Tag: ಕೆನರಾಟಿವಿ

HOME LATEST NEWS STATE

ನಿಶ್ಛಿತಾರ್ಥವಾಗಿದ್ದಾತೆಗೆ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್‌ ಮಾಡಿದವನ ಬರ್ಬರ ಹತ್ಯೆ

ಚಿಕ್ಕಮಗಳೂರು: ಬೇರೊಬ್ಬನೊಂದಿಗೆ ನಿಶ್ಛಿತಾರ್ಥವಾಗಿದ್ದ ಯುವತಿಗೆ ಇನ್‌ಸ್ಟಾಗ್ರಾಂನಲ್ಲಿ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಯುವಕನನ್ನು ಯುವತಿಯ ಭಾವಿ ಪತಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು ಎಂಬ […]

DAKSHINA KANNADA HOME LATEST NEWS STATE

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ

ಮಂಗಳೂರು: ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವಕರಾಗಿದ್ದ ವಿನಯ ಹೆಗ್ಡೆ ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸಹಿತ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರರಾಗಿದ್ದ ವಿನಯ‌ ಹೆಗ್ಡೆ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದವರು. […]

DAKSHINA KANNADA HOME LATEST NEWS NATIONAL

ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಸಂದೇಶ ಹಂಚಿದ ಅವರು, ದೇಶದಲ್ಲಿ ಶಾಂತಿ ನೆಲೆಸಲು, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.  ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸಿದ್ದಾರೆ.ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು ನೀವು ಮಾಡುವ ಎಲ್ಲದರಲ್ಲೂ ಸಾಧನೆಯೊಂದಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ […]

DAKSHINA KANNADA HOME LATEST NEWS

ಕಬಕ : ರಸ್ತೆ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಮದ ವಿದ್ಯಾಪುರ 9 ನೇ ಅಡ್ಡ ರಸ್ತೆಯಲ್ಲಿ ಸ್ಥಳೀಯ ಮನೆಗಳ ಸಂಪರ್ಕದ ರಸ್ತೆ ವಿವಾದ ಇತ್ಯರ್ಥವಾಗಿದೆ. ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಸೌಹಾರ್ಧಸಭೆಯಲ್ಲಿ ವಿವಾದವನ್ನು ಇತ್ಯರ್ಥಪಡಿಸಲಾಗಿದೆ. ಈ ರಸ್ತೆಯ ಪಕ್ಕದಲ್ಲಿ 6 ಮನೆಗಳಿದ್ದು ಈ ಮನೆಗಳಿಗೆ ತೆರಳಲು ರಸ್ತೆಯೇ ಇರಲಿಲ್ಲ. ಅಲ್ಲಿಗೆ ತೆರಳುವ ರಸ್ತೆಯ ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ಅಡಚಣೆಯಾಗಿತ್ತು. ರಸ್ತೆಗಾಗಿ ಹಲವು ವರ್ಷಗಳಿಂದ ಇಲ್ಲಿನ ನಿವಾಸಿಗಳು ಹೋರಾಟವನ್ನೇ ಮಾಡಿದ್ದರು. ಕೆಲದಿನಗಳ ಹಿಂದೆ ಶಾಸಕರ ನೇತೃತ್ವದಲ್ಲಿ ಮಾತುಕತೆ ನಡೆದಿದ್ದು […]

DAKSHINA KANNADA HOME LATEST NEWS STATE

ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ರೈಲ್ವೇ ಮಾರ್ಗದ ವಿದ್ಯುದೀಕರಣ ಯಶಸ್ವಿ

ಮಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು ಆಗಿದೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ ಅನುಕೂಲ […]

DAKSHINA KANNADA HOME

ಬಿಕರ್ನಕಟ್ಟೆಯಲ್ಲಿ ಪರಿಸರ ಸ್ನೇಹಿ-ಸೃಜನಶೀಲ ಕ್ರಿಸ್‌ಮಸ್ ನಕ್ಷತ್ರ ಸ್ಪರ್ಧೆ

ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರವು ಈ ಬಾರಿ ಆಯೋಜಿಸಿದ್ದ ಕ್ರಿಸ್‌ಮಸ್ ನಕ್ಷತ್ರ ಸ್ಪರ್ಧೆಯು ಕೇವಲ ಒಂದು ಕಲಾ ಪ್ರದರ್ಶನವಾಗಿರದೆ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಜವಾಬ್ದಾರಿಯ ಮಹೋತ್ಸವವಾಗಿ ಹೊರಹೊಮ್ಮಿತು. ನಗರದ ವಿವಿಧ ಮೂಲೆಗಳಿಂದ ಬಂದ 20ಕ್ಕೂ ಹೆಚ್ಚು ಸ್ಪರ್ಧಾಳುಗಳು ಈ ಸ್ಪರ್ಧೆಯಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದು, ಪ್ರತಿಯೊಂದು ನಕ್ಷತ್ರವೂ ತನ್ನದೇ ಆದ ವಿಶಿಷ್ಟ ಸಂದೇಶವನ್ನು ಸಾರಿತು. ಈ ಸ್ಪರ್ಧೆಯ ಅತ್ಯಂತ ಗಮನಾರ್ಹ ಅಂಶವೆಂದರೆ ಸುಸ್ಥಿರತೆಗೆ ನೀಡಿದ ಆದ್ಯತೆ; ಎಲ್ಲಾ ನಕ್ಷತ್ರಗಳನ್ನು ತೆಂಗಿನ ಚಿಪ್ಪು, ಒಣ ಹುಲ್ಲು, […]

