Tag: ಕೆನರಾಟಿವಿ

LATEST NEWS

ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಕೊಳಂಬೆ ನೇಮಕ

ಮಂಗಳೂರು: ಏಪ್ರಿಲ್ 14: ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಜನತಾದಳದ (ಜೆಡಿಎಸ್) ನೂತನ ಕಾರ್ಯಾಧ್ಯಕ್ಷರಾಗಿ ಶ್ರೀ ಶಶಿರಾಜ್ ಶೆಟ್ಟಿ ಕೊಳಂಬೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿಯಲ್ಲಿ ಈ ನೇಮಕಾತಿಯನ್ನು ಪ್ರಕಟಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯ ಘಟಕವು ಪ್ರಕಟಿಸಿದ ನೂತನ ಪದಾಧಿಕಾರಿಗಳ ಪಟ್ಟಿಯ ಕುರಿತು […]

COMMUNITY NEWS LATEST NEWS

ಪೋಪ್ 14 ನೇ ಲಿಯೊ ಇವರ ಬಗ್ಗೆ ಯು.ಎಸ್. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಮಂಗಳೂರು ಧರ್ಮಪ್ರಾಂತ್ಯ ಖಂಡನೆ

ಮಂಗಳೂರು :ಯು.ಎಸ್. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ರೈಸ್ತ ಜಗದ್ಗುರು ಪರಮ ಪೂಜ್ಯ ಪೋಪ್ 14ನೇ ಲಿಯೋ ರವರ ವಿರುದ್ಧ ಇತ್ತೀಚೆಗೆ ಮಾಡಿರುವ ಅವಹೇಳನಕಾರಿ ಹೇಳಿಕೆಗಳನ್ನು ಮಂಗಳೂರು ಧರ್ಮಪ್ರಾಂತ್ಯವು ತೀವ್ರವಾಗಿ ಖಂಡಿಸುತ್ತದೆ. ಪರಮೋಚ್ಛ ಗುರುಗಳ ವಿರುದ್ಧದ ಇಂತಹ ಮಾತುಗಳು ಮಂಗಳೂರಿನ, ಭಾರತದ ಮತ್ತು ವಿಶ್ವದಾ ದ್ಯಂತದ ಕ್ಯಾಥೊಲಿಕರಿಗೆ ಅತೀವ ನೋವುಂಟು ಮಾಡಿವೆ. ಏಕೆಂದರೆ ಅವರು ಪೋಪರನ್ನು ಸಂತ ಪೇತ್ರರ ಉತ್ತರಾಧಿಕಾರಿ ಮತ್ತು ಕ್ರೈಸ್ತ ಧರ್ಮಸಭೆಯ ಮುಖ್ಯಸ್ಥರೆಂದು ಗೌರವಿಸುತ್ತಾರೆ. ಪೋಪ್ ರವರನ್ನು ಅವಮಾನಿಸುವ ಮೂಲಕ ಕೋಟ್ಯಂತರ ಕ್ರೈಸ್ತ ವಿಶ್ವಾಸಿಗಳ […]

HOME LATEST NEWS

ವಿಶ್ವ ದಾಖಲೆ ಸೃಷ್ಟಿಸಲಿದೆ ಕೊಂಕಣಿ ಸಂಗೀತ ಮಹಾ ಸಮಾವೇಶ: ಲಾಂಛನ ಬಿಡುಗಡೆ ಮಾಡಿ ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ಮಂಗಳೂರು: ಏಪ್ರಿಲ್ 10: ಮಂಗಳೂರಿನಲ್ಲಿ ನಡೆಯಲಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶವು ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ, ಇದು ಗಿನ್ನಿಸ್ ವಿಶ್ವ ದಾಖಲೆ ಸೃಷ್ಟಿಸುವ ಮೂಲಕ ಇತಿಹಾಸ ಬರೆಯಲಿದೆ,” ಎಂದು ರಾಜ್ಯದ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.ಶಕ್ತಿನಗರದ ಕಲಾಂಗಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ‘ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶ-2026’ರ ಲಾಂಛನ (Logo) ಬಿಡುಗಡೆ ಮಾಡಿ ಅವರು ಮಾತನಾಡಿದರು .ʼʼಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ, ಅವರ ಉತ್ಸಾಹ ಮತ್ತು ಸೃಜನಶೀಲತೆ […]

