Tag: ಕೆನರಾಟಿವಿ

DAKSHINA KANNADA HOME LATEST NEWS

ಕಡಬ: ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ತಮ್ಮ- ನರಳಾಡಿ ಪ್ರಾಣ ಬಿಟ್ಟ ಅಣ್ಣ

ಕಡಬ: ಕೌಟುಂಬಿಕ ಕಲಹದಲ್ಲಿ ಸ್ವಂತ ಅಣ್ಣನನ್ನೇ ತಮ್ಮನೊಬ್ಬ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಬಜಕರೆ ಬಳಿ ರೈಲ್ವೇ ಟ್ರಾಕ್ ನಲ್ಲಿ ನಡೆದಿದೆ. ಬೆಂಕಿಯಿಂದ ಗಂಭೀರ ಗಾಯಗೊಂಡ ಅಣ್ಣ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ತಮ್ಮನನ್ನು ಮಂಗಳೂರು ವಿಭಾಗದ ರೈಲ್ವೇ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಆತನ ತಮ್ಮ ನಿಂಗಪ್ಪ (21) […]

DAKSHINA KANNADA HOME LATEST NEWS

ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರಿಂದ ದಾಳಿ

ವಿಟ್ಲ: ಗುಡ್ಡೆಯಲ್ಲಿ ಕೋಳಿ ಅಂಕ ನಡೆಸುತ್ತಿದ್ದಾಗ ವಿಟ್ಲ ಪೊಲೀಸರು ದಿಢೀರ್‌ ಪೊಲೀಸ್‌ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೋಳಿ ಸಮೇತ ಆರೋಪಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿರುವ ಪೊಲೀಸರು, ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಹರೆಬೆಟ್ಟು ಎಂಬ ಗುಡ್ಡೆಯಲ್ಲಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿದೆ. ಈ ವೇಳೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ತಮ್ಮ ಸಿಬ್ಬಂದಿಯೊಂದಿಗೆ ಮರೆಯಲ್ಲಿ ನಿಂತು ಗಮನಿಸಿದಾಗ ಸದ್ರಿ ಗುಡ್ಡೆಯ ಸ್ಥಳದಲ್ಲಿ ಕೆಲವರು ಗುಂಪು ಸೇರಿ […]

DAKSHINA KANNADA HOME LATEST NEWS

ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಪೋಸ್ಟ್‌: ಯತೀಶ್‌ ಪೆರುವಾಯಿ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಹಂಚಿಕೊಂಡಿದ್ದ ಯುವಕನೋರ್ವನ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ 3 ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು […]

DAKSHINA KANNADA HOME LATEST NEWS

ಭಾರಿ ಮಳೆ ಹಿನ್ನೆಲೆ: ದ.ಕ ಶಾಲೆಗಳಿಗೆ ಮೇ.31 ರಂದು ರಜೆ

ಮಂಗಳೂರು: ಕಳೆದ 24 ತಾಸುಗಳಲ್ಲಿ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿದೆ. ಇದೇ ಹವಾಮಾನ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆ (ಮೇ. 31ರಂದು) ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

DAKSHINA KANNADA HOME LATEST NEWS STATE

ಕರಾವಳಿ ಪೊಲೀಸ್‌ ಇಲಾಖೆಗೆ ಭರ್ಜರಿ ಸರ್ಜರಿ ಎಸ್ಪಿ ಹಾಗೂ ಪೊಲೀಸ್‌ ಕಮೀಷನರ್‌ ಎತ್ತಂಗಡಿ

ಮಂಗಳೂರು: ಕರಾವಳಿಯಲ್ಲಿ ನಡೆದ ಕೋಮುಹತ್ಯೆಯನ್ನು ಹತ್ತಿಕ್ಕುವಲ್ಲಿ ವಿಫಲವಾದ ಪೊಲೀಸ್‌ ಇಲಾಖೆಗೆ ರಾಜ್ಯ ಸರ್ಕಾರ ಸರ್ಜರಿ ಮಾಡಿದ್ದು, ಇದರ ಮೊದಲ ಭಾಗವಾಗಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗ್ರವಾಲ್‌ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯನ್ನು  ವರ್ಗಾವಣೆ ಮಾಡಲಾಗಿದೆ.  ನೂತನ ಪೊಲೀಸ್‌ ಆಯುಕ್ತರಾಗಿ ಸುಧೀರ್‌ ಕುಮಾರ್‌ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು, ಎಸ್ಪಿ ಸ್ಥಾನಕ್ಕೆ ಹಾಲಿ ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್‌ ಕೆ ಅವರನ್ನು ನೇಮಿಸಲಾಗಿದೆ. 2010 ನೇ ಬ್ಯಾಚ್‌ನ ಐಪಿಎಸ್‌ […]

