Tag: ಕೆನರಾಟಿವಿ ನ್ಯೂಸ್‌

DAKSHINA KANNADA LATEST NEWS

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ- ವಿಶ್ವ ಉರಗಳ ದಿನಾಚರಣೆ

ಸುಳ್ಯ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಗದತಂತ್ರ ವಿಭಾಗದಿಂದ ವಿಶ್ವ ಉರಗಳ ದಿನಾಚರಣೆಯ ಪ್ರಯುಕ್ತ ವಿವಿಧ ರೀತಿಯ ಉರಗಗಳ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಗಾರ ವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ ವಿ ಅವರು ದೀಪ ಬೆಳಗಿಸುವುದ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸುರತ್ಕಲ್ನ ಉರಗ ಸಂರಕ್ಷಕಾರರಾದ ಶ್ರೀ ಪ್ರಶಾಂತ್ ಕೃಷ್ಣ ಎಂ ಸಿ ಇವರು ಪ್ರಕೃತಿಯ ಸಮತೋಲನದಲ್ಲಿ ಉರಗಗಳ […]

HOME LATEST NEWS

ಬಂಟ್ವಾಳ: ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದ ಮರ: 6 ವರ್ಷದ ಮಗು ಸಾವು, ನಾಲ್ವರಿಗೆ ಗಾಯ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಬುಧವಾರ ಸಂಜೆ ಭೀಕರ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಶಾಲಾ ಬಸ್‌ ಮೇಲೆ ಬೃಹತ್‌ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ, ಕಲ್ಲಡ್ಕ ಶ್ರೀರಾಮ ಶಾಲೆಯ ಆರು ವರ್ಷದ ವಿದ್ಯಾರ್ಥಿನಿ ಚಿರ ಎಂಬಾಕೆ ಮೃತಪಟ್ಟಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬುಧವಾರ ಸಂಜೆ ಶಾಲಾ ಅವಧಿ ಮುಗಿದ ನಂತರ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ವಾಹನವು ಬರಿಮಾರು ಸಮೀಪದ ಶ್ರೀ ಕಾನಲ್ತಾಯ ದೈವಸ್ಥಾನದ ರಸ್ತೆಯಲ್ಲಿ ಚಲಿಸುತ್ತಿತ್ತು. ಈ […]

HOME LATEST NEWS

ಕಾಸರಗೋಡಿನ ಬದಿಯಡ್ಕದಲ್ಲಿ ನೂತನ ‘ಕನ್ನಡ ಭವನ’ ಉದ್ಘಾಟನೆ: ಕೇರಳ ಸಿಎಂಗೆ ಆಹ್ವಾನ ನೀಡಿದ ಗಡಿ ಅಭಿವೃದ್ಧಿ ಪ್ರಾಧಿಕಾರ.

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 2 ಕೋಟಿ ರೂ. ವಿಶೇಷ ಅನುದಾನದಡಿ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಗ್ರಾಮದಲ್ಲಿ ನಿರ್ಮಿಸಲಾಗಿರುವ ಭವ್ಯ ‘ಕನ್ನಡ ಭವನ’ ಉದ್ಘಾಟನೆಗೆ ಸಿದ್ಧವಾಗಿದೆ. ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ರವರ ಹೆಸರಿನಲ್ಲಿ ತಲೆಯೆತ್ತಿರುವ ಈ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿಕೊಡುವಂತೆ ಕೇರಳ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ವಿ.ಡಿ. ಸತೀಶನ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ. ದಿನಾಂಕ 22.07.2026 ರಂದು ಪ್ರಾಧಿಕಾರದ ಉನ್ನತ ಮಟ್ಟದ ನಿಯೋಗವು ಕೇರಳ ಮುಖ್ಯಮಂತ್ರಿಗಳನ್ನು […]

LATEST NEWS

ಶ್ರೀಧಾಮ ಮಾಣಿಲದಲ್ಲಿ 26ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಮಹೋತ್ಸವಕ್ಕೆ ವಿಜೃಂಭಣೆಯ ಚಾಲನೆ

ವಿಟ್ಲ,ಮಾಣಿಲ: ಪ್ರಖ್ಯಾತ ಪುಣ್ಯಕ್ಷೇತ್ರವಾದ ಶ್ರೀಧಾಮ ಮಾಣಿಲದಲ್ಲಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ, ಕಳೆದ 25 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ‘ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ’ಯ 26ನೇ ವರ್ಷದ ಧಾರ್ಮಿಕ ಮಹೋತ್ಸವಕ್ಕೆ ಈ ವರ್ಷವೂ ಅತ್ಯಂತ ವಿಜೃಂಭಣೆಯಿಂದ ಚಾಲನೆ ದೊರೆತಿದೆ. 48 ದಿನಗಳ ನಿರಂತರ ಧಾರ್ಮಿಕ ಸೇವೆಗಳು ಮಂಡಲಾವಧಿಯ ಪ್ರತಿದಿನವೂ ಶ್ರೀಧಾಮದಲ್ಲಿ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದು, ಭಕ್ತಿಪೂರ್ವಕವಾಗಿ ನಡೆಯುತ್ತಿವೆ: ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಮತ್ತು ಮಹಾಪೂಜೆ ನಾಗದೇವರ ಪೂಜೆ […]

