Tag: ಕೆನರಾಟಿವಿ

HOME LATEST NEWS

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡ್‌ನಲ್ಲಿ ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ

ಬಂಟ್ವಾಳ, ಜುಲೈ 6: ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟರಿಗೆ (ಬಿ.ಎಲ್.ಎ) ಮತ್ತು ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡ್‌ನ ಕಾಂಗ್ರೆಸ್ ಕಚೇರಿಯಲ್ಲಿ ‘ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ’ವನ್ನು ತೆರೆಯಲಾಗಿದೆ. ಮಾಜಿ ಸಚಿವ ಬಿ. ರಮಾನಾಥ ರೈ ಅವರು ಈ ಕೇಂದ್ರವನ್ನು ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಬಿ. ರಮಾನಾಥ ರೈ, “ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ತಡೆಯಲು ಮತ್ತು ಅರ್ಹ […]

COMMUNITY NEWS LATEST NEWS

ನಿಡ್ಡೋಡಿ ಚರ್ಚ್‌ನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೂಡಬಿದ್ರೆ: ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಜುಲೈ 5 ರವಿವಾರದಂದು ಬೆಳಗ್ಗಿನ ಪವಿತ್ರ ಬಲಿಪೂಜೆಯ ನಂತರ, ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ನಿಡ್ಡೋಡಿ ಘಟಕದ ನೇತೃತ್ವದಲ್ಲಿ ಒಂಬತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಚರ್ಚಿನ ಧರ್ಮಗುರುಗಳಾದ ವಂದನೀಯ ಲಿಯೋ ವಿಲಿಯಂ ಲೋಬೊ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, “ವಿದ್ಯಾರ್ಥಿಗಳು ನಿರಂತರ ಶ್ರಮ ಮತ್ತು ಶಿಸ್ತಿನಿಂದ ಉನ್ನತ ಸಾಧನೆ ಮಾಡಲು ಸಾಧ್ಯ. ಯುವ ಪ್ರತಿಭೆಗಳು […]

LATEST NEWS

ಸೈಂಟ್ ರೀಟಾ ವಿದ್ಯಾ ಸಂಸ್ಥೆ ವಿಟ್ಲ: 2026-27ನೇ ಸಾಲಿನ ಪೋಷಕರ ಸಭೆ ಅತ್ಯಂತ ವೈಭವದಿಂದ ಸಂಪನ್ನ

ವಿಟ್ಲ : ಸೈಂಟ್ ರೀಟಾ ವಿದ್ಯಾ ಸಂಸ್ಥೆಯ 2026-27ನೇ ಸಾಲಿನ ಪೋಷಕರ ಸಭೆಯು ಜುಲೈ 4, 2026 ರ ಶನಿವಾರದಂದು ಶಾಲಾ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ ಜರುಗಿತು. ದೀಪ ಪ್ರಜ್ವಲನೆ ಹಾಗೂ ಸಾಂಸ್ಕೃತಿಕ ಚಾಲನೆ ಶಾಲಾ ವಿದ್ಯಾರ್ಥಿಗಳ ಭಕ್ತಿಪೂರ್ವಕ ಪ್ರಾರ್ಥನೆ ಯೊಂದಿಗೆ ಸಭೆ ಆರಂಭವಾಯಿತು. ತದನಂತರ ವಿದ್ಯಾರ್ಥಿಗಳು ತಮ್ಮ ಆಕರ್ಷಕ ಸ್ವಾಗತ ನೃತ್ಯದ ಮೂಲಕ ವೇದಿಕೆಯಲ್ಲಿದ್ದ ಅತಿಥಿ ಅಭ್ಯಾಗತರನ್ನು ಅದ್ಭುತವಾಗಿ ಸ್ವಾಗತಿಸಿ ಗೌರವಿಸಿದರು. ಗಣ್ಯರು ಜ್ಯೋತಿಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಉದ್ಯುಕ್ತ ಚಾಲನೆ ನೀಡಿದರು. […]

LATEST NEWS

ಪ್ರತಿಮ ಕುಮಾರ್ ಕೆ.ಎಸ್. ಅವರಿಗೆ ಅಮೆರಿಕಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ

ಮಂಗಳೂರು: ಸಮಾಜ ಸೇವಾ ಕ್ಷೇತ್ರದಲ್ಲಿ ಅವರು ಮಾಡಿರುವ ಗಣನೀಯ ಮತ್ತು ನಿಸ್ವಾರ್ಥ ಸಾಧನೆಯನ್ನು ಗುರುತಿಸಿ, ಮಂಗಳೂರಿನ ಪ್ರಮುಖ ಸಾಮಾಜಿಕ ಮತ್ತು ಶೈಕ್ಷಣಿಕ ಮುಖಂಡರಾದ ಶ್ರೀ ಪ್ರತಿಮ ಕುಮಾರ್ ಕೆ. ಎಸ್. ಅವರಿಗೆ ಜಾಗತಿಕ ಮಟ್ಟದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಪಾಂಡಿಚೇರಿಯಲ್ಲಿ ಶನಿವಾರ ನಡೆದ ಪ್ರತಿಷ್ಠಿತ ಸಮಾರಂಭದಲ್ಲಿ ಜಾಗತಿಕ ಮಟ್ಟದ ಯುನೈಟೆಡ್ ಅಮೆರಿಕಾ ಯೂನಿವರ್ಸಿಟಿಯು ಈ ಅತ್ಯುನ್ನತ ಗೌರವ ಡಾಕ್ಟರೇಟ್ ಅನ್ನು ನೀಡಿ ಗೌರವಿಸಿದೆ ಶ್ರೀ ಪ್ರತಿಮ ಕುಮಾರ್ ಕೆ.ಎಸ್. ಅವರು ಭಾರತ್ ಸ್ಕೌಟ್ ಮತ್ತು […]

LATEST NEWS

ಬೋಳೂರು ಜಾರಂದಾಯ ದೈವಸ್ಥಾನ ಪರಿಸರದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ: ಕುಡ್ಸೆಂಪ್ ಎಂಡಿ ಭೇಟಿಯಾದ ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ನಗರದ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಆಸುಪಾಸಿನ ಪರಿಸರದಲ್ಲಿ ಸ್ಥಳೀಯರ ಪ್ರಮುಖ ಸಮಸ್ಯೆಯಾಗಿರುವ ಒಳಚರಂಡಿ (ಡ್ರೈನೇಜ್) ವ್ಯವಸ್ಥೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಜಿಲ್ಲಾಧಿಕಾರಿ ದರ್ಶನ್ ಅವರ ಸಮ್ಮುಖದಲ್ಲಿ ಕುಡ್ಸೆಂಪ್ (KUIDFC) ವ್ಯವಸ್ಥಾಪಕ ನಿರ್ದೇಶಕರಾದ ಭೂಬಾಲನ್ ಟಿ. ಅವರನ್ನು ಖುದ್ದಾಗಿ ಭೇಟಿ ಮಾಡಿದ ಶಾಸಕರು, ಯೋಜನೆಗೆ ಅಗತ್ಯ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದರು ಕಳೆದ 75 ವರ್ಷಗಳಿಂದಲೂ ಈ ಭಾಗದಲ್ಲಿ ಸರಿಯಾದ ಡ್ರೈನೇಜ್ […]

LATEST NEWS

ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು ಮೆಡಿಕಲ್ ಕಾಲೇಜು ಅಧೀನಕ್ಕೊಳಪಡಿಸಿ: ಸಚಿವ ಯು.ಟಿ. ಖಾದರ್‌ಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರಿನ ಸರಕಾರಿ ಆಸ್ಪತ್ರೆಯನ್ನು ಪುತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಯ ಅಧೀನಕ್ಕೊಳಪಡಿಸುವಂತೆ ಶಾಸಕ ಅಶೋಕ್‌ರೈ ಅವರು ರಾಜ್ಯ ಆರೋಗ್ಯ ಸಚಿವ ಯು ಟಿ ಖಾದರ್ ಅವರಿಗೆ ಮನವಿ ಮಾಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಯಾದ ಶಾಸಕರು ಈಗಾಗಲೇ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ. ೨೦೨೭ ರಲ್ಲಿಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭ ವಾಗಲಿದ್ದು ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ. ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣವಾಗುತತಿರುವ ಹಂತದಲ್ಲೇ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಪ್ರವೇಶಾತಿಯೂ […]

LATEST NEWS

119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಯಶಸ್ವಿ: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಅತ್ಯಗತ್ಯ – ಪುಷ್ಪರಾಜ್ ಬಿ.ಎನ್

