Tag: ಕೆನರಾಟಿವಿ ನ್ಯೂಸ್‌

LATEST NEWS

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಪತ್ರ

ಮಂಗಳೂರು. ಮೇ 27: ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠವನ್ನು (Circuit Bench) ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯದ ಗೌರವಾನ್ವಿತ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಶ್ರೀ ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಅಧಿಕೃತ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದಾರೆ. ಪ್ರಸ್ತುತ ಬೆಂಗಳೂರಿನ ಮುಖ್ಯ ಹೈಕೋರ್ಟ್‌ನಲ್ಲಿರುವ ಒಟ್ಟು ಪ್ರಕರಣಗಳ ಪೈಕಿ ಸುಮಾರು ಶೇ. 30 ರಷ್ಟು ಪ್ರಕರಣಗಳು ಕರಾವಳಿ ಮತ್ತು […]

LATEST NEWS

ಆಧುನಿಕ ಭಾರತ ನಿರ್ಮಾಣಕ್ಕೆ ಜವಾಹರಲಾಲ್ ನೆಹರೂ ಭದ್ರ ಬುನಾದಿ: ಬಿ.ರಮನಾಥ ರೈ

ಮಂಗಳೂರು: ಮೇ 27: ಜವಾಹರಲಾಲ್ ನೆಹರೂ ಅವರು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದು ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ಮಾಜಿ ಸಚಿವ ಬಿ.ರಮನಾಥ ರೈ ಹೇಳಿದ್ದಾರೆ. ಬುಧವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಅವರು ಮಾತನಾಡಿದರು. ನೆಹರೂ ಅವರು ಪ್ರಧಾನಿಯಾಗಿದ್ದ 17 ವರ್ಷಗಳ […]

LATEST NEWS

ಮೇ 28, 29 ರಂದು ‘ಅಮ್ಮ’ ಶ್ರೀ ಮಾತಾ ಅಮೃತಾನಂದಮಯಿ ದೇವಿ ಮಂಗಳೂರಿಗೆ

ಮಂಗಳೂರು:ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು (ಅಮ್ಮ) ಸುದೀರ್ಘ 7 ಅಧ್ಯಕ್ಷರಾದ ಸುರೇಶ್ ಅಮೀನ್ ತಿಳಿಸಿದರು.ವರ್ಷಗಳ ಬಳಿಕ ಇದೇ ಮೇ 28 ಮತ್ತು 29 ರಂದು ಮಂಗಳೂರಿಗೆ ಆಗಮಿಸಲಿದ್ದು, ಬೋಳೂರಿನ ಅಮೃತ ವಿದ್ಯಾಲಯಂ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ‘ಜೀವನೋಲ್ಲಾಸದ ಸಂಭ್ರಮಾಚರಣೆ’ ಹಾಗೂ ಬ್ರಹ್ಮಸ್ಥಾನಂ ಮಹೋತ್ಸವ ನಡೆಯಲಿದೆ.ಎಂದು ಅಧ್ಯಕ್ಷರಾದ ಸುರೇಶ್ ಅಮೀನ್ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು. ಮಂಗಳೂರಿನ ಭಕ್ತರ ಮೇಲೆ ಅಪಾರ ಮಮತೆ ಹೊಂದಿರುವ ಅಮ್ಮನವರು, ಈ ಬಾರಿ ಕೇರಳ ರಾಜ್ಯದ ಹೊರಗೆ ಭೇಟಿ ನೀಡುತ್ತಿರುವುದು […]

LATEST NEWS

ಅಡು ಮರೋಳಿಯಲ್ಲಿ ₹20 ಲಕ್ಷ ವೆಚ್ಚದ ತಡೆಗೋಡೆ ನಿರ್ಮಾಣಕ್ಕೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ

ಮಂಗಳೂರು: ಮೇ 26: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 37ನೇ ಮರೋಳಿ ವಾರ್ಡಿನ ಅಡು ಮರೋಳಿ ಬಳಿ ₹20 ಲಕ್ಷ ವಿಶೇಷ ಅನುದಾನದಲ್ಲಿ ನಿರ್ಮಾಣವಾಗಲಿರುವ ತಡೆಗೋಡೆ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, “ಕಳೆದ ಮಳೆಗಾಲದಲ್ಲಿ ಈ ಭಾಗದ ತಡೆಗೋಡೆಯು ಸಂಪೂರ್ಣ ಹಾನಿಗೊಳಗಾಗಿತ್ತು. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಇದೀಗ ತುರ್ತಾಗಿ ಪರಿಹಾರ ನಿಧಿಯಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ನಮ್ಮ ಭಾಗದಲ್ಲಿ ಸುಮಾರು ₹300 […]

COMMUNITY NEWS

SMMC ನೂತನ ಕಾರ್ಯಕಾರಿ ಸಮಿತಿ ಅಸ್ತಿತ್ವಕ್ಕೆ; ಬೋನಿಫಾಸ್ ಕಾರ್ಲೋ ಸಂಯೋಜಕರಾಗಿ ಆಯ್ಕೆ.