DAKSHINA KANNADA HOME LATEST NEWS

ಬಂಟ್ವಾಳ: ಅಬ್ದುಲ್‌ ಕೊಲೆ ಪ್ರಕರಣ- ಸ್ಪೀಕರ್‌ ಯು.ಟಿ ಖಾದರ್‌ ಖಂಡನೆ

ಬಂಟ್ವಾಳ: ಕೊಳತ್ತಮಜಲು ಬಳಿ ಇಬ್ಬರು ಮುಸ್ಲಿಂ ಯುವಕರ ಹಲ್ಲೆ ನಡೆಸಿದ ಪರಿಣಾಮ ಒಬ್ಬರು ದಾರುಣವಾಗಿ ಮೃತಪಟ್ಟ ಘಟನೆಯನ್ನು ಪವಿತ್ರ ಮದೀನಾದಲ್ಲಿರುವ ಸಭಾಧ್ಯಕ್ಷ ಯು.ಟಿ.ಖಾದರ್ ಬಲವಾಗಿ ಖಂಡಿಸಿದ್ದಾರೆ. ಕಳೆದ ಹಲವಾರು ದಿವಸಗಳಿಂದ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವ ರೌಡಿಗಳು,ಕೋಮು ಪ್ರಚೋದಿತ ಹೇಳಿಕೆಗಳನ್ನು ನೀಡುವವರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹುಟ್ಟಿಸುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರೂ,ಇಲಾಖೆ ನಿರ್ಲಕ್ಷ್ಯತನ ವಹಿಸಿರುವುದೇ ಮತ್ತೆ ಅಹಿತಕರ ಘಟನೆ ಮರುಕಳಿಸಲು ಕಾರಣವಾಗಿರಬಹುದು ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಇನ್ನಾದರೂ ಈ […]

COMMUNITY NEWS HOME LATEST NEWS

ವಿಟ್ಲ: ದೇಲಂತಬೇಟ್ಟು ಚರ್ಚ್‌ಗೆ ನೂತನ ಧರ್ಮಗುರು ಆಗಮನ- ವಂ. ಸುನೀಲ್‌ ಪಿಂಟೋಗೆ ವಿದಾಯ

ವಿಟ್ಲ: ಸಂತ ಪೌಲರ ದೇವಾಲಯ ದೇಲಂತ ಬೇಟ್ಟು ಇಲ್ಲಿಗೆ ನೂತನ ಧರ್ಮ ಗುರುಗಳಾಗಿ ಫಾದರ್ ರಿಚಾರ್ಜ್ ಡಿಸೋಜ ಅವರು ಮೇ 27 ರಂದು ಆಗಮಿಸಿದರು. ಈ ವೇಳೆ ಅವರನ್ನು ಭಕ್ತಾದಿಗಳು ಸ್ವಾಗತಿಸಿದರು. ನಿರ್ಗಮಿತ ಧರ್ಮಗುರು ವಂ. ಸುನೀಲ್‌ ಅವರು ನೂತನ ಧರ್ಮಗುರುಗಳಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮಿತ ಧರ್ಮಗುರುಗಳಿಗೆ ವಿದಾಯ ಸಂತ ಪೌಲರ ದೇವಾಲಯದಲ್ಲಿ ಆರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಧರ್ಮಗುರು ವಂ. ಸುನೀಲ್‌ ಅವರನ್ನು ಚರ್ಚ್‌ ಭಕ್ತಾಧಿಗಳು ಭಾರವಾದ ಮನಸ್ಸಿನಿಂದ ವಿದಾಯ ಹೇಳಿದರು. ಈ ವೇಳೆ ಅವರು […]

