Tag: ಕೆನರಾಟಿವಿ ನ್ಯೂಸ್‌

LATEST NEWS

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಮಂಗಳೂರು: ಕರಾವಳಿಯ ವಾಣಿಜ್ಯ ಚಟುವಟಿಕೆಗಳಿಗೆ ಹೊಸ ಆಯಾಮ ನೀಡುವ ಮಹತ್ವದ ಬೆಳವಣಿಗೆಯೊಂದರಲ್ಲಿ, ರೋಹನ್ ಕಾರ್ಪೊರೇಷನ್ ಹಾಗೂ ‘ರೇನ್ ಮೇಕರ್ಸ್ ವರ್ಕ್‌ಸ್ಪೇಸ್’ ನಡುವೆ ಕಾರ್ಯಾಲಯ (Work Space) ಸ್ಥಾಪನೆಗಾಗಿ ಸಂಯುಕ್ತ ಒಕ್ಕೂಟ (Joint Venture) ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಒಪ್ಪಂದದ ಅನ್ವಯ ರೋಹನ್ ಸ್ಕ್ವೇರ್ ಕಟ್ಟಡದ 4ನೇ ಮಹಡಿಯಲ್ಲಿ ಅತ್ಯಾಧುನಿಕ ವರ್ಕ್‌ಸ್ಪೇಸ್ ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೋ ಮತ್ತು ನಿರ್ದೇಶಕ ಡಿಯೋನ್ ಮೊಂತೆರೋ ಅವರು, ರೇನ್ ಮೇಕರ್ಸ್ […]

LATEST NEWS

ಧಾರ್ಮಿಕ ಕವಿ-ಕಾವ್ಯ-ಗಾಯನ ಸಂಗಮ: ಸಾಹಿತ್ಯಕ್ಕೆ ಅಗಾಧ ಶಕ್ತಿಯಿದೆ – ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ

ಮಂಗಳೂರು: ಅತ್ತಾವರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪುಣ್ಯ ಸಂದರ್ಭದಲ್ಲಿ ‘ಅಮೃತ ಪ್ರಕಾಶ’ ಪತ್ರಿಕೆ ಮಂಗಳೂರು ಇದರ ಸಂಯೋಜನೆಯಲ್ಲಿ ‘ಧಾರ್ಮಿಕ ಕವಿ ಕಾವ್ಯ ಗಾಯನ ಸಂಗೀತ ಕವಿಗೋಷ್ಠಿ’ಯು ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು. ಧಾರ್ಮಿಕ ಕವಿಗೋಷ್ಠಿ ಗೀತ ಗಾಯನ ಸಂಗೀತ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಪ್ರೊಫೆಸರ್ ಭಾಸ್ಕರ್ ರೈ ಕುಕ್ಕುವಳ್ಳಿ ವಹಿಸಿದ್ದರು. ಬ್ರಹ್ಮ ಕಳಸದ ಈ ಸುಸಂದರ್ಭದಲ್ಲಿ ಧಾರ್ಮಿಕ ಕವನದ ಮೂಲಕ ಸಾಹಿತ್ಯ ಸೇವೆ ಮಾಡುವ ಅವಕಾಶ ಒದಗಿದೆ. ಸಾಹಿತ್ಯಕ್ಕೆ ಅಗಾಧ ಶಕ್ತಿ ಇದೆ ಎಂದರು .ಕವಿಗಳಾಗಿ ರಘು […]

LATEST NEWS

ಮಳೆಗಾಲದ ಮುನ್ನೆಚ್ಚರಿಕೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

ಮಂಗಳೂರು: ಮುಂಬರಲಿರುವ ಮಳೆಗಾಲದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಅಥವಾ ಅವಘಡಗಳಿಗೆ ಆಸ್ಪದವಿಲ್ಲದಂತೆ ಸಕಲ ಸಿದ್ಧತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಕಳೆದ ಮಳೆಗಾಲದಲ್ಲಿ ನಗರದ ಹಲವೆಡೆ ಸಂಭವಿಸಿದ ಹಾನಿಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ಈ ಬಾರಿ ನೆರೆ ಪರಿಸ್ಥಿತಿ ಮರುಕಳಿಸದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ […]

