Tag: ಪುತ್ತೂರು

DAKSHINA KANNADA HOME LATEST NEWS UDUPI

ಹಿಂದೂ ಮಹಿಳೆ-ಮುಸ್ಲಿಂ ಯುವಕನ ಕುರಿತು ವ್ಯಂಗ್ಯ ಪೋಸ್ಟ್‌: ಇಬ್ಬರ ಬಂಧನ

ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುತ್ತೂರು ರಸ್ತೆಯ ನಿತೇಶ್ ಕೆ. (20) ಎಂಬಾತನನ್ನು ಪುತ್ತೂರು ತಾಲೂಕು ಕಲ್ಲಬ್ಬ ಜಂಕ್ಷನ್ ಬಳಿ ಜ.30ರಂದು ಹಾಗೂ ಕಡಬ ತಾಲೂಕು ಗುಂಡ್ಯ ಸಿರಿಬಾಗಿಲು ಗ್ರಾಮದ ಹಿತೇಶ್ ಎ.(19) ಎಂಬಾತನನ್ನು ಫೆ.1ರಂದು ಮಂಗಳೂರಿನ ಲಾಲ್‌ಬಾಗ್ ಬಳಿ ಪ್ರಕರಣಕ್ಕೆ […]

DAKSHINA KANNADA HOME LATEST NEWS

ಪುತ್ತೂರು: ಕಂಟೈನರ್ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ

ಪುತ್ತೂರು: ಗೇರು ಬೀಜ ಸಾಗಣೆ ಕಂಟೈನರ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪುತ್ತೂರು ತಾಲ್ಲೂಕಿನ ಮಾಡ್ನೂರು ಗ್ರಾಮದ ಕಾವು ಬುಶ್ರಾ ವಿದ್ಯಾಸಂಸ್ಥೆಯ ಎದುರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನಿರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ‍ಪಡೆಯುತ್ತಿದ್ದಾರೆ. ಪುತ್ತೂರು ಕಡೆಯಿಂದ ಮೈಸೂರು ಕಡೆಗೆ ಗೇರು ಬೀಜದ ಮೂಟೆಗಳನ್ನು ಒಯ್ಯುತ್ತಿದ್ದ ಲಾರಿಯು ಪಿಕಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸುವ ಯತ್ನದಲ್ಲಿ ಹತೋಟಿ ಕಳೆದುಕೊಂಡು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ […]

DAKSHINA KANNADA HOME

ಪುತ್ತೂರು: ನೆಟ್ಟಣಿಗೆ ಮುಡ್ನೂರಿನಲ್ಲಿ ಮಹಿಳಾ ಕಾಂಗ್ರೆಸ್ ಸಭೆ

ಪುತ್ತೂರು: ಕಾಂಗ್ರೆಸ್ ನ ನೆಟ್ಟಣಿಗೆ ಮೂಡ್ನೂರು ವಲಯದ ಮಹಿಳಾ ಘಟಕದ ಸಭೆ ನಿನ್ನೆ  ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಪುತ್ತೂರಿನ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಹಾಗೂ ಪುತ್ತೂರಿನ ಅಭಿವೃದ್ಧಿ ಬಗ್ಗೆ ಶಾಸಕರು ಬಿಡುಗಡೆಗೊಳಿಸಿದ ಅನುದಾನ, ಹಾಗೆಯೇ ಶಾಸಕರ ಅವಧಿಯಲ್ಲಿ ಮಹಿಳಾ ಕಾಂಗ್ರೆಸನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಬೂತ್ ಅಧ್ಯಕ್ಷರುಗಳ ನೇಮಕ, ನರೇಗಾ ಹಕ್ಕೊತ್ತಾಯ ಪಾದಯಾತ್ರೆಯ ಯಶಸ್ವಿಗೊಳಿಸುವ ವಿಚಾರ, ಹಾಗೆಯೇ ಜಿಲ್ಲಾ ಹಾಗೂ ನಗರ ಪಂಚಾಯತ್ ಚುನಾವಣೆಗೆ ಸೂಕ್ತ ಮಹಿಳಾ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ […]

