Tag: canaratv news

LATEST NEWS

ಗೋ ಗ್ಯಾಸ್ ನಿಂದ ಆಟೋಗಳಿಗೆ 100 ರೂ ದರ ನಿಗಧಿ ಶಾಸಕ ಅಶೋಕ್ ರೈ ಮಾತುಕತೆ ಎಫೆಕ್ಟ್

ಪುತ್ತೂರು: ಪುತ್ತೂರಿನಲ್ಲಿರುವ ಗೋ ಗ್ಯಾಸ್ ಸಂಸ್ಥೆಯವರು ಆಟೋ ಗ್ಯಾಸ್ ಅಧಿಕ ಧರದಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಪುತ್ತೂರಿನಲ್ಲಿ ಆಟೋ ಚಾಲಕರು ಪ್ರತಿಭಟನೆ ನಡೆಸಿ ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿ ಶಾಸಕ ಅಶೋಕ್ ರೈ ಗೆ ಮನವಿ ಮಾಡಿದ್ದರು. ಮಧ್ಯಾಹ್ನ ಎ ಸಿ ಕಚೇರಿಯಲ್ಲಿ ಗ್ಯಾಸ್ ವಿತರಕರ ಸಭೆ ನಡೆಸಿದ ಶಾಸಕರು ಹೆಚ್ಚು ದರ ವಸೂಲಿ ಮಾಡದಂತೆ ಸೂಚನೆ ನೀಡಿದ್ದು ಇದರ ಫಲವಾಗಿ ಇಂದು ಗೋ ಗ್ಯಾಸ್ ಸಂಸ್ಥೆಯವರು 120 ರ ಬದಲಾಗಿ 100 ರೂಗೆ […]

HOME INETRNATIONAL LATEST NEWS NATIONAL

Breaking: ಇರಾನ್ ನಲ್ಲಿರುವ ಭಾರತೀಯರಿಗೆ ತುರ್ತು ಸೂಚನೆ

ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಏಪ್ರಿಲ್ 7, 2026 ರಂದು ತುರ್ತು ಸೂಚನೆಯನ್ನು ಹೊರಡಿಸಿದೆ. ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ಮುಂದಿನ 48 ಗಂಟೆಗಳ ಕಾಲ ತಾವಿರುವ ಸ್ಥಳದಲ್ಲೇ ಇರುವಂತೆ ಸೂಚಿಸಲಾಗಿದೆ. ಪ್ರಮುಖ ಮಾರ್ಗಸೂಚಿಗಳು ಇದ್ದಲ್ಲೇ ಇರಿ: ಮುಂದಿನ 48 ಗಂಟೆಗಳ ಕಾಲ ಮನೆಯಿಂದ ಹೊರಬರಬೇಡಿ. ಅಪಾಯಕಾರಿ ಸ್ಥಳಗಳಿಂದ ದೂರವಿರಿ: ವಿದ್ಯುತ್ ಸ್ಥಾವರಗಳು, ಮಿಲಿಟರಿ ನೆಲೆಗಳು ಮತ್ತು ಬಹುಮಹಡಿ ಕಟ್ಟಡಗಳ ಮೇಲಿನ ಮಹಡಿಗಳಿಗೆ ಹೋಗಬೇಡಿ. ಹೋಟೆಲ್‌ನಲ್ಲಿರುವವರು: ರಾಯಭಾರ ಕಚೇರಿ ಗೊತ್ತುಪಡಿಸಿದ ಹೋಟೆಲ್‌ಗಳಲ್ಲಿ ಇರುವವರು ಒಳಾಂಗಣದಲ್ಲೇ ಇರಬೇಕು ಮತ್ತು ಅಲ್ಲಿನ […]

