Tag: ಮಂಗಳೂರು

DAKSHINA KANNADA HOME

ಬೆಳೆ ವಿಮೆಯಲ್ಲಿನ ಲೋಪ: ಸದನದಲ್ಲಿ ಶಾಸಕ ಅಶೋಕ್ ರೈ & ಸ್ಪೀಕರ್‌ ಮಧ್ಯೆ ಜಟಾಪಟಿ

ಪುತ್ತೂರು: ೨೦೨೪ರ ೨೦೨೪ ಪ್ರಾಕೃತಿಕ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಪಾವತಿಸಿದ ಪರಿಹಾರ ಮೊತ್ತಮತ್ತು ಹವಾಮಾನ ಆಧಾರಿತ ಬೆಳೆ ವಿಮೆ ತಡವಾಗಿರುವ ಮತ್ತು ಪರಿಹಾರ ಮೊತ್ತ ಕಡಿಮೆಯಾಗಿರುವ ಬಗ್ಗೆ ಬುಧವಾರ ಬೆಳಗಾವಿಯಲ್ಲಿ ನಡೆದ ವಿಧಾಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಪ್ರಸ್ತಾಪ ಮಾಡಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ನೇತೃತ್ವದಲ್ಲಿ ತೋಟಗಾರಿಕಾ ಸಚಿವರು, ವಿಮಾಕಂಎಪನಿ ಮತ್ತು ದಕ ಹಾಗೂ ಉಡುಪಿ ಜಿಲ್ಲೆಯ ಶಾಸಕರ ಸಭೆಯನ್ನು ನಡೆಸುವುದಾಗಿ ತೀರ್ಮಾನವನ್ನು ಕೈಗೊಳ್ಳಲಾಯಿತು. […]

DAKSHINA KANNADA HOME LATEST NEWS

ಮಂಗಳೂರು: ಡಿ.11ರವರೆಗೆ ಇಂಡಿಗೊ ವಿಮಾನಗಳು ರದ್ದು

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿನನಿತ್ಯ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಯಾನ ಡಿ.8 ರಿಂದ 11ರ ತನಕ ರದ್ದಾಗಿದೆ. ಮಂಗಳೂರಿಗೆ ದಿನನಿತ್ಯ ಆಗಮಿಸುವ ಇಂಡಿಗೊದ ಬೆಂಗಳೂರು -ಮಂಗಳೂರು ( 6ಇ 6858)ಬೆಳಗ್ಗೆ 7:10, ಮುಂಬೈ -ಮಂಗಳೂರು(6ಇ 6674) ಬೆಳಗ್ಗೆ 8:40, ಬೆಂಗಳೂರು -ಮಂಗಳೂರು (6ಇ109) ಸಂಜೆ 5:20 ಮತ್ತು ಬೆಂಗಳೂರು -ಮಂಗಳೂರು (6ಇ6119) ರಾತ್ರಿ 10:15ಕ್ಕೆ ಆಗಮಿಸುವ ವಿಮಾನಗಳು ರದ್ದಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಬೆಳಗ್ಗೆ 7:40ಕ್ಕೆ ಹೊರಡುವ ಮಂಗಳೂರು -ಬೆಂಗಳೂರು […]

DAKSHINA KANNADA HOME LATEST NEWS

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕಾಯ್ದೆಯಡಿ ಓರ್ವನ ಬಂಧನ

ಸುರತ್ಕಲ್: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಕ್ಸೊ ಕಾಯ್ದೆಯಡಿ ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಇಸ್ಮಾಯೀಲ್ ಬಂಧಿತ ಆರೋಪಿ. ಚೊಕ್ಕಬೆಟ್ಟು ಪೇಟೆಯಲ್ಲಿ ಹನಿ ಫ್ಯಾಶನ್ ಮತ್ತು ಜನರಲ್ ಸ್ಟೋರ್ ನಡೆಸಿಕೊಂಡಿರುವ ಆರೋಪಿ ಇಸ್ಮಾಯೀಲ್ ತನ್ನ ಅಂಗಡಿಗೆ ಚಾಕಲೇಟು ಖರೀದಿಸಲೆಂದು ಬಂದಿದ್ದ 11 ವರ್ಷದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಒಂದು ಕೊಠಡಿಯಲ್ಲಿ ಕೂಡಿಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕನ ತಾಯಿ ಸುರತ್ಕಲ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. […]

