Tag: ಕೆನರಾಟಿವಿ

DAKSHINA KANNADA HOME LATEST NEWS

ಪೆರುವಾಯಿ ಕಾಲಾವಧಿ ಜಾತ್ರೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಸಮೀಪದ ಬದಿಯಾರು ಶ್ರೀ ಮೂವರು ದೈವಂಗಳು ಪಂಜುರ್ಲಿ ಮತ್ತು ಪಿಲಿಚಾಮುಂಡಿ ದೈವಸ್ಥಾನದಲ್ಲಿ 2026ನೇ ಸಾಲಿನ ಕಾಲಾವಧಿ ಜಾತ್ರೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಬದಿಯಾರು ಕ್ಷೇತ್ರದಲ್ಲಿ ಫೆಬ್ರವರಿ 20, 2026ರ ಶುಕ್ರವಾರದಿಂದ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ಫೆಬ್ರವರಿ 22ರ ಆದಿತ್ಯವಾರದವರೆಗೆ ವಿಜೃಂಭಣೆಯಿಂದ ನಡೆದವು. ಮೂರು ದಿನಗಳ ಕಾಲ ನಡೆದ ಈ ಉತ್ಸವದಲ್ಲಿ ವಿವಿಧ ವೈದಿಕ ವಿಧಿವಿಧಾನಗಳು, ದೈವಗಳ ನೇಮೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಾದಿಗಳ ಸಮ್ಮುಖದಲ್ಲಿ ಸಂಪನ್ನಗೊಂಡವು. ಪೆರುವಾಯಿ ಮತ್ತು ಸುತ್ತಮುತ್ತಲಿನ ಗ್ರಾಮಗಳ […]

DAKSHINA KANNADA HOME LATEST NEWS

ಕರಾವಳಿಯಲ್ಲಿ ಸಂಜೆ-ರಾತ್ರಿ ವೇಳೆಗೆ ತುಂತುರು ಮಳೆಯಾಗಬಹುದು: ಹವಾಮಾನ ಮುನ್ಸೂಚನೆ

ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಇಂದು ಹಗುರ ಮಳೆಯ ಮುನ್ಸೂಚನೆ ಇದೆ. ನಿನ್ನೆ ಸುಳ್ಯ-ಬೆಳ್ತಂಗಡಿ ಸೇರಿದಂತೆ ಕೆಲವು ಕಡೆ ಮಳೆಯಾಗಿತ್ತು. ಬೆಳ್ತಂಗಡಿಯಲ್ಲಿ ಒಂದು ಮನೆಗೆ ಹಾನಿಯಾಗಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಆಕಾಶ ಮೋಡದಿಂದ ಕೂಡಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 33°C ರಿಂದ 34°C ವರೆಗೆ ಇರಲಿದ್ದು, ಮಧ್ಯಾಹ್ನ ಸೆಖೆಯ ಅನುಭವ ಹೆಚ್ಚಿರಲಿದೆ. ಸಮುದ್ರದ […]

DAKSHINA KANNADA HOME LATEST NEWS

ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ- ಪೆರುವಾಯಿಯಲ್ಲಿ 2 ಲಾರಿ ವಶಕ್ಕೆ

ವಿಟ್ಲ: ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಎರಡು ಲಾರಿಗಳನ್ನು ವಶಕ್ಕೆ ಪಡೆದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂಧರ್ಭಿಕ ಚಿತ್ರ ಫೆ.25ರಂದು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ಅವರಿಗೆ ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆಯುತ್ತದೆ. ಈ ವೇಳೆ ತಮ್ಮ ಸಿಬ್ಬಂದಿಯೊಂದಿಗೆ ಬಂಟ್ವಾಳ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ […]

DAKSHINA KANNADA HOME LATEST NEWS

ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತರ ಮೇಲೆ ನೈತಿಕ ಪೊಲೀಸ್‌ಗಿರಿ: ಇಬ್ಬರ ಬಂಧನ

ಮಂಗಳೂರು: ನೈತಿಕ ಪೊಲೀಸ್‌ಗಿರಿಯಲ್ಲಿ ಸೈಲೆಂಟ್‌ ಆಗಿದ್ದ ಮಂಗಳೂರಿನಲ್ಲಿ ಇದೀಗ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂದು ಗುರುತಿಸಲಾಗಿದೆ. ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಮತ್ತು […]

