DAKSHINA KANNADA
HOME
ಕಾಂಗ್ರೆಸ್ ಸರ್ಕಾರದ “ಶವಯಾತ್ರೆಯನ್ನು” ಮಾಡಲು ರಾಜ್ಯದ ಜನತೆಯೇ ನಿರ್ಧರಿಸಿದ್ದಾರೆ. ಶಾಸಕ ವೇದವ್ಯಾಸ ಕಾಮತ್
ಮಂಗಳೂರಿನ ಕಾಂಗ್ರೆಸ್ ನಾಯಕರು ಬೆಟ್ಟದಷ್ಟು ಸಮಸ್ಯೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡು, ಕೇಂದ್ರ ಸರ್ಕಾರದ ವಿಬಿ-ಜಿ ರಾಮ್ ಜಿ ವಿರುದ್ಧ ಸ್ವಾರ್ಥದ “ಪಾದಯಾತ್ರೆ” ಮಾಡಲು ಹೊರಟಿದ್ದಾರೆ. ವಾಸ್ತವದಲ್ಲಿ ರಾಜ್ಯದ ಜನರಿಗೆ ಸರಿಯಾಗಿ ಸವಲತ್ತು ನೀಡಲಾಗದ ಈ ಕಾಂಗ್ರೆಸ್ ಸರ್ಕಾರದ “ಶವಯಾತ್ರೆಯನ್ನು” ಮಾಡಲು ರಾಜ್ಯದ ಜನತೆಯೇ ನಿರ್ಧರಿಸಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಅವ್ಯವಸ್ಥೆಯಿಂದಾಗಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಇ-ಖಾತಾ ಸಮಸ್ಯೆ ತಾರಕಕ್ಕೇರಿದೆ. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ಆದಾಯವೂ ಕಡಿಮೆಯಾಗುತ್ತಿದೆ. ನಗರದ ಜೈಲ್ ಜಾಮರ್ […]


