Tag: ಕೆನರಾಟಿವಿ ನ್ಯೂಸ್‌

COMMUNITY NEWS DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರ ಮೋಂತಿ ಹಬ್ಬದ ಸಂಭ್ರಮ

ಮಂಗಳೂರು: ಕರಾವಳಿಯಾದ್ಯಂತ ಕಥೋಲಿಕ ಕ್ರೈಸ್ತರು ಮೋಂತಿ (ಮೇರಿ ಮಾತೆ) ಹಬ್ಬವನ್ನು ಸಡಗರದಿಂದ ಆಚರಿಸಿದರು. ತೆನೆ ಹಬ್ಬವೆಂದು ಕರೆಯುವ ಈ ಹಬ್ಬದ ದಿನವಾದ ಇಂದು ಹೊಸ ತೆನೆಯ ಆರ್ಶಿವಾದ, ವಿಶೇಷ ಬಲಿಪೂಜೆ ನಡೆಯಿತು. ಈ ಹಬ್ಬಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ನಡೆಯಿತು. ಮಕ್ಕಳು 9 ದಿನಗಳ ಕಾಲ ತಮ್ಮ ಹಿತ್ತಲಲ್ಲಿ ಸಿಕ್ಕ ಹೂಗಳನ್ನು ಚರ್ಚಿಗೆ ತಂದು ಮೇರಿ ಮಾತೆಗೆ ಅರ್ಪಿಸುತ್ತಾರೆ. ಈ ವೇಳೆ ಮಕ್ಕಳಿಗೆ ಸಿಹಿತಿನಿಸುಗಳನ್ನು ಹಂಚುತ್ತಾರೆ.ಕೊನೆಯ ದಿನವಾದ ಇಂದು ಎಲ್ಲರ ಮನೆಗಳಲ್ಲಿ ಕುಟುಂಬ ಸಮೇತ ಸಸ್ಯಹಾರಿ […]

DAKSHINA KANNADA HOME

ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮತಗಳ್ಳತನ ವಿರುದ್ಧ ಪಂಜಿನ ಮೆರವಣಿಗೆ

ಮಂಗಳೂರು: ಮತಗಳ್ಳತನ‌ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ಪ್ರತಿಭಟನಾ ಸಭೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ವೇತೃತ್ವದಲ್ಲಿ ನಡೆಯಿತು. ಮಂಗಳೂರಿನ ನವಭಾರತ್ ಸರ್ಕಲ್ ನಿಂದ ಲಾಲ್‌ಭಾಗ್ ವರೆಗೆ ನಡೆದ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಮತಗಳ್ಳತನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಚಿವ […]

DAKSHINA KANNADA HOME

ರಿಕ್ಷಾ ಚಾಲಕರ ಜೊತೆ ಸಮಾಲೋಚಿಸದೆ ಸಿಟಿ ಬಸ್ ಗೆ ಚಾಲನೆ ಬೇಡ: ಅಶೋಕ್ ರೈ

ಪುತ್ತೂರು: ಪುತ್ತೂರು ನಗರದ ರಿಕ್ಷಾ ಚಾಲಕ ಮಾಲಕರ ಎಲ್ಲಾ ಸಂಘದವರ ಜೊತೆ ಸಮಾಲೋಚನೆ ಮಾಡಿ, ಅವರನ್ನು ಕರೆಸಿ ಮಾತುಕತೆ ನಡೆಸಿದ ಬಳಿಕವೇ ಪುತ್ತೂರು ನಗರದಲ್ಲಿ ಸಿಟಿ ಬಸ್ ಗೆ ಚಾಲನೆ ನೀಡಬೇಕು ಎಂದು ಶಾಸಕರಾದ ಅಶೋಕ್ ರೈ ಅವರು ಕರ್ನಾಟಕ ಸಾರಿಗೆ ನಿಗಮದ ಡಿ ಸಿ ಅಮಲಿಂಗಯ್ಯ ಹೊಸಪೂಜಾರಿಯವರಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಶಾಸಕರ ಕಚೇರಿಯಲ್ಲಿ ಅಧಿಕಾರಿ ಜೊತೆ ಚರ್ಚೆ ನಡೆಸಿದ ಶಾಸಕರು ಪುತ್ತೂರು ಕೆಎಸ್ ಆರ್ ಟಿಸಿ ವಿಭಾಗದಲ್ಲಿ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಚರ್ಚೆ […]