DAKSHINA KANNADA HOME

ಬೆಳೆ ವಿಮೆಯಲ್ಲಿನ ಲೋಪ: ಸದನದಲ್ಲಿ ಶಾಸಕ ಅಶೋಕ್ ರೈ & ಸ್ಪೀಕರ್‌ ಮಧ್ಯೆ ಜಟಾಪಟಿ

ಪುತ್ತೂರು: ೨೦೨೪ರ ೨೦೨೪ ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಪಾವತಿಸಿದ ಪರಿಹಾರ ಮೊತ್ತಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ತಡವಾಗಿರುವ ಮತ್ತು ಪರಿಹಾರ ಮೊತ್ತ ಕಡಿಮೆಯಾಗಿರುವ ಬಗ್ಗೆ ಬುಧವಾರ ಬೆಳಗಾವಿಯಲ್ಲಿ ನಡೆದ ವಿಧಾಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಪ್ರಸ್ತಾಪ ಮಾಡಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ನೇತೃತ್ವದಲ್ಲಿ ತೋಟಗಾರಿಕಾ ಸಚಿವರು, ವಿಮಾಕಂಎಪನಿ ಮತ್ತು ದಕ ಹಾಗೂ ಉಡುಪಿ ಜಿಲ್ಲೆಯ ಶಾಸಕರ ಸಭೆಯನ್ನು ನಡೆಸುವುದಾಗಿ ತೀರ್ಮಾನವನ್ನು ಕೈಗೊಳ್ಳಲಾಯಿತು. […]

DAKSHINA KANNADA HOME LATEST NEWS

ಮಂಗಳೂರು: ಡಿ.11ರವರೆಗೆ ಇಂಡಿಗೊ ವಿಮಾನಗಳು ರದ್ದು

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿನನಿತ್ಯ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಯಾನ ಡಿ.8 ರಿಂದ 11ರ ತನಕ ರದ್ದಾಗಿದೆ. ಮಂಗಳೂರಿಗೆ ದಿನನಿತ್ಯ ಆಗಮಿಸುವ ಇಂಡಿಗೊದ ಬೆಂಗಳೂರು -ಮಂಗಳೂರು ( 6ಇ 6858)ಬೆಳಗ್ಗೆ 7:10, ಮುಂಬೈ -ಮಂಗಳೂರು(6ಇ 6674) ಬೆಳಗ್ಗೆ 8:40, ಬೆಂಗಳೂರು -ಮಂಗಳೂರು (6ಇ109) ಸಂಜೆ 5:20 ಮತ್ತು ಬೆಂಗಳೂರು -ಮಂಗಳೂರು (6ಇ6119) ರಾತ್ರಿ 10:15ಕ್ಕೆ ಆಗಮಿಸುವ ವಿಮಾನಗಳು ರದ್ದಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 7:40ಕ್ಕೆ ಹೊರಡುವ ಮಂಗಳೂರು -ಬೆಂಗಳೂರು […]

HOME LATEST NEWS STATE

LLR ಗೆ ಅರ್ಜಿ ಸಲ್ಲಿಸಿದ 7 ದಿನಗಳೊಳಗೆ ಕಲಿಕಾ ಪರೀಕ್ಷೆ..!

ಬೆಂಗಳೂರು : ವಾಹನ ಚಾಲನಾ ಕಲಿಕಾ ಪರವಾನಗಿ(ಎಲ್‍ಎಲ್‍ಆರ್) ಪಡೆಯಲು ಅರ್ಜಿ ಸಲ್ಲಿಸಿದವರು ಏಳು ದಿನಗಳ ಒಳಗೆ ಆನ್‍ಲೈನ್ ಮೂಲಕ ಕಲಿಕಾ ಪರೀಕ್ಷೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳುವ ನಿಯಮ ಜ.1 ರಿಂದ ಜಾರಿಗೆ ಬರಲಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಎ.ಎಂ.ಯೋಗೀಶ್ ತಿಳಿಸಿದ್ದಾರೆ. ವಾಹನ ಚಾಲನೆ ಕಲಿಯಲು ಅರ್ಜಿ ಹಾಕಿದವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾರೆಯೇ ಎಂಬುದು ಈ ಪರೀಕ್ಷೆಯಲ್ಲಿ ಪತ್ತೆ ಹಚ್ಚಲಾಗುತ್ತದೆ. ಯಾವುದೇ ಸಮಸ್ಯೆ ಇಲ್ಲದವರಿಗೆ ಚಾಲನಾ ಕಲಿಕೆಗೆ ಪರವಾನಗಿ ಸಿಗಲಿದೆ. ಎನ್‍ಐಸಿ ಅಭಿವೃದ್ಧಿ ಪಡಿಸಿರುವ […]

DAKSHINA KANNADA HOME LATEST NEWS

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಾಲ್ವರ ಬಂಧನ

ಮಂಗಳೂರು: ನಗರದ ಸಿಸಿಬಿ ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ, 50 ಲಕ್ಷ ರೂ. ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೈಂದೂರು ನಾವುಂದದ ಮುಹಮ್ಮದ್ ಶಿಯಾಬ್ ಯಾನೆ ಶಿಯಾಬ್, ಉಳ್ಳಾಲ ನರಿಂಗಾನದ ಮುಹಮ್ಮದ್ ನೌಷದ್ ಯಾನೆ ನೌಷದ್ , ಮಂಗಳೂರು ಕಸಬಾ ಬೆಂಗ್ರೆಯ ಇಮ್ರಾನ್ ಯಾನೆ ಇಂಬ, ಮತ್ತು ಬಂಟ್ವಾಳ ಬ್ರಹ್ಮರ ಕೊಟ್ಲುವಿನ ನಿಸಾರ್ ಅಹಮ್ಮದ್ ಯಾನೆ ನಿಸಾರ್ […]