DAKSHINA KANNADA HOME LATEST NEWS

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅಕ್ರಮ ಬಂಧನ ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಮಂಗಳೂರು: ಎಐಸಿಸಿ ನಾಯಕರುಗಳಾದ ಶ್ರೀ ರಾಹುಲ್ ಗಾಂಧಿ ಹಾಗೂ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ಪೊಲೀಸರು ಅಕ್ರಮವಾಗಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿ, ಮಂಗಳೂರು ನಗರ ಪಾಲಿಕೆಯ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು. ಮಂಗಳೂರು ನಗರ ಪಾಲಿಕೆಯ ಮುಂಭಾಗದಲ್ಲಿ ಜಮಾಯಿಸಿದ ನಾಯಕರು ಮತ್ತು ನೂರಾರು ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ದೆಹಲಿ ಪೊಲೀಸರ ದಮನಕಾರಿ ನಡೆಗೆ ವಿರುದ್ಧವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಜೋರು ಘೋಷಣೆಗಳನ್ನು ಕೂಗಿದರು. ಅಕ್ರಮ ಬಂಧನಕ್ಕೆ ತೀವ್ರ ಆಕ್ರೋಶ: ಶಾಂತಿಯುತವಾಗಿ ಧರಣಿ […]

LATEST NEWS

ಸಮಾಜದ ಧ್ವನಿಯಾಗಿ ‘ಅಮೃತ ಪ್ರಕಾಶ’ ನಿರಂತರ ಸೇವೆ ಸಲ್ಲಿಸಿದೆ: ಆನಂದ ಶೆಟ್ಟಿ ಅಡ್ಯಾರ್

ಮಂಗಳೂರು ಜುಲೈ 21: “ಯಾವುದೇ ಪತ್ರಿಕೆ ಕೇವಲ ಸುದ್ದಿಗಳನ್ನು ಪ್ರಕಟಿಸುವ ಮಾಧ್ಯಮವಲ್ಲ. ಅದು ಸಮಾಜದ ಧ್ವನಿ, ಸಂಸ್ಕೃತಿಯ ಪ್ರತಿಬಿಂಬ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಶಕ್ತಿಯಾಗಿದೆ,” ಎಂದು ಕಾವೂರು ಬಂಟರ ಸಂಘದ ಅಧ್ಯಕ್ಷರಾದ ಆನಂದ ಶೆಟ್ಟಿ ಅಡ್ಯಾರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ಪತ್ರಿಕಾ ಭವನದಲ್ಲಿ ನಡೆದ ‘ಅಮೃತ ಪ್ರಕಾಶ’ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ಮತ್ತು ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಕಳೆದ 13 ವರ್ಷಗಳಿಂದ ಅಮೃತ ಪ್ರಕಾಶ ಪತ್ರಿಕೆಯು ಸಮಾಜಮುಖಿ […]

LATEST NEWS

ಮುಲ್ಕಿಯಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಸಭಾಭವನ ನಿರ್ಮಾಣ: ಡಿಸೆಂಬರ್‌ನಲ್ಲಿ ಲೋಕಾರ್ಪಣೆ:ಐಕಳ ಹರೀಶ್ ಶೆಟ್ಟಿ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ ಆಶ್ರಯದಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಮೂಲ್ಕಿ ಇಲ್ಲಿ ನಿರ್ಮಾಣ ಗೊಳ್ಳುತ್ತಿರುವ ಸಭಾಭವನದ ಕಾಮಗಾರಿಯ ಕುರಿತು ಹಾಗೂ ಡಿಸೆoಬರ್ ದಿನಾಂಕ 31 ರ ಒಳಗೆ ಸಭಾಭವನವನ್ನು ಸಂಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸುವ ಕುರಿತು ಸಮಾಲೋಚನಾ ಸಭೆಯು “ಬಂಟರ ಸಂಘ ಮುಂಬೈಯ ಶ್ರೀಮತಿ ರಂಜನಿ ಸುಧಾಕರ್ ಹೆಗ್ಡೆ ಸಭಾಂಗಣ, ಅನೆಕ್ಸ್ ಕಟ್ಟಡ, ಬಂಟರ ಭವನ, ಕುರ್ಲಾ ಮುಂಬೈ ಇಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು […]

