Tag: ಕೆನರಾಟಿವಿ ನ್ಯೂಸ್‌

HOME LATEST NEWS

ಮಂಜೇಶ್ವರ: ಅಪ್ಪನಿಂದಲೇ ಮಗಳ ಕೊಲೆ ಪ್ರಕರಣ- ಮತ್ತೋರ್ವ ಸಾವು

ಮಂಜೇಶ್ವರ: ತಾಲೂಕಿನ ತೂಮಿನಾಡು ಹಿಲ್ ಟಾಪ್ ಎಂಬಲ್ಲಿ ಸೋಮವಾರ ಸಂಜೆ ನಡೆದ ಕೌಟುಂಬಿಕ ಕಲಹದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ಇರಿತಕ್ಕೆ ಒಳಗಾಗಿ ಮಾರಣಾಂತಿಕ ಗಾಯಗೊಂಡಿದ್ದ ಶೇಕುಂಞಿ ಎಂಬವರು ಮಂಗಳವಾರ ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಗಳ ಜೊತೆ ಆರೋಪಿ ಫಾರೂಕ್‌ ಶೇಕುಂಞಿ ಅವರ ಪತ್ನಿಯ ಅಕ್ಕನ ಮಗಳು ಜುಮೈಲಾ (17) ಸೋಮವಾರ ಸಂಜೆ ಮೃತ ಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಮೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ ಆರೋಪಿಯಾಗಿದ್ದು, ಆತನನ್ನು […]

HOME INETRNATIONAL

UAE ಸೇರಿ ಗಲ್ಫ್‌ ರಾಷ್ಟ್ರಗಳ ಭಾರತೀಯರಿಗೆ ಟಿಕೆಟ್‌ ಆಫರ್‌ ಘೋಷಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಭಾರತ ನಡುವಿನ ವಿಮಾನ ಪ್ರಯಾಣ 2026ರಲ್ಲಿ ಇನ್ನಷ್ಟು ಕೈಗೆಟುವಂತಿದೆ. ಟಾಟಾ ಗ್ರೂಪ್‌ನ ಏರ್ ಇಂಡಿಯಾ ಎಕ್ಸ್‌ಪ್ರೆಸ್, ‘ಎಕ್ಸ್‌ಪ್ರೆಸ್ ಮೋರ್ ಸೇಲ್’ ಎಂಬ ಭಾರೀ ಟಿಕೆಟ್ ಮಾರಾಟವನ್ನು ಆರಂಭಿಸಿದೆ. ಈ ಮಾರಾಟದ ಅಡಿಯಲ್ಲಿ ಯುಎಇ–ಭಾರತ ಮಾರ್ಗಗಳಿಗೆ ಒಂದು ದಿಕ್ಕಿನ ಮೂಲ ದರ ಕೇವಲ AED 320 (ಸುಮಾರು Dh350) ರಿಂದ ಲಭ್ಯವಿದ್ದು, ಲಕ್ಷಾಂತರ ವಲಸಿಗರು, ಕುಟುಂಬಗಳು ಹಾಗೂ ಬಜೆಟ್ ಪ್ರವಾಸಿಗರಿಗೆ ಮಹತ್ತರ ಲಾಭವನ್ನು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಏರ್ ಇಂಡಿಯಾ […]

DAKSHINA KANNADA HOME LATEST NEWS

ಎಲ್ಲಾ ಅಂಗಡಿಗಳ ನಾಮಫಲಕಗಳಲ್ಲಿ ಕನ್ನಡ ಹೆಸರು ಕಡ್ಡಾಯ: ದ.ಕ.ಜಿಲ್ಲಾಧಿಕಾರಿ

ಮಂಗಳೂರು: ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು, ಹೊಟೇಲ್ ಸಹಿತ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಹೆಸರುಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಮೂದಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್‌ವಿ ಸೂಚಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಷರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗೆ […]

DAKSHINA KANNADA HOME LATEST NEWS STATE

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ- ಹುಲ್ಲುಗಾವಲು ಭಸ್ಮ

ಬೆಳ್ತಂಗಡಿ: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ.

