Tag: ಕೆನರಾಟಿವಿನ್ಯೂಸ್‌

DAKSHINA KANNADA HOME LATEST NEWS

ಕರಿಮಣ ಸರ ಕಳವುಗೈದ ಪ್ರಕರಣ: ಆರೋಪಿ ಬಂಧನ

ಮಂಗಳೂರು:  ತಾಲೂಕಿನ  ಬೆಳುವಾಯಿಯಲ್ಲಿ ಮಾ.31ರಂದು ಮಹಿಳೆಯೊಬ್ಬರ ಕುತ್ತಿಗೆಯಿಂದ   ಚಿನ್ನದ ಕರಿಮಣ ಸರ ಕಳವುಗೈದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು  ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕಾಂತಾವರದ ಕಂದಿಲ ನಿವಾಸಿ  ಆರೋಪಿ ಪ್ರಶಾಂತ್ ಸಾಲಿಯನ್   ಯಾನೆ ಪಚ್ಚು (34) ಬಂಧಿತ ಆರೋಪಿ.   ಆರೋಪಿ  ಕೈಯಿಂದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಬೈಕನ್ನು   ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೈಯಿಂದ  ವಶಪಡಿಸಿಕೊಂಡ  ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,30,000 ರೂ.  ಆಗಬಹುದು […]

HOME INETRNATIONAL LATEST NEWS NATIONAL

ಭಾರತಕ್ಕೆ ಬಂದಿಳಿದ ದುಬೈ ಯುವರಾಜ: ಪ್ರಧಾನಿ ಮೋದಿ ಭೇಟಿ

ಹೊಸದಿಲ್ಲಿ: ದುಬೈನ ಯುವರಾಜ ಹಮ್ದಾನ್ ಬಿನ್ ಮುಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಅವರು ಮಂಗಳವಾರ ತಮ್ಮ ಮೊದಲ ಅಧಿಕೃತ ಭೇಟಿಗಾಗಿ ಹೊಸದಿಲ್ಲಿಗೆ ಆಗಮಿಸಿದ್ದು, ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ದಿಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ದುಬೈ ಯುವರಾಜ ಮುಹಮ್ಮದ್ ಬಿನ್ ರಶೀದ್ ಅಲ್ ಮಖ್ತೂಮ್ ಅವರನ್ನು ಕೇಂದ್ರ ಪ್ರವಾಸೋದ್ಯಮ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಖಾತೆ ಸಚಿವ ಸುರೇಶ್ ಗೋಪಿ ಸ್ವಾಗತಿಸಿದರು. ಬಳಿಕ ದುಬೈ ಯುವರಾಜನಿಗೆ ವಿದ್ಯುಕ್ತವಾಗಿ ಸರಕಾರಿ ಗೌರವವನ್ನು ನೀಡಲಾಗಿದೆ.  […]

HOME LATEST NEWS STATE

PUC ಫಲಿತಾಂಶ ಪ್ರಕಟ: ಉಡುಪಿ ಪ್ರಥಮ-ವಿದ್ಯಾರ್ಥಿನಿಯರದ್ದೇ ಮೇಲುಗೈ

ಬೆಂಗಳೂರು : 2024-25ನೇ ಸಾಲಿನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಶೇ.73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. ಈ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇಕಡಾ 53.29ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 76.07ರಷ್ಟು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 82.54ರಷ್ಟು ಉತ್ತೀರ್ಣರಾಗಿದ್ದಾರೆ. ಶೇಕಡಾವರು ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ […]

DAKSHINA KANNADA HOME LATEST NEWS

ಅಪ್ರಾಪ್ತೆಗೆ ಕಿರುಕುಳ ನೀಡಿದ ಪ್ರಕರಣ: ಅರೋಪಿ ಮಹೇಶ್ ಭಟ್‌ಗೆ ಜಾಮೀನು

ಮಂಗಳೂರು: ಬಂಟ್ವಾಳ ತಾಲೂಕಿನ ಮಾಣಿಲದ ದಲಿತ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಸ್.ಟಿ.ಎಸ್.ಸಿ.-1 (ಪೊಕ್ಸೊ ನ್ಯಾಯಾಲಯ) ಸೋಮವಾರ ಶರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. ಆರೋಪಿ ಮಹೇಶ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ವಿಶೇಷ ಸರಕಾರಿ ಅಭಯೋಜಕರ, ಅರ್ಜಿದಾರ ಪರ ವಕೀಲರ ಮತ್ತು ಪಿರ್ಯಾದಿದರಾರರು ಮತ್ತಾಕೆಯ ಹೆತ್ತವರನ್ನು ನ್ಯಾಯಾಧೀಶರು ವಿಚಾರಣೆಗೊಳಪಡಿಸಿದ್ದರು. ಕೃತ್ಯ ನಡೆಸಿದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ, ಆತನನ್ನು ಬಂಧಿಸುವಂತೆ ವಿವಿಧ ಸಂಘಟನೆಗಳು ಪ್ರತಿಭಟನೆ […]

