Tag: ಮಂಗಳೂರು

HOME LATEST NEWS UDUPI

“ಸ್ವ ಇಚ್ಛೆಯಿಂದ ಅಕ್ರಂ ಜೊತೆ ಹೋಗಿದ್ದೇನೆ”: ಕ್ರೈಸ್ತ ಯುವತಿ- ಮುಸ್ಲಿಂ ಯುವಕನ ಪ್ರೇಮ ಪ್ರಕರಣ

ಮಂಗಳೂರು: ಕ್ರೈಸ್ತ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿದ್ದಾನೆ ಎಂದು ಯುವತಿಯ ತಾಯಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದ ಪ್ರಕರಣದಲ್ಲಿ ಹುಡುಗಿ ತನ್ನ ಪ್ರಿಯಕರನೊಂದಿಗೆ ನಿನ್ನೆ ಹೈಕೋರ್ಟ್ ಮುಂದೆ ಹಾಜರಾಗಿದ್ದಾಳೆ. ನಿನ್ನೆ ಜೀನ ಮೆರಿಲ್ ಮತ್ತು ಅಕ್ರಮ್ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನನ್ನು ಯಾರೂ ಅಪಹರಿಸಿರುವುದಿಲ್ಲ, ನಾನುಸ್ವಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತಿಳಿಸಿದ್ದಾಳೆ. ಇದೇ ವೇಳೆ ಆಕೆಯ ತಾಯಿ ಮಗಳ ಜೊತೆ ಮಾತನಾಡಬೇಕು ಎಂದು ವಿನಂತಿಸಿದಾಗ, ನ್ಯಾಯಾಧೀಶರು ತಮ್ಮ ಕೊಠಡಿಯಲ್ಲಿಯೇ […]

DAKSHINA KANNADA HOME LATEST NEWS

ಮಂಗಳೂರು: ಭಿಕ್ಷಾಟನೆ- ತಾಯಿ ಮಕ್ಕಳ ರಕ್ಷಣೆ

ಮಂಗಳೂರು : ಪುಟ್ಟ ಮಕ್ಕಳನ್ನು ಹಿಡಿದುಕೊಂಡು ನಗರದ ಲಾಲ್‍ಬಾಗ್ ಜಂಕ್ಷನ್ ಸಿಗ್ನಲ್ ಬಳಿ ಬಿಕ್ಷಾಟನೆ ನಡೆಸುತ್ತಿದ್ದ ತಾಯಿ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪತ್ತೆ ಹಚ್ಚಿ ಅವರ ಊರುಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಮಕ್ಕಳ ರಕ್ಷಣಾ ಘಟಕ ಪೋಲೀಸರ ಸಹಯೋಗದೊಂದಿಗೆ ಲಾಲ್‍ಬಾಗ್ ಸಿಗ್ನಲ್ ಬಳಿ ಭಿಕ್ಷಾಟನೆ ನಡೆಸುತ್ತಿದ್ದ 4 ಮಹಿಳೆಯರು, 4 ಪುರುಷರು, 4 ಮಕ್ಕಳನ್ನು ರಕ್ಷಣೆ ಮಾಡಿ ಅವರ ಸ್ವಂತ ಊರು ರಾಜಸ್ಥಾನಕ್ಕೆ ರೈಲಿನ ಮೂಲಕ ಕಳುಹಿಸಿಕೊಡಲಾಯಿತು. ಹೆಂಗಸರು […]

DAKSHINA KANNADA HOME LATEST NEWS

ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ & ಸಿಬ್ಬಂದಿಗೆ ಅಭಿನಂದನೆ

ಮಂಗಳೂರು: ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಿನ್ನೆ ಸಂಜೆ ನಡೆಯಿತು. ನಗರದ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮಾದಕ ವಸ್ತು ಗಳನ್ನು ಪತ್ತೆ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅತೀ ಉತ್ತಮ ಮತ್ತು ಶ್ಲಾಘನೀಯ ಕರ್ತವ್ಯ ನಿರ್ವಹಿಸಿ 2024 ನೇ ಸಾಲಿನ ಮುಖ್ಯ ಮಂತ್ರಿ ಚಿನ್ನದ ಪದಕ ಪಡೆದ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಎಸಿಪಿ ಧನ್ಯಾ ನಾಯಕ್, […]

DAKSHINA KANNADA HOME LATEST NEWS

ಹೋಟೆಲ್‌ ಮೋತಿ ಮಹಲ್ ಏಪ್ರಿಲ್‌ ಅಂತ್ಯಕ್ಕೆ ಬಂದ್…!