DAKSHINA KANNADA HOME LATEST NEWS

ಅಂಬುಲೆನ್ಸ್‌ನಲ್ಲೇ ಹೆರಿಗೆಯಾದ ಬೆಳ್ತಂಗಡಿಯ ಬಾಣಂತಿ: ತಾಯಿ-ಮಗು ಸುರಕ್ಷಿತ

ಬೆಳ್ತಂಗಡಿ: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಆಂಬುಲೆನ್ಸ್‌ನಲ್ಲಿ ಕರೆದೊಯ್ಯುವ ವೇಳೆ ಮಹಿಳೆಯೊಬ್ಬರಿಗೆ ಹೆರಿಗೆ ನೋವು ತೀವ್ರಗೊಂಡಿದ್ದು, ಶುಶ್ರೂಷಕಿಯರಿಬ್ಬರು ಸೇರಿ ಆಕೆಗೆ ದಾರಿ ಮಧ್ಯೆಯೇ ಆ ವಾಹನದಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಬಾಣಂತಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಸುದೆಮುಗೇರುವಿನ ಲೀಲಾವತಿ ಅವರು ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಸೋಮವಾರ ಮುಂಜಾನೆ ಹೆರಿಗೆಗೆಂದು ಬಂದಿದ್ದರು. ಅವರಿಗೆ ಇದು ಎರಡನೇ ಹೆರಿಗೆಯಾಗಿದ್ದು, ಮೊದಲ ಹೆರಿಗೆಯಲ್ಲಿ ಸಿಜೇರಿಯನ್‌ ಮೂಲಕ ಮಗುವನ್ನು ಹೊರತೆಗೆಯಲಾಗಿತ್ತು. ಹಾಗಾಗಿ ಮಂಗಳೂರಿನ […]

DAKSHINA KANNADA HOME LATEST NEWS

ಮಹಾರಾಷ್ಟ್ರದಲ್ಲಿ ಅಪಘಾತ: ಮಂಗಳೂರಿನ ಯುವಕ ಸಾವು

ಮಂಗಳೂರು: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿ ವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೋಳಿಯಾರ್ ನಿವಾಸಿ ಬಿಎಚ್ ಕರೀಂ ಎಂಬವರ ಪುತ್ರ ಮುಹಮ್ಮದ್ ರಿಝ್ವಾನ್ (28) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ.ಕಳೆದ‌ ಹಲವಾರು ವರ್ಷಗಳಿಂದ ಕಂಪೆನಿಯೊಂದರ ಮೂಲಕ ಮೀನಿನ ಲಾರಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ರಿಝ್ವಾನ್ ಅವರು ಮಹಾರಾಷ್ಟ್ರಕ್ಕೆ ಮೀನಿನ ಲಾರಿ ಚಲಾಯಿಸುತ್ತಿದ್ದು, ಮಹಾರಾಷ್ಟ್ರದ ರತ್ನಗಿರಿ ಎಂಬಲ್ಲಿ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಝ್ವಾನ್ ಮೃತಪಟ್ಟಿದ್ದಾರೆ. […]

COMMUNITY NEWS DAKSHINA KANNADA HOME LATEST NEWS

ಕಯ್ಯಾರು ಹಳೆ ಚರ್ಚ್‌ ಕೆಡವಿದ್ದು ನಮಗೆ ನೋವುಂಟು ಮಾಡಿದೆ: ವಿಲ್ಸನ್ ಕಯ್ಯಾರ್‌

ಮಂಗಳೂರು: ಕಾಸರಗೋಡಿನ ಕಯ್ಯಾರು ಗ್ರಾಮದಲ್ಲಿರುವ 73 ವರ್ಷ ಹಳೆಯದಾದ ಕ್ರಿಸ್ತರಾಜ ದೇವಾಲಯವು  ಕೆಡವಿದ್ದು ನೋವುಂಟು ಮಾಡಿದೆ ಎಂದು ವಿಲ್ಸನ್ ಕಯ್ಯಾರ್‌ ಆರೋಪಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 1953ರಲ್ಲಿ ಫಾ. ಲಾರೆನ್ಸ್ ಎಸ್. ಪಾಯ್ಸ್ ಅವರ ನೇತೃತ್ವದಲ್ಲಿ ನಿರ್ಮಿಸಲಾಗಿತ್ತು. 1956ರ ಏಪ್ರಿಲ್ 25ರಂದು ಮಂಗಳೂರು ಧರ್ಮಪ್ರಾಂತ್ಯದ ಆಗಿನ ಬಿಷಪ್ ಅ.ವಂ. ಬೇಸಿಲ್ ಎಫ್. ಡಿ’ಸೋಜಾ ಅವರಿಂದ ಉದ್ಘಾಟಿಸಲ್ಪಟ್ಟಿತ್ತು.   ಕಯ್ಯಾರ್ ಹಳೆ ಚರ್ಚ್ ಕೆಡವಲು ಚರ್ಚ್ ಮಹಾಸಭೆಯಲ್ಲೇ ಒಪ್ಪಿಗೆ: ಆಡಳಿತ ಮಂಡಳಿ ಸ್ಪಷ್ಟನೆ     […]

