ಸಾಮಾಜಿಕ ಮಾಧ್ಯಮದಲ್ಲಿ ಕೋಮು ಪ್ರಚೋದನಕಾರಿ ಸಂದೇಶ: ಓರ್ವನ ಬಂಧನ
ಮಂಗಳೂರು: ಬಜಪೆಯಲ್ಲಿ 2025ರಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಕೋಮು ಪ್ರಚೋದನಕಾರಿ ಸಂದೇಶ ಹಂಚಿಕೊಂಡ ಆರೋಪಿ ಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಬುಧವಾರ ಹಾಜರು ಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮೂಡುಬೆಳ್ಳೆ ಗ್ರಾಮದ ಪವನ್ ಆಚಾರ್ಯ (22) ಬಂಧಿತ ಆರೋಪಿ. ಆತ ಸಾಮಾಜಿಕ ಮಾಧ್ಯಮ ದಲ್ಲಿ ಕೋಮು ಪ್ರಚೋದಕ ಸಂದೇಶ ಹಂಚಿಕೊಂಡ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 353 (1) (ಸಾರ್ವಜನಿಕ […]









