ಆರ್ಯಭಟ ಪ್ರಶಸ್ತಿಗೆ ಡಾ.ಸಂಜೀವ ದಂಡೆಕೇರಿ ಆಯ್ಕೆ
ಮಂಗಳೂರು: ಬೆಂಗಳೂರಿನ ಆರ್ಯಭಟ ಕಲ್ಬರಲ್ ಆರ್ಗನೈಸೇಷನ್ ಸಂಸ್ಥೆಯು ರಾಷ್ಟ್ರ- ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದ ಅಸಾಧಾರಣ ಸಾಧಕರಿಗೆ ನೀಡುವ 51ನೇ ವರ್ಷದ ಅಂತರ್ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಕರಾವಳಿ ಕರ್ನಾಟಕದ ಶ್ರೇಷ್ಠ ನಾಟಕಕಾರ, ನಿರ್ದೇಶಕ ತುಳು ರಂಗಭೂಮಿ ಮತ್ತು ಚಿತ್ರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ಡಾ.ಸಂಜೀವ ದಂಡೆಕೇರಿ ಆಯ್ಕೆ ಯಾಗಿದ್ದಾರೆ. ನಾಟಕ ರಂಗದೊಂದಿಗೆ ಡಾ. ಸಂಜೀವ ದಂಡೆಕೇರಿ ಮಾಡಿರುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟನೆ ತಿಳಿಸಿದೆ. *ಆಯುರ್ವೇದ […]











