಜೆಯ ಬಳಿಕ ಜಪಸರ ಪ್ರಾರ್ಥನೆ ಜರುಗಲಿದ್ದು, ತದನಂತರ ಕಿರು ದೇವಾಲಯದಿಂದ ಮುಖ್ಯ ದೇವಾಲಯದ ವರೆಗೆ ಮೇಣದ ಬತ್ತಿಗಳನ್ನು ಹಿಡಿದು ಮೆರವಣಿಗೆ ನಡೆಯಲಿದೆ. ಬಳಿಕ ಕಿರು ಸಭಾ ಕಾರ್ಯಕ್ರಮದಲ್ಲಿ ಕಿರು ದೇವಾಲಯದ ನವೀಕರಣಕ್ಕೆ […]

DAKSHINA KANNADA HOME LATEST NEWS

ಉಪ್ಪಿನಂಗಡಿ: ಮಂಚದ ಕೆಳಗೆ ಗಾಯಗೊಂಡು ಮೃತಪಟ್ಟ ಸ್ಥಿತಿಯಲ್ಲಿ ವೃದ್ಧ ಪತ್ತೆ

ಉಪ್ಪಿನಂಗಡಿ: 73ರ ವರ್ಷದ ವೃದ್ದರೋರ್ವರು ಮಂಚದ ಕೆಳಗೆ ಗಾಯಗೊಂಡು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೂರಿನಲ್ಲಿ ಏನಿದೆ? ಕಡಬ ತಾಲೂಕಿನ ಕೆ.ವಿ. ತೋಮಸ್ ಅವರು ಫೆ.8 ರಂದು ತಮ್ಮ ತಾಯಿಯನ್ನು ಚಿಕಿತ್ಸೆಗಾಗಿ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ರಾತ್ರಿ 8:00 ಗಂಟೆಗೆ ಹತ್ತಿರದಲ್ಲೇ ಇದ್ದ ಸಂಬಂಧಿಕರ ಮನೆಯಲ್ಲಿ ಬಿಟ್ಟಿದ್ದರು. ಈ ವೇಳೆ ತೋಮಸ್ ಅವರ 73 ವರ್ಷದ ತಂದೆ ಮನೆಯಲ್ಲಿ ಒಬ್ಬರೇ ಇದ್ದರು. ಅಂದು ರಾತ್ರಿ 11:00 ಗಂಟೆಗೆ ಕಡಬದಮನೆಗೆ ಬಂದಾಗ […]

DAKSHINA KANNADA HOME LATEST NEWS

19 ವರ್ಷದ ಒಳಗಿನ ಮಕ್ಕಳಿಗೆ ಜಂತುಹುಳ ಮಾತ್ರೆ: ಇಂದಿನಿಂದ ವಿತರಣೆ

ಮಂಗಳೂರು: ಇಂದಿನ ಮಕ್ಕಳು ಭವಿಷ್ಯದಲ್ಲಿ ಗುಣಮಟ್ಟದ ಜೀವನ ನಡೆಸಲು ಉತ್ತಮ ಶಿಕ್ಷಣ ಲಭಿಸಬೇಕಾಗಿದ್ದು, ಇದಕ್ಕಾಗಿ ಪೌಷ್ಠಿಕಯುಕ್ತವಾದ ಸುಧಾರಿತ ಆರೋಗ್ಯ ಹೊಂದಿರಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಂತುಹುಳಗಳು ಮನುಷ್ಯನ ಕರುಳಿನಿಂದ ಆಹಾರವನ್ನು ಪಡೆದು ಜೀವಿಸುವಂತಹ ಉಪಜೀವಿಗಳಾಗಿವೆ. ಫೆಬ್ರವರಿ 10 ರಂದು ಜಂತುಹುಳ ನಿವಾರಣಾ ದಿನವಾಗಿ ಆಚರಿಸಲಾಗುತ್ತದೆ. 1 ರಿಂದ 19 ವರ್ಷದೊಳಗಿನ ಮಕ್ಕಳಲ್ಲಿ ಜಂತುಹುಳ ಕಾಣಿಸಿಕೊಳ್ಳುತ್ತಿರುವುದರಿಂದ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ […]