Tag: ಕೆನರಾಟಿವಿ ನ್ಯೂಸ್‌

DAKSHINA KANNADA HOME LATEST NEWS

ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಮಂಗಳೂರು: ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರು ಬರೆದಿರುವ ‘ವಿಂಚ್ಣಾರ್ ಕಾಣಿಯೊ’ ಪುಸ್ತಕದ ಲೋಕಾರ್ಪಣೆ ಸಮಾರಂಭವು 2026ರ ಮೇ 10, ಭಾನುವಾರ ಸಂಜೆ 5:00 ಗಂಟೆಗೆ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಮತ್ತು ಕೊಂಕಣಿ ಸಲಹಾ ಸಮಿತಿ, ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಸಂಚಾಲಕರಾದ ಶ್ರೀ ಮೆಲ್ವಿನ್ ರೊಡ್ರಿಗಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃತಿಯು […]

HOME INETRNATIONAL LATEST NEWS

ಶಾರ್ಜಾದಲ್ಲಿ ಭೀಕರ ಅಪಘಾತ: ಮೂಡಬಿದ್ರೆ ಮೂಲದ 5 ವರ್ಷದ ಬಾಲಕಿ ಕೊನೆಯುಸಿರು

ಶಾರ್ಜಾ: ಶಾರ್ಜಾ- ದುಬೈ ಬಾರ್ಡರ್ ನ ಅನ್ಸಾರ್ ಮಾಲ್ ಬಳಿ ಭಾನುವಾರ ರಾತ್ರಿ ನಡೆದ ಕಾರು ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಶಿರ್ತಾಡಿ ಮೂಲದ ಬಾಲಕಿಯೋರ್ವಳು ಮೃತಪಟ್ಟಿದ್ದಾಳೆ. ಶಿರ್ತಾಡಿಯ ದಿ.ಟಿ.ಆಲಿಯಬ್ಬ ಅವರ ಪುತ್ರ ಹಕೀಮ್ ಎಂಬವರ ಪುತ್ರಿ ಫಾತಿಮಾ ಅನಿಹಾ (5) ಈ ಅಪಘಾತದಲ್ಲಿ ಮೃತಪಟ್ಟ ಬಾಲಕಿ.< ಹಕೀಮ್ ಅವರು ಶಾರ್ಜಾದಲ್ಲಿ ಉದ್ಯೋಗದಲ್ಲಿದ್ದು ಅವರ ಕುಟುಂಬ ಕೂಡಾ ಅಲ್ಲೇ ವಾಸವಾಗಿದ್ದಾರೆ. ಭಾನುವಾರ ಶಾಪಿಂಗ್ ಮುಗಿಸಿ ವಾಪಾಸ್ ಬಂದು ತಮ್ಮ ಕಾರಲ್ಲಿ ಕೂರಲು ಸಿದ್ಧರಾದಾಗ ಹಿಂದಿನಿಂದ ಬಂದ ಮತ್ತೊಂದು ಕಾರು […]

LATEST NEWS

ಎಂಸಿಸಿ ಬ್ಯಾಂಕ್ ವತಿಯಿಂದ ಗೋವಾದಲ್ಲಿ ಎರಡು ದಿನಗಳ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ವತಿಯಿಂದ ಗೋವಾದ ‘ಕೋರ್ಟ್‌ಯಾರ್ಡ್ ಬೈ ಮ್ಯಾರಿಯಟ್’ (Courtyard by Marriott) ಸಭಾಂಗಣದಲ್ಲಿ ಎರಡು ದಿನಗಳ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಿನೇ ದಿನೇ ಬದಲಾಗುತ್ತಿರುವ ತಾಂತ್ರಿಕ ಮತ್ತು ಆರ್ಥಿಕ ಪರಿಸ್ಥಿತಿಗಳನ್ನು ವಿಶ್ಲೇಷಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ […]

