Tag: canaratv news

HOME LATEST NEWS

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ LPG/CNG ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಿಕ್ಷಾ ಚಾಲಕರು ಹಾಗೂ ಮಾಲಕರು ಎದುರಿಸುತ್ತಿರುವ ಗಂಭೀರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು, ಮೋಟಾರ್ ಮತ್ತು ಜನರಲ್ ಮಜ್ದೂರು ಸಂಘ (ಬಿಎಂಎಸ್) ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯ ನೇತೃತ್ವವನ್ನು ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ಯು ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ ವಹಿಸಿದ್ದರು. ಇತ್ತೀಚಿನ ಜಾಗತಿಕ ಪರಿಸ್ಥಿತಿ ಹಿನ್ನೆಲೆ ಇಂಧನದ ಬೆಲೆ ಏರಿಕೆ ಹಾಗೂ LPG/CNG ಗ್ಯಾಸ್ ಅಭಾವವು ರಿಕ್ಷಾ ಕಾರ್ಮಿಕರ ಜೀವನದ ಮೇಲೆ […]

DAKSHINA KANNADA HOME LATEST NEWS

SSLC ರಿಸಲ್ಟ್‌ ಪ್ರಕಟ: ಎಂದಿನಂತೆ ದ.ಕ ಪ್ರಥಮ-ಉಡುಪಿಗೆ ದ್ವಿತೀಯ ಸ್ಥಾನ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2025-26ನೇ) ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1ರಲ್ಲಿ 94.10 ಶೇ. ದಾಖಲೆ ಫಲಿತಾಂಶ ದಾಖಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಸಚಿವರು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. ಉತ್ತರ ಕನ್ನಡ ಜಿಲ್ಲೆ […]

LATEST NEWS

ಬ್ಯಾಪ್ಟಿಸ್ಟ್ ಪ್ರೀಮಿಯರ್ ಲೀಗ್ ಸೀಸನ್-8: ಅರಸು ಟೈಟನ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ

ಮಂಗಳೂರು: ನಗರದ ಉರ್ವ ಸ್ಟೋರಿನಲ ಬ್ಯಾಪ್ಟಿಸ್ಟ್ ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ನಡೆದ ಬ್ಯಾಪ್ಟಿಸ್ಟ್ ಪ್ರೀಮಿಯರ್ ಲೀಗ್ ಸೀಸನ್-8 ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮನು ಅರಸು ಅವರ ಮಾಲಕತ್ವದ ಅರಸು ಟೈಟನ್ಸ್ ತಂಡ ಪ್ರಥಮ ಸ್ಥಾನವನ್ನು, ಅಶ್ವಿನ್ ಪೂಜಾರಿಯವರ ಶ್ರೀ ಕಟಿಲೇಶ್ವರಿ ತಂಡ ದ್ವಿತೀಯ ಸ್ಥಾನವನ್ನು ಪಡೆಯಿತು. ಅರಸು ಟೈಟನ್ಸ್ ತಂಡದಲ್ಲಿದ್ದ ವಿನಯ ಕುಮಾರ್, ಗುರುದತ್ತ್, ಸೌಹಾರ್ದ್ ಶೆಟ್ಟಿ, ಗುರುದತ್ತ ಶೆಟ್ಟಿ, ಕಿಶನ್ ಶೆಟ್ಟಿ, ಚಿರಾಗ್ ಆರ್., ಮಹೇಶ್ ಕುಮಾರ್ ಹೊಳ್ಳ, ಸತೀಶ್ ಎಸ್., ಐ.ಬಿ. ಸಿಂಚನಾ ಜೈನ್, […]

COMMUNITY NEWS LATEST NEWS

ರೊಸಾರಿಯೊ ಪ್ರೀಮಿಯರ್ ಲೀಗ್ (RPL) ಸೀಸನ್ 2: ರೊಸಾರಿಯೊ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್

ಮಂಗಳೂರು: ರೊಸಾರಿಯೊ ಶಾಲಾ ಮೈದಾನದಲ್ಲಿ ನಡೆದ ರೊಸಾರಿಯೊ ಪ್ರೀಮಿಯರ್ ಲೀಗ್ (RPL) ಸೀಸನ್ 2ರ ಫೈನಲ್ ಪಂದ್ಯದಲ್ಲಿ ರೊಸಾರಿಯೊ ಸೂಪರ್ ಕಿಂಗ್ಸ್ ತಂಡವು ಗ್ಲೋರಿ ಹಂಟರ್ಸ್ ರೊಸಾರಿಯೊ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರೊಸಾರಿಯೊ ಸೂಪರ್ ಕಿಂಗ್ಸ್ ತಂಡವು ಇಡೀ ಪಂದ್ಯಾವಳಿಯಲ್ಲಿ ಅಜೇಯವಾಗಿ ಉಳಿದು ಟ್ರೋಫಿಯನ್ನು ಎತ್ತಿಹಿಡಿಯಿತು. ವಿಜೇತ ತಂಡಕ್ಕೆ 25,000 ರೂ. ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಯಿತು. ರನ್ನರ್ ಅಪ್ ಪಡೆದ ಗ್ಲೋರಿ ಹಂಟರ್ಸ್ […]

