Tag: ಪೆರುವಾಯಿ

DAKSHINA KANNADA HOME LATEST NEWS

ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ- ಪೆರುವಾಯಿಯಲ್ಲಿ 2 ಲಾರಿ ವಶಕ್ಕೆ

ವಿಟ್ಲ: ಕೇರಳದಿಂದ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಎರಡು ಲಾರಿಗಳನ್ನು ವಶಕ್ಕೆ ಪಡೆದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂಧರ್ಭಿಕ ಚಿತ್ರ ಫೆ.25ರಂದು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ಅವರಿಗೆ ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆಯುತ್ತದೆ. ಈ ವೇಳೆ ತಮ್ಮ ಸಿಬ್ಬಂದಿಯೊಂದಿಗೆ ಬಂಟ್ವಾಳ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ […]

DAKSHINA KANNADA HOME LATEST NEWS

ಪೆರುವಾಯಿ: ರಸ್ತೆ ಸಂಪರ್ಕವಿಲ್ಲದ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್‌ ರೈ

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬದಿಯಾರು ಎಂಬಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ರಸ್ತೆ ಸಂಪರ್ಕ ಇಲ್ಲದಾಗಿದ್ದು, ಸ್ಥಳೀಯರ ಬೇಡಿಕೆಯ ಮೇರೆಗೆ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಇದೇ ಸ್ಥಳಿಯರು ಶಾಸಕರ ಬಳಿ ತೆರಳಿ ತಮಗೆ ರಸ್ತೆ ಇಲ್ಲದಿರುವ ಬಗ್ಗೆ ಅಳಲು ತೋಡಿಕೊಂಡಿದ್ದರು. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ […]

DAKSHINA KANNADA HISTORY HOME LATEST NEWS

ನಿಮ್ಮ ಪರ ಪ್ರಚಾರಕ್ಕೆ ರೆಡಿ: ಶಾಸಕ ಅಶೋಕ್ ರೈಗೆ ಪೆರುವಾಯಿ BJP ಕಾರ್ಯಕರ್ತರ ಭರವಸೆ..!

ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆ ನೀಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ […]

DAKSHINA KANNADA HOME LATEST NEWS

ವಿಟ್ಲ: ರಕ್ತದಾನ ಮಾಡಿ ಕುಸ್ವಾರ್ ಹಂಚಿ ಕ್ರಿಸ್ಮಸ್ ಆಚರಿಸಿದ ಸರ್ವಧರ್ಮೀಯರು

ವಿಟ್ಲ: ಒಬ್ಬರ ಜೀವ ಉಳಿಸುವ ಪುಣ್ಯವೇ ಬಂಧುತ್ವ-ಸಹೋದತ್ವ ಎಂದು ಫಾತಿಮಾ ಮಾತೆಯ ದೇವಾಲಯದ ಧರ್ಮಗುರು ವಂ.ಫಾ. ಸೈಮನ್ ಡಿಸೋಜ ಅವರು ಹೇಳಿದರು. ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪೆರುವಾಯಿಯ ಮುಚ್ಚಿರಪದವಿನಲ್ಲಿ ಫಾತಿಮಾ ಮಾತೆಯ ದೇವಾಲಯ ಇದರ ಸ್ತ್ರೀ ಸಂಘಟನೆಯ ನೇತೃತ್ವದಲ್ಲಿ ಹಾಗೂ ಐಸಿವೈಎಂ, ಹ್ಯುಮಾನಿಟಿ ಅಭಿಮಾನಿ ಬಳಗ ವಿಟ್ಲ, ಶ್ರೀ ವಿಷ್ಣುಮೂರ್ತಿ ಗೆಳೆಯರ ಬಳಗ ಮುರುವ-ಮಾಣಿಲ, ಶ್ರೀ ವಿಷ್ಣುಮೂರ್ತಿ ಮಹಿಳಾ ಸಂಘ ಮುರುವ-ಮಾಣಿಲ ಹಾಗೂ ಟಾಸ್ಕ್ ಬಳಗ ಪೆರುವಾಯಿ ಇದರ ಜಂಟಿ ಆಶ್ರಯದಲ್ಲಿ ಬಂಧುತ್ವ ಕ್ರಿಸ್ಮಸ್-2025 ಹಾಗೂ […]

DAKSHINA KANNADA HOME

ಪೆರುವಾಯಿ ಗ್ರಾ.ಪಂ. ಅಭಯ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಭೆ

ಪೆರುವಾಯಿ ಗ್ರಾಮ ಪಂಚಾಯತ್ ನ ಅಭಯ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ ಮತ್ತು ಪರಿವರ್ತನೆ ಕಾರ್ಯಕ್ರಮದಡಿಯಲ್ಲಿ “ಮಾದಕ ವ್ಯಸನ ವಸ್ತು ಮುಕ್ತ ಕರ್ನಾಟಕ” ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಸಂಗಮ ಸಭಾ ಭವನದಲ್ಲಿ ಆಯೋಜಿಸಲಾಗಿತ್ತು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೆಬಿಸ ಇವರು ಮಾತಾಡಿ ಎಲ್ಲಾ ಮನೆಗಳಿಂದ ಒಣಕಸ ವನ್ನು ಘನತ್ಯಾಜ್ಯ ಘಟಕದ ವಾಹನಕ್ಕೆ ನೀಡುವಂತೆ ತಿಳಿಸಿದರು. ಒಕ್ಕೂಟದ ಅಧ್ಯಕ್ಷರಾದ ಶರ್ಮಿಳಾ ಅಧ್ಯಕ್ಷೆ ವಹಿಸಿದ್ದರು. MBK ವನಿತಾ ರವರು ವಾರ್ಷಿಕ ವರದಿ ಮತ್ತು ಜಮಾ-ಖರ್ಚು ನ್ನು ಮಂಡಿಸಿದರು. […]

DAKSHINA KANNADA HOME LATEST NEWS

ವಿಟ್ಲ: ಫಾತಿಮಾ ಮಾತ ಸಮುದಾಯ ಭವನ ಉದ್ಘಾಟನೆ

ವಿಟ್ಲ:  ಎಲ್ಲರ ಸಹಕಾರ ಅನ್ಯೂನ್ಯತೆಯಿಂದ ಸುಂದರ ಸಭಾಭವನ ನಿರ್ಮಾಣಗೊಂಡು ಇಂದು ಲೋಕಾರ್ಪಣೆಗೊಂಡಿದೆ. ಅಭಿವೃದ್ಧಿಯ ಸಂಕೇತವೇ ಈ ಒಂದು ಸಭಾಭವನ ಆಗಿದೆ. ನಮ್ಮೊಳಗಿನ‌ ಸಂಬಂದ ಇನ್ನಷ್ಟು ಗಟ್ಟಿಯಾಗಲಿ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ ರವರು ಹೇಳಿದರು. ಅವರು ಮೇ.೫ರಂದು ಪೆರುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರುವಾಯಿ ಮುಚ್ಚಿರಪದವು ಫಾತಿಮ ಮಾತೆ ದೇವಾಲಯದ ಫಾತಿಮಾ ಮಾತಾ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾರವರು ಮಾತನಾಡಿ ಇದೊಂದು […]