Tag: ಕೆನರಾಟಿವಿ

DAKSHINA KANNADA HOME

ಪುತ್ತೂರು: ಪ್ರೀತಿಸಿ ವಂಚನೆಗೈದು ನಾಪತ್ತೆಯಾಗಿದ್ದ ಕೃಷ್ಣ ರಾವ್‌ ಅರೆಸ್ಟ್‌

ಪುತ್ತೂರು: ಯುವತಿಯೊಬ್ಬಳನ್ನು ಪ್ರೀತಿಸಿ ವಂಚನೆ ಮಾಡಿ, ಮಗುವಿನ ಜನನಕ್ಕೆ ಕಾರಣವಾಗಿದ್ದಲ್ಲದೇ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿ ಕೃಷ್ಣ ರಾವ್‌ನನ್ನು ಮೈಸೂರಿನ ಟೀನರಸೀಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಗರ್ಭಿಣಿಯಾದ ಬಳಿಕ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಆತ ಕೈಕೊಟ್ಟಿದ್ದರಿಂದ ಕಂಗಾಲಾದ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆತ ಬಂಧನದ ಭಯದಿಂದ ಎಸ್ಕೇಪ್ ಆಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರಿನಲ್ಲಿ ವಶಕ್ಕೆ […]

DAKSHINA KANNADA HOME LATEST NEWS

ಪುತ್ತೂರು: ಕ್ರೈಸ್ತ ಧಫನ ಭೂಮಿಯಿಂದ ಕಳೇಬರದ ಎಲುಬು ಕಳ್ಳತನ

ಪುತ್ತೂರು: ಪುತ್ತೂರಿನ ಕ್ರೈಸ್ತ ಧಫನ ಭೂಮಿಯಿಂದ ಕಳೇಬರದ ಎಲುಬು ಕಳ್ಳತನ ಮಾಡಿದ ಘಟನೆಯ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರಿನ ಬನ್ನೂರು ಸಂತ ಅಂತೋಣಿ ಚರ್ಚ್‌ನ ಅಧೀನದಲ್ಲಿರುವ ಕ್ರೈಸ್ತ ದಫನ್ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿದ್ದಾರೆ. ಈ ಬಗ್ಗೆ ಜೂ.14 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಧರ್ಮಗುರುಗಳು ಫಾ.ಬಾಲ್ತಿಜಾರ್ ಪಿಂಟೋ ನೀಡಿದ ದೂರಿನ ಮೇರೆಗೆ, ದೂರರ್ಜಿಯನ್ನು ದಾಖಲಿಸಿಕೊಂಡಿದ್ದು, ಘಟನಾಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ […]

DAKSHINA KANNADA HOME LATEST NEWS

ಆರ್ಥಿಕ ಸಮಸ್ಯೆಯಿಂದ ನೊಂದು ಯುವಕ ನೇಣಿಗೆ ಶರಣು

ಮಂಗಳೂರು: ಆರ್ಥಿಕ ಸಮಸ್ಯೆಯಿಂದ ನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೋಡಿಕಲ್‌ನಲ್ಲಿ ನಡೆದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆ ವಿವರ ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ ಸೇವಿಸಿದ ನಿಖಿಲ್ ಪೂಜಾರಿ ಕೋಣೆ ಸೇರಿದ್ದ. ಸಂಜೆಯವರೆಗೆ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದ ಕಾರಣ ಮನೆಮಂದಿ ನಿಖಿಲ್ ಪೂಜಾರಿಯ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಎನ್ನಲಾಗಿದೆ.  ಸಂಜೆ ಬಳಿಕ ಬಾಗಿಲು ಬಡಿದರೂ ತೆಗೆಯದ್ದರಿಂದ ಫೋನ್ ಕರೆ ಮಾಡಿದರೂ ಆತ  […]

DAKSHINA KANNADA HOME LATEST NEWS

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ- ವೆಬ್‌ಸೈಟ್‌ ಮೇಲೆ ಪ್ರಕರಣ ದಾಖಲು

ಬಂಟ್ವಾಳ: ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. Gadinadadhwani.online ಎಂಬ ವೆಬ್‌ಸೈಟ್ “ಕರಾವಳಿಯಲ್ಲಿ ಮತ್ತೆ ಮುಂದುವರಿದ ತಲವಾರು ದಾಳಿ, ಸಜೀಪದಲ್ಲಿ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಇಬ್ಬರು ಅಮಾಯಕ ಮುಸ್ಲಿಮರ ಮೇಲೆ ದಾಳಿ” ಎಂಬ ತಲೆಬರಹವಿರುವ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ, ಸಾರ್ವಜನಿಕ ವಲಯದಲ್ಲಿ ಭಯಭೀತಿಯನ್ನುಂಟು ಮಾಡಿದ ವೆಬ್‌ಸೈಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ […]