COMMUNITY NEWS HOME LATEST NEWS

ಉಡುಪಿ ಧರ್ಮಕ್ಷೇತ್ರಕ್ಕೆ ನೂತನ ಸಾರಥಿಯಾಗಿ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅಧಿಕಾರ ಸ್ವೀಕಾರ

ಉಡುಪಿ. ಏಪ್ರಿಲ್ 20: ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್ ಪ್ರಧಾನಾಲಯದ ಆವರಣದಲ್ಲಿ ನಡೆದ ಅತ್ಯಂತ ಪವಿತ್ರ ಹಾಗೂ ಐತಿಹಾಸಿಕ ಸಮಾರಂಭದಲ್ಲಿ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರು ಉಡುಪಿ ಧರ್ಮಕ್ಷೇತ್ರದ ನೂತನ ಧರ್ಮಾಧ್ಯಕ್ಷರಾಗಿ ಇಂದು ಏಪ್ರಿಲ್ 20ರಂದು ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು. ಈ ಮೂಲಕ ಉಡುಪಿ ಧರ್ಮಕ್ಷೇತ್ರದ ಆಧ್ಯಾತ್ಮಿಕ ಸಾರಥ್ಯವು ಹೊಸ ನಾಯಕತ್ವಕ್ಕೆ ಹಸ್ತಾಂತರಗೊಂಡಿತು. ಧಾರ್ಮಿಕ ವಿಧಿವಿಧಾನಗಳ ವೈಭವ: ಗೋವಾ ಮತ್ತು ದಮನ್ ಮಹಾಧರ್ಮಪ್ರಾಂತ್ಯದ ಮಹಾಧರ್ಮಾಧ್ಯಕ್ಷರು ಹಾಗೂ FABC ಮತ್ತು CCBI […]

HOME LATEST NEWS

*ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ*

ಮಂಗಳೂರು : ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸೋಮವಾರದಂದು ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್‌ ಸ್ಪೋರ್ಟ್ಸ್‌ […]

LATEST NEWS

ಅಡ್ಡೂರಿನಲ್ಲಿ ರಕ್ತದಾನ ಶಿಬಿರ:ಸಮಾಜ ಸೇವಕರಿಗೆ ಸನ್ಮಾನ

ಗುರುಪುರ: ಫ್ರೆಂಡ್ಸ್ ಸರ್ಕಲ್ ಕೆಳಗಿನಕೆರೆ (ರಿ.) ಅಡ್ಡೂರು ಮತ್ತು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.), ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಇವುಗಳ ಜಂಟಿ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ರವಿವಾರ ಅಡ್ಡೂರಿನ ಸರ್ಕಾರಿ ಶಾಲೆಯಲ್ಲಿ ಯಶಸ್ವಿಯಾಗಿ ಜರುಗಿತು.ಅಡ್ಡೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಸದಖತುಲ್ಲಾ ಫೈಝಿ ಅವರು ದುಆ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಮಾನವನ ಜೀವ ಉಳಿಸುವ ರಕ್ತದಾನವು ಮಹಾದಾನವಾಗಿದೆ. ಇದಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ. ಯುವ ಸಮೂಹ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ […]

COMMUNITY NEWS LATEST NEWS

ಬಜ್ಜೋಡಿಯಲ್ಲಿ ‘ಮಾಣ್ಕಾಂ ಮೊತಿಯಾಂ-2’ ಮಕ್ಕಳ ಕೊಂಕಣಿ ರಜಾ ಶಿಬಿರಕ್ಕೆ ಚಾಲನೆ

ಮಂಗಳೂರು. ಎಪ್ರಿಲ್ 20: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಇನ್ಫೆಂಟ್ ಮೇರಿ ಚರ್ಚ್ ಬಜ್ಜೋಡಿ ಇವರ ಸಹಯೋಗದೊಂದಿಗೆ ಮಾಂಡ್ ಸೊಭಾಣ್ ಸಂಸ್ಥೆಯ ಸಹಕಾರದೊಂದಿಗೆ ನಡೆಸುವ ಮಾಣ್ಕಾಂ ಮೊತಿಯಾಂ-2 ಮಕ್ಕಳ ರಜಾ ಶಿಬಿರದ ಉದ್ಘಾಟನಾ ಸಮಾರಂಭ ಇನ್ಫೆಂಟ್ ಮೇರಿ ಸಭಾಭವನ ಬಜ್ಜೋಡಿ ಇಲ್ಲಿ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ವಹಿಸಿದ್ದರು.ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಕೊಂಕಣಿ ಮಕ್ಕಳು ಕೊಂಕಣಿ ಭಾಷೆಯನ್ನು ಕಲಿಯುವ ಅವಶ್ಯಕತೆ ಇದೆ. ಅಕಾಡೆಮಿಯು ಇಂತಹ ಶಿಬಿರಗಳಿಗೆ ಪ್ರೋತ್ಸಾಹವನ್ನು […]

LATEST NEWS

ಕ್ಯಾನ್ಸ್ ಚಲನಚಿತ್ರೋತ್ಸವದ ‘ಮಾರ್ಶೆ ಡು ಫಿಲ್ಮ್’ ವಿಭಾಗಕ್ಕೆ ಮಂಗಳೂರು ಮೂಲದ ನಿರ್ದೇಶಕಿಯ ‘ಸೆಪ್ಟೆಂಬರ್ 21’ ಸಿನಿಮಾ ಆಯ್ಕೆ

ಮಂಗಳೂರು: ಕ್ಯಾನ್ಸ್ ಚಲನಚಿತ್ರೋತ್ಸವದ ಮಾರ್ಶೆ ಡು ಫಿಲ್ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಆಲ್ಝೈಮರ್ ಮತ್ತು ಆರೈಕೆದಾರರ ಕುರಿತಾದ ಹಿಂದಿ-ಕನ್ನಡ ಚಿತ್ರ ಕ್ಯಾನ್ಸ್ 2026ರ ಮಾರ್ಶೆ ಡು ಫಿಲ್ಮ್ ವಿಭಾಗದಲ್ಲಿ ಪ್ರೀಮಿಯರ್ ಕಾಣಲಿದ್ದು, ಭಾರತದ ತುರ್ತು ಸಾಮಾಜಿಕ ನಿರೂಪಣೆಗಳನ್ನು ಜಾಗತಿಕವಾಗಿ ಎತ್ತಿ ತೋರಿಸಲಿದೆ. ಪ್ರಿಯಾಂಕಾ ಉಪೇಂದ್ರ, ಜರೀನಾ ವಹಾಬ್, ಪ್ರವೀಣ್ ಸಿಂಗ್ ಸಿಸೋಡಿಯಾ, ಅಜಿತ್ ಶಿಧಯೆ, ಮತ್ತು ಅಮಿತ್ ಬೆಹ್ಲ್ ಅಭಿನಯದ ಸೆಪ್ಟಂಬರ್ 21_ ಚಿತ್ರತಂಡವು, ಮೇ 12 ರಿಂದ ಮೇ 23 ರವರೆಗೆ ನಡೆಯಲಿರುವ 79ನೇ […]

LATEST NEWS

ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನಲ್ಲಿ ಸಂಭ್ರಮದ ವಾರ್ಷಿಕೋತ್ಸವ ಆಚರಣೆ

ಮಂಗಳೂರು : ನಗರದ ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ ಮೆಂಟ್‌ನ ವಾರ್ಷಿಕೋತ್ಸವವು ಎಪ್ರಿಲ್ 17ರಂದು ಕಾಲೇಜು ಆವರಣದಲ್ಲಿ ಅತ್ಯಂತ ಸಡಗರದಿಂದ ಜರುಗಿತು. ಪಾದುವಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಗುರುಗಳಾದ ವಾಲ್ಟರ್ ಡಿಸೋಜ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಂಗಳೂರು ಸ್ಮಾರ್ಟ್ ಸಿಟಿಯ ಪ್ರಧಾನ ವ್ಯವಸ್ಥಾಪಕ ಶ್ರೀ ಅರುಣ್ ಪ್ರಭ ಕೆ.ಎಸ್. ಮಾತನಾಡಿ, “ನಾನು ಪಾದುವಾ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಇಲ್ಲಿ ಪಡೆದ ಜ್ಞಾನ ಮತ್ತು ಶಿಸ್ತು ನನ್ನ […]