Tag: ಕೆನರಾಟಿವಿ ನ್ಯೂಸ್‌

HOME

ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ: ಕಾಂಗ್ರೆಸ್ಸಿಗರ ಮೇಲೆ ಶಾಸಕ ಸುನೀಲ್‌ ಗರಂ

ಮಂಗಳೂರು: ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ ನಡೆದಿದೆ ಎಂಬ ಬಗ್ಗೆ ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಅವರು ಆರೋಪಿಸಿದ್ದು, ಇದಕ್ಕೆಲ್ಲಾ ಸ್ಥಳೀಯ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿಯವರ ದ್ವೇಷ ಹಾಗೂ ಅಸೂಯೆಯ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ ಅವರು, ಕಾರ್ಕಳದ ಪ್ರವಾಸೋದ್ಯಮಕ್ಕೆ ಕೊಳ್ಳಿ ಇಟ್ಟ ಕಾಂಗ್ರೆಸ್ ನಾಯಕರನ್ನು ಇತಿಹಾಸ ಕ್ಷಮಿಸದು ಎಂದೂ ಆರೋಪಿಸಿದ್ದಾರೆ. ಏನಿದೆ ಅವರ ಪೋಸ್ಟ್‌ನಲ್ಲಿ ಥೀಂ ಪಾರ್ಕ್ ನ ಬಾಗಿಲನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು […]

COMMUNITY NEWS DAKSHINA KANNADA HOME LATEST NEWS

ಮಂಗಳೂರು ಧರ್ಮಕ್ಷೇತ್ರದ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆ: ಮಕ್ಕಳ ವರ್ಷ ಘೋಷಣೆ

ಮಂಗಳೂರು: ಯೇಸು ಕ್ರಿಸ್ತರ ದೈವದರ್ಶನ ಮಹೋತ್ಸವದ (ಎಪಿಫನಿ) ಪ್ರಯುಕ್ತ ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಭಾನುವಾರ ವಾರ್ಷಿಕ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು. ಮಿಲಾಗ್ರಿಸ್ ಚರ್ಚ್‌ನಿಂದ ಆರಂಭಗೊಂಡು ರೊಸಾರಿಯೊ ಕೆಥೆಡ್ರಲ್ ವರೆಗೆ ಮೆರವಣಿಗೆಯು ನಡೆಯಿತು.     ಕಾರ್ಯಕ್ರಮವು ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಅಧ್ಯಕ್ಷತೆಯಲ್ಲಿ ಮಿಲಾಗ್ರಿಸ್ ಚರ್ಚ್‌ನಲ್ಲಿ ನಡೆದ ಸಾಮೂಹಿಕ ಬಲಿಪೂಜೆಯೊಂದಿಗೆ ಪ್ರಾರಂಭವಾಯಿತು. ಈ ಹಬ್ಬವು ಜ್ಯೋತಿಷಿಗಳ ಭೇಟಿಯ ಮೂಲಕ ಯೇಸು ಕ್ರಿಸ್ತರು […]

DAKSHINA KANNADA HOME LATEST NEWS

ಕಾರಿನ ಟೈಯರ್ ಬ್ಲಾಸ್ಟ್: ಅದೃಷ್ಟವಶಾತ್ ಪಾರಾದ ಬೋಂದೆಲ್ ಚರ್ಚ್ ಪಾದ್ರಿ

ಮಂಗಳೂರು: ಕಾರಿನ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಎಸೆಯಲ್ಪಟ್ಟ ಮನೆಯೊಂದಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಾವೂರು ಬಳಿಯ ಮರಕಡದಲ್ಲಿ ಜನವರಿ 1 ರಂದು ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಬೋಂದೆಲ್ ಚರ್ಚ್ ಪಾದ್ರಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಪಾದ್ರಿಯಾಗಿರುವ ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಅಪಾಯದಿಂದ ಪಾರಾದವರು.‌ ಜನವರಿ 1ರಂದು ಕಿನ್ನಿಗೋಳಿಯ ನೀರುಡೆಯಲ್ಲಿರುವ ತಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮಧ್ಯಾಹ್ನ […]

DAKSHINA KANNADA HOME LATEST NEWS

ದೇಶವ್ಯಾಪ್ತಿ ಕ್ರೈಸ್ತರ ಮೇಲೆ ನಡೆದ ದಾಳಿ ಖಂಡಿಸಿ ಮಂಗಳೂರಿನಲ್ಲಿ ಮೌನ ಪ್ರತಿಭಟನೆ

ಮಂಗಳೂರು: ಕ್ರಿಸ್‌ಮಸ್ ಹಬ್ಬದ ವೇಳೆ ದೇಶವ್ಯಾಪ್ತಿ ಕ್ರೈಸ್ತರ ಮೇಲೆ ನಡೆದ ದಾಳಿಗಳನ್ನು ಖಂಡಿಸಿ, ಸಂತ ಸೆಬಾಸ್ಟಿಯನ್ ಚರ್ಚ್, ಬೆಂದೂರು, ಮಂಗಳೂರು ವತಿಯಿಂದ ಜ.3ರಂದು ಸಂಜೆ 6 ಗಂಟೆಗೆ ಚರ್ಚಿನ ಮುಂಭಾಗದಲ್ಲಿ ಮೌನ ಪ್ರತಿಭಟನೆ ಆಯೋಜಿಸಲಾಯಿತು. ಈ ಮೌನ ಪ್ರತಿಭಟನೆಯಲ್ಲಿ ಚರ್ಚಿನ ಧರ್ಮಗುರುಗಳಾದ ವಂ. ವಾಲ್ಟರ್ ಡಿಸೋಜಾ, ಸಹಾಯಕ ಧರ್ಮಗುರುಗಳಾದ ವಂ. ವಿವೇಕ್ ಪಿಂಟೋ ಹಾಗೂ ವಂ. ಓಜ್ಮೊಂಡ್ ಡಿಸೋಜಾ, ವಂ. ಅರುಣ್ ಲೋಬೊ (ಪ್ರಾಂಶುಪಾಲರು), ಉಪಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ವಂ. ವಾಲ್ಟರ್ ಡಿಸೋಜಾ […]

DAKSHINA KANNADA HOME LATEST NEWS

ಗುಣಪಾಲ ಕಡಂಬರನ್ನು ತೇಜೋವಧೆಗೈದ ಲೋಕೇಶ್ ಶೆಟ್ಟಿ ಜಿಲ್ಲಾ ಕಂಬಳ ಸಮಿತಿಯಿಂದ ಉಚ್ಛಾಟನೆ: ನಿರ್ಣಯ

ಮೂಡುಬಿದಿರೆ: ‘ಕಂಬಳ ಕ್ಷೇತ್ರಕ್ಕೆ ಕೊಡುಗೆ ನೀಡಿದ ಗುಣಪಾಲ ಕಡಂಬ ಅವರನ್ನು ತೇಜೋವಧೆ ಮಾಡಿದ ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಮುಚ್ಚೂರು ಅವರನ್ನು ಸಮಿತಿಯಿಂದ ಉಚ್ಚಾಟಿಸಬೇಕು’ ಎಂದು ಕಂಬಳ ಅಭಿಮಾನಿಗಳ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಕಂಬಳ ಕೋಣಗಳ ಯಜಮಾನ ಹರ್ಷವರ್ಧನ ಪಡಿವಾಳ್ ಅಧ್ಯಕ್ಷತೆ ವಹಿಸಿದ್ದರು. ‘ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಂಬಳ ಸೇರಿದಂತೆ ಜಿಲ್ಲೆಯ ಕೆಲವು ಕಂಬಳಗಳಲ್ಲಿ ಲೋಕೇಶ್ ಶೆಟ್ಟಿ ಅವರು ಗುಣಪಾಲ ಕಡಂಬ ಅವರನ್ನು ಟೀಕಿಸಿ ತೇಜೋವಧೆ ಮಾಡಿದ್ದಾರೆ. ಕಂಬಳದ ಹಿರಿಯ ವ್ಯಕ್ತಿ ಜತೆ […]

COMMUNITY NEWS HOME

ವಲ್ಲಿ ವಗ್ಗ ಅವರಿಗೆ ಕವಿತಾ ಟ್ರಸ್ಟ್‌ನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ

ಮಂಗಳೂರು:  ಕವಿತಾ ಟ್ರಸ್ಟ್ ನೀಡುವ 2025ನೇ ಸಾಲಿನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ, ವಲ್ಲಿ ವಗ್ಗ ಎಂಬ ಕಾವ್ಯನಾಮದಲ್ಲಿ ಬರೆಯುವ ವಲೇರಿಯನ್ ಡಿ’ಸೋಜಾ ಅವರಿಗೆ ನೀಡಲಾಗಿದೆ. ಈ ಪ್ರಶಸ್ತಿಯ ಮೌಲ್ಯ ರೂ. 25,000, ಸ್ಮರಣಿಕೆ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ. ಜನವರಿ 11, 2026 ರಂದು ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ನಲ್ಲಿರುವ ಮದರ್ ತೆರೇಸಾ ಪೀಸ್ ಪಾರ್ಕ್‌ನಲ್ಲಿ ನಡೆಯುವ 20 ನೇ ಕವಿತಾ ಫೆಸ್ತ್ ಉತ್ಸವದ ಸಂದರ್ಭದಲ್ಲಿ ಪ್ರಸಿದ್ಧ ಕೊಂಕಣಿ ಬರಹಗಾರ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ […]

COMMUNITY NEWS DAKSHINA KANNADA HOME

ಮೊಗರ್ನಾಡು ದೇವ ಮಾತಾ ದೇವಾಲಯದ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆ

ವಿಟ್ಲ: ಬಂಟ್ವಾಳ ತಾಲೂಕಿನ ಅಮ್ಟೂರು ಕರಿಂಗಾಣ ದೇವ ಮಾತಾ ದೇವಾಲಯ ಮೊಗರ್ನಾಡು ಇದರ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆಯ ಸಮಾರೋಪ ಸಮಾರಂಭ ನಡೆಯಿತು.‌ 250ನೇ ವರ್ಷದ ಜ್ಯುಬಿಲಿ ಸಂಭ್ರಮಾಚರಣೆಯ ಅಂಗವಾಗಿ ‘ತ್ರಿದುಮ್’ ಸಂಭ್ರಮಾಚರಣೆಯನ್ನು ವಿಜ್ರಂಭಣೆಯನ್ನು ಆಚರಿಸಲಾಯಿತು. ಡಿಸೆಂಬರ್ 29ರಂದು ಜ್ಯುಬಿಲಿ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ದಾನವನ್ನು ನೀಡಿದ ದಾನಿಗಳಿಗೆ ಮತ್ತು ದೇವಾಲಯದ ಭಕ್ತಾಭಿಮಾನಿಗಳಿಗೆ ವಿಶೇಷ ಬಲಿ ಪೂಜೆಯನ್ನು ಏರ್ಪಡಿಸಲಾಗಿತ್ತು. ನಂತೂರು ಮಂಗಳ ಜ್ಯೋತಿಯ ನಿರ್ದೇಶಕರರಾದ ವಂದನೀಯ ಫಾದರ್ ರೋಹಿತ್ ಡಿಕೊಸ್ತ ದಿವ್ಯ ಬಲಿಪೂಜೆಯನ್ನು ನೇರವೇರಿಸಿದರು. ಡಿಸೆಂಬರ್ 30ರಂದು ಪೂರ್ವಜರ […]

DAKSHINA KANNADA HOME LATEST NEWS

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಸಲಹಾ ಸಮಿತಿಗಳನ್ನು ರಚಿಸಲು ಆದೇಶ

ಮಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಅಧೀನದಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಮಟ್ಟದ ಸಲಹಾ ಸಮಿತಿಗಳನ್ನು ರಚಿಸಲು ಸರಕಾರ ಗುರುವಾರ ಮಂಜೂರಾತಿ ನೀಡಿ ಆದೇಶ ನೀಡಿದೆ. ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎಸ್. ಎಜಾಸ್ ಪಾಷಾ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ರಾಜ್ಯಾ ದ್ಯಂತ ಕ್ರಿಶ್ಚಿಯನ್ ಸಮದಾಯ ಅಭಿವೃದ್ಧಿಯ ಆನೇಕ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಚಟುವಟಿಕೆ ಗಳನ್ನು ಜಾರಿಗೆ ತರಲಾಗುತ್ತದೆ. […]

DAKSHINA KANNADA HOME LATEST NEWS STATE

ಆದಾಯದಲ್ಲಿ ಕರಾವಳಿ ದೇಗುಲಗಳೇ ಮೇಲುಗೈ: ಕುಕ್ಕೆ ಸುಬ್ರಹ್ಮಣ್ಯದಲ್ಲಿ 155.95 ಕೋಟಿ ರೂ.

ಮಂಗಳೂರು: ರಾಜ್ಯ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ ದೇವಾಲಯಗಳೇ ಅಗ್ರಸ್ಥಾನಗಳಲ್ಲಿವೆ. ಅದರಲ್ಲೂ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ 155.95 ಕೋಟಿ ರೂ. ಆದಾಯ ಮೂಲಕ ಮೊದಲನೇ ಸ್ಥಾನದಲ್ಲಿದೆ. ಜೊತೆಗೆ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ದೇವಾಲಯಗಳಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲೂ ಶೇ.10ರಿಂದ 15 ಏರಿಕೆ ಕಂಡಿದೆ. ವರ್ಷಾಂತ್ಯ ಆಗಮಿಸುತ್ತಿದ್ದಂತೆ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಮಂದಾರ್ತಿ, ಕಟೀಲು, ಕದ್ರಿ, ಮಂಗಳಾದೇವಿ, ಕಮಲಶಿಲೆ ದೇವಸ್ಥಾನಗಳಲ್ಲಿ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಜೊತೆ […]

HOME LATEST NEWS STATE

ನಿಶ್ಛಿತಾರ್ಥವಾಗಿದ್ದಾತೆಗೆ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್‌ ಮಾಡಿದವನ ಬರ್ಬರ ಹತ್ಯೆ

ಚಿಕ್ಕಮಗಳೂರು: ಬೇರೊಬ್ಬನೊಂದಿಗೆ ನಿಶ್ಛಿತಾರ್ಥವಾಗಿದ್ದ ಯುವತಿಗೆ ಇನ್‌ಸ್ಟಾಗ್ರಾಂನಲ್ಲಿ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಯುವಕನನ್ನು ಯುವತಿಯ ಭಾವಿ ಪತಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು ಎಂಬ […]