ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಕೊಳಂಬೆ ನೇಮಕ
ಮಂಗಳೂರು: ಏಪ್ರಿಲ್ 14: ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಜನತಾದಳದ (ಜೆಡಿಎಸ್) ನೂತನ ಕಾರ್ಯಾಧ್ಯಕ್ಷರಾಗಿ ಶ್ರೀ ಶಶಿರಾಜ್ ಶೆಟ್ಟಿ ಕೊಳಂಬೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ಈ ನೇಮಕಾತಿಯನ್ನು ಪ್ರಕಟಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯ ಘಟಕವು ಪ್ರಕಟಿಸಿದ ನೂತನ ಪದಾಧಿಕಾರಿಗಳ ಪಟ್ಟಿಯ ಕುರಿತು […]