ಮಂಗಳೂರು: ಮಂಗಳೂರಿನ ಮೊದಲ ಬಿಝಿನೆಸ್ ಹೋಟೆಲ್ ಎಂದೇ ಖ್ಯಾತಿ ಪಡೆದಿದ್ದ ಮೋತಿ ಮಹಲ್ ಇದೀಗ ಮುಚ್ಚುವ ಹಂತಕ್ಕೆ ತಲುಪಿದ್ದು, ಎಪ್ರಿಲ್ ಅಂತ್ಯದೊಳಗೆ  ಅದರ ಭೂ ಮಾಲಕರಿಗೆ ಬಿಟ್ಟುಕೊಡಬೇಕಾಗಿದೆ. ಜಮೀನು ವಾಜ್ಯದಲ್ಲಿ ಸುಪ್ರೀಂ ಕೋರ್ಟ್‌ನ  ತೀರ್ಪಿನಂತೆ ಹೋಟೆಲ್ ಮೋತಿಮಹಲ್ ಅನ್ನು ಯಥಾ ಸ್ಥಿತಿಯಲ್ಲಿ ಜಮೀನಿನ ಮಾಲಕರಿಗೆ ಬಿಟ್ಟುಕೊಡಬೇಕಾಗಿದೆ. ಇದರೊಂದಿಗೆ 3 ಕೋಟಿ ರೂ. ಮೊತ್ತದ ಪರಿಹಾರಧನವನ್ನು ಅವರಿಗೆ ಪಾವತಿಸಬೇಕಾಗಿದೆ.   ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಪಕ್ಕದಲ್ಲಿರುವ ಹೋಟೆಲ್ ಮೋತಿಮಹಲ್ ಇರುವ ಜಮೀನಿನ ಒಡೆತನವು ಸದ್ಯ  ಜೆಪ್ಪುವಿನ ಸಂತ ಅಂಥೋನಿ ವೃದ್ಧಾಶ್ರಮಕ್ಕೆ […]

DAKSHINA KANNADA HOME LATEST NEWS

ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಕರಿಮಣಿ ಎಗರಿಸಿ ಪರಾರಿ: ಗಂಭೀರ ಗಾಯ

ಮಂಗಳೂರು: ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ 70 ವರ್ಷದ ವೃದ್ಧೆಯನ್ನು ದೂಡಿಹಾಕಿ ಕರಿಮಣಿ ಸರವನ್ನು ಎಗರಿಸಿದ ಘಟನೆ ಮೂಡಬಿದ್ರೆಯ ಗುಜ್ಜರಗುಂಡಿ ಬಳಿ ಮಾ.31 ರಂದು ನಡೆದಿದೆ. ಘಟನೆಯಲ್ಲಿ ವೃದ್ದೆಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ವಿವರ ಇಂದಿರಾ (70) ಎಂಬುವರು ದಿನಾಂಕ 31-03-2025 ರಂದು ಕೋರಂತಬೆಟ್ಟು ಎಂಬಲ್ಲಿ ತನ್ನ ಅಳಿಯ ಭಾಸ್ಕರ ಎಂಬುವರ ಮನೆ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಹೋಗಿ ಊಟ ಮುಗಿಸಿ ವಾಪಾಸ್ ಮನೆ ಕಡೆಗೆ ಬೆಳುವಾಯಿ – ಕರಿಯನಂಗಡಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಗುಜ್ಜರಗುಂಡಿ ಎಂಬಲ್ಲಿಗೆ […]

DAKSHINA KANNADA HOME LATEST NEWS UDUPI

ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ..!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ  ಸೇರಿದಂತೆ ರಾಜ್ಯದ ವಿವಿಧೆಡೆ ನಾಳೆ (ಗುರುವಾರ) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಮತ್ತು ಗದಗ ಜಿಲ್ಲೆಯಲ್ಲಿ ಗಂಟೆಗೆ 50 […]