COMMUNITY NEWS DAKSHINA KANNADA HOME LATEST NEWS

ಕಯ್ಯಾರ್ ಹಳೆ ಚರ್ಚ್ ಕೆಡವಲು ಚರ್ಚ್ ಮಹಾಸಭೆಯಲ್ಲೇ ಒಪ್ಪಿಗೆ: ಆಡಳಿತ ಮಂಡಳಿ ಸ್ಪಷ್ಟನೆ

ಚರ್ಚ್ ಉಳಿಸಲು, ಹಣಕಾಸಿನ ನೆರವಿಗೆ 5 ತಿಂಗಳ ಕಾಲಾವಕಾಶ ಹೊಸ ಚರ್ಚ್ ಪೂರ್ಣಗೊಳಿಸಲು ಹಳೆ ಚರ್ಚ್ ಪರಿಕರಗಳ ಬಳಕೆ ಮಂಗಳೂರು: ಕಯ್ಯಾರ್ ಕ್ರಿಸ್ತರಾಜ ದೇವಾಲಯದ ಹಳೆ ಕಟ್ಟಡ ತೆರವುಗೊಳಿಸುವ ಬಗ್ಗೆ ಆಡಳಿತ ಮಂಡಳಿಯಿಂದ ಸ್ಪಷ್ಟೀಕರಣ ನೀಡಿದ್ದು, ಈ ಬಗ್ಗೆ ಚರ್ಚ್ ಆಡಳಿತ ಮಂಡಳಿ ಉಪಾಧ್ಯಕ್ಷ ಹಾಗೂ ಕಾರ್‍ಯದರ್ಶಿ ಸೇರಿದಂತೆ ಆಡಳಿತ ಮಂಡಳಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ ಅದರ ವಿವರ ಇಂತಿದೆ. ಕಯ್ಯಾರ್ ಕ್ರಿಸ್ತರಾಜ ದೇವಾಲಯ ಕಯ್ಯಾರ್ ಕ್ರಿಸ್ತರಾಜ ದೇವಾಲಯದ ಹಳೆ ಕಟ್ಟಡ ತೆರವುಗೊಳಿಸುವ ಬಗ್ಗೆ ಸಾಮಾಜಿಕ […]

DAKSHINA KANNADA HOME LATEST NEWS

ಶ್ರೀನಿವಾಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸ್ಥಾಪಕ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಸ್ಥಾಪಕ ಡಾ. ಸಿಎ ಎ. ರಾಘವೇಂದ್ರ ರಾವ್ (89) ಮಂಗಳವಾರ ರಾತ್ರಿ ನಿಧನರಾದರು. ಅವರಿಗೆ ಪುತ್ರ ಸಿಎ ಶ್ರೀನಿವಾಸ ರಾವ್ ಮತ್ತು ಪುತ್ರಿ ಪದ್ಮಿನಿ ರಾವ್ ಇದ್ದಾರೆ. ಅವರ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ‌ ದರ್ಶನಕ್ಕಾಗಿ ಬೆಳಗ್ಗೆ 11 ಗಂಟೆಗೆ ಮುಕ್ಕ ಶ್ರೀನಿವಾಸ ಕಾಲೇಜುಗಳ ಕ್ಯಾಂಪಸ್‌ನಲ್ಲಿ ಇರಿಸಲಾಗುತ್ತದೆ. ಮಧ್ಯಾಹ್ನದ ನಂತರ ಅಂತಿಮ ಸಂಸ್ಕಾರ ನಡೆಯಲಿದೆ. ನಗರದ ಪ್ರಸಿದ್ಧ ಚಾರ್ಟರ್ಡ್ ಅಕೌಂಟೆಂಟ್, ಶಿಕ್ಷಣ ತಜ್ಞ ಮತ್ತು ಉದ್ಯಮಿಯಾಗಿದ್ದು, 1988ರಲ್ಲಿ […]

DAKSHINA KANNADA HOME LATEST NEWS

ಶಬರಿಮಲೆ ಯಾತ್ರೆ ವೇಳೆ ಉಪ್ಪಿನಂಗಡಿ ಬಜರಂಗದಳ ಮುಖಂಡ ಹೃದಯಾಘಾತದಿಂದ ಸಾವು

ಉಪ್ಪಿನಂಗಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳದ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖ್ ಆಗಿದ್ದ ಬೆಳ್ತಂಗಡಿ ತಾಲ್ಲೂಕು ತೆಕ್ಕಾರು ಗ್ರಾಮದ ನಿವಾಸಿ ಸುಧೀರ್ ತೆಕ್ಕಾರ್ (26) ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ಶಬರಿಮಲೆಯಲ್ಲಿ ಹೃದಯಾಘಾತ ಸಂಭವಿಸಿದ್ದು, ಮೃತದೇಹವನ್ನು ಮಂಗಳವಾರ ತೆಕ್ಕಾರು ಮನೆಗೆ ತಂದು ಮೆರವಣಿಗೆಯಲ್ಲಿ ಉಪ್ಪಿನಂಗಡಿಯ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಈ ಬಾರಿ ಶಬರಿಮಲೆ ಯಾತ್ರೆ ಸಂದರ್ಭ ಹಲವರಿಗೆ ಹೃದಯಾಘಾತ ಆಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ತನಿಖಾ ತಂಡಗಳು ನಿಗಾ ವಹಿಸಬೇಕಿದೆ […]