HOME LATEST NEWS

SCDCC ಬ್ಯಾಂಕ್ ದಾಖಲೆ ಆರ್ಥಿಕ ವ್ಯವಹಾರ: 131.14 ಕೋಟಿ ರೂ ಲಾಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಬ್ಯಾಂಕು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ತನ್ನ 113 ಶಾಖೆಗಳ ಮೂಲಕ ಆರ್ಥಿಕ ವರ್ಷದಲ್ಲಿ ಅಮೋಘ ಸಾಧನೆಯನ್ನು ಗೈದಿದೆ. 2026ರ ಮಾರ್ಚ್ ತಿಂಗಳ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ.131.14ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷದ ಲಾಭ (ರೂ.110.41 ಕೋಟಿ) ಕ್ಕಿಂತ ಶೇಕಡಾ 18.78% ಏರಿಕೆಯಾಗಿದೆ. ಇದು ರಾಜ್ಯದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳ ಪೈಕಿ ಸಾರ್ವಕಾಲಿಕ ದಾಖಲೆ ಲಾಭಗಳಿಕೆಯಾಗಿದೆ ಎಂದು ದಕ್ಷಿಣ […]

HOME NATIONAL

ಮಹಾಕುಂಭದಲ್ಲಿ ಖ್ಯಾತಿ ಗಳಿಸಿದ್ದ ಐಐಟಿ ಬಾಬಾ ಬೆಂಗಳೂರಿನ ಯುವತಿ ಜತೆ ವಿವಾಹ

ಚಂಡೀಗಢ: ಕಳೆದ ವರ್ಷ ಪ್ರಯಾಗ್‌ರಾಜ್‌ ಮಹಾಕುಂಭದಲ್ಲಿ ಖ್ಯಾತಿ ಗಳಿಸಿದ್ದ ಐಐಟಿ-ವಾಲೆ ಬಾಬಾ ವಿವಾಹವಾಗಿದ್ದಾರೆ. ಬೆಂಗಳೂರಿನ ಹುಡುಗಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಐಟಿ ವಾಲೆ ಬಾಬಾರ ನಿಜವಾದ ಹೆಸರು ಅಭಯ್‌ ಸಿಂಗ್.‌ ಹರಿಯಾಣದ ಜಜ್ಜರ್‌ ಜಿಲ್ಲೆಯವರು. ಬೆಂಗಳೂರಿನ ಎಂಜಿನಿಯರ್‌ ಪ್ರತೀಕಾ ಎಂಬವರನ್ನು ವರಿಸಿದ್ದಾರೆ. ತನ್ನ ತಂದೆಯನ್ನು ಭೇಟಿಯಾಗಲು ಜಜ್ಜರ್‌ಗೆ ಐಐಟಿ ವಾಲೆ ಬಾಬಾ ಭೇಟಿ ಕೊಟ್ಟಿದ್ದರು. ವಕೀಲರಾಗಿರುವ ತಮ್ಮ ತಂದೆಯನ್ನು ಭೇಟಿ ಮಾಡಲು ತಹಸಿಲ್ ಸಂಕೀರ್ಣಕ್ಕೆ ತೆರಳಿದ್ದರು. ಈ ವೇಳೆ ಪತ್ನಿ ಪ್ರತೀಕಾ ಕೂಡ ಜೊತೆಗಿದ್ದರು. ಕಳೆದ ವರ್ಷ […]

HOME LATEST NEWS

ಪೊಳಲಿ ಚೆಂಡು ಹಸ್ತಾಂತರ

ಮೂಡುಬಿದಿರೆ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಅಂಗವಾಗಿ ತಯಾರಿಸಲಾದ ಚೆಂಡನ್ನು ಸೋಮವಾರ ಮೂಡುಬಿದಿರೆಯಲ್ಲಿ ಪೊಳಲಿ ಕ್ಷೇತ್ರಕ್ಕೆ ಹಸ್ತಾಂತರಿಸಲಾಯಿತು. ನುರಿತ ಚಮ್ಮಾರ ಪದ್ಮನಾಭ ಅವರು 27 ವರ್ಷಗಳಿಂದ ಕ್ಷೇತ್ರದ ಜಾತ್ರೆಗೆ ಚೆಂಡು ತಯಾರಿಸಿಕೊಡುತ್ತಿದ್ದಾರೆ. ಈ ಚೆಂಡನ್ನು ಸೋಮವಾರ ಬೆಳಿಗ್ಗೆ ಪದ್ಮನಾಭ ಅವರ ಮನೆಯಂಗಳದಲ್ಲಿರುವ ಮಹಮ್ಮಾಯಿ ದೇವಿಯ ಸನ್ನಿಧಿಯಲ್ಲಿ ಪೂಜಿಸಲಾಯಿತು. ಬಳಿಕ ಪೊಳಲಿ ಕ್ಷೇತ್ರದ ಪರವಾಗಿ ಬಂದ ಕಡಪುಕರಿಯ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಪೊಳಲಿ ತಂಡದಲ್ಲಿ ಕೃಷ್ಣಪ್ಪ ಕಲ್ಕುಡ, ಉಮೇಶ, ಪ್ರಸಾದ್ ಗಾಣಿಗ ನರಿಕೊಂಬು, ಪ್ರಕಾಶ್ ಕಲ್ಕುಡ, ಸತೀಶ್ ಹರೇಕಳ, […]

HOME LATEST NEWS NATIONAL

ತಂದೆ-ಮಗನ ಲಾಕಪ್‌ ಡೆತ್‌ ಪ್ರಕರಣ: 9 ಪೊಲೀಸರಿಗೆ ಗಲ್ಲು ಶಿಕ್ಷೆ ಪ್ರಕಟ

ಚೆನ್ನೈ: 2020ರಲ್ಲಿ ಕೊರೊನಾ ಅವಧಿಯಲ್ಲಿ ರಾತ್ರಿಯಿಡೀ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನ್‌ಕುಲಂನಲ್ಲಿ ಅಂಗಡಿ ಮಾಲೀಕ ಜಯರಾಜ್ ಮತ್ತು ಅವರ ಮಗ ಬೆನ್ನಿಕ್ಸ್ ಅವರನ್ನು ಸಾಥನ್‌ಕುಲಂ ಪೊಲೀಸರು ಕ್ರೂರವಾಗಿ ಥಳಿಸಿದ್ದರು. ಕಸ್ಟಡಿಯಲ್ಲಿದ್ದಾಗ ಅವರಿಗೆ ಚಿತ್ರಹಿಂಸೆ ನೀಡಿದ್ದರಿಂದ ಅವರಿಬ್ಬರೂ ಪೊಲೀಸ್ ಠಾಣೆಯಲ್ಲೇ ಮೃತಪಟ್ಟಿದ್ದರು. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಮಗ್ರ ತನಿಖೆ ನಡೆಸಿ 2,427 ಪುಟಗಳ ಚಾರ್ಜ್‌ಶೀಟ್ ಅನ್ನು […]

DAKSHINA KANNADA HOME LATEST NEWS

ಕರಾವಳಿ ಚರ್ಚ್‌ಗಳಲ್ಲಿ ಪಾಸ್ಕ ಹಬ್ಬದ ಸಂಭ್ರಮಾಚರಣೆ

ಮಂಗಳೂರು: ಕ್ರೈಸ್ತರು ಶನಿವಾರ ರಾತ್ರಿ ಈಸ್ಟರ್ ಈವ್ ಆಚರಿಸಿದ್ದು, ರವಿವಾರ ಯೇಸು ಕ್ರಿಸ್ತರ ಪುನರುತ್ಥಾನ ಸ್ಮರಣೆಯ ಈಸ್ಟರ್ ಹಬ್ಬವನ್ನು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಆಚರಿಸುತ್ತಿದ್ದಾರೆ. ಶನಿವಾರ ರಾತ್ರಿ ಚರ್ಚ್‌ಗಳಲ್ಲಿ ಈಸ್ಟರ್ ಜಾಗರಣೆಯ ಬಲಿಪೂಜೆಗಳು ನಡೆಯಿತು. ಸಂಜೆ ವಿಶೇಷ ಪ್ರಾರ್ಥನಾ ವಿಧಿಯೊಂದಿಗೆ ಬಲಿಪೂಜೆಗಳು ಆರಂಭಗೊಂಡವು. ಸಂಜೆಯ ವೇಳೆ ಜಗತ್ತಿಗೆ ಬೆಳಕಾದ ಕ್ರಿಸ್ತರ ಬೆಳಕು(ಬೆಂಕಿ) ಆಶೀರ್ವಚನ ಮಾಡುವ ಮೂಲಕ ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ವ್ಯಕ್ತಿಗಳಾಗುವಂತೆ ಸಂದೇಶ ಸಾರಲಾಯಿತು. ಬೆಂಕಿ ಆಶೀರ್ವಚನ, ಮೆರವಣಿಗೆ, ಪಾಸ್ಕಾ ಗಾಯನ ನಡೆಯಿತು. ಹಳೆ ಹಾಗೂ […]

COMMUNITY NEWS DAKSHINA KANNADA HOME LATEST NEWS

ಕರಾವಳಿಯಲ್ಲಿ ಕ್ರೈಸ್ತರಿಂದ ಧ್ಯಾನ, ಪ್ರಾರ್ಥನೆಯೊಂದಿಗೆ ಗುಡ್‌ ಫ್ರೈಡೇ ಆಚರಣೆ

ಮಂಗಳೂರು: ಇಂದು ಗುಡ್ ಫ್ರೈಡೇ. ಕ್ರೈಸ್ತರಿಗೆ ಅತ್ಯಂತ ಪವಿತ್ರ ದಿನ. ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಮತ್ತು ಮಾನವ ಪಾಪ ವಿಮೋಚನೆಗಾಗಿ ಶಿಲುಬೆಯ ಕ್ರೂರ ಮರಣವನ್ನಪ್ಪಿದ ದೇವ ಪುತ್ರ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ಈ ಪವಿತ್ರ ದಿನವನ್ನು ವಿಶ್ವದಾದ್ಯಂತ ಭಕ್ತಿಯಿಂದ ಆಚರಿಚಲಾಗುತ್ತಿದೆ. ಅದರಂತೆ ಕರಾವಳಿ ನಗರಿ ಮಂಗಳೂರಿನಲ್ಲೂ ಕ್ರೈಸ್ತ ಭಾಂಧವರು ಈ ಪವಿತ್ರ ಶುಕ್ರವಾರವನ್ನು ಭಕ್ತಿ ಮತ್ತು ಶೃಧ್ದೆಯಿಂದ ಆಚರಿಸಿದರು. ಇಂದು ಬೆಳಗ್ಗಿನಿಂದಲೇ ಉಪವಾಸದ ಮೂಲಕ ವೃತ ಕೈಗೊಂಡಿರುವ ಸಾವಿರಾರು ಭಕ್ತರು ಚರ್ಚುಗಳಿಗೆ ತೆರಳಿ ವಿಶೇಷ ಪಾರ್ಥನೆಯಲ್ಲಿ […]

HOME LATEST NEWS

ಕೆಎಸ್‌ಆರ್‌ಟಿಸಿ – ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಮಂದಿಗೆ ಗಾಯ

ಶಿರಸಿ: ಇಲ್ಲಿನ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಕೊಳಗಿಬೀಸ್ ಬಳಿ ಶುಕ್ರವಾರ ಸಂಜೆ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಭಟ್ಕಳದಿಂದ ಶಿರಸಿ ಮಾರ್ಗವಾಗಿ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಡುವೆ ಈ ಅಪಘಾತ ನಡೆದಿದೆ. ಕೊಳಗಿಬೀಸ್ ಬಳಿಯ ತಿರುವಿನಲ್ಲಿ ಚಾಲಕರ ಅಜಾಗರೂಕತೆಯ ಚಾಲನೆಯಿಂದಾಗಿ ವಾಹನಗಳು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ […]

DAKSHINA KANNADA HOME LATEST NEWS

ಕುಸಿದು ಬಿದ್ದ ನಿವೃತ್ತ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ- ಆಸ್ಪತ್ರೆಗೆ ದಾಖಲು

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಶುಕ್ರವಾರ ನಗರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲೇ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿರಿಯ ರಾಜಕಾರಣಿ ಪಿ.ಜಿ.ಆರ್. ಸಿಂಧ್ಯಾ ಅವರ ಅಭಿನಂದನಾ ಸಮಾರಂಭದಲ್ಲಿ ಈ ಘಟನೆ ಸಂಭವಿಸಿದೆ. ಕಾರ್ಯಕ್ರಮದಲ್ಲಿ ಭಾಷಣ ಮುಗಿಸಿ ಕುಳಿತುಕೊಳ್ಳುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರಿಗೆ ತೀವ್ರ ಸುಸ್ತು ಕಾಣಿಸಿಕೊಂಡು ವೇದಿಕೆಯ ಮೇಲೆಯೇ ಕುಸಿದು […]