DAKSHINA KANNADA HOME LATEST NEWS

ಮಂಗಳೂರು: ಟ್ರಾಫಿಕ್‌ ಫೈನ್‌ ಮೇಲೆ 50% ರಿಯಾಯಿತಿ- ಸೆ.12ರವರೆಗೆ ಮಾತ್ರ

ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದ ವಾಹನಿಗರಿಗೆ ಪ್ರಕರಣಗಳ ಇತ್ಯರ್ಥ ಪಡಿಸಿಕೊಳ್ಳುವುದಕ್ಕಾಗಿ ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಸಲು ಆ.23ರಿಂದ ಸೆ.12ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ (ಎಎಸ್‌ಐ-ಪಿಐ ಡಿವೈಸ್) ಲಾಲ್‌ಬಾಗ್‌ನಲ್ಲಿರುವ ಮನಪಾ ಕಮಾಂಡ್ ಕಂಟ್ರೋಲ್ ಸೆಂಟರ್‌ಗಳಲ್ಲಿ ಪಾವತಿಸಬಹುದು. ಉಳಿದಂತೆ ಕದ್ರಿಯ ಪೂರ್ವ ಸಂಚಾರ ಠಾಣೆ, ಪಾಂಡೇಶ್ವರದ ಪಶ್ಚಿಮ ಸಂಚಾರ ಠಾಣೆ, ಬೈಕಂಪಾಡಿಯ ಮಂಗಳೂರು ಉತ್ತರ ಠಾಣೆ, ಜಪ್ಪಿನಮೊಗರಿನ ದಕ್ಷಿಣ ಸಂಚಾರ ಠಾಣೆ […]

LATEST NEWS

ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿ.ಜೆ.ಪಿ ಬದುಕು – ಬರಹ: ರಾಷ್ಟ್ರ‍ೀಯ ವಿಚಾರ ಸಂಕಿರಣ

ಮಂಗಳೂರು: ಖ್ಯಾತ ಕೊಂಕಣಿ ಸಾಹಿತಿ ವಿ.ಜೆ.ಪಿ. ಸಲ್ಡಾನ್ಹಾ ಜನ್ಮಶತಾಬ್ದಿಯ ಪ್ರಯುಕ್ತ ಸಾಹಿತ್ಯ ಅಕಾಡೆಮಿ, ಹೊಸದೆಹಲಿ, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲ್ಯದ ಕೊಂಕಣಿ ಸಂಸ್ಥೆ – ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಸಹಯೋಗದೊಂದಿಗೆ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಹಾಲ್‌ನಲ್ಲಿ ವಿ.ಜೆ.ಪಿ ಬದುಕು – ಬರಹದ ಬಗ್ಗೆ ಆಗಸ್ಟ್ 13, 14 ರಂದು ಎರಡು ದಿನಗಳ ರಾಷ್ಟ್ರ‍ೀಯ ವಿಚಾರ ಸಂಕಿರಣ ಆಯೋಜಿಸಿಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆ ಆ.12 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಇದೇ […]

DAKSHINA KANNADA HOME LATEST NEWS

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆ ಮಗುಚಿ ಬಿದ್ದು ಸಾವು

ಕಡಬ: ಮಗ ಚಲಾಯಿಸುತ್ತಿದ್ದ ಜೀಪು ತಂದೆಯ ಮೇಲೆಯೇ ಮಗುಚಿ ಬಿದ್ದ ಪರಿಣಾಮ ತಂದೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದಲ್ಲಿ ಆ.7 ರಂದು ನಡೆದಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಕಡಬ ತಾಲೂಕಿನ  ಬಿಳಿನೆಲೆ ಗ್ರಾಮದ ಕಚ್ಚಾ ಮಣ್ಣಿನ ಏರು ರಸ್ತೆಯಲ್ಲಿ ದಿನೇಶ್ ಎಂಬುವವರು ಕೆಎ- 19-ಎಂ-8745 ನೋಂದಣಿಯ ಜೀಪು ಚಲಾಯಿಸುತ್ತಿದ್ದಾಗ ಹತ್ತದೇ ಅರ್ಧದಲ್ಲಿ ನಿಂತಿದೆ. ಆಗ ಜೀಪಲ್ಲಿ ಇದ್ದ ಅವರ ದಿನೇಶ್  ಅವರ ತಂದೆ ಧರ್ಮಪಾಲ […]

