Tag: ಮಂಗಳೂರು ನಗರ ಪೊಲೀಸ್‌

DAKSHINA KANNADA HOME LATEST NEWS

ಉಳ್ಳಾಲದಲ್ಲಿ ಯುವತಿಯ ಗ್ಯಾಂಗ್‌ರೇ*ಪ್‌ ಆರೋಪ: ಮೂವರ ಬಂಧನ

ಮಂಗಳೂರು: ನಗರ ಹೊರವಲಯದ ಉಳ್ಳಾಲದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.   ಬಂಧಿತ ಪ್ರಭುರಾಜ್ ಹಾಗೂ ಮಿಥುನ್ ಬಂಧಿತರನ್ನು ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು. ಇವರು ಮೂವರು ಸ್ನೇಹಿತರಾಗಿದ್ದು, ಮೂಲ್ಕಿ ಮೂಲದ ಪ್ರಭುರಾಜ್ ಆಟೋ ಚಾಲಕನಾಗಿದ್ದು, ಉಳ್ಳಾಲ ಕುಂಪಲದ ಮಿಥುನ್ ಎಲೆಕ್ಟ್ರೀಷಿಯನ್‌ ಆಗಿ ವೃತ್ತಿ […]

DAKSHINA KANNADA HOME LATEST NEWS

ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆ ಮೇಲೆ ಚಲಿಸಿದ ಕಾರು….!

ಮಂಗಳೂರು: ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆಯ ಮೇಲೆ ಕಾರೊಂದು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಗರದ ಬಿಜೈ ಕಾಪಿಕಾಡ್‌ನಲ್ಲಿ ನಡೆದಿದೆ. ಘಟನೆ ವಿವರ ನಿಂಗಪ್ಪ ಎಂಬವರು ನಗರದ ಬಿಜೈ ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದು,  ಏ.9 ರಂದು ಅಪಾರ್ಟ್ ಮೆಂಟಿನ ಮುಖ್ಯಗೇಟಿನ ಬಲ ಬದಿಯಲ್ಲಿ ಕಸ ಹೆಕ್ಕುವ ಕೆಲಸ ಮಾಡುತ್ತಿದ್ದರು. ಈ ವೇಳೆ ಜೊತೆಯಲ್ಲಿ ತನ್ನ (1 ½) ವರ್ಷದ ಮಗು ಬೇಬಿ ಪ್ರಜ್ವಲ್ ಹರಿಜನ ಎಂಬವನು ಆಚೆ […]

DAKSHINA KANNADA HOME LATEST NEWS

ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ & ಸಿಬ್ಬಂದಿಗೆ ಅಭಿನಂದನೆ

ಮಂಗಳೂರು: ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಿನ್ನೆ ಸಂಜೆ ನಡೆಯಿತು. ನಗರದ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮಾದಕ ವಸ್ತು ಗಳನ್ನು ಪತ್ತೆ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅತೀ ಉತ್ತಮ ಮತ್ತು ಶ್ಲಾಘನೀಯ ಕರ್ತವ್ಯ ನಿರ್ವಹಿಸಿ 2024 ನೇ ಸಾಲಿನ ಮುಖ್ಯ ಮಂತ್ರಿ ಚಿನ್ನದ ಪದಕ ಪಡೆದ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಎಸಿಪಿ ಧನ್ಯಾ ನಾಯಕ್, […]

DAKSHINA KANNADA HOME LATEST NEWS

ಮಂಗಳೂರು: ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ-40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆ

ಮಂಗಳೂರು: ಆಡಂಕುದ್ರುನಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಉರ್ಬನ್‌ ಡಿಸೋಜಾ ಎಂಬಾತನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 5 ಲೀಟರ್‌ ಕಳ್ಳಭಟ್ಟಿ ಸಾರಾಯಿ, ಕಳ್ಳಭಟ್ಟಿ ತಯಾರಿಸಲು ಉಪಯೋಗಿಸುತ್ತಿದ್ದ ಸಲಕರಣೆಗಳು, 40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆಯಾಗಿದೆ. ಮಂಗಳೂರು ದಕ್ಷಿಣ ವಲಯದ ಅಬಕಾರಿ ಕಮಲ ಎಚ್‌. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಬಕಾರಿ ಉಪನಿರೀಕ್ಷಕ ಹರೀಶ್‌ ಪಿ. ಕಾನ್ಸ್ಟೇಬಲ್‌ಗಳಾದ ಬಸವಾರಜ ತೊರೆ, ಆನಂದ್‌, ವಾಹನಚಾಲಕ ರಘುರಾಮ ಕಾರ್ಯಚರಣೆಯಲ್ಲಿ ಸಹಕರಿಸಿದ್ದರು.