HOME LATEST NEWS

ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್ ಮೆಲ್ವಿನ್ ಜೆ. ಪಿಂಟೋ ನಿಧನ

ಮಂಗಳೂರು: ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಪ್ರೊ. ಚಾನ್ಸಲರ್, ಸೈಂಟ್ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸ್ಯೂಟ್ ಎಜುಕೇಷನಲ್ ಸೊಸೈಟಿಯ ಉಪಾಧ್ಯಕ್ಷರಾಗಿದ್ದ ಮೆಲ್ವಿನ್ ಜೆ. ಪಿಂಟೋ ಅವರು ನಿಧನರಾಗಿದ್ದಾರೆ. ೧೯೬೩ರಲ್ಲಿ ಜನಿಸಿದ ಫಾದರ್ ಮೆಲ್ವಿನ್ ಪಿಂಟೋ ಅವರು ಸೇಂಟ್ ಅಲೋಶಿಯಸ್‌ನಲ್ಲಿ ತಮ್ಮ ಶಾಲಾ ಮತ್ತು ಕಾಲೇಜು ಶಿಕ್ಷಣವನ್ನು ಪೂರ್ಣಗೊಳಿಸಿದರು. 1981 ರಲ್ಲಿ ಜೆಸ್ಯೂಟ್ ಸಭೆಯನ್ನು ಸೇರಿದ ಇವರು, 1997 ರಲ್ಲಿ ಧರ್ಮಗುರುಗಳಾಗಿ ದೀಕ್ಷೆ ಪಡೆದಿದ್ದರು. ಇಂಗ್ಲಿಷ್‌ನಲ್ಲಿ ಎಂ.ಎ, ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಸೈಕಾಲಜಿ ಮತ್ತು ಕೌನ್ಸೆಲಿಂಗ್‌ನಲ್ಲಿ […]

DAKSHINA KANNADA HOME LATEST NEWS

ಕೇರಳ ಸೇರಿ ಮೂರು ರಾಜ್ಯಗಳಲ್ಲಿ ಇಂದು ಮತದಾನ

ಮಂಗಳೂರು: ದೇಶದ ಗಮನ ಸೆಳೆದಿರುವ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಈ ಮೂರೂ ರಾಜ್ಯಗಳಲ್ಲಿ ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಕೇರಳ: ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಆಡಳಿತಾರೂಢ ಎಲ್‌ಡಿಎಫ್ (LDF) ಮತ್ತು ಪ್ರತಿಪಕ್ಷ ಯುಡಿಎಫ್ (UDF) ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ಬಿಜೆಪಿ ಕೂಡ ಪ್ರಬಲ ಪೈಪೋಟಿ ನೀಡುತ್ತಿದೆ. ಅಸ್ಸಾಂ: ಅಸ್ಸಾಂನಲ್ಲಿ […]

DAKSHINA KANNADA HOME LATEST NEWS

ಸುಳ್ಯದಲ್ಲಿ ರಸ್ತೆಯ ಬದಿ ಕಸ: ಅಂಗಡಿ ಮಾಲೀಕನ ವಿರುದ್ಧ FIR ದಾಖಲು

ಮಂಗಳೂರು:- ಸುಳ್ಯ ತಾಲೂಕು ಐವರ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯ ಬೆಳ್ಳಾರೆ-ಸುಳ್ಯ ರಸ್ತೆಯ ಬೆಂಗಮಲೆ ಎಂಬಲ್ಲಿ ರಸ್ತೆಯ ಬದಿ ತ್ಯಾಜ್ಯ ಎಸೆದಿರುವ ಅಂಗಡಿ ಮಾಲಿಕರ ಮೇಲೆ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಸಾಂದರ್ಭಿಕ ಚಿತ್ರ ಬೇಂಗಮಲೆಯ 3 ಕಡೆಗಳಲ್ಲಿ ತ್ಯಾಜ್ಯದ ಚೀಲಗಳನ್ನು ಎಸೆದಿರುವುದು ಕಂಡು ಬಂದಿದ್ದು, ತೆರೆದು ಪರಿಶೀಲಿಸಿದಾಗ ಎಲ್ಲಾ ಮೂರೂ ತ್ಯಾಜ್ಯದ ಚೀಲಗಳಲ್ಲಿ ಸುಳ್ಯ ಗಾಂಧಿನಗರದ ಅಯೋಧ್ಯಾ ಮೆನ್ಸ್ ಡ್ರೆಸ್ & ಸ್ಪೋಟ್ರ್ಸ್ ಜೆರ್ಸಿ ಶಾಪ್ ಎಂಬ ವಸ್ತ್ರ ಮಳಿಗೆಗೆ ಸೇರಿದ ತ್ಯಾಜ್ಯಗಳಿರುವುದು ಕಂಡುಬಂದಿರುತ್ತದೆ. ಚೀಲಗಳಲ್ಲಿ ವಸ್ತ್ರ […]

DAKSHINA KANNADA HOME LATEST NEWS

ಆರಿಫ್ ಹತ್ಯೆ ಪ್ರಕರಣ: ಏಳು ಪ್ರಮುಖ ಆರೋಪಿಗಳ ಬಂಧನ- ವಿದೇಶದಿಂದ ಫಂಡಿಂಗ್‌

ಮಂಗಳೂರು: ತೊಕ್ಕೊಟ್ಟು ಓವರ್‌ಬ್ರಿಡ್ಜ್‌ನಲ್ಲಿ ನಡೆದ ರೌಡಿಶೀಟರ್‌ ಆರಿಫ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಪ್ರಗತಿ ಕಂಡುಬಂದಿದ್ದು, ಪೊಲೀಸರು ಏಳು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ಮತ್ತು ವಿಚಾರಣೆ ವೇಳೆ ಹಲವು ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್‌ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರಿಫ್  ಪ್ರಾಥಮಿಕ ತನಿಖೆಯಲ್ಲಿ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕೀರ್, ಇರ್ಫಾನ್ ಮತ್ತು ರಿಜ್ವಾನ್ ಸಹಿತ 7 ಆರೋಪಿಗಳನ್ನು ಬಂಧಿಸಿದ್ದಾರೆ. ಇವರು ಈ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವುದು […]

LATEST NEWS

ಗೋ ಗ್ಯಾಸ್ ನಿಂದ ಆಟೋಗಳಿಗೆ 100 ರೂ ದರ ನಿಗಧಿ ಶಾಸಕ ಅಶೋಕ್ ರೈ ಮಾತುಕತೆ ಎಫೆಕ್ಟ್

ಪುತ್ತೂರು: ಪುತ್ತೂರಿನಲ್ಲಿರುವ ಗೋ ಗ್ಯಾಸ್ ಸಂಸ್ಥೆಯವರು ಆಟೋ ಗ್ಯಾಸ್ ಅಧಿಕ ಧರದಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಪುತ್ತೂರಿನಲ್ಲಿ ಆಟೋ ಚಾಲಕರು ಪ್ರತಿಭಟನೆ ನಡೆಸಿ ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿ ಶಾಸಕ ಅಶೋಕ್ ರೈ ಗೆ ಮನವಿ ಮಾಡಿದ್ದರು. ಮಧ್ಯಾಹ್ನ ಎ ಸಿ ಕಚೇರಿಯಲ್ಲಿ ಗ್ಯಾಸ್ ವಿತರಕರ ಸಭೆ ನಡೆಸಿದ ಶಾಸಕರು ಹೆಚ್ಚು ದರ ವಸೂಲಿ ಮಾಡದಂತೆ ಸೂಚನೆ ನೀಡಿದ್ದು ಇದರ ಫಲವಾಗಿ ಇಂದು ಗೋ ಗ್ಯಾಸ್ ಸಂಸ್ಥೆಯವರು 120 ರ ಬದಲಾಗಿ 100 ರೂಗೆ […]