COMMUNITY NEWS LATEST NEWS

ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ ಬೇಸಿಗೆ ಶಿಬಿರ

ವಿಟ್ಲ.ಎಪ್ರಿಲ್ 24: ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದ ವತಿಯಿಂದ 1ನೇ ತರಗತಿಯಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಬೇಸಿಗೆ ಶಿಬಿರವು ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಶಿಬಿರದಲ್ಲಿ ಒಟ್ಟು 56 ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಫಾತಿಮಾ ಮಾತಾ ಸಮುದಾಯ ಭವನದಲ್ಲಿ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ದೇವಾಲಯದ ಧರ್ಮಗುರುಗಳಾದ ವಂ| ಫಾ| ಸೈಮನ್ ಡಿ ಸೋಜಾ ಅವರು ವಹಿಸಿ, ಶಿಬಿರಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಡೆನ್ನಿಸ್ […]

LATEST NEWS

ಪಿವಿಎಸ್ ಬಸ್ ತಂಗುದಾಣದಲ್ಲಿ ರೋಟರಿ ಸೆಂಟ್ರಲ್ ನಿಂದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

ಮಂಗಳೂರು, ಏಪ್ರಿಲ್. 24: ಜನರಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಒದಗಿಸುವಲ್ಲಿ ಸೇವಾಮನೋಭಾವ ಹೊಂದಿರುವ ಜನರು ಮತ್ತು ಸಂಘ ಸಂಸ್ಥೆಗಳುಸಹಭಾಗಿತ್ವ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.ಅವರು ಗುರುವಾರ ನಗರದ ಪಿವಿಎಸ್ ವೃತ್ತದ ಬಸ್ ನಿಲ್ದಾಣದಲ್ಲಿ ಸಾರ್ವಜನಿ ಕರಿಗಾಗಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ ಅಳವಡಿಸಲಾದ ಶುದ್ದ ಕುಡಿಯು ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಸೇವಾ ಚಟುವಟಿಕೆಯನ್ನೇ ಧ್ಯೇಯವಾಗಿರಿ ಸಿಕೊಂಡಿರುವ ರೋಟರಿ ಸಂಸ್ಥೆ ನಗರದ ವಿವಿಧ ಕಡೆಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು […]

LATEST NEWS

ಮಂಗಳೂರಿನಲ್ಲಿ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಸ್ಥಾಪನೆಗೆ ಆಗ್ರಹ: ಆಡಳಿತ ನ್ಯಾಯಮೂರ್ತಿಗಳಿಗೆ ಎಂ.ಎಲ್.ಸಿ ಐವನ್ ಡಿ’ಸೋಜಾ ಮನವಿ

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದ ಜನರ ದಶಕಗಳ ಬೇಡಿಕೆಯಾದ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ಅನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರು ಬೆಂಗಳೂರಿನಲ್ಲಿ ಆಡಳಿತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಹರೇಕೊಪ್ಪ ತಿಮ್ಮನಗೌಡ ನರೇಂದ್ರ ಪ್ರಸಾದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ’ಸೋಜಾ ಅವರು, “ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಜಿಲ್ಲೆಗಳ ಜನರು ನ್ಯಾಯಾಂಗ ಪ್ರಕ್ರಿಯೆಗಳಿಗಾಗಿ ಬೆಂಗಳೂರಿಗೆ ನೂರಾರು ಕಿಲೋಮೀಟರ್ ಪ್ರಯಾಣ ಮಾಡಬೇಕಿದೆ. […]

LATEST NEWS

ಬಿಲ್ಲವ ಬ್ರಿಗೇಡ್ ನಂದಾದೀಪ ಫೌಂಡೇಶನ್ ‘ಸೇವಾ ಸಂಭ್ರಮ’ ಏ.25 ರಂದು ಮನೆಗಳ ಹಸ್ತಾಂತರ

ಮಂಗಳೂರು : ಬಿಲ್ಲವ ಬ್ರಿಗೇಡ್ ಮತ್ತು ನಂದಾದೀಪ ಫೌಂಡೇಶನ್ ವತಿಯಿಂದ ನಿರ್ಮಿಸಲಾದ ಮನೆಗಳ ಹಸ್ತಾಂತರ ಕಾರ್ಯಕ್ರಮ “ಸೇವಾ ಸಂಭ್ರಮ” ಎ.25ರಂದು ಸಂಜೆ 6 ಗಂಟೆಗೆ ಬಂಟ್ವಾಳ ತಾಲೂಕಿನ ಪಂಬದಬೆಟ್ಟು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಸದಾನಂದ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ನಿರ್ಮಿಸಲಾದ 14ನೇ ಮತ್ತು 15ನೇ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ರಾಜಕೀಯ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಿನಿಮಾ ಕ್ಷೇತ್ರದ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಇದರ ಅಂಗವಾಗಿ […]

