Tag: ಕೆನರಾಟಿವಿ

DAKSHINA KANNADA HOME LATEST NEWS

ಕ್ರೈಸ್ತ ಸನ್ಯಾಸಿಯರ ಬಂಧನ ಖಂಡಿಸಿ ಆ.4ರಂದು ಕಥೋಲಿಕ್‌ ಸಭಾದಿಂದ ಬೃಹತ್‌ ಪ್ರತಿಭಟನೆ

ಮಂಗಳೂರು: ಛತ್ತೀಸ್‌ಗಢದಲ್ಲಿ ಕ್ರೈಸ್ತ ಸನ್ಯಾಸಿನಿಯರನ್ನು ಮತಾಂತರ ಆರೋಪ ಹೊರಿಸಿ ಬಂಧಿಸಿರುವುದು ಖಂಡನೀಯ. ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಆ.4 ರಂದು ಮಂಗಳೂರಿನಲ್ಲಿ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ (ರಿ) ಇದರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಅಧ್ಯಕ್ಷ ಸಂತೋಷ್ ಡಿಸೋಜಾ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ದೇಶಾದ್ಯಂತ ಕ್ರೈಸ್ತ ಧರ್ಮಗುರುಗಳು, ಧರ್ಮ ಭಗಿನಿಯರು ಹಾಗೂ ಕ್ರೈಸ್ತ ಸಮುದಾಯದವರು ಶಾಂತಿ ಪ್ರಿಯರಾಗಿದ್ದು ದೇಶ ಭಕ್ತಿಯನ್ನು ಹೊಂದಿದವರಾಗಿರುತ್ತಾರೆ. […]

DAKSHINA KANNADA HOME LATEST NEWS

ಕೊಣಾಜೆ: ಯುವತಿ ನಾಪತ್ತೆ

ಕೊಣಾಜೆ:  ಇಲ್ಲಿನ ಠಾಣಾ‌ ವ್ಯಾಪ್ತಿಯ ಮಹಿಳಾ ಆಶ್ರಯ ಕೇಂದ್ರದಲ್ಲಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಒಡಿಷಾ ಮೂಲದ ತ್ರಿಶಾ (22) ಎಂಬಾಕೆಯೇ ನಾಪತ್ತೆಯಾದ ಯುವತಿಯಾಗಿದ್ದು, ಈಕೆ ಜುಲೈ 30ರಂದು ರಾತ್ರಿ 8 ಗಂಟೆಯ ಸುಮಾರಿಗೆ ನಾಪತ್ತೆಯಾಗಿದ್ದಾಳೆ.  ಕಳೆದ‌ ವರ್ಷ ತ್ರಿಶಾ ಉದ್ಯೋಗದ ಹುಡುಕಾಟದಲ್ಲಿ ಮಂಗಳೂರಿಗೆ ಬಂದಿದ್ದಳು ಎನ್ನಲಾಗಿದ್ದು‌ ಬಳಿಕ, ಇತ್ತೀಚೆಗೆ ಮಡಿಪುವಿನ ಪ್ರಜ್ಞಾ ಆಶ್ರಯ ಮಂದಿರದಲ್ಲಿ ವಾಸವಾಗಿದ್ದಳು. ಈಕೆ ಜುಲೈ 30 ರಂದು ರಾತ್ರಿ ಅಡುಗೆ ಕೋಣೆಯ ಬಾಗಿಲು ತೆರೆದು ಕೌಂಪೌಂಡು ಹಾರಿ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ. […]

HOME

ಬೆಂಗಳೂರು: ಸೇಂಟ್ ಜೋಸೆಫ್ಸ್ ವಿವಿಯಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ (OBE) ಕಾರ್ಯಾಗಾರ