DAKSHINA KANNADA HOME LATEST NEWS

ಸುಳ್ಯದಲ್ಲಿ ತಾಯಿ-ಮಗ ವಿಷ ಸೇವನೆ: ಕೊನೆಯುಸಿರೆಳೆದ ಮಗ

ಸುಳ್ಯ: ಇಲಿ ಪಾಷಾಣ ಸೇವಿಸಿ ತಾಯಿ-ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ನಡೆದಿದೆ. ಇದರಲ್ಲಿ ಮಗ ಮೃತಪಟ್ಟಿದ್ದಾನೆ. ಮೃತಪಟ್ಟವನನ್ನು ನಾಲ್ಕೂರು ಗ್ರಾಮದ ನಡುಗಲ್ಲಿನ ದೇರಪ್ಪಜ್ಜನಮನೆ ನಿವಾಸಿ ಕುಶಾಲಪ್ಪ ಗೌಡ ಎಂಬವರ ಮಗ ನಿತಿನ್ (32) ಎಂದು ಗುರುತಿಸಲಾಗಿದೆ. ತಾಯಿ-ಮಗ ಇಬ್ಬರು ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಾರೆ ಎನ್ನಲಾಗಿದ್ದು ರವಿವಾರ ಮುಂಜಾನೆ ಇಬ್ಬರೂ ಅಸ್ವಸ್ಥಗೊಂಡಿರುವುದು ತಿಳಿದು ಬಂದಿದೆ. ಈ ಪೈಕಿ ನಿತಿನ್ ಸ್ವಲ್ವ ಹೊತ್ತಿನಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಸುಲೋಚನಾರನ್ನು […]

DAKSHINA KANNADA HOME LATEST NEWS

ಕ್ರೈಸ್ತರ ಪವಿತ್ರವಾರದಲ್ಲಿ SSLC ಮೌಲ್ಯಮಾಪನ ರದ್ದು ಕೋರಿ ಕಥೋಲಿಕಾ ಸಭಾದಿಂದ ಮನವಿ

ಮಂಗಳೂರು: SSLC ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಏಪ್ರಿಲ್ 15, 2025ರಿಂದ ಪ್ರಾರಂಭವಾಗಲಿದೆ. ಅಂದು ಕ್ರೈಸ್ತ ಸಮುದಾಯಕ್ಕೆ ಶುಭ ಗುರುವಾರ ಸೇರಿದಂತೆ ಮೂರು ದಿನಗಳ ನಿರಂತರ ಹಬ್ಬದ ಪ್ರಯುಕ್ತ ಕ್ರೈಸ್ತ ಶಿಕ್ಷಕರಿಗೆ ಮೌಲ್ಯಮಾಪನದಿಂದ ರಿಯಾಯಿತಿ ಕೋರುವಂತೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ವತಿಯಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದೆ. ಕಳೆದ ಶನಿವಾರ ಮನವಿ ಸಲ್ಲಿಸಿದ ನಿಯೋಗ, ದ.ಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಸಮುದಾಯದ ಶಿಕ್ಷಕರಿದ್ದು, ಏ.15 ಹಾಗೂ ಮೂರು ದಿನಗಳ ಕಾಲ ನಡೆಯುವ […]

DAKSHINA KANNADA HOME LATEST NEWS

ನಂಬರ್‌ ಪ್ಲೇಟ್‌ಗೆ ಪ್ಲಾಸ್ಟಿಕ್‌ ಮುಚ್ಚಿ ಚಲಾಯಿಸುತ್ತಿದ್ದ ಸ್ಕೂಟರ್‌ಗೆ ದಂಡ

ಮಂಗಳೂರು: ಸ್ಕೂಟರ್ ಸವಾರನೊಬ್ಬ ತನ್ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಿ, ಹೆಲ್ಮೆಟ್ ಧರಿಸದೆ ಚಲಾಯಿಸುತ್ತಿದ್ದ ವೀಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸದ್ಯ ಈ ಪ್ರಕರಣದಲ್ಲಿ ವೈರಲ್‌ ಆಗಿದ್ದ ಸ್ಕೂಟರ್‌ನ್ನು ಪತ್ತೆಹಚ್ಚಿದ ಮಂಗಳೂರು ನಗರ ಪೊಲೀಸರು ದಂಡ ವಿಧಿಸಿದ್ದಾರೆ. ಮಾ.23ರಂದು ಸಂಜೆ 4 ಗಂಟೆಯಿಂದ 4:10ರ ಸಮಯಕ್ಕೆ ಬೆಂದೂರ್‌ವೆಲ್, ಕಂಕನಾಡಿ, ಪಂಪ್‌ವೆಲ್ ರಸ್ತೆಯಲ್ಲಿ ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ  ಮುಚ್ಚಿ  ಹೆಲ್ಮೆಟ್ ಧರಿಸದೆ ತೊಕ್ಕೊಟ್ಟು ಕಡೆಗೆ ಚಲಾಯಿಸಿಕೊಂಡು […]

