DAKSHINA KANNADA
*ಯುವಜನತೆ ಮಹಾನ್ ವ್ಯಕ್ತಿಗಳ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು-ಮಮತಾ ಗಟ್ಟಿ*
ಮಂಗಳೂರು, ಮಾ.24 : ದೇವರ ದಾಸಿಮಯ್ಯ ಅವರು ವಚನ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸರ್ಕಾರವು ಮಹನೀಯರ ಜಯಂತಿಗಳನ್ನು ಆಚರಿಸುತ್ತಿದ್ದು, ಈ ಬಗ್ಗೆ ಯುವಜನರು ಜಯಂತಿಯ ಸಂದೇಶಗಳನ್ನು ತಿಳಿದುಕೊಳ್ಳಬೇಕು. ಯುವಜನತೆ ಜಯಂತಿ ಆಚರಣೆ ವಿಚಾರಗಳನ್ನು ತಿಳಿದುಕೊಳ್ಳುವ ಜೊತೆಗೆ ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ಸೋಮವಾರ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು […]