LATEST NEWS

*ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ವಾರ್ಷಿಕ‌ಮಹಾಸಭೆ*

ಸುರತ್ಕಲ್: ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಐದನೇ ವಾರ್ಷಿಕ ಮಹಾಸಭೆ 2025-2026 ಸುಭಾಷಿತ ನಗರದಲ್ಲಿರುವ ಹೊಟೇಲ್ ರಚನಾ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಿತು.ವಾರ್ಷಿಕ‌ ಮಹಾಸಭೆಯ ಅಧ್ಯಕ್ಷತೆಯನ್ನು ಅಸೋಸಿಯೇಶನ್ ನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಸುಭಾಷಿತನಗರ ವಹಿಸಿದ್ದರು. ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು ಸ್ವಾಗತಿಸಿ ಪ್ರಸ್ತಾವನೆಗೈದರು. ಕಳೆದ ಐದು ವರ್ಷಗಳಲ್ಲಿ ಸುಭಾಷಿತನಗರ ಬಡಾವಣೆಯಲ್ಲಿ ಅಸೋಸಿಯೇಶನ್ ಕೈಗೊಂಡ ಕೆಲಸ ಕಾರ್ಯಗಳ ಕುರಿತು ಸಭೆಯಲ್ಲಿ ತಿಳಿಸಿದರು. ಸುಭಾಷಿತನಗರದ ಯಾವುದೇ ಸಮಸ್ಯೆಗಳು ಎದುರಾದಾಗ ಅಸೋಸಿಯೇಶನ್ ನ ಅಧ್ಯಕ್ಷರಾದ […]

LATEST NEWS

ಚಂದ್ರಯಾನದ ಯಶಸ್ಸು ಭಾರತದ ವೈಜ್ಞಾನಿಕ ಪ್ರಗತಿಯ ಸಂಕೇತ: ಇಸ್ರೋ ಮಾಜಿ ವಿಜ್ಞಾನಿ ಡಾ. ಪಿ. ಜಿ. ದಿವಾಕರ್

ಮಂಗಳೂರು,ಜು.20 :- ಚಂದ್ರಯಾನದಲ್ಲಿ ಭಾರತವು, ಪ್ರಪಂಚದ ಯಾವುದೇ ದೇಶಗಳು ಮಾಡದಿರುವ ವಿಶಿಷ್ಟ ಮೈಲಿಗಲ್ಲನ್ನು ಸಾಧಿಸಿದೆ. ಇದು ದೇಶದ ವೈಜ್ಞಾನಿಕ ಪ್ರಗತಿಯ ಸಂಕೇತವಾಗಿದ್ದು, ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಯ ಬಗ್ಗೆ ಆಸಕ್ತಿ ಹಾಗೂ ಸ್ಫೂರ್ತಿಯನ್ನು ಹೆಚ್ಚಿಸಿದೆ ಎಂದು ಇಸ್ರೋ ಮಾಜಿ ವಿಜ್ಞಾನಿ ಡಾ. ಪಿ. ಜಿ. ದಿವಾಕರ್ ಹೇಳಿದರು. ಅವರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಯುವ ವಿಜ್ಞಾನಿಗಳಾದ ನೀವೆಲ್ಲರೂ ಸ್ಪಷ್ಟವಾದ ಗುರಿ, ವೈಜ್ಞಾನಿಕ ಮನೋಭಾವ […]

LATEST NEWS

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿರುಸಿನ S.I.R ಮನೆ-ಮನೆ ಸಂಪರ್ಕ ನಡೆಸಿದ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ‘ಎಸ್.ಐ.ಆರ್ (S.I.R) ಮಹಾ ಅಭಿಯಾನ’ದ ಅಂಗವಾಗಿ ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿವಿಧ ಬೂತ್‌ಗಳಿಗೆ ತೆರಳಿ ಬಿರುಸಿನ ಮನೆ-ಮನೆ ಸಂಪರ್ಕ ಹಾಗೂ ಪಕ್ಷದ ಪ್ರಮುಖರ ಭೇಟಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು. ಪ್ರಮುಖರ ಮನೆಗೆ ಭೇಟಿ ಹಾಗೂ ಸಮಾಲೋಚನೆ: ಅಭಿಯಾನದ ಅಂಗವಾಗಿ ಅದ್ಯಪಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 174 ಹಾಗೂ 175 ರಲ್ಲಿ ಶಾಸಕರು ವ್ಯಾಪಕ […]