DAKSHINA KANNADA HOME LATEST NEWS

ಮಂಗಳೂರು ಮೂಲದ ರೌಡಿ ಶೀಟರ್‌ಗಳಿಂದ ಜೈಲು ಸಿಬ್ಬಂದಿ ಮೇಲೆ ಹಲ್ಲೆ

ಕಾರವಾರ:  ಮಂಗಳೂರು ಮೂಲದ ವಿಚಾರಣಾಧೀನ ರೌಡಿ ಶೀಟರ್‌ಗಳಿಬ್ಬರು ಕಾರವಾರ ಕಾರಾಗೃಹದಲ್ಲಿ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಗಳೂರು ಮೂಲದ ರೌಡಿ ಶೀಟರ್‌ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು, ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮಾದಕ ವಸ್ತು ಒದಗಿಸುವಂತೆ ಗಲಾಟೆ ಮಾಡಿದ ಕೈದಿಗಳು ಪರಸ್ಪರ […]

DAKSHINA KANNADA HOME LATEST NEWS

ಸುಳ್ಯ : ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಸುಳ್ಯ : ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ […]

HOME

MCC ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

ಮಂಗಳೂರು: ಎಂ.ಸಿ.ಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯು ಡಿ.೪ ರಂದು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಂಡಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜಾ ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು. ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ಜೆಪ್ಪುವಿನ ಸೇಂಟ್ ಆ್ಯಂಟನಿ ಆಶ್ರಮದ ನಿರ್ದೇಶಕ ವಂದನೀಯ […]

HOME NATIONAL

SDPI ಹೆಸರಿನಲ್ಲಿ ನಿಷೇಧಿತ PFIನ ಹಿಂಬಾಗಿಲ ರಾಜಕೀಯ ಪ್ರವೇಶ: ಸಂಸತ್ತಿನಲ್ಲಿ ಕ್ಯಾ. ಚೌಟ

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ ಗಂಭೀರ ವಿಚಾರವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ ಕಳವಳ ವ್ಯಕ್ತಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ(ಇಡಿ) 2025ರ ನವೆಂಬರ್ 8ರ ಪತ್ರಿಕಾ ಪ್ರಕಟಣೆಯನ್ನು ಉಲ್ಲೇಖಿಸಿ ಸದನದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು, ಎಸ್‌ಡಿಪಿಐಯು ನಿಷೇಧಿತ ಪಿಎಫ್‌ಐನ ರಾಜಕೀಯ ಮುಖವಾಣಿಯಾಗಿ ಕೆಲಸ ಮಾಡುತ್ತಿದೆ. […]

