Tag: ಮಂಗಳೂರು ನಗರ ಪೊಲೀಸ್‌

DAKSHINA KANNADA HOME LATEST NEWS

ಮಂಗಳೂರು: ಅಪಘಾತದಲ್ಲಿ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ ₹ 70 ಲಕ್ಷ ರೂ. ಆರ್ಥಿಕ ನೆರವು

ಮಂಗಳೂರು: ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು, ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ಪೊಲೀಸ್ ಸಿಬ್ಬಂದಿ ದಿವಂಗತ  ಹರೀಶ್ ಜಿ. ಎನ್. ಅವರ ಕುಟುಂಬಕ್ಕೆ ‘ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಇನ್ಶೂರೆನ್ಸ್ ಸ್ಕೀಮ್’ ಅಡಿಯಲ್ಲಿ ಆರ್ಥಿಕ ನೆರವು ನೀಡಿದೆ. ಬ್ಯಾಂಕಿನ ಈ ಬೆಂಬಲ ಉಪಕ್ರಮದ ಭಾಗವಾಗಿ, ಮೃತರ ಕುಟುಂಬಕ್ಕೆ ₹ 70 ಲಕ್ಷ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು. ಮಂಗಳೂರು ನಗರ ಪೊಲೀಸ್ ಕಮಿಷನರ್ ಶ್ರೀ ಸುಧೀರ್ ಕುಮಾರ್ ರೆಡ್ಡಿ, ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ […]

DAKSHINA KANNADA HOME LATEST NEWS

ಇಂದು ಮಂಗಳೂರಿಗೆ CM & DCM: ಸಂಚಾರ ವ್ಯತ್ಯಯ ಸಾಧ್ಯತೆ

ಮಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರರು ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಲ ಮತ್ತು ನರಿಂಗಾನ ಹಾಗೂ ಅಂಬ್ಲಮೊಗರುವಿನಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇವರು ಸಂಚರಿಸುವ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು. ಹಾಗಾಗಿ ಸುಗಮ ಸಂಚಾರದ ದೃಷ್ಟಿಯಿಂದ ತುರ್ತು ಸಂದರ್ಭ ಹೊರತುಪಡಿಸಿ ಈ ಮಾರ್ಗಗಳಲ್ಲಿ ಸಂಚರಿಸದೆ ಬದಲಿ ಮಾರ್ಗ ಉಪಯೋಗಿಸು ವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. ಸಂಚಾರ ದಟ್ಟಣೆಯಾಗುವ ಮಾರ್ಗಗಳು: ಕೆಂಜಾರು ಜಂಕ್ಷನ್, ಮರವೂರು, ಕಾವೂರು, ಬೋಂದೆಲ್, ಪದವಿನಂಗಡಿ, […]

DAKSHINA KANNADA HOME LATEST NEWS

ಡ್ಯೂಟಿಯಲ್ಲಿದ್ದ ಮಂಗಳೂರು ಟ್ರಾಫಿಕ್‌ ಪೊಲೀಸರ ಬೈಕ್‌ ಕಳ್ಳತನ: ಅರ್ಧ ಗಂಟೆಯ ಕೈಚಳಕ

ಮಂಗಳೂರು: ಕರ್ತವ್ಯದಲ್ಲಿದ್ದ ಟ್ರಾಫಿಕ್‌ ಪೊಲೀಸರೊಬ್ಬರು ಪಾರ್ಕ್‌ ಮಾಡಿದ ಅರ್ಧಗಂಟೆಯೊಳಗೆ ಬೈಕು ಕಳವು ನಡೆಸಿದ ಬಗ್ಗೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ ಪುನೀತ್‌ ಬಿ.ವೈ ಎಂಬುವವರು ಮಂಗಳೂರು ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಜ.5 ರಂದು ಮಂಗಳೂರು ಕೆ.ಬಿ.ಕಟ್ಟೆಯಲ್ಲಿ ಸಂಚಾರ ನಿಯಂತ್ರಣ  ಕರ್ತವ್ಯಕ್ಕೆ ನೇಮಿಸಿದಂತೆ ಸಂಜೆ 5:30 ಗಂಟೆಗೆ ತನ್ನ ತಂದೆಯ ಹೆಸರಿನಲ್ಲಿರುವ KA-13-EG 3008  ನೋಂದಣಿಯ ಹೋಂಡಾ ಶೈನ್‌ […]

