DAKSHINA KANNADA
HOME
LATEST NEWS
ಬಿ.ಸಿ.ರೋಡು: ಲಾವಣ್ಯ ಕೊಲೆ ಪ್ರಕರಣ- ಆರೋಪಿ ಚೇತನ್ ಆಸ್ಪತ್ರೆಯಿಂದ ಪೊಲೀಸ್ ವಶಕ್ಕೆ
ಬಂಟ್ವಾಳ : ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್ನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ ಎಂಬ ಯುವತಿಯನ್ನು ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಬಳಿಕ ಆತ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದನು. ಘಟನೆಯ ಮರುದಿನ ಮಂಗಳೂರಿನಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. […]