ಬೆಂಗಳೂರು: ವೇಗವಾಗಿ ಬದಲಾಗುತ್ತಿರುವ ಶಿಕ್ಷಣ ಮತ್ತು ಉದ್ಯೋಗ ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು, ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯವು 2025 ರ ಜುಲೈನಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ (OBE) ಕುರಿತು ಕಾರ್ಯಾಗಾರ ಸರಣಿಯನ್ನು ಆಯೋಜಿಸಿತ್ತು. ಈ ಕಾರ್ಯಾಗಾರಗಳು ಸ್ಪಷ್ಟ ಕಲಿಕಾ ಫಲಿತಾಂಶಗಳನ್ನು ವ್ಯಾಖ್ಯಾನಿಸಲು ಮತ್ತು ಅವುಗಳನ್ನು ಪಠ್ಯಕ್ರಮ, ಬೋಧನೆ ಮತ್ತು ಮೌಲ್ಯಮಾಪನದೊಂದಿಗೆ ಜೋಡಿಸಲು ಬೋಧಕರಿಗೆ ಸಹಾಯ ಮಾಡಲು ಉದ್ದೇಶಿಸಲಾಗಿತ್ತು. ಪ್ರೊ. ಡಾ. ರೊನಾಲ್ಡ್ ಜೆ. ಮಸ್ಕರೇನ್ಹಸ್ ಅವರ ನಾಯಕತ್ವದಲ್ಲಿ ಮತ್ತು ಡಾ. ಡಬ್ಲ್ಯೂ. ಜ್ಯೋತಿ ಅವರ ಸಂಯೋಜನೆಯಲ್ಲಿ ನಡೆದ ಈ […]

DAKSHINA KANNADA HOME LATEST NEWS

ಬಂಟ್ವಾಳ : ಅಡಿಕೆ ಕಳ್ಳನ ಬಂಧನ- ಆರೋಪಿಗೆ ನ್ಯಾಯಾಂಗ ಬಂಧನ

ಬಂಟ್ವಾಳ : ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ನಡೆದಿದ್ದ ಒಣ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಪೈಚಾರು ನಿವಾಸಿ ಸತೀಶ್ (29) ಎಂದು ತಿಳಿದುಬಂದಿದೆ. ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ 22 ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ 2.20 ಲಕ್ಷ ರೂ. ಮೌಲ್ಯದ ಒಣ ಅಡಿಕೆ ಕಳವಾಗಿರುವ ಬಗ್ಗೆ ಜುಲೈ 23 ರಂದು ಬಂಟ್ವಾಳ ಗ್ರಾಮಾಂತರ […]

HOME

ಮಂಗಳೂರು: 1300 ಕೋ.ರೂ ವ್ಯವಹಾರದ 113 ವರ್ಷಗಳ ಇತಿಹಾಸದ MCC ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ

ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಸಹಕಾರ ರತ್ನ ಅನಿಲ್ ಲೋಬೊ ಅವರು ತಿಳಿಸಿದರು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಕರ್ನಾಟಕದ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯು ಪ್ರಸ್ತುತ ಆಡಳಿತ […]

DAKSHINA KANNADA HOME LATEST NEWS

ಮಂಗಳೂರು: ಜು.22 ರ ರಾತ್ರಿಯಿಂದ ಕೂಳೂರು ರಸ್ತೆ ದುರಸ್ಥಿ ಕಾಮಗಾರಿ

ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜು.22 ರ ಮಂಗಳವಾರ ರಾತ್ರಿ 8-00 ಗಂಟೆಯಿಂದ ಜು.25ರ ಗುರುವಾರ ಬೆಳಿಗ್ಗೆ 8-00 ರವರೆಗೆ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ. ಹಾಗಾಗಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಕೂಳೂರು ಹೊಸ ಸೇತುವೆಯಲ್ಲಿ ದ್ವಿಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತದೆ. ಆದರಿಂದ ಕೋಡಿಕಲ್ ಕ್ರಾಸ್‌ನಿಂದ ಕೆ.ಐ.ಓ.ಸಿ.ಎಲ್ ಜಂಕ್ಷನ್‌ವರೆಗೆ ಅದೇ ರೀತಿ ಪಣಂಬೂರು ಜಂಕ್ಷನ್‌ನಿಂದ ಕೆ.ಐ.ಓ.ಸಿ.ಎಲ್ ಜಂಕ್ಷನ್‌ವರೆಗೆ ಸಂಚಾರ ದಟ್ಟಣೆ ಹೆಚ್ಚಾಗಬಹುದಾಗಿದೆ. ಆದ್ದರಿಂದ […]

