DAKSHINA KANNADA
*ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ : ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಹಾರೈಕೆ ಹಾಗೂ ಪ್ರೇರಣಾ ಕಾರ್ಯಕ್ರಮ*
ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ಉಜ್ವಲ ಭವಿಷ್ಯಕ್ಕಾಗಿ ಆಶೀರ್ವಚನ ಮತ್ತು ಪ್ರೇರಣಾ ಕಾರ್ಯಕ್ರಮವು ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಬೈಬಲ್, ಭಗವದ್ಗೀತೆ ಹಾಗೂ ಕುರಾನ್ ಧರ್ಮಗ್ರಂಥಗಳ ಪಠಣ ಮತ್ತು ದೇವ ಸ್ತುತಿಯೊಂದಿಗೆ ಅತ್ಯಂತ ಭಕ್ತಿಪೂರ್ವಕವಾಗಿ ಆರಂಭಿಸಲಾಯಿತು. ಪರೀಕ್ಷೆಗೆ ಸಿದ್ಧರಾಗಿರುವ ವಿದ್ಯಾರ್ಥಿಗಳಿಗೆ ಧರ್ಮಗುರುಗಳಾದ ವಂದನೀಯ ಫಾ. ಐವನ್ ಮೈಕಲ್ ರೋಡ್ರಿಗಸ್, ಶ್ರೀ ಕ್ಷೇತ್ರ ಕಣಿಯೂರಿನ ಪರಮಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಹಾಗೂ ಉಳ್ಳಾಲದ […]