DAKSHINA KANNADA HOME LATEST NEWS

“ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ” ವಕ್ಫ್‌ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ SDPI ಬೃಹತ್‌ ಪ್ರತಿಭಟನೆ

ಮಂಗಳೂರು: ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಎಸ್‌ಡಿಪಿಐ ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ಮಂಗಳೂರಿನ ಕ್ಲಾಕ್‌ ಟವರ್‌ ಬಳಿ ಬೃಹತ್‌ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, “ಮಸೀದಿ, ಮದರಸ, ಖಬರಸ್ತಾನ, ದೋಚಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಈ ಮಸೂದೆ ಹಿಂಪಡೆಯುವವರೆಗೂ ಹೋರಾಟ ಮುಂದುವರಿಯುತ್ತದೆ. ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಐದು ತಿಂಗಳುಗಳಲ್ಲಿ ನಾಲ್ಕು ಪ್ರತಿಭಟನೆ ನಡೆಸಲಾಗಿದೆ. ಎಸ್‌ಡಿಪಿಐ, ಜಾತ್ಯತೀತ ಸಂಘಟನೆಗಳಿಗೆ ಆಕ್ಷೇಪ ವ್ಯಕ್ತಪಡಿಸಲು […]

HOME LATEST NEWS STATE

Uber, Rapido ಸೇರಿದಂತೆ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ನಿಲ್ಲಿಸುವಂತೆ ಹೈಕೋರ್ಟ್‌ ಆದೇಶ

ಬೆಂಗಳೂರು: ಉಬರ್, ರ್ಯಾಪಿಡೋ ಸಹಿತ ಹಲವು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಹೀಗಾಗಿ ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದ್ದು, 3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಮೋಟಾರ್ ಸೈಕಲ್‌ಗಳನ್ನು […]

DAKSHINA KANNADA HOME LATEST NEWS

ಮಂಗಳೂರು: ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ-40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆ

ಮಂಗಳೂರು: ಆಡಂಕುದ್ರುನಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಉರ್ಬನ್‌ ಡಿಸೋಜಾ ಎಂಬಾತನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 5 ಲೀಟರ್‌ ಕಳ್ಳಭಟ್ಟಿ ಸಾರಾಯಿ, ಕಳ್ಳಭಟ್ಟಿ ತಯಾರಿಸಲು ಉಪಯೋಗಿಸುತ್ತಿದ್ದ ಸಲಕರಣೆಗಳು, 40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆಯಾಗಿದೆ. ಮಂಗಳೂರು ದಕ್ಷಿಣ ವಲಯದ ಅಬಕಾರಿ ಕಮಲ ಎಚ್‌. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಬಕಾರಿ ಉಪನಿರೀಕ್ಷಕ ಹರೀಶ್‌ ಪಿ. ಕಾನ್ಸ್ಟೇಬಲ್‌ಗಳಾದ ಬಸವಾರಜ ತೊರೆ, ಆನಂದ್‌, ವಾಹನಚಾಲಕ ರಘುರಾಮ ಕಾರ್ಯಚರಣೆಯಲ್ಲಿ ಸಹಕರಿಸಿದ್ದರು.

DAKSHINA KANNADA HOME LATEST NEWS

ಮಂಗಳೂರು- ನಾಳೆಯಿಂದ ಎ.9 ರವರೆಗೆ ಜೆಇಇ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಮಂಗಳೂರು: ಎಪ್ರಿಲ್ 2 ರಿಂದ 9 ರವರೆಗೆ ನಡೆಯಲಿರುವ ಜೆಇಇ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 300 ಮೀಟರ್ ಸುತ್ತಮುತ್ತಲಿನ ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ – ಪ್ರದೇಶವನ್ನು ನಿಷೆೀಧಿತ ಪ್ರದೇಶವೆಂದು ಘೋಷಿಸಿ ನಿಷೆೀಧಾಜ್ಞೆ ಜಾರಿಗೊಳಿಸಿ ಉಪ ಪೋಲಿಸ್ ಆಯುಕ್ತ ಸಿದ್ದಾರ್ಥ್‌ ಗೋಯಲ್ ಆದೇಶಿಸಿದ್ದಾರೆ. 1)ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, 2) ಐಓಎನ್ ಡಿಜಿಟಲ್ […]