COMMUNITY NEWS HOME INETRNATIONAL LATEST NEWS

267ನೇ ಪೋಪ್‌ ಆಗಿ ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ನೇಮಕ

ವ್ಯಾಟಿಕನ್‌ ಸಿಟಿ: ಕಾರ್ಡಿನಲ್‌ ರೋಬರ್ಟ್‌ ಫ್ರಾನ್ಸಿಸ್‌ ಅವರು 267ನೇ ನೂತನ ಪೋಪ್‌ ಆಗಿ ಆಯ್ಕೆಯಾಗಿದ್ದಾರೆ. ಅವರನ್ನು ಲೀಯೋ XIV ಆಗಿ ಮರುನಾಮಕರಣ ಮಾಡಲಾಗಿದೆ. ಅಮೇರಿಕ ಮೂಲದವರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತಿದೆ…..     ಮತದಾನದ ವೇಳಿನ ದೃಶ್ಯ

DAKSHINA KANNADA HOME LATEST NEWS

ಸುಹಾಸ್ ಶೆಟ್ಟಿ ನಿವಾಸಕ್ಕೆ ಮೇ 11ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಭೇಟಿ

ಮಂಗಳೂರು: ಇತ್ತೀಚಿಗೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹಾಗೂ ರೌಡಿ ಶೀಟರ್ ಸುಹಾಸ್ ಶೆಟ್ಟಿ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ಜೆ. ಪಿ. ನಡ್ಡಾ ಮೇ 11 ರಂದು ಭೇಟಿ ನೀಡಲಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಜೆ. ಪಿ. ನಡ್ಡಾ ಮೇ11 ಮತ್ತು 12 ರಂದು ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದ ವೇಳೆ ಸುಹಾಸ್ ಶೆಟ್ಟಿ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಮೇ 11 ರಂದು ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೂ […]

COMMUNITY NEWS HOME INETRNATIONAL LATEST NEWS

ನೂತನ ಪೋಪ್‌ ಆಯ್ಕೆ: ವ್ಯಾಟಿಕನ್‌ ಚಿಮಣಿಯಿಂದ ಬಿಳಿ ಹೊಗೆ

ವ್ಯಾಟಿಕನ್ ಸಿಟಿ: ಪೋಪ್‌ ಫ್ರಾನ್ಸಿಸ್‌ ನಿಧನದಿಂದ ತೆರವಾದ ಪೋಪ್‌ ಸ್ಥಾನಕ್ಕೆ ಮತ್ತೋರ್ವರು ಆಯ್ಕೆಯಾಗಿದ್ದಾರೆ. ಇದರ ಸಂಕೇತವಾಗಿ ಕೆಲವೇ ಹೊತ್ತಿನ ಮುಂಚೆ ಚಿಮಣಿ ಮೂಲಕ ಬಿಳಿ ಹೊಗೆ ಹೊರ ಸೂಸಿದೆ. ಇಂದು ಬೆಳಗ್ಗೆ ಇಲ್ಲಿನ ಸಿಸ್ಟೈನ್ ಚಾಪೆಲ್‌ನ ಚರ್ಚ್ ಚಿಮಣಿಯಿಂದ ಕಪ್ಪು ಹೊಗೆ ಹೊರಬಂದಿತ್ತು. ಇದೀಗ ಮತ್ತೆ ನಡೆದ ಗೌಪ್ಯ ಮತದಾನದಲ್ಲಿ ನೂತನ ಪೋಪ್‌ ಆಯ್ಕೆಯಾದ ಬಗ್ಗೆ ಮಾಹಿತಿ ಹೊರಬಿದ್ದಿದೆ. ವಿಶ್ವದ ನಾನಾ ದೇಶಗಳನ್ನು ಪ್ರತಿನಿಧಿಸುವ 133 ಕಾರ್ಡಿನಲ್‌ಗಳು ನೂತನ ಪೋಪ್ ಅವರನ್ನು ಆಯ್ಕೆ ಮಾಡುತ್ತಾರೆ. ಪೋಪ್ ಆಗಿ […]