ದುಬೈ: ಸೇಂಟ್ ಮೇರಿಸ್ ಕ್ಯಾಥೋಲಿಕ್ ದುಬೈ ಚರ್ಚ್‌ನಲ್ಲಿ ನಡೆದ ಕೊಂಕಣಿ ಪೂಜಾ ವಿಧಿಯ (Mass) ಸಂದರ್ಭದಲ್ಲಿ ಎಸ್‌ಎಮ್‌ಎಮ್‌ಸಿ ಸಂಸ್ಥೆಯ ಆಧ್ಯಾತ್ಮಿಕ ನಿರ್ದೇಶಕರಾದ ರೆ. ಫಾ. ವಿಕ್ಟರ್ ಫೆರ್ನಾಂಡಿಸ್ ಒಎಫ್‌ಎಂ ಕ್ಯಾಪ್ ಅವರ ಮಾರ್ಗದರ್ಶನದಲ್ಲಿ ನೂತನ ಪದಾಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ವಿವಿಧ ಪಾರುಪತ್ಯಗಳಿಗೆ (Parishes) ಸೇರಿದ ಈ ನೂತನ ತಂಡವನ್ನು ಸಂಯೋಜಕರಾಗಿ (Coordinator) ಶ್ರೀ ಬೋನಿಫಾಸ್ ಕಾರ್ಲೋ ಮುನ್ನಡೆಸಲಿದ್ದಾರೆ. ನೂತನ ಕಾರ್ಯಕಾರಿ ಸಮಿತಿ ಪಟ್ಟಿ (26-28): ಆಧ್ಯಾತ್ಮಿಕ ಮತ್ತು ಪ್ರಮುಖ ನಾಯಕತ್ವ: […]

LATEST NEWS

ಪತ್ರಕರ್ತರಿಂದ ಸಮಾಜದ ಸ್ವಾಸ್ಥ್ಯ ರಕ್ಷಣೆ _ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ

ಮಂಗಳೂರು : ಮೇ 24: ಸಮಾಜದ ಸ್ವಾಸ್ಥ್ಯ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವ ಪತ್ರಕರ್ತರನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ನಗರದ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದ ಅವರು ” ಪೊಲೀಸರಷ್ಟೇ ವೇಗವಾಗಿ ಘಟನಾ ಸ್ಥಳಗಳಿಗೆ ತೆರಳಿ ಸಮಾಜಕ್ಕೆ ತಪ್ಪು ಸಂದೇಶ ಹೋಗದಂತೆ ವಿವೇಚನೆಯಿಂದ ವರದಿ […]

COMMUNITY NEWS

ಬಜಾಲ್ ಪವಿತ್ರ ಆತ್ಮರ ದೇವಾಲಯದ ವಾರ್ಷಿಕ ಮಹೋತ್ಸವ

ಮಂಗಳೂರು: ಮೇ 24: ಬಜಾಲ್ ಪವಿತ್ರ ಆತ್ಮರ ದೇವಾಲಯದ ವಾರ್ಷಿಕ ಮಹೋತ್ಸವವನ್ನು ಮೇ 24ರಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ 8 ಗಂಟೆಗೆ ನಡೆದ ಪವಿತ್ರ ದಿವ್ಯ ಬಲಿಪೂಜೆಯ ನೇತೃತ್ವವನ್ನು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಅಲೋಷಿಯಸ್ ಪಾವ್ಲ್ ಡಿಸೋಜರವರು ಪ್ರಧಾನ ಗುರುಗಳಾಗಿ ವಹಿಸಿದ್ದರು. ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂದನೀಯ ಬೊನವೆಂಚರ್ ನಜ್ರೆತ್ ಅವರು ಉಪಸ್ಥಿತರಿದ್ದು, ಭಕ್ತಾದಿಗಳಿಗೆ ಹಿತವಚನ ಹಾಗೂ ಪ್ರವಚನ ನೀಡಿದರು. ಹಬ್ಬದ ಆಚರಣೆಗೆ ಸಹಕರಿಸಿದ ಎಲ್ಲಾ ಪ್ರಾಯೋಜಕರಿಗೆ ಮೊಂಬತ್ತಿ ನೀಡಿ […]