DAKSHINA KANNADA HOME LATEST NEWS

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಕೋಮುದ್ವೇಷದ ಭಾಷಣ ಆರೋಪ: ಎಫ್‌ಐಆರ್‌

ಪುತ್ತೂರು: ಖಾಸಗಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋಮುಧ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ದ ಪ್ರಕರಣ ದಾಖಲಾಗಿದೆ. ಜೊತೆಗೆ ಈ ಕಾರ್ಯಕ್ರಮವನ್ನು ಪ್ರಸಾರ ಮಾಡಿದ ಕಾಲೇಜಿನ ಯೂಟ್ಯೂಬ್‌ ವಿರುದ್ಧವೂ ಪ್ರಕರಣ ದಾಖಲಾಗಿದೆ. ಪ್ರಕರಣದ ಪುತ್ತೂರಿನ ರಾಮಚಂದ್ರ ಕೆ ಎಂಬವರ ದೂರಿನಂತೆ ಜ.12 ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಆರೋಪಿತರಾದ ಡಾ.ಕಲ್ಲಡ ಪ್ರಭಾಕರ ಭಟ್ ರವರು, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ […]

DAKSHINA KANNADA HOME LATEST NEWS

ಮಂಗಳೂರಿಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ106 ಕಿಲೋ ಗಾಂಜಾ ಪುತ್ತೂರಲ್ಲಿ ವಶ

ಪುತ್ತೂರು: ಕಾರು ಹಾಗೂ ಗೂಡ್ಸ್‌ ವಾಹನದಲ್ಲಿ 106 ಕಿಲೋ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಹಾಗೂ ಅದೇ ಗ್ರಾಮದ ರಫೀಕ್‌ ಪಿ(37) ಎಂದು ಗುರುತಿಸಲಾಗಿದೆ. ಘಟನೆ ವಿವರ ಜ.19 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಪೊಲೀಸರಿಗೆ ಖಚಿತ ಮಾಹಿತಿ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ […]

DAKSHINA KANNADA HOME LATEST NEWS

ಪುತ್ತೂರು: ತೆಂಗಿನ ಮರದಲ್ಲಿ ಕಾಳುಮೆಣಸು ಕೀಳುತ್ತಿದ್ದಾಗ ನೆಲಕ್ಕೆ ಬಿದ್ದು ನಿವೃತ್ತ ಶಿಕ್ಷಕ ಸಾವು

ಪುತ್ತೂರು: ತೆಂಗಿನ ಮರಕ್ಕೆ ಹಬ್ಬಿದ್ದ ಕಾಳುಮೆಣಸಿನ ಗಿಡದಿಂದ ಕಾಳು ಮೆಣಸು ಕೀಳುವ ವೇಳೆ ನಿವೃತ್ತ ಶಿಕ್ಷಕರೊಬ್ಬರು ಬಿದ್ದು ಸಾವನಪ್ಪಿದ ಘಟನೆ ಬೆಟ್ಟಂಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ನಿವಾಸಿ ನಾರಾಯಣ ನಾಯ್ಕ ಪೈಂತಿಮುಗೇರು ಎಂದು ಗುರುತಿಸಲಾಗಿದೆ. ಘಟನೆ ಜನವರಿ 19 ರಂದು ನಡೆದಿದೆ. ಬೆಳಗ್ಗೆ ತನ್ನ ಮನೆ ಮುಂಭಾಗದಲ್ಲಿದ್ದ ತೆಂಗಿನ ಮರದಲ್ಲಿ ಬೆಳೆದಿದ್ದ ಕಾಳು ಮೆಣಸನ್ನು ಅಲ್ಯೂಮಿನಿಯಂ ಏಣಿ ಏರಿ ಕೊಯ್ಯುತ್ತಿದ್ದಾಗ ಏಣಿ ಸಹಿತ ಅವರು ಮರದಿಂದ ಜಾರಿ ಬಿದ್ದಿದ್ದಾರೆ. ಘಟನೆಯಿಂದ ನಾರಾಯಣ ನಾಯ್ಕರವರಿಗೆ […]

