ಬೆಳ್ತಂಗಡಿ: ರಿಸೀವಿಂಗ್ ಸ್ಟೇಷನ್ನಲ್ಲಿ ಕಳ್ಳತನದ ವೇಳೆ ವ್ಯಕ್ತಿ ಮೃತ್ಯು ಪ್ರಕರಣ- ಮತ್ತೊಬ್ಬನ ಬಂಧನ
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ನಲ್ಲಿ ಜು. 1 ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಮತ್ತೊಬ್ಬ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದ ನಿವಾಸಿ ಇಬ್ರಾಹಿಂ ಲತೀಫ್ (36) ಎಂಬಾತನನ್ನು ತನಿಖೆ ನಡೆಸಿ ಜು. 14 ರಂದು ಸಂಜೆ ಬಂಧಿಸಿ ವಿಚಾರಣೆ ನಡೆಸಿ, ಜು. 15 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. […]