COMMUNITY NEWS

ಪೆರುವಾಯಿ ಚರ್ಚ್‌ನಲ್ಲಿ ವಂ. ಪ್ರವೀಣ್ ಮೊಂತೇರೊ ಅವರ ಯಾಜಕ ದೀಕ್ಷೆಯ ದಶಮಾನೋತ್ಸವ ಸಂಭ್ರಮಾಚರಣೆ

ವಿಟ್ಲ:ಪೆರುವಾಯಿ, ಮೇ 24:ಇಲ್ಲಿನ ಫಾತಿಮಾ ಮಾತೆಯ ದೇವಾಲಯದ ವ್ಯಾಪ್ತಿಯ ಜೋನ್ ಮೊಂತೇರೊ ಹಾಗೂ ದುಲ್ಸಿನ್ ದಂಪತಿಯ ಪುತ್ರ ವಂದನೀಯ ಪ್ರವೀಣ್ ಮೊಂತೇರೊ ಅವರು ಯಾಜಕ ದೀಕ್ಷೆ ಪಡೆದು 10 ವರ್ಷಗಳು ಸಂದ ಹಿನ್ನೆಲೆಯಲ್ಲಿ, ಅವರ ಯಾಜಕ ದೀಕ್ಷೆಯ ದಶಮಾನೋತ್ಸವ ಸಂಭ್ರಮಾಚರಣೆಯು ಭಾನುವಾರ ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಜರುಗಿತು. ದೇವಾಲಯದಲ್ಲಿ ನಡೆದ ಪವಿತ್ರ ದಿವ್ಯ ಬಲಿಪೂಜೆಯಲ್ಲಿ ಪೆರುವಾಯಿ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಸೈಮನ್‌ ಡಿಸೋಜಾ, ದಶಮಾನೋತ್ಸವ ಸಂಭ್ರಮದ ರೂವಾರಿ ವಂದನೀಯ ಪ್ರವೀಣ್ ಮೊಂತೇರೊ ಹಾಗೂ ವಂದನೀಯ ರೋಷನ್ […]

COMMUNITY NEWS

ಮೊನ್ಸಿಂಜರ್ ಲೆಸ್ಲಿ ಶೆಣಯ್ ನಿಧನ:

ಮಂಗಳೂರು, ಮೇ 24: ಉರ್ವಾ ಮೂಲದ ಗೌರವಾನ್ವಿತ ಧರ್ಮಗುರು ಹಾಗೂ ಪ್ರಸಿದ್ಧ ದಾನಿ ಮೊನ್ಸಿಂಜರ್ ಲೆಸ್ಲಿ ಶೆಣಯ್ (79) ಅವರು ಭಾನುವಾರ ಮೇ 24 ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು. ಜೀವನ ಮತ್ತು ಸೇವೆ: 1947ರ ಅಕ್ಟೋಬರ್ 4ರಂದು ಉರ್ವಾದಲ್ಲಿ ಜನಿಸಿದ ಅವರು, 1976ರ ಮೇ 14ರಂದು ಧರ್ಮಗುರುಗಳಾಗಿ ದೀಕ್ಷೆ ಪಡೆದರು. 1979ರಿಂದ ಅಮೆರಿಕದ ಫ್ರೆಸ್ನೋ ಧರ್ಮಪ್ರಾಂತ್ಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಅವರು, 1985ರಲ್ಲಿ ಅಮೆರಿಕದ ಪೌರತ್ವ ಪಡೆದಿದ್ದರು. ಆದಾಗ್ಯೂ, ತಮ್ಮ ಹುಟ್ಟೂರಿನೊಂದಿಗೆ ನಿರಂತರ ಸಂಪರ್ಕ […]

LATEST NEWS

ನೀಟ್ ಪರೀಕ್ಷೆ ಅಕ್ರಮ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಕೆಪಿಸಿಸಿ ವಕ್ತಾರ ಅಭಿಷೇಕ್ ಉಳ್ಳಾಲ್ ಆಗ್ರಹ

ಮಂಗಳೂರು:ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ತೀವ್ರ ಧಕ್ಕೆ ತಂದಿದ್ದು, ಈ ಆಡಳಿತಾತ್ಮಕ ವೈಫಲ್ಯಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ವಕ್ತಾರರಾದ ಶ್ರೀ ಅಭಿಷೇಕ್ ಉಳ್ಳಾಲ್ ಅವರು ತೀವ್ರವಾಗಿ ಆಗ್ರಹಿಸಿದ್ದಾರೆ. ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಹಾಗೂ ರಾಷ್ಟ್ರೀಯ […]