LATEST NEWS

ಯಕ್ಷದ್ರುವ ಪಟ್ಲ ಫೌಂಡೇಶನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಮಂಗಳೂರು: ಎಪ್ರಿಲ್ 28: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬಿಪಿಎಲ್ (BPL) ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮೇ 30 ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ **ಪಟ್ಲ ಸಂಭ್ರಮ 2026 ** ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ ( 2nd PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು […]

LATEST NEWS

ಧವಳ ಕೋ-ಆಪರೇಟಿವ್ ಸೊಸೈಟಿ ಮಂಗಳೂರು: 2025-26ನೇ ಸಾಲಿನಲ್ಲಿ ರೂ. 200 ಕೋಟಿ ವ್ಯವಹಾರ; ರೂ. 50.95 ಲಕ್ಷ ನಿವ್ವಳ ಲಾಭ

ಮಂಗಳೂರು: ನಗರದ ಹೃದಯ ಭಾಗದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಧವಳ ಕೋ-ಆಪರೇಟಿವ್ ಸೊಸೈಟಿ ನಿಯಮಿತವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಸುಮಾರು ರೂ. 200 ಕೋಟಿ ವ್ಯವಹಾರದೊಂದಿಗೆ ರೂ. 50.95 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸುದರ್ಶನ್ ಜೈನ್ ಅವರು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ (ಜೂನ್ 2022) ರಾಜ್ಯಮಟ್ಟದ ಉದ್ದೇಶದೊಂದಿಗೆ ಆರಂಭಗೊಂಡ ಈ ಸಂಸ್ಥೆಯು ಅಲ್ಪಾವಧಿಯಲ್ಲಿಯೇ ಗಮನಾರ್ಹ ಸಾಧನೆ ಮಾಡಿದೆ. ದಿನಾಂಕ 31.03.2026ರ ಅಂತ್ಯಕ್ಕೆ ಸಂಸ್ಥೆಯು […]

LATEST NEWS

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿಬಿದ್ದು ಅವಘಡ

ಮಂಗಳೂರು, ಏಪ್ರಿಲ್ 25: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ಸಂದರ್ಭದಲ್ಲಿ ಸಣ್ಣ ಸೇತುವೆ (ಕಾಲು ಸಂಕ) ಮುರಿದು ಬಿದ್ದು ಸಂಭವಿಸಿದ ಅವಘಡದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಹೊತ್ತು ಸಾಗುತ್ತಿದ್ದಾಗಲೇ ಈ ದುರ್ಘಟನೆ ಸಂಭವಿಸಿದೆ. ಪುಚ್ಚೆಮೊಗರು ಬಾವದಬೈಲು ಎಂಬಲ್ಲಿಂದ ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮೋತ್ಸವಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಕೊಂಬು, ಬ್ಯಾಂಡ್ ವಾದ್ಯಗಳೊಂದಿಗೆ ಭಕ್ತಿ-ಸಂಭ್ರಮದಿಂದ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಳ್ಳವೊಂದಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಿರು […]

LATEST NEWS

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಮಂಗಳೂರು: ಕರಾವಳಿಯ ವಾಣಿಜ್ಯ ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಮಹತ್ವದ ಬೆಳವಣಿಗೆಯೊಂದರಲ್ಲಿ, ರೋಹನ್ ಕಾರ್ಪೊರೇಷನ್ ಹಾಗೂ ‘ರೇನ್ ಮೇಕರ್ಸ್ ವರ್ಕ್‌ಸ್ಪೇಸ್’ ನಡುವೆ ಕಾರ್ಯಾಲಯ (Work Space) ಸ್ಥಾಪನೆಗಾಗಿ ಸಂಯುಕ್ತ ಒಕ್ಕೂಟ (Joint Venture) ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಒಪ್ಪಂದದ ಅನ್ವಯ ರೋಹನ್ ಸ್ಕ್ವೇರ್ ಕಟ್ಟಡದ 4ನೇ ಮಹಡಿಯಲ್ಲಿ ಅತ್ಯಾಧುನಿಕ ವರ್ಕ್‌ಸ್ಪೇಸ್ ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೋ ಮತ್ತು ನಿರ್ದೇಶಕ ಡಿಯೋನ್ ಮೊಂತೆರೋ ಅವರು, ರೇನ್ ಮೇಕರ್ಸ್ […]