ಮಂಗಳೂರು: ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಆಸಕ್ತಿ ಮತ್ತು ಅಭಿರುಚಿಯನ್ನು ಬೆಳೆಸಿಕೊಳ್ಳಲು ಓದುವ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದು ಅತ್ಯಂತ ಪೂರಕ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ತಿಳಿಸಿದ್ದಾರೆ. ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ ಜೂನ್ 27ರ ಶನಿವಾರದಂದು ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಸಾಹಿತ್ಯದ […]

LATEST NEWS

ಕೋಳಿ ಫಾರಂಗಳಿಗೆ ವಿದ್ಯುತ್ ಸಂಪರ್ಕ: ಕಂದಾಯ ಇಲಾಖೆಯಿಂದಲೇ NOC ನೀಡಲು ಡಿಸಿಎಂಗೆ ಎಂಎಲ್ಸಿ ಕಿಶೋರ್ ಕುಮಾರ್ ಮನವಿ.

ಬೆಂಗಳೂರು: ಕೋಳಿ ಸಾಕಾಣಿಕೆ ಫಾರಂ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಗೊಂದಲಗಳನ್ನು ನಿವಾರಿಸುವಂತೆ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರನ್ನು ಖುದ್ದಾಗಿ ಭೇಟಿಯಾಗಿ ಅವರು ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಗ್ರಾಮೀಣ ಭಾಗದ ಅನೇಕ ರೈತರು ಮತ್ತು ಯುವಕರು ಸ್ವ ಉದ್ಯೋಗ ಹಾಗೂ ಕೃಷಿ ಆಧಾರಿತ ಆದಾಯ ವೃದ್ಧಿಗಾಗಿ […]

DAKSHINA KANNADA HOME LATEST NEWS

ಜು.3 ರಂದು ಶಾಲಾ & ಕಾಲೇಜಿಗೆ ರಜೆ: ತರಗತಿ ನಡೆದರೆ ಕಾನೂನು ಕ್ರಮ ಎಂದ ಡಿಸಿ

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಸರಕಾರಿ ಪ್ರಾಥಮಿಕ /ಪ್ರೌಢ ಶಾಲೆಗಳು ಮತ್ತು ಖಾಸಗಿ ವಿದ್ಯಾ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.3 ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಆದೇಶ ಮೀರಿ ತರಗತಿ ನಡೆಸಿದರೆ ಕಠಿಣ ಕ್ರಮ ಜರಗಿಸಲಾಗುವುದು ಎಂದು ಇದೇ ಆದೇಶದಲ್ಲಿ ತಿಳಿಸಿದ್ದಾರೆ. ಜೊತೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ನೀರು ಇರುವ ತಗ್ಗು ಪ್ರದೇಶ ಹಾಗೂ ಕೆರೆ& ನದಿ ತೀರದ […]

LATEST NEWS

ಪ್ರಕೃತಿಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಚಂಚಲ ತೇಜೋಮಯ

ಮಂಗಳೂರು: ಪ್ರಕೃತಿಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬ ಮಾನವನ ಆದ್ಯ ಕರ್ತವ್ಯವಾಗಿದೆ ಎಂದು ಯಶಸ್ವಿನಿ ಮಹಿಳಾ ಮಂಡಳಿಯ ಸ್ಥಾಪಕಾಧ್ಯಕ್ಷರು ಹಾಗೂ ಶ್ರೇಷ್ಠ ಸಹಕಾರಿ ಪುರಸ್ಕೃತರಾದ ಶ್ರೀಮತಿ ಚಂಚಲ ತೇಜೋಮಯ ತಿಳಿಸಿದ್ದಾರೆ. ಯಶಸ್ವಿನಿ ಮಹಿಳಾ ಮಂಡಲದ ವತಿಯಿಂದ ಉರ್ವ ಸ್ಟೋರ್ ಸುತ್ತಮುತ್ತ ಗಿಡಗಳನ್ನು ನೆಡುವ ಹಾಗೂ ಸಾರ್ವಜನಿಕರಿಗೆ ಗಿಡಗಳನ್ನು ಹಂಚುವ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತದನಂತರ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ‘ವನಿತಾಂಗಣ’ದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಕಲ ಜೀವರಾಶಿಗಳಿಗೂ ನೀರು […]