DAKSHINA KANNADA HOME LATEST NEWS

ವಿಟ್ಲ: ವಾಹನ ದಟ್ಟನೆ ನಿಯಂತ್ರಿಸಲು ಫ್ಲೆಕ್ಸ್ ಮತ್ತು ತಳ್ಳುಗಾಡಿ ತೆರವು

ವಿಟ್ಲ: ವಿಟ್ಲ ಪೇಟೆಯಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆ ನಿಯಂತ್ರಿಸಲು ಇಲ್ಲಿನ ಪಟ್ಟಣ ಪಂಚಾಯತ್ ಅಧಿಕಾರಿಗಳು ವಾಹನ ದಟ್ಟನೆಗೆ ಕಾರಣವಾಗುತ್ತಿದ್ದ ಫ್ಲೆಕ್ಸ್ ಮತ್ತು ತಳ್ಳುಗಾಡಿಗಳನ್ನು ತೆರವುಗೊಳಿಸಿದರು. ವಿಟ್ಲ ಪೇಟೆಯಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆಯನ್ನು ನಿಯಂತ್ರಿಸುವ ಉದ್ದೇಶದಿಂದ ಶನಿವಾರ ಪಟ್ಟಣ ಪಂಚಾಯತ್ ವತಿಯಿಂದ ಪೊಲೀಸ್, ಇಲಾಖೆ ಮತ್ತು ವಾಹನ ಚಾಲಕ ಸಭೆ ಕರೆಯಲಾಗಿತ್ತು. ಈ ವೇಳೆ ಈ ಹಿಂದೆ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಮುಂದುವರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಅಳವಡಿಸಲಾಗಿದ್ದ ಪ್ರಚಾರದ ಫ್ಲೆಕ್ಸ್ […]

COMMUNITY NEWS HOME

ಜೂ. 27 ರಂದು ಎಚ್. ಎಮ್. ಪೆರ್ನಾಲ್ ಅವರ ಕವನ ಸಂಕಲನ ‘ಜನೆಲ್’ ಬಿಡುಗಡೆ

ಮಂಗಳೂರು: ಕೊಂಕಣಿ ಕವಿ / ವಿಮರ್ಶಕ ಎಚ್. ಎಮ್. ಪೆರ್ನಾಲ್ ನಾಲ್ಕನೆಯ ಕವನ ಸಂಕಲನ ಜನೆಲ್ (ಕಿಟಕಿ) ಇದೇ ಜೂನ್ 27 ರಂದು ಸಂಜೆ 4.30 ಕ್ಕೆ ಎಂ.ಸಿ.ಸಿ. ಬ್ಯಾಂಕ್ ಆಡಳಿತ ಸೌಧ ಸಭಾಂಗಣದಲ್ಲಿ ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವಜೋ ಬಿಡುಗಡೆ ಮಾಡುವರು. ಕೇಂದ್ರ ಸಾಹಿತ್ಯ ಅಕಾಡೆಮಿ, ಕೊಂಕಣಿ ಭಾಷಾ ಸಲಹಾ ಮಂಡಳಿ ಸಂಚಾಲಕ ಕವಿ ಮೆಲ್ವಿನ್ ರೊಡ್ರಿಗಸ್ ಪುಸ್ತಕ ಪರಿಚಯ ಮಾಡಲಿದ್ದು, ವಿಶನ್ ಕೊಂಕಣಿ ಪ್ರವರ್ತಕರೂ, ಅನಿವಾಸಿ ಭಾರತೀಯ ಉದ್ಯಮಿ ಹಾಗೂ ದಾನಿ […]

DAKSHINA KANNADA HOME LATEST NEWS

ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

ದುಬೈ: ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಶ್ರೀ ಡಯಾನ್ ಡಿಸೋಜಾ ಇವರು ನಡೆಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ರವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ಮೂಲದ ಮತ್ತೊಬ್ಬ ಪ್ರಖ್ಯಾತ ಸಮುದಾಯ ನಾಯಕ ಹಾಗೂ ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ […]

DAKSHINA KANNADA HOME LATEST NEWS

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ರೇಡ್‌: ಸರ್ವೇಯರ್‌, ದಲ್ಲಾಳಿ ಬಂಧನ

ಮಂಗಳೂರು: ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸುವುದ ಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ನಡೆಸಿದ ದಾಳಿಯ ವೇಳೆ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತನ್ನ ಹಾಗೂ ತನ್ನ ತಾಯಿಯ ಹೆಸರಿನಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 2025ರ ಫೆಬ್ರವರಿಯಲ್ಲಿ ಮಂಗಳೂರು ಯು.ಪಿ.ಒ.ಆರ್ ಕಚೇರಿಗೆ ಅರ್ಜಿ ಸಲ್ಲಿಸಲಾಗಿತ್ತು. ಬಳಿಕ ಸರ್ವೆಯರ್ ನಂದೀಶ್ 2025ರ ಎಪ್ರಿಲ್‌ನಲ್ಲಿ ಸರ್ವೆ ನಡೆಸಿ ಲಂಚಕ್ಕೆ […]

DAKSHINA KANNADA HOME LATEST NEWS

ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌ವಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಮಂಗಳೂರಿನ ನಿರ್ಗಮಿತ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

DAKSHINA KANNADA HOME LATEST NEWS STATE UDUPI

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿ ಸೇರಿ ಹಲವರ ವರ್ಗಾವಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಉಡುಪಿ ಡಿಸಿ ವಿದ್ಯಾಕುಮಾರಿ ಅವರನ್ನು ಸೇರಿ ಹಲವು  ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲ್ಲೈ ಮುಗಿಲನ್ ಅವರನ್ನು ಇನ್ಸ್‌ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್‌ವಿ ವಾಣಿಜ್ಯ […]