LATEST NEWS

ಧಾರ್ಮಿಕ ಕವಿ-ಕಾವ್ಯ-ಗಾಯನ ಸಂಗಮ: ಸಾಹಿತ್ಯಕ್ಕೆ ಅಗಾಧ ಶಕ್ತಿಯಿದೆ – ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ

ಮಂಗಳೂರು: ಅತ್ತಾವರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪುಣ್ಯ ಸಂದರ್ಭದಲ್ಲಿ ‘ಅಮೃತ ಪ್ರಕಾಶ’ ಪತ್ರಿಕೆ ಮಂಗಳೂರು ಇದರ ಸಂಯೋಜನೆಯಲ್ಲಿ ‘ಧಾರ್ಮಿಕ ಕವಿ ಕಾವ್ಯ ಗಾಯನ ಸಂಗೀತ ಕವಿಗೋಷ್ಠಿ’ಯು ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು. ಧಾರ್ಮಿಕ ಕವಿಗೋಷ್ಠಿ ಗೀತ ಗಾಯನ ಸಂಗೀತ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಪ್ರೊಫೆಸರ್ ಭಾಸ್ಕರ್ ರೈ ಕುಕ್ಕುವಳ್ಳಿ ವಹಿಸಿದ್ದರು. ಬ್ರಹ್ಮ ಕಳಸದ ಈ ಸುಸಂದರ್ಭದಲ್ಲಿ ಧಾರ್ಮಿಕ ಕವನದ ಮೂಲಕ ಸಾಹಿತ್ಯ ಸೇವೆ ಮಾಡುವ ಅವಕಾಶ ಒದಗಿದೆ. ಸಾಹಿತ್ಯಕ್ಕೆ ಅಗಾಧ ಶಕ್ತಿ ಇದೆ ಎಂದರು .ಕವಿಗಳಾಗಿ ರಘು […]

LATEST NEWS

ಮಳೆಗಾಲದ ಮುನ್ನೆಚ್ಚರಿಕೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

ಮಂಗಳೂರು: ಮುಂಬರಲಿರುವ ಮಳೆಗಾಲದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಅಥವಾ ಅವಘಡಗಳಿಗೆ ಆಸ್ಪದವಿಲ್ಲದಂತೆ ಸಕಲ ಸಿದ್ಧತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಕಳೆದ ಮಳೆಗಾಲದಲ್ಲಿ ನಗರದ ಹಲವೆಡೆ ಸಂಭವಿಸಿದ ಹಾನಿಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ಈ ಬಾರಿ ನೆರೆ ಪರಿಸ್ಥಿತಿ ಮರುಕಳಿಸದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ […]

COMMUNITY NEWS LATEST NEWS

ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ ಬೇಸಿಗೆ ಶಿಬಿರ

ವಿಟ್ಲ.ಎಪ್ರಿಲ್ 24: ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದ ವತಿಯಿಂದ 1ನೇ ತರಗತಿಯಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಬೇಸಿಗೆ ಶಿಬಿರವು ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಶಿಬಿರದಲ್ಲಿ ಒಟ್ಟು 56 ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಫಾತಿಮಾ ಮಾತಾ ಸಮುದಾಯ ಭವನದಲ್ಲಿ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ದೇವಾಲಯದ ಧರ್ಮಗುರುಗಳಾದ ವಂ| ಫಾ| ಸೈಮನ್ ಡಿ ಸೋಜಾ ಅವರು ವಹಿಸಿ, ಶಿಬಿರಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಡೆನ್ನಿಸ್ […]