HOME INETRNATIONAL LATEST NEWS NATIONAL

Breaking: ಇರಾನ್ ನಲ್ಲಿರುವ ಭಾರತೀಯರಿಗೆ ತುರ್ತು ಸೂಚನೆ

ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಏಪ್ರಿಲ್ 7, 2026 ರಂದು ತುರ್ತು ಸೂಚನೆಯನ್ನು ಹೊರಡಿಸಿದೆ. ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ಮುಂದಿನ 48 ಗಂಟೆಗಳ ಕಾಲ ತಾವಿರುವ ಸ್ಥಳದಲ್ಲೇ ಇರುವಂತೆ ಸೂಚಿಸಲಾಗಿದೆ. ಪ್ರಮುಖ ಮಾರ್ಗಸೂಚಿಗಳು ಇದ್ದಲ್ಲೇ ಇರಿ: ಮುಂದಿನ 48 ಗಂಟೆಗಳ ಕಾಲ ಮನೆಯಿಂದ ಹೊರಬರಬೇಡಿ. ಅಪಾಯಕಾರಿ ಸ್ಥಳಗಳಿಂದ ದೂರವಿರಿ: ವಿದ್ಯುತ್ ಸ್ಥಾವರಗಳು, ಮಿಲಿಟರಿ ನೆಲೆಗಳು ಮತ್ತು ಬಹುಮಹಡಿ ಕಟ್ಟಡಗಳ ಮೇಲಿನ ಮಹಡಿಗಳಿಗೆ ಹೋಗಬೇಡಿ. ಹೋಟೆಲ್‌ನಲ್ಲಿರುವವರು: ರಾಯಭಾರ ಕಚೇರಿ ಗೊತ್ತುಪಡಿಸಿದ ಹೋಟೆಲ್‌ಗಳಲ್ಲಿ ಇರುವವರು ಒಳಾಂಗಣದಲ್ಲೇ ಇರಬೇಕು ಮತ್ತು ಅಲ್ಲಿನ […]

HOME NATIONAL

ಮಹಾಕುಂಭದಲ್ಲಿ ಖ್ಯಾತಿ ಗಳಿಸಿದ್ದ ಐಐಟಿ ಬಾಬಾ ಬೆಂಗಳೂರಿನ ಯುವತಿ ಜತೆ ವಿವಾಹ

ಚಂಡೀಗಢ: ಕಳೆದ ವರ್ಷ ಪ್ರಯಾಗ್‌ರಾಜ್‌ ಮಹಾಕುಂಭದಲ್ಲಿ ಖ್ಯಾತಿ ಗಳಿಸಿದ್ದ ಐಐಟಿ-ವಾಲೆ ಬಾಬಾ ವಿವಾಹವಾಗಿದ್ದಾರೆ. ಬೆಂಗಳೂರಿನ ಹುಡುಗಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಐಟಿ ವಾಲೆ ಬಾಬಾರ ನಿಜವಾದ ಹೆಸರು ಅಭಯ್‌ ಸಿಂಗ್.‌ ಹರಿಯಾಣದ ಜಜ್ಜರ್‌ ಜಿಲ್ಲೆಯವರು. ಬೆಂಗಳೂರಿನ ಎಂಜಿನಿಯರ್‌ ಪ್ರತೀಕಾ ಎಂಬವರನ್ನು ವರಿಸಿದ್ದಾರೆ. ತನ್ನ ತಂದೆಯನ್ನು ಭೇಟಿಯಾಗಲು ಜಜ್ಜರ್‌ಗೆ ಐಐಟಿ ವಾಲೆ ಬಾಬಾ ಭೇಟಿ ಕೊಟ್ಟಿದ್ದರು. ವಕೀಲರಾಗಿರುವ ತಮ್ಮ ತಂದೆಯನ್ನು ಭೇಟಿ ಮಾಡಲು ತಹಸಿಲ್ ಸಂಕೀರ್ಣಕ್ಕೆ ತೆರಳಿದ್ದರು. ಈ ವೇಳೆ ಪತ್ನಿ ಪ್ರತೀಕಾ ಕೂಡ ಜೊತೆಗಿದ್ದರು. ಕಳೆದ ವರ್ಷ […]