HOME LATEST NEWS

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ LPG/CNG ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಿಕ್ಷಾ ಚಾಲಕರು ಹಾಗೂ ಮಾಲಕರು ಎದುರಿಸುತ್ತಿರುವ ಗಂಭೀರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು, ಮೋಟಾರ್ ಮತ್ತು ಜನರಲ್ ಮಜ್ದೂರು ಸಂಘ (ಬಿಎಂಎಸ್) ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯ ನೇತೃತ್ವವನ್ನು ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ ವಹಿಸಿದ್ದರು. ಇತ್ತೀಚಿನ ಜಾಗತಿಕ ಪರಿಸ್ಥಿತಿ ಹಿನ್ನೆಲೆ ಇಂಧನದ ಬೆಲೆ ಏರಿಕೆ ಹಾಗೂ LPG/CNG ಗ್ಯಾಸ್ ಅಭಾವವು ರಿಕ್ಷಾ ಕಾರ್ಮಿಕರ ಜೀವನದ ಮೇಲೆ […]

HOME LATEST NEWS

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: 20 ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ

ಮಂಗಳೂರು, ಏಪ್ರಿಲ್ 21: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2024-25ನೇ ಸಾಲಿನ ‘ಹೊಲಿಗೆ ಯಂತ್ರ ವಿತರಣೆ ಯೋಜನೆ’ಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು.ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಆಯ್ಕೆಯಾದ ಒಟ್ಟು 20 ಹಿಂದುಳಿದ ವರ್ಗಗಳ ಬಡ ಕುಟುಂಬಗಳ ಮಹಿಳೆಯರಿಗೆ, ಇಂದು ಬೆಳಿಗ್ಗೆ ತಾಲೂಕು ಪಂಚಾಯತ್ […]

LATEST NEWS

ಬ್ಯಾಪ್ಟಿಸ್ಟ್ ಪ್ರೀಮಿಯರ್ ಲೀಗ್ ಸೀಸನ್-8: ಅರಸು ಟೈಟನ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ

ಮಂಗಳೂರು: ನಗರದ ಉರ್ವ ಸ್ಟೋರಿನಲ ಬ್ಯಾಪ್ಟಿಸ್ಟ್ ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ನಡೆದ ಬ್ಯಾಪ್ಟಿಸ್ಟ್ ಪ್ರೀಮಿಯರ್ ಲೀಗ್ ಸೀಸನ್-8 ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮನು ಅರಸು ಅವರ ಮಾಲಕತ್ವದ ಅರಸು ಟೈಟನ್ಸ್ ತಂಡ ಪ್ರಥಮ ಸ್ಥಾನವನ್ನು, ಅಶ್ವಿನ್ ಪೂಜಾರಿಯವರ ಶ್ರೀ ಕಟಿಲೇಶ್ವರಿ ತಂಡ ದ್ವಿತೀಯ ಸ್ಥಾನವನ್ನು ಪಡೆಯಿತು. ಅರಸು ಟೈಟನ್ಸ್ ತಂಡದಲ್ಲಿದ್ದ ವಿನಯ ಕುಮಾರ್, ಗುರುದತ್ತ್, ಸೌಹಾರ್ದ್ ಶೆಟ್ಟಿ, ಗುರುದತ್ತ ಶೆಟ್ಟಿ, ಕಿಶನ್ ಶೆಟ್ಟಿ, ಚಿರಾಗ್ ಆರ್., ಮಹೇಶ್ ಕುಮಾರ್ ಹೊಳ್ಳ, ಸತೀಶ್ ಎಸ್., ಐ.ಬಿ. ಸಿಂಚನಾ ಜೈನ್, […]