DAKSHINA KANNADA HOME LATEST NEWS

ಅಕ್ರಮ ದನದ ಮಾಂಸ ಸಾಗಾಟ: ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ- ಪ್ರತ್ಯೇಕ FIR

ಮಂಗಳೂರು:  ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಹಾಗೂ ಅದನ್ನು ತಡೆದು ನಿಲ್ಲಿಸಿದ ಪ್ರಕರಣದ ಬಗ್ಗೆ ಜೊತೆಗೆ ಇದೇ ಹಿನ್ನೆಲೆ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಘಟನೆ ವಿವರ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಡಿ.27 ರಂದು  ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬಾತನು ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ […]

DAKSHINA KANNADA HOME

ತಣ್ಣೀರುಬಾವಿ ಬೀಚ್‌ನಲ್ಲಿ ಇಂದು-ನಾಳೆ ಮ್ಯೂಸಿಕ್ ಫೆಸ್ಟಿವಲ್: ಪೊಲೀಸರಿಂದ ಸಂಚಾರಿ ಸಲಹೆ

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ತಣ್ಣೀರುಬಾವಿ ಬೀಚ್‌ನಲ್ಲಿ  ಜ.3 ಹಾಗೂ 4 ರಂದು ಸಂಜೆ ಮ್ಯೂಸಿಕ್ ಫೆಸ್ಟಿವಲ್, ಕೈಲಾಶ್ ಖೇರ್ ನೈಟ್, ವಿಜಯ ಪ್ರಕಾಶ್ ನೈಟ್ ಕಾರ್ಯಕ್ರಮಗಳು ನಡೆಯಲಿರುತ್ತದೆ. ಸದರಿ ಕಾರ್ಯಕ್ರಮಗಳಿಗೆ  ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವವರಿದ್ದು, ಈ ಸಮಯ ಕೊಟ್ಟಾರಚೌಕಿ – ಪಣಂಬೂರು ರಾಷ್ಟ್ರೀಯ ಹೆದ್ದಾರಿ ಮತ್ತು ತಣ್ಣೀರುಬಾವಿ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇರುತ್ತದೆ. ಮೇಲಿನ ಕಾರ್ಯಕ್ರಮಗಳು ನಡೆಯುವ […]

DAKSHINA KANNADA HOME LATEST NEWS

ಮಂಗಳೂರು: ಹೊಸ ವರ್ಷಾಚರಣೆಗೆ ಪೊಲೀಸ್‌ ಮಾರ್ಗಸೂಚಿ

ಮಂಗಳೂರು: ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇವುಗಳನ್ನು ಎಲ್ಲ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ಕಡ್ಡಾಯವಾಗಿಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ. ಮಾರ್ಗಸೂಚಿಗಳ ವಿವರ ಇಂತಿವೆ *ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. *ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು,ಕಿರುಕುಳವಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ. *ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ಚಾಲನೆ, ವೀಲಿಂಗ್‌ನ ನಡೆಸುವುದು, ಅಸಭ್ಯವರ್ತನೆ, ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. […]

DAKSHINA KANNADA HOME LATEST NEWS

ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಾಲ್ವರ ಬಂಧನ

ಮಂಗಳೂರು: ನಗರದ ಸಿಸಿಬಿ ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ, 50 ಲಕ್ಷ ರೂ. ಮೌಲ್ಯದ ಸುಮಾರು 517.76 ಗ್ರಾಂ ಎಂಡಿಎಂಎ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೈಂದೂರು ನಾವುಂದದ ಮುಹಮ್ಮದ್ ಶಿಯಾಬ್ ಯಾನೆ ಶಿಯಾಬ್, ಉಳ್ಳಾಲ ನರಿಂಗಾನದ ಮುಹಮ್ಮದ್ ನೌಷದ್ ಯಾನೆ ನೌಷದ್ , ಮಂಗಳೂರು ಕಸಬಾ ಬೆಂಗ್ರೆಯ ಇಮ್ರಾನ್ ಯಾನೆ ಇಂಬ, ಮತ್ತು ಬಂಟ್ವಾಳ ಬ್ರಹ್ಮರ ಕೊಟ್ಲುವಿನ ನಿಸಾರ್ ಅಹಮ್ಮದ್ ಯಾನೆ ನಿಸಾರ್ […]