DAKSHINA KANNADA HOME LATEST NEWS

ಕಡಬ: ಪೋಲ್ಯಾಂಡ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು ದಂಪತಿಯಿಂದ ₹ 5 ಲಕ್ಷ ದೋಖಾ

ಕಡಬ: ಪೋಲೆಂಡ್ ದೇಶದಲ್ಲಿ ಉದ್ಯೋಗ ವೀಸಾ ಕಲ್ಪಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 4.50 ಲಕ್ಷ ರೂ. ಹಣ ಪಡೆದು ವಂಚನೆ ನಡೆಸಿದ ಆರೋಪದಡಿ ಬೆಳ್ತಂಗಡಿ ತಾಲೂಕಿನ ದಂಪತಿ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ  ಮನೋಜ್ ಎಂಬುವವರು ವಿದೇಶದಲ್ಲಿ ಉದ್ಯೋಗ ಹುಡುಕುತ್ತಿದ್ದರು. ಈ ವೇಳೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮದ ಇಂಜಿರ ನಿವಾಸಿಗಳಾದ ಪರಂಬಿಲ್ ಜೋಸೆಫ್ ಮನೋಜ್ ಹಾಗೂ ಅವರ ಪತ್ನಿ ಸ್ಮಿತಾ ಮನೋಜ್ ಎಂಬವರ ಪರಿಚಯವಾಗಿದೆ. ಈ ವೇಳೆ “ಪೋಲೆಂಡ್ […]

DAKSHINA KANNADA HOME LATEST NEWS

ಮಂಜೇಶ್ವರ: 18ರ ಹರೆಯದ ಮಗಳನ್ನೇ ಬರ್ಬರ ಹತ್ಯೆಗೈದ ಪಾಪಿ ತಂದೆ

ಮಂಜೇಶ್ವರ: ತಂದೆಯೋರ್ವ ತನ್ನ ಮಗಳನ್ನೇ ಕೊಚ್ಚಿ ಕೊಲೆ ಗೈದ ದಾರುಣ ಘಟನೆಯೊಂದು ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ತೂಮಿನಾಡಿನ ಜುಮೈಲಾ(18) ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ಆರೋಪದಲ್ಲಿ ತಂದೆ ಉಮ್ಮರ್ ಫಾರೂಕ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಜೀವ […]

DAKSHINA KANNADA HOME LATEST NEWS

ಮಂಗಳೂರು ಜೈಲಿನಲ್ಲಿ ಆರೋಪಿ ಚಡ್ಡಿಯೊಳಗೆ ಮೊಬೈಲ್‌ – ಸಿಬ್ಬಂದಿ ದಾಳಿ ವೇಳೆ ಪತ್ತೆ

ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಪೊಲೀಸ್‌ ದಾಳಿ ವೇಳೆ ಬಂಧಿತ ಆರೋಪಿಯೊಬ್ಬನ ಒಳುಡುಪಿನಲ್ಲಿ ಮೊಬೈಲ್‌ ಪೋನ್‌ ಹಾಗೂ ಚಾರ್ಜರ್‌ ದೊರೆತ ಬಗ್ಗೆ ನಗರದ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಜ.30ರಂದು ಮಧ್ಯಾಹ್ನದ ವೇಳೆ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ಜೈಲು ಅಧೀಕ್ಷಕರು ಕಾರಾಗೃಹದ ಒಳಗಡೆಯ “ಎ” ವಿಭಾಗದ ಕೊಠಡಿ ಸಂಖ್ಯೆ 3 ರಲ್ಲಿ ಅನಿರೀಕ್ಷಿತ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿ ಮೊಹ್ಮದ್ ಎಂಬ ಬಂಧಿತನ ದೇಹ ಶೋಧನೆ ಮಾಡಿದ್ದಾರೆ. ಈ ವೇಳೆ  ಆತನ […]

DAKSHINA KANNADA HOME LATEST NEWS

ವಿಟ್ಲ: ದ್ವಿಚಕ್ರ ವಾಹನಕ್ಕೆ ಗುದ್ದಿ ಓಮ್ನಿ ಪರಾರಿ- ಮಹಿಳೆಯರಿಬ್ಬರು ಗಂಭೀರ

ವಿಟ್ಲ: ದ್ವಿಚಕ್ರ ವಾಹನಕ್ಕೆ ಅತೀ ವೇಗದಿಂದ ಓಮ್ನಿಯೊಂದು ಹಿಂದಿನಿಂದ ಗುದ್ದಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಳಿಕೆ ಗ್ರಾಮದ ನಿವಾಸಿ ಜೆಸಿಂತಾ (31) ಹಾಗೂ ಪೆರುವಾಯಿ ಗ್ರಾಮದ ನಿವಾಸಿ ರೇಷ್ಮಾ ಎಂದು ಗುರುತಿಸಲಾಗಿದೆ. ಘಟನೆ ವಿವರ ಫೆ.1 ರಂದು ಕಾರ್ಯನಿಮಿತ್ತ ಇವರಿಬ್ಬರೂ ಹೋಂಡಾ ಡೀಯೋ ದ್ವಿಚಕ್ರ ವಾಹನದಲ್ಲಿ ಮುಡಿಪು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದರು. ಕಡಂಬು ಎಂಬಲ್ಲಿ ತಲುಪುತ್ತಿದ್ದ ವೇಳೆ ಹಿಂದಿನಿಂದ ಅತೀ ವೇಗದಿಂದ ಬಂದ ಓಮ್ನಿಯೊಂದು […]

HOME LATEST NEWS

ವಿಟ್ಲ: ಕ್ರೈಸ್ತ ಶಿಕ್ಷಣ & ಮೌಲ್ಯ ಶಿಕ್ಷಣ ಪರೀಕ್ಷೆಯಲ್ಲಿ ಸಂತ ರೀಟಾ ಶಾಲೆಯ ರೆನಿಶಾ ಡಿಸೋಜ ಸಾಧನೆ

ವಿಟ್ಲ: ಮಂಗಳೂರು ಧರ್ಮಪ್ರಾಂತ್ಯದ ಮಂಗಳಜ್ಯೋತಿ ಇದರ ವತಿಯಿಂದ ನಡೆದ ಕ್ರೈಸ್ತ ಶಿಕ್ಷಣ ಹಾಗೂ ಮೌಲ್ಯ ಶಿಕ್ಷಣ ಪರೀಕ್ಷೆಯಲ್ಲಿ ವಿಟ್ಲದ ಸಂತ ರೀಟಾ ಶಾಲೆಯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. 10ನೇ ತರಗತಿಯವರಿಗೆ ನಡೆದ ಕ್ರೈಸ್ತ ಶಿಕ್ಷಣ ಹಾಗೂ ಮೌಲ್ಯ ಶಿಕ್ಷಣ ಪರೀಕ್ಷೆಯಲ್ಲಿ ಪೆರುವಾಯಿಯ ರಾಜೇಶ್‌ ಡಿಸೋಜ ಹಾಗೂ ರೆನಿಟಾ ರೊಡ್ರಿಗಸ್‌ ಇವರ ಮಗಳಾದ ರೆನಿಶಾ ಡಿಸೋಜ ಅವರು ಶೇ 100% ಫಲಿತಾಂಶವನ್ನು ಗಳಿಸಿ ಮಂಗಳೂರು ಧರ್ಮಪ್ರಾಂತ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮೌಲ್ಯ ಶಿಕ್ಷಣ ಪರೀಕ್ಷೆಯಲ್ಲಿ ಹಸೀಫಾ ಝಹೀಮ. ಬಿ […]

DAKSHINA KANNADA HOME LATEST NEWS UDUPI

ಉಡುಪಿಯಲ್ಲಿ ಝಳಪಿಸಿದ ತಲವಾರು: NSUIನ ಉಪಾಧ್ಯಕ್ಷ ಗಂಭೀರ

ಉಡುಪಿ:  ಉಡುಪಿ ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷ, ಬೈಲೂರು ಚಿಟ್ಪಾಡಿ ನಿವಾಸಿ ಶರತ್ ಕುಂದರ್(25) ಎಂಬವರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಜ.30ರಂದು ರಾತ್ರಿ ನಗರದ ಪಿಪಿಸಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಎನ್‌ಎಸ್‌ಯುಐ ಉಪಾಧ್ಯಕ್ಷ ಶರತ್ ಕುಂದರ್‌ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿವಾರಿನಿಂದ ದಾಳಿ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ. ಜೊತೆಗೆ ಜೀವ ಸಹಿತ ಬಿಡುವುದಿಲ್ಲ […]