COMMUNITY NEWS HOME STATE

ಕಥೋಲಿಕ್ ಚರ್ಚ್‌ಗಳಲ್ಲಿ ಬ್ರ. ಸಜಿತ್ ಜೋಸೆಫ್‌ಗೆ ನಿಷೇಧ: ಭಾರೀ ಪರ- ವಿರೋಧ ಚರ್ಚೆ

ಮಂಗಳೂರು : ಕರಾವಳಿ ಕರ್ನಾಟಕದಲ್ಲಿ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಸುದ್ದಿ ಮಾಡಿ,  ತನ್ನ ವಿಶೇಷ ಬೋಧನೆಯಿಂದ ಸಾವಿರಾರು ಭಕ್ತರನ್ನು ಒಂದೆಡೆ ಸೇರಿಸುವ ಮೂಲಕ ಖ್ಯಾತಿ ಪಡೆದಿದ್ದ ಕೇರಳ ಮೂಲದ ಸಜಿತ್ ಜೋಸೆಫ್ ಅವರನ್ನು ಕೇರಳದ ಸಿರಿಯನ್ ಕೆಥೋಲಿಕ್ ಮಲಬಾರ್ ಚರ್ಚ್ ಆಡಳಿತವು ದಿಢೀ‌ರ್ ಆಗಿ ಬೋಧಕ ಸ್ಥಾನದಿಂದ ತೆರವು ಮಾಡಿದ್ದು ಆತನನ್ನು ಯಾವುದೇ ಚರ್ಚ್ ಗಳಲ್ಲಿ ಪ್ರಾರ್ಥನೆಗೆ ಬಳಸಿಕೊಳ್ಳದಂತೆ ನಿಷೇಧ ವಿಧಿಸಿದೆ. ಜೊತೆಗೆ ಕರ್ನಾಟಕದಲ್ಲೂ ಕಥೋಲಿಕ ಕ್ರೈಸ್ತರ ಚರ್ಚ್‌ಗಳಲ್ಲಿ ಆತನಿಗೆ ನಿಷೇಧ ಹೇರಿದ್ದಾರೆ. ಸಿರಿಯನ್ ಕೆಥೋಲಿಕ್ […]

COMMUNITY NEWS DAKSHINA KANNADA HOME LATEST NEWS

ಕರಾವಳಿಯಾದ್ಯಂತ ಕ್ರೈಸ್ತರ ಮೋಂತಿ ಹಬ್ಬದ ಸಂಭ್ರಮ

ಮಂಗಳೂರು: ಕರಾವಳಿಯಾದ್ಯಂತ ಕಥೋಲಿಕ ಕ್ರೈಸ್ತರು ಮೋಂತಿ (ಮೇರಿ ಮಾತೆ) ಹಬ್ಬವನ್ನು ಸಡಗರದಿಂದ ಆಚರಿಸಿದರು. ತೆನೆ ಹಬ್ಬವೆಂದು ಕರೆಯುವ ಈ ಹಬ್ಬದ ದಿನವಾದ ಇಂದು ಹೊಸ ತೆನೆಯ ಆರ್ಶಿವಾದ, ವಿಶೇಷ ಬಲಿಪೂಜೆ ನಡೆಯಿತು. ಈ ಹಬ್ಬಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೇನಾ ನಡೆಯಿತು. ಮಕ್ಕಳು 9 ದಿನಗಳ ಕಾಲ ತಮ್ಮ ಹಿತ್ತಲಲ್ಲಿ ಸಿಕ್ಕ ಹೂಗಳನ್ನು ಚರ್ಚಿಗೆ ತಂದು ಮೇರಿ ಮಾತೆಗೆ ಅರ್ಪಿಸುತ್ತಾರೆ. ಈ ವೇಳೆ ಮಕ್ಕಳಿಗೆ ಸಿಹಿತಿನಿಸುಗಳನ್ನು ಹಂಚುತ್ತಾರೆ.ಕೊನೆಯ ದಿನವಾದ ಇಂದು ಎಲ್ಲರ ಮನೆಗಳಲ್ಲಿ ಕುಟುಂಬ ಸಮೇತ ಸಸ್ಯಹಾರಿ […]

DAKSHINA KANNADA HOME LATEST NEWS

ಸಂತ ರೀಟಾ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಸೈಂಟ್ ರೀಟಾ ವಿದ್ಯಾ ಸಂಸ್ಥೆ ವಿಟ್ಲ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ 2025-26 ಆಯೋಜಿಸಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಂ. ಜಿ. ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ವಂ. ಫಾ. ಐವನ್ ಮೈಕಲ್ ರೋಡ್ರಿಗಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕ್ರೀಡಾ ಪರಿವೀಕ್ಷಕರಾದ ಆಶಾ ನಾಯಕ್, […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678