Tag: ಎಂಸಿಸಿ ಬ್ಯಾಂಕ್

LATEST NEWS

ಮಂಗಳೂರು: MCC ಬ್ಯಾಂಕ್‌ನ 22ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

ಮಂಗಳೂರು: 1912ರಲ್ಲಿ ಸ್ಥಾಪನೆಯಾಗಿ 114 ರ‍್ಷಗಳ ಯಶಸ್ವಿ ಸೇವೆಯನ್ನು ಪೂರೈಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಜೂ. 28ರಂದು ದೇರಳಕಟ್ಟೆಯ ಫಾ. ಮುಲ್ಲರ್ ಕಾಂಪ್ಲೆಕ್ಸ್‌ನ ನೆಲ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ವಂ. ಫಾ. ನಿಲೇಶ್ ಕ್ರಾಸ್ತಾ ಅವರು ಎಟಿಎಂ ಅನ್ನು ಉದ್ಘಾಟಿಸಿ ಚಾಲನೆ ನೀಡಿದರು. ರ‍್ಸುಲಿನ್ […]

HOME LATEST NEWS

MCC ಬ್ಯಾಂಕ್‌ನಿಂದ ₹1,535 ಕೋಟಿ ವ್ಯವಹಾರ: 22 ನೇ ಶಾಖೆ ದೇರಳಕಟ್ಟೆ & 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಮಂಗಳೂರು: 114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್, 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಸಹಕಾರ ರತ್ನ ಪುರಸ್ಕೃತ ಹಾಗೂ ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊ ಅವರು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟಿನಲ್ಲಿ 22.89% ಬೆಳವಣಿಗೆಯೊಂದಿಗೆ ರು. 1535 ಕೋಟಿ ಮೈಲಿಗಲ್ಲನ್ನು ತಲುಪಿದೆ. ಬ್ಯಾಂಕಿನ ನಿವ್ವಳ ಮೌಲ್ಯ ರು. 83.76 ಕೋಟಿಯಿಂದ ರು. […]

HOME LATEST NEWS

ಎಂಸಿಸಿ ಬ್ಯಾಂಕಿನಲ್ಲಿ 114ನೇ ಸಂಸ್ಥಾಪಕರ ದಿನಾಚರಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಂಸ್ಥಾಪಕರಾದ ದಿವಂಗತ ಶ್ರೀ ಪಿ.ಎಫ್.ಎಕ್ಸ್. ಸಾಲ್ದಾನ್ಹ ಅವರ ದೂರದೃಷ್ಟಿಯ ಸೇವೆಯನ್ನು ಸ್ಮರಿಸಲಾಯಿತು ಹಾಗೂ ಸಹಕಾರಿ ಕ್ಷೇತ್ರದಲ್ಲಿ ಬ್ಯಾಂಕ್ ಸಾಧಿಸಿರುವ ನಿರಂತರ ಪ್ರಗತಿ ಹಾಗೂ ಸ್ಥೈರ್ಯವನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ಇದರ ಉಪಕುಲಪತಿ ರೆವ್. ಡಾ. ಪ್ರವೀಣ್ ಮಾರ್ಟಿಸ್ […]

HOME

MCC ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

ಮಂಗಳೂರು: ಎಂ.ಸಿ.ಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯು ಡಿ.೪ ರಂದು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜಾ ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು. ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ […]

HOME

ಮಂಗಳೂರು: 1300 ಕೋ.ರೂ ವ್ಯವಹಾರದ 113 ವರ್ಷಗಳ ಇತಿಹಾಸದ MCC ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ

ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಸಹಕಾರ ರತ್ನ ಅನಿಲ್ ಲೋಬೊ ಅವರು ತಿಳಿಸಿದರು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯು ಪ್ರಸ್ತುತ ಆಡಳಿತ […]

DAKSHINA KANNADA HOME LATEST NEWS

ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

ದುಬೈ: ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು ಮೂಲದ ವ್ಯಕ್ತಿ ಶ್ರೀ ಡಯಾನ್ ಡಿಸೋಜಾ ಇವರು ನಡೆಸಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ರವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ಮೂಲದ ಮತ್ತೊಬ್ಬ ಪ್ರಖ್ಯಾತ ಸಮುದಾಯ ನಾಯಕ ಹಾಗೂ ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ […]

DAKSHINA KANNADA HOME LATEST NEWS

ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

ಮಂಗಳೂರು: ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜೂ.14 ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ ಇವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ವಂದನೀಯ ವಲೇರಿಯ ಡಿಸೋಜ […]