DAKSHINA KANNADA HOME LATEST NEWS

ಮಂಗಳೂರು: 7 ತಿಂಗಳ ಮಗುವಿನೊಂದಿಗೆ ತಾಯಿ ನಾಪತ್ತೆ

ಮಂಗಳೂರು: ತನ್ನ 7 ತಿಂಗಳ ಮಗುವಿನೊಂದಿಗೆ ತಾಯಿಯು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಸೆಲ್ವಿನ್‌ ಮಾಚಾದೋ ಅವರು ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಕಳೆದೆರಡು ವರ್ಷಗಳಿಂದ   ಹೆಂಡತಿ ಬೆಲಿಂಡ ರೋಡ್ರಿಗಸ್ (30) ಮತ್ತು 7 ತಿಂಗಳ ಮಗ ಬ್ರೂಸ್ ಮಚಾಡೋ ಎಂಬುವವರ ಜೊತೆ ನಗರದ ಸೂಟರ್ ಪೇಟೆಯಲ್ಲಿ  ವಾಸವಾಗಿದ್ದರು. ಆ.7 ರಂದು ಸೆಲ್ವಿನ್‌ ಮಾಚಾದೋ ಕೆಲಸ ನಿಮಿತ್ತ ಹೊರಹೋಗಿದ್ದರು. ಅದೇ ದಿನ ಸಂಜೆ 7 ಗಂಟೆಗೆ ಮನೆಗೆ […]

DAKSHINA KANNADA HOME LATEST NEWS

ಸ್ನೇಹಿತರೊಂದಿಗೆ ಮಂಗಳೂರಿಗೆ ಹೋಗಿ ಬರುತ್ತೇನೆಂದ 23ರ ಯುವತಿ ನಾಪತ್ತೆ

ಮಂಗಳೂರು: 23 ವರ್ಷದ ಯುವತಿಯೋರ್ವಳು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ಹೇಳಿ ಮನೆಯಿಂದ ಹೋದವಳು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖೈರುನ್ನಿಸ ಮಹಮ್ಮದ್ ನಾಸೀರ ಎಂಬುವವರ ಮಗಳಾದ ಶಾಹಿನ ಬಾನು  ಆ.7 ರಂದು ನಾನು ಸ್ನೇಹಿತೆಯರೊಂದಿಗೆ ಮಂಗಳೂರು ಪೇಟೆಗೆ ಹೋಗಿ ತಿರುಗಾಡಿ ಬರುತ್ತೇನೆಂದು ಹೇಳಿ ಮನೆಯಿಂದ ಹೊರಗೆ ಹೋಗಿದ್ದಾರೆ. ತಡರಾತ್ರಿಯಾದರೂ ಮನೆಗೆ ಬಾರದೆ ಇರುವುದರಿಂದ, ಗಾಬರಿಗೊಂಡ ಮನೆಯವರು ನೆರೆಕರೆ ಮನೆಯವರಲ್ಲಿ ವಿಚಾರಿಸಿ ಸುತ್ತ ಮುತ್ತ ಪ್ರದೇಶಗಳಲ್ಲಿ ಹುಡುಕಾಡಿದರೂ ಆಕೆಯ ಬಗ್ಗೆ […]

DAKSHINA KANNADA HOME LATEST NEWS

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ಕಚೇರಿಗಳಲ್ಲಿ ಶೋಧ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನ ಮತ್ತಿತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟೊರೇಟ್ ಆಫ್ ಎನ್‌ಫೋರ್ಸ್‌ಮೆಂಟ್ ಮಂಗಳೂರು ಸಬ್ ರೆನಲ್ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಗರದ 5 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಸ್ಟಾಂಪ್ ಟ್ಯೂಟಿಗಾಗಿ ಹಣ ವಸೂಲಿ ಮಾಡಿ, ಭರವಸೆ ನೀಡಿದ ಸಾಲಗಳನ್ನು ನೀಡದೆ ವಂಚನೆ ಮಾಡಿದ ರೋಶನ್ ಸಲ್ದಾನ, ಆತನ ಪತ್ನಿ ಡಫ್ನಿ ನೀತು ಡಿಸೋಜ ಮತ್ತಿತರರ ವಿರುದ್ಧ ಕಾನೂನು […]

DAKSHINA KANNADA HOME LATEST NEWS

ಫೇಸ್‌ಬುಕ್‌ನಲ್ಲಿ ಕೋಮುದ್ವೇಷ & ಸುಳ್ಳು ಸುದ್ದಿ ಪ್ರಸಾರ: SDPI ಅಧ್ಯಕ್ಷನ ಮೇಲೆ FIR

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೋಮುದ್ವೇಷ ಹಾಗೂ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಪಕ್ಷದ ಅಧ್ಯಕ್ಷನ ಮೇಲೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ವಿವರ ಜು. 14 ರಂದು ಪುತ್ತೂರು ಕಸಬಾ ಗ್ರಾಮದ ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಧ್ಯಕ್ಷ ಆಶ್ರಪ್ ಬಾವು ಎಂಬಾತ ಘಟನೆಯ ಬಗ್ಗೆ, ನೈಜತೆಯನ್ನು ಪರಿಶೀಲಿಸದೇ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678