HOME LATEST NEWS UDUPI

“ಸ್ವ ಇಚ್ಛೆಯಿಂದ ಅಕ್ರಂ ಜೊತೆ ಹೋಗಿದ್ದೇನೆ”: ಕ್ರೈಸ್ತ ಯುವತಿ- ಮುಸ್ಲಿಂ ಯುವಕನ ಪ್ರೇಮ ಪ್ರಕರಣ

ಮಂಗಳೂರು: ಕ್ರೈಸ್ತ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿದ್ದಾನೆ ಎಂದು ಯುವತಿಯ ತಾಯಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದ ಪ್ರಕರಣದಲ್ಲಿ ಹುಡುಗಿ ತನ್ನ ಪ್ರಿಯಕರನೊಂದಿಗೆ ನಿನ್ನೆ ಹೈಕೋರ್ಟ್ ಮುಂದೆ ಹಾಜರಾಗಿದ್ದಾಳೆ. ನಿನ್ನೆ ಜೀನ ಮೆರಿಲ್ ಮತ್ತು ಅಕ್ರಮ್ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನನ್ನು ಯಾರೂ ಅಪಹರಿಸಿರುವುದಿಲ್ಲ, ನಾನುಸ್ವಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತಿಳಿಸಿದ್ದಾಳೆ. ಇದೇ ವೇಳೆ ಆಕೆಯ ತಾಯಿ ಮಗಳ ಜೊತೆ ಮಾತನಾಡಬೇಕು ಎಂದು ವಿನಂತಿಸಿದಾಗ, ನ್ಯಾಯಾಧೀಶರು ತಮ್ಮ ಕೊಠಡಿಯಲ್ಲಿಯೇ […]

DAKSHINA KANNADA HOME LATEST NEWS

ಮಂಗಳೂರು: ಭಿಕ್ಷಾಟನೆ- ತಾಯಿ ಮಕ್ಕಳ ರಕ್ಷಣೆ

ಮಂಗಳೂರು : ಪುಟ್ಟ ಮಕ್ಕಳನ್ನು ಹಿಡಿದುಕೊಂಡು ನಗರದ ಲಾಲ್‍ಬಾಗ್ ಜಂಕ್ಷನ್ ಸಿಗ್ನಲ್ ಬಳಿ ಬಿಕ್ಷಾಟನೆ ನಡೆಸುತ್ತಿದ್ದ ತಾಯಿ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪತ್ತೆ ಹಚ್ಚಿ ಅವರ ಊರುಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಮಕ್ಕಳ ರಕ್ಷಣಾ ಘಟಕ ಪೋಲೀಸರ ಸಹಯೋಗದೊಂದಿಗೆ ಲಾಲ್‍ಬಾಗ್ ಸಿಗ್ನಲ್ ಬಳಿ ಭಿಕ್ಷಾಟನೆ ನಡೆಸುತ್ತಿದ್ದ 4 ಮಹಿಳೆಯರು, 4 ಪುರುಷರು, 4 ಮಕ್ಕಳನ್ನು ರಕ್ಷಣೆ ಮಾಡಿ ಅವರ ಸ್ವಂತ ಊರು ರಾಜಸ್ಥಾನಕ್ಕೆ ರೈಲಿನ ಮೂಲಕ ಕಳುಹಿಸಿಕೊಡಲಾಯಿತು. ಹೆಂಗಸರು […]

DAKSHINA KANNADA HOME LATEST NEWS

ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ & ಸಿಬ್ಬಂದಿಗೆ ಅಭಿನಂದನೆ

ಮಂಗಳೂರು: ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಿನ್ನೆ ಸಂಜೆ ನಡೆಯಿತು. ನಗರದ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮಾದಕ ವಸ್ತು ಗಳನ್ನು ಪತ್ತೆ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅತೀ ಉತ್ತಮ ಮತ್ತು ಶ್ಲಾಘನೀಯ ಕರ್ತವ್ಯ ನಿರ್ವಹಿಸಿ 2024 ನೇ ಸಾಲಿನ ಮುಖ್ಯ ಮಂತ್ರಿ ಚಿನ್ನದ ಪದಕ ಪಡೆದ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಎಸಿಪಿ ಧನ್ಯಾ ನಾಯಕ್, […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678