Tag: canaratv

HOME LATEST NEWS NATIONAL

ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲ: ಬಿಜೆಪಿ ನಾಯಕನ ಮನೆಗೆ ಬೆಂಕಿ

ಇಂಫಾಲ್‌: ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲಿಸಿದ ಆರೋಪದ ಮೇಲೆ, ಬಿಜೆಪಿಯ ಮಣಿಪುರ ಘಟಕದ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷನ ಮನೆಗೆ ಗುಂಪೊಂದು ದಾಳಿ ಮಾಡಿ ಬೆಂಕಿ ಹಚ್ಚಿದೆ. ಬಿಜೆಪಿಯ ಮಣಿಪುರ ಘಟಕದ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಅಸ್ಕರ್‌ ಅಲಿ ಮನೆಗೆ ಗುಂಪೊಂದು ಭಾನುವಾರ ರಾತ್ರಿ ದಾಳಿ ಮಾಡಿ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯು ಥೌಬಾಲ್‌ ಜಿಲ್ಲೆಯ ಲಿಲೊಂಗ್ ಎಂಬಲ್ಲಿ ನಡೆದಿದೆ. ವಕ್ಫ್‌ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿ ಅಸ್ಕರ್‌ ಅಲಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ […]

DAKSHINA KANNADA HOME LATEST NEWS

ಕಡಬ, ನೆಲ್ಯಾಡಿ ಗಾಳಿ- ಸಿಡಿಲು ಸಹಿತ ಭಾರೀ ಮಳೆ: ವಿದ್ಯುತ್‌ ಸಂಪರ್ಕ ಕಡಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಸಂಜೆ ವೇಳೆಗೆ ವರುಣ ತಂಪೆರೆದಿದ್ದಾನೆ. ಸಂಜೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ನೆಲ್ಯಾಡಿ, ಪುತ್ತೂರಿನಲ್ಲಿ ಗಾಳಿ, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಭಾರೀ ಗಾಳಿಯ ಪರಿಣಾಮ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯುಂಟಾಗಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಮಂಗಳೂರು ನಗರದ ಸುತ್ತಮುತ್ತ ಸಾಧಾರಣ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಮುಂದುವರೆದಿದೆ.  

DAKSHINA KANNADA HOME LATEST NEWS

ಕಾಲೇಜಿಗೆ ಹೋಗುತ್ತಿದ್ದ ಯುವಕ ನಾಪತ್ತೆ

ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕಾಲೇಜಿನಲ್ಲಿ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಬಿಹಾರ ಮೂಲದ ಸುಧಾಂಶುಕುಮಾರ (21 ) ಎಂಬವರು ಕಾಣೆಯಾಗಿದ್ದಾರೆ. `ಕಾಣೆಯಾದವರ ಚಹರೆ : ಸುಮಾರು 5.6 ಅಡಿ, ಸಾಧಾರಣ ಶರೀರ, ಗೋದಿ ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಕೆಂಪು ಬಣ್ಣದ ಟಿ ಶರ್ಟ್, ಬರ್ಮುಡ ಪ್ಯಾಂಟ್ ಧರಿಸಿದ್ದರು. ಹಿಂದಿ, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಪಣಂಬೂರು ಪೆÇಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

HOME LATEST NEWS NATIONAL STATE

ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ವಿಮಾನ ಯಾನ ಖಾತೆ ಸಚಿವರ ಭೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು. ಪತ್ರದ ವಿವರ ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) […]

DAKSHINA KANNADA HOME LATEST NEWS

ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ವಿಟ್ಲದಲ್ಲಿ ಬೃಹತ್‌ ಪ್ರತಿಭಟನೆ

ವಿಟ್ಲ: ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ  ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಭೂಮಾಲಕ ಮಹೇಶ್ ಭಟ್ ನನ್ನು ತಕ್ಷಣ ಬಂಧಿಸಲು ಒತ್ತಾಯಿಸಿ, ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಹಾಗೂ ವಿವಿಧ ದಲಿತ ಮತ್ತು ಸಮಾನ ಮನಸ್ಕ ಸಂಘಟನೆಗಳು ಇದರ ಸಹಭಾಗಿತ್ವದಲ್ಲಿ ವಿಟ್ಲದಲ್ಲಿ ಪ್ರತಿಭಟನಾ ಸಭೆ ನಡೆಯಿತು. ವಿಟ್ಲದ ಖಾಸಗಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ […]

DAKSHINA KANNADA HOME LATEST NEWS UDUPI

ನಾಳೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ..!

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ  ಸೇರಿದಂತೆ ರಾಜ್ಯದ ವಿವಿಧೆಡೆ ನಾಳೆ (ಗುರುವಾರ) ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಮತ್ತು ಗದಗ ಜಿಲ್ಲೆಯಲ್ಲಿ ಗಂಟೆಗೆ 50 […]

HOME LATEST NEWS STATE

Uber, Rapido ಸೇರಿದಂತೆ ಬೈಕ್‌ ಟ್ಯಾಕ್ಸಿ ಕಾರ್ಯಾಚರಣೆ ನಿಲ್ಲಿಸುವಂತೆ ಹೈಕೋರ್ಟ್‌ ಆದೇಶ

ಬೆಂಗಳೂರು: ಉಬರ್, ರ್ಯಾಪಿಡೋ ಸಹಿತ ಹಲವು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಹೀಗಾಗಿ ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದ್ದು, 3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಮೋಟಾರ್ ಸೈಕಲ್‌ಗಳನ್ನು […]

DAKSHINA KANNADA HOME LATEST NEWS

ಮಂಗಳೂರು: ಕಳ್ಳಭಟ್ಟಿ ಅಡ್ಡೆ ಮೇಲೆ ದಾಳಿ-40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆ

ಮಂಗಳೂರು: ಆಡಂಕುದ್ರುನಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಉರ್ಬನ್‌ ಡಿಸೋಜಾ ಎಂಬಾತನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 5 ಲೀಟರ್‌ ಕಳ್ಳಭಟ್ಟಿ ಸಾರಾಯಿ, ಕಳ್ಳಭಟ್ಟಿ ತಯಾರಿಸಲು ಉಪಯೋಗಿಸುತ್ತಿದ್ದ ಸಲಕರಣೆಗಳು, 40 ಲೀ.ನಷ್ಟು ಬೆಲ್ಲದ ಕೊಳೆ ಪತ್ತೆಯಾಗಿದೆ. ಮಂಗಳೂರು ದಕ್ಷಿಣ ವಲಯದ ಅಬಕಾರಿ ಕಮಲ ಎಚ್‌. ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಬಕಾರಿ ಉಪನಿರೀಕ್ಷಕ ಹರೀಶ್‌ ಪಿ. ಕಾನ್ಸ್ಟೇಬಲ್‌ಗಳಾದ ಬಸವಾರಜ ತೊರೆ, ಆನಂದ್‌, ವಾಹನಚಾಲಕ ರಘುರಾಮ ಕಾರ್ಯಚರಣೆಯಲ್ಲಿ ಸಹಕರಿಸಿದ್ದರು.

DAKSHINA KANNADA HOME LATEST NEWS

ಮಂಗಳೂರು- ನಾಳೆಯಿಂದ ಎ.9 ರವರೆಗೆ ಜೆಇಇ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಮಂಗಳೂರು: ಎಪ್ರಿಲ್ 2 ರಿಂದ 9 ರವರೆಗೆ ನಡೆಯಲಿರುವ ಜೆಇಇ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 300 ಮೀಟರ್ ಸುತ್ತಮುತ್ತಲಿನ ನಗರ ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ – ಪ್ರದೇಶವನ್ನು ನಿಷೆೀಧಿತ ಪ್ರದೇಶವೆಂದು ಘೋಷಿಸಿ ನಿಷೆೀಧಾಜ್ಞೆ ಜಾರಿಗೊಳಿಸಿ ಉಪ ಪೋಲಿಸ್ ಆಯುಕ್ತ ಸಿದ್ದಾರ್ಥ್‌ ಗೋಯಲ್ ಆದೇಶಿಸಿದ್ದಾರೆ. 1)ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, 2) ಐಓಎನ್ ಡಿಜಿಟಲ್ […]

DAKSHINA KANNADA HOME LATEST NEWS

ವಿದ್ಯಾರ್ಥಿನಿ ಮೇಲೆ ದೌರ್ಜನ್ಯ: ಆರೋಪಿ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಮಾಣಿಲ ಗ್ರಾಮದ ಮುರುವದಲ್ಲಿ ದಲಿತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ನಿವಾಸಿ ಮಹೇಶ್ ಭಟ್ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಎಸಗಿರುವ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಸೆಕ್ಷನ್ ಹಾಗೂ ದಲಿತ ದೌರ್ಜನ್ಯ ಕಾಯಿದೆಯ ಅನ್ವಯ ಪ್ರಕರಣ ದಾಖಲಾಗಿದ್ದರೂ ಕೂಡ ಪೊಲೀಸ್ ಇಲಾಖೆ ಈ ಕುರಿತು ಕ್ರಮ ಜರುಗಿಸದೇ ಇರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ಈ ಕುರಿತು ತಕ್ಷಣ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ದಲಿತ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678