DAKSHINA KANNADA HOME LATEST NEWS

ಮಳೆ ಹಿನ್ನೆಲೆ: ದ. ಕ ಜಿಲ್ಲೆಯ ಶಾಲೆ-ಪದವಿ ಪೂರ್ವ ಕಾಲೇಜಿಗೆ ಜು.17 ರಂದು ರಜೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ ದ. ಕ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ,  ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ (ಜುಲೈ 17) ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

DAKSHINA KANNADA HOME LATEST NEWS

ಭಾರೀ ಮಳೆ: ಉಳ್ಳಾಲ ತಾಲೂಕಿನ ಶಾಲೆಗಳಿಗೆ ಇಂದು ರಜೆ

ಮಂಗಳೂರು: ಉಳ್ಳಾಲ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ15.07.2025 ರಂದು ರಜೆ ಘೋಷಿಸಲಾಗಿದೆ.

DAKSHINA KANNADA HOME

ಬೆಂಗಳೂರು: ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯದ IT ಸಂಘಗಳ ಅಧಿಕಾರ ಸ್ವೀಕಾರ 2025-26

ಬೆಂಗಳೂರು: ಕಂಪ್ಯೂಟರ್ ಸೈನ್ಸ್ ವಿಭಾಗ, ಸೈಂಟ್ ಜೋಸೆಫ್‌ ವಿಶ್ವವಿದ್ಯಾಲಯವು, ತನ್ನ ಪ್ರತಿಷ್ಠಿತ ವಿದ್ಯಾರ್ಥಿ ಸಂಘಗಳಾದ ಸೈಬರ್ನೆಟಿಕ್ಸ್ ಅಸೋಸಿಯೇಷನ್ (ಯುಜಿ) ಮತ್ತು ಟೆಕ್ನೋಫೈಟ್ ಅಸೋಸಿಯೇಷನ್ (ಪಿಜಿ)ಗಳ ಉದ್ಘಾಟನೆ ಮತ್ತು ಅಧಿಕಾರ ಸ್ವೀಕಾರ ಸಮಾರಂಭವನ್ನು 9ನೇ ಜುಲೈ 2025ರಂದು, ಪಿಜಿ ಬ್ಲಾಕ್‌ನ ಕ್ಷೇವಿಯರ್ ಸಭಾಂಗಣದಲ್ಲಿ ನಡೆಸಿತು. ಸಮಾರಂಭದಲ್ಲಿ ವಂ. ಡೆನ್ಜಿಲ್ ಲೋಬೋ ಎಸ್.ಜೆ., ಶಾಲಾ ನಿರ್ದೇಶಕ, ಸ್ಕೂಲ್ ಆಫ್ ಐಟಿ; ಡಾ. ಎ.ಎಂ. ಬೋಜಮ್ಮ, ಡೀನ್, ಸ್ಕೂಲ್ ಆಫ್ ಐಟಿ; ಡಾ. ಬಿ.ಜಿ. ಪ್ರಶಾಂತಿ, ಮುಖ್ಯಸ್ಥರು, ಕಂಪ್ಯೂಟರ್ ಸೈನ್ಸ್ ವಿಭಾಗ; […]

DAKSHINA KANNADA HOME

ಬಾಲಿವುಡ್‌ ನಟ ಶಾರೂಖ್‌ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್

ಮಂಗಳೂರು ಜುಲೈ 12. ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್‌ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12 ರಂದು ಘೋಷಣೆ ಮಾಡಿತು. ಈ ಬಹು ನಿರೀಕ್ಷಿತ ಕಾರ್ಯಕ್ರಮವು, ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಮತ್ತು ಸಿನಿಮಾ ಜಗತ್ತಿನ ತಾರೆಗಳು ಭಾಗವಹಿಸಿದ್ದರು.ಈ ಘೋಷಣೆ ವಿಶೇಷ […]