DAKSHINA KANNADA HOME LATEST NEWS

ಕಬಕ : ರಸ್ತೆ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಮದ ವಿದ್ಯಾಪುರ 9 ನೇ ಅಡ್ಡ ರಸ್ತೆಯಲ್ಲಿ ಸ್ಥಳೀಯ ಮನೆಗಳ ಸಂಪರ್ಕದ ರಸ್ತೆ ವಿವಾದ ಇತ್ಯರ್ಥವಾಗಿದೆ. ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಸೌಹಾರ್ಧಸಭೆಯಲ್ಲಿ ವಿವಾದವನ್ನು ಇತ್ಯರ್ಥಪಡಿಸಲಾಗಿದೆ. ಈ ರಸ್ತೆಯ ಪಕ್ಕದಲ್ಲಿ 6 ಮನೆಗಳಿದ್ದು ಈ ಮನೆಗಳಿಗೆ ತೆರಳಲು ರಸ್ತೆಯೇ ಇರಲಿಲ್ಲ. ಅಲ್ಲಿಗೆ ತೆರಳುವ ರಸ್ತೆಯ ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ಅಡಚಣೆಯಾಗಿತ್ತು. ರಸ್ತೆಗಾಗಿ ಹಲವು ವರ್ಷಗಳಿಂದ ಇಲ್ಲಿನ ನಿವಾಸಿಗಳು ಹೋರಾಟವನ್ನೇ ಮಾಡಿದ್ದರು. ಕೆಲದಿನಗಳ ಹಿಂದೆ ಶಾಸಕರ ನೇತೃತ್ವದಲ್ಲಿ ಮಾತುಕತೆ ನಡೆದಿದ್ದು […]

HOME STATE

ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು

ಬೆಂಗಳೂರು ಆಗಸ್ಟ್ 11: ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ – ಕಾಡು ಪ್ರಾಣಿ ಸಂಘರ್ಷದ ಕುರಿತು ಸೂಕ್ತವಾದ ಕ್ರಮವನ್ನು ಕೈಗೊಂಡು ಈ ಭಾಗದ ಜನರ ಬಹುಮುಖ್ಯ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆಗಳು ನಾಡಿಗೆ ನುಗ್ಗಿ ಬೆಳೆ […]

DAKSHINA KANNADA HOME LATEST NEWS

ಬಪ್ಪಳಿಗೆ-ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಬಪ್ಪಳಿಗೆ-ಸಿಂಗಾಣಿ ಇದರ 4ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ವೇಳೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಬಪ್ಪಳಿಗೆ-ಸಿಂಗಾಣಿಯ ಗೌರವಾಧ್ಯಕ್ಷ ರಾಮಚಂದ್ರ ಕೆ. ರಾವ್, ಅಧ್ಯಕ್ಷ ಮೋಹನ್ ಗೌಡ ಸಿಂಗಾಣಿ, ಪ್ರಧಾನ ಕಾರ್ಯದರ್ಶಿ ಲಿಖಿತ್ ರಾಜ್ ಅರಸ್, ಮಾಜಿ ಅಧ್ಯಕ್ಷ ರವಿ […]

DAKSHINA KANNADA HOME LATEST NEWS

ಪುತ್ತೂರು: ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: 7 ವರ್ಷಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತನಾಗಿ ಬಿಡುಗಡೆಗೊಂಡು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಹನೀಫ್(55) ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ  2018ರಲ್ಲಿ ನಡೆದ ಪ್ರಕರಣವೊಂದರಲ್ಲಿ ಈತನ ಬಂಧನವಾಗಿತ್ತು ಬಳಿಕ ಜಾಮೀನು ಪಡೆದು,  ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ […]