Tag: ಕೆನರಾಟಿವಿನ್ಯೂಸ್‌

DAKSHINA KANNADA HOME LATEST NEWS

ಭಾರೀ ಮಳೆ ಹಿನ್ನೆಲೆ: ಜುಲೈ 23 ರಂದು ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ತುರ್ತು ಆದೇಶಗಳನ್ನು ಹೊರಡಿಸಿದೆ. ಮುಖ್ಯ ಆದೇಶಗಳು ಮತ್ತು ಮಾರ್ಗಸೂಚಿಗಳು ಈ ಕೆಳಗಿನಂತಿವೆ: 12ನೇ ತರಗತಿಯವರೆಗೆ ಕಡ್ಡಾಯ ರಜೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು […]

DAKSHINA KANNADA HOME LATEST NEWS

‘ಎಲ್ ನಿನೋ’: ಬರದ ಭೀತಿ ಎದುರಿಸಲು ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ

ಬೆಂಗಳೂರು : ಜಾಗತಿಕ ಮಟ್ಟದಲ್ಲಿ ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ (El Niño) ಹವಾಮಾನ ವೈಪರೀತ್ಯದ ಪರಿಣಾಮವಾಗಿ ಉಂಟಾಗಬಹುದಾದ ತಾಪಮಾನ ಏರಿಕೆ ಹಾಗೂ ಬರದ ಪರಿಸ್ಥಿತಿಯನ್ನು ಎದುರಿಸಲು ಕರ್ನಾಟಕ ಸರ್ಕಾರವು ಸಮಗ್ರ ಮತ್ತು ದೂರದೃಷ್ಟಿಯ ಕಾರ್ಯತಂತ್ರವನ್ನು ಕೈಗೆತ್ತಿಕೊಂಡಿದೆ. ​ಏನಿದು ಎಲ್ ನಿನೋ? : ದಕ್ಷಿಣ ಪೆಸಿಫಿಕ್ ಮಹಾಸಾಗರದ ಕೇಂದ್ರ ಮತ್ತು ಪೂರ್ವ ಭಾಗಗಳಲ್ಲಿ ಸಮುದ್ರದ ಮೇಲ್ಮೈ ನೀರು ಸಾಮಾನ್ಯಕ್ಕಿಂತ ಹೆಚ್ಚು ಕಾಯುವ ವಿದ್ಯಮಾನವನ್ನು ‘ಎಲ್ ನಿನೋ’ (ಸ್ಪ್ಯಾನಿಷ್ ಭಾಷೆಯಲ್ಲಿ ‘ಪುಟ್ಟ ಬಾಲಕ’ ಅಥವಾ ‘ಯೇಸು ಕ್ರಿಸ್ತ’) ಎನ್ನಲಾಗುತ್ತದೆ. ​ಈ […]

DAKSHINA KANNADA HOME LATEST NEWS

ಮಂಗಳೂರಿಗೆ NSG ತಂಡ: ಇಂದಿನಿಂದ ಜು.25ರವರೆಗೆ ಭಯೋತ್ಪಾದನ ನಿಗ್ರಹ ಅಣಕು ಕಾರ್ಯಾಚರಣೆ

ಮಂಗಳೂರು: ರಾಷ್ಟ್ರೀಯ ಭದ್ರತಾ ದಳ (National Security Guard – NSG) ತಂಡವು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು, ಜುಲೈ 22 ರಿಂದ 25ರವರೆಗೆ ಮಂಗಳೂರಿನ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು (Counter Terrorist Exercise) ನಡೆಸಲಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು (Counter Terrorist Exercise) ಕೇವಲ ಭದ್ರತಾ ಸನ್ನದ್ಧತೆಯನ್ನು ಪರೀಕ್ಷಿಸುವ ಉದ್ದೇಶದಿಂದ ನಡೆಸಲಾಗುತ್ತಿದ್ದು, ಕಾರ್ಯಾಚರಣೆಯ ಅವಧಿಯಲ್ಲಿ ಸಾರ್ವಜನಿಕರು ಸಂಚಾರ ನಿಯಂತ್ರಣ ಸೇರಿದಂತೆ ಭದ್ರತಾ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ ಅಗತ್ಯ ಸಹಕಾರ ನೀಡುವಂತೆ ಹಾಗೂ ಯಾವುದೇ […]

DAKSHINA KANNADA HOME LATEST NEWS

ಬೆಳೆವಿಮೆ ಯೋಜನೆ: ರೈತರ ನೋಂದಣಿಗೆ ಜುಲೈ 31 ಕೊನೆಯ ದಿನ

ಮಂಗಳೂರು: ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾವಣೆಗೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್‍ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ […]

DAKSHINA KANNADA HOME LATEST NEWS

ಬಂಟ್ವಾಳ: ಕನ್ಯಾನದಲ್ಲಿ ಕಸ ಎಸೆದವರ ವಿರುದ್ಧ ವಿಟ್ಲ ಠಾಣೆಗೆ ದೂರು

ಮಂಗಳೂರು: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಳಂಜಿಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ ಮೂವರು ವ್ಯಕ್ತಿಗಳಿಗೆ ದಂಡ ವಿಧಿಸಿದರೂ ದಂಡ ಪಾವತಿಸದೇ ಇರುವುದರಿಂದ ಅವರ ವಿರುದ್ಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಪಿ.ಡಿ.ಒ ದೂರು ನೀಡಿದ್ದಾರೆ. ಸಾಂದರ್ಭಿಕ ಚಿತ್ರ

DAKSHINA KANNADA HOME LATEST NEWS

ಯುವತಿ ಮರ್ಡರ್‌ ಕೇಸ್‌: ಇಲಿ ಪಾಷಾಣ ಸೇವಿಸಿದ ಸ್ಥಿತಿಯಲ್ಲಿ ಆರೋಪಿ ಬಂಧನ

ಬಂಟ್ವಾಳ: ಬಿ.ಸಿ.ರೋಡಿನ KSRTC ಬಸ್ ನಿಲ್ದಾಣದ ಬಳಿ ಲಾವಣ್ಯ ಎಂಬ ಯುವತಿಯನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆತ ಇಲಿಪಾಷಾಣ ಸೇವಿಸಿದ್ದ ಎಂದು ತಿಳಿದು ಬಂದಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ದ.ಕ ಎಸ್ಪಿ ಘಟನೆ ನಡೆದ ತಕ್ಷಣ ಬಂಟ್ವಾಳ ಪೊಲೀಸರು ಸಿಸಿಬಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರು ಹೊರವಲಯದ ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ (21) […]

HOME LATEST NEWS

ಬಿ.ಸಿರೋಡ್‌ನಲ್ಲಿ ಯುವತಿಯ ಬೆನ್ನಟ್ಟಿ ಬರ್ಬರ ಹತ್ಯೆ

ಮಂಗಳೂರು: ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್‌ KSRTC ಬಸ್‌ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದಿದೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ ಎಂದು ತಿಳಿದು ಬಂದಿದೆ. ಮೃತ ಯುವತಿ ಲಾವಣ್ಯ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಚೇತನ್ ಎಂಬುದಾಗಿ ತಿಳಿದುಬಂದಿದೆ. ಈತ ಯುವತಿಯ ದೂರದ ಸಂಬಂಧಿ ಹಾಗೂ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಮಾಹಿತಿ […]

DAKSHINA KANNADA HOME LATEST NEWS

ಬೆಳ್ತಂಗಡಿ: ರಿಸೀವಿಂಗ್ ಸ್ಟೇಷನ್‌ನಲ್ಲಿ ಕಳ್ಳತನದ ವೇಳೆ ವ್ಯಕ್ತಿ ಮೃತ್ಯು ಪ್ರಕರಣ- ಮತ್ತೊಬ್ಬನ ಬಂಧನ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್‌ನಲ್ಲಿ ಜು. 1 ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಮತ್ತೊಬ್ಬ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದ ನಿವಾಸಿ ಇಬ್ರಾಹಿಂ ಲತೀಫ್ (36) ಎಂಬಾತನನ್ನು ತನಿಖೆ ನಡೆಸಿ ಜು. 14 ರಂದು ಸಂಜೆ ಬಂಧಿಸಿ ವಿಚಾರಣೆ ನಡೆಸಿ, ಜು. 15 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. […]

DAKSHINA KANNADA HOME LATEST NEWS

ವಿಳಂಬಿಸದೆ SIR ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 18,03,766 ಮತದಾರರ ಪೈಕಿ 17,86,112 ಅಂದರೆ ಶೇ. 99.02% ಮತದಾರರಿಗೆ ಎನ್ಯುಮರೇಶನ್ ಫಾರ್ಮ್‍ಗಳನ್ನು ತಲುಪಿಸಲಾಗಿರುತ್ತದೆ. ಜುಲೈ 29 ಎನ್ಯುಮರೇಶನ್ ಫಾರ್ಮ್‍ಗಳ ಡಿಜಿಟೈಸೇಶನ್‍ಗೆ ಕೊನೆಯ ದಿನವಾಗಿರುವುದರಿಂದ ಮತದಾರರು ಆದಷ್ಟು ಬೇಗ ಎನ್ಯುಮರೇಶನ್ ಫಾರ್ಮ್‍ಗಳನ್ನು ಭರ್ತಿ ಮಾಡಿ ಬಿ.ಎಲ್.ಒ ರವರು ಮನೆಗೆ ಬಂದಾಗ ವಿಳಂಬ ಮಾಡದೇ ನೀಡಬೇಕು. ಬಿ.ಎಲ್.ಒ ರವರು ಮತದಾರರಿಂದ ಸ್ವೀಕೃತವಾಗುವ ಎನ್ಯುಮರೇಶನ್ ಫಾರ್ಮ್‍ಗಳನ್ನು ಬಿ.ಎಲ್.ಒ ಆ್ಯಪ್‍ನಲ್ಲಿ ಡಿಜಿಟೈಸೇಶನ್ ಮಾಡಲು ಕನಿಷ್ಠ 2 ರಿಂದ 4 ನಿಮಿಷಗಳ ಸಮಯ ತಗಲುತ್ತದೆ. ಕೊನೆಯ ಹಂತದಲ್ಲಿ […]

HOME LATEST NEWS

ನಾಗರಿಕ ಸೇವೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ “Mangalore IAS – A School for Civil Services” ಸಂಸ್ಥೆಯ ಉದ್ಘಾಟನೆ

ಮಂಗಳೂರು: ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೊಸ ಮೈಲಿಗಲ್ಲಾಗಿರುವ “Mangalore IAS – A School for Civil Services” ಸಂಸ್ಥೆಯ ಉದ್ಘಾಟನಾ ಸಮಾರಂಭ ಜು.11ರಂದು ಮಂಗಳೂರಿನ ಸಂದೇಶ ಫೌಂಡೇಶನ್ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಹಾಗೂ ಸಂದೇಶ ಫೌಂಡೇಶನ್ ಅಧ್ಯಕ್ಷ ಅತೀ ವಂದನೀಯ ಧರ್ಮಧ್ಯಕ್ಷ ರಾದ ಡಾ.ಹೆನ್ರಿ ಡಿಸೋಜಾ ಅವರು ಉದ್ಘಾಟನೆ ನೆರವೇರಿಸಿ ಆಶೀರ್ವಾದಿಸಿದರು. ರಾಮಕೃಷ್ಣ ಮಠದ ಸ್ವಾಮೀಜಿ ಯುಗಾನಂದ ಅವರು ದೀಪ ಪ್ರಜ್ವಲನೆ, ಆಶೀರ್ವಚನ ನೀಡಿದರು. ನಂತರ […]