DAKSHINA KANNADA HOME LATEST NEWS

ಮಂಗಳೂರು: ಟ್ರಾಫಿಕ್‌ ಫೈನ್‌ ಮೇಲೆ 50% ರಿಯಾಯಿತಿ- ಸೆ.12ರವರೆಗೆ ಮಾತ್ರ

ಮಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದ ವಾಹನಿಗರಿಗೆ ಪ್ರಕರಣಗಳ ಇತ್ಯರ್ಥ ಪಡಿಸಿಕೊಳ್ಳುವುದಕ್ಕಾಗಿ ಶೇ.50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಸಲು ಆ.23ರಿಂದ ಸೆ.12ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ (ಎಎಸ್‌ಐ-ಪಿಐ ಡಿವೈಸ್) ಲಾಲ್‌ಬಾಗ್‌ನಲ್ಲಿರುವ ಮನಪಾ ಕಮಾಂಡ್ ಕಂಟ್ರೋಲ್ ಸೆಂಟರ್‌ಗಳಲ್ಲಿ ಪಾವತಿಸಬಹುದು. ಉಳಿದಂತೆ ಕದ್ರಿಯ ಪೂರ್ವ ಸಂಚಾರ ಠಾಣೆ, ಪಾಂಡೇಶ್ವರದ ಪಶ್ಚಿಮ ಸಂಚಾರ ಠಾಣೆ, ಬೈಕಂಪಾಡಿಯ ಮಂಗಳೂರು ಉತ್ತರ ಠಾಣೆ, ಜಪ್ಪಿನಮೊಗರಿನ ದಕ್ಷಿಣ ಸಂಚಾರ ಠಾಣೆ […]

DAKSHINA KANNADA HOME LATEST NEWS

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ಕಚೇರಿಗಳಲ್ಲಿ ಶೋಧ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನ ಮತ್ತಿತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟೊರೇಟ್ ಆಫ್ ಎನ್‌ಫೋರ್ಸ್‌ಮೆಂಟ್ ಮಂಗಳೂರು ಸಬ್ ರೆನಲ್ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಗರದ 5 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಸ್ಟಾಂಪ್ ಟ್ಯೂಟಿಗಾಗಿ ಹಣ ವಸೂಲಿ ಮಾಡಿ, ಭರವಸೆ ನೀಡಿದ ಸಾಲಗಳನ್ನು ನೀಡದೆ ವಂಚನೆ ಮಾಡಿದ ರೋಶನ್ ಸಲ್ದಾನ, ಆತನ ಪತ್ನಿ ಡಫ್ನಿ ನೀತು ಡಿಸೋಜ ಮತ್ತಿತರರ ವಿರುದ್ಧ ಕಾನೂನು […]

DAKSHINA KANNADA HOME LATEST NEWS

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಹಿತ ಮೂವರ ಬಂಧನ

ಮಂಗಳೂರು: ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಹಿತ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಆಡೂರಿನ ಮಸೂದ್ ಎಂ.ಕೆ. (45), ಕಾಸರಗೋಡು ಜಿಲ್ಲೆಯ ದೇಲಂಪಾಡಿಯ ಮುಹಮ್ಮದ್ ಆಶಿಕ್ (24) ಮತ್ತು ಸುಬೇರ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಎರಡು ಕಾರು ಮತ್ತು 123 ಕೆ.ಜಿ. ಗಾಂಜಾ ಹಾಗೂ 5 ಮೊಬೈಲ್ ಫೋನ್‌ಗಳನ್ನು ವಶಪಡಿಸಲಾಗಿದೆ. ಆರೋಪಿಗಳು ಗಾಂಜಾವನ್ನು ಆಂಧ್ರಪ್ರದೇಶದಿಂದ ತಂದು ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಮಾರಾಟ […]