ಮಹಾಲಿಂಗೇಶ್ವರ ದೇವಳಕ್ಕೆ ₹ 7ಲಕ್ಷ ಮೌಲ್ಯದ ಬೆಳ್ಳಿ ಛತ್ರಿ ಸಮರ್ಪಣೆ
ಪುತ್ತೂರು: ತಾಲ್ಲೂಕಿನ ಬಡಗನ್ನೂರು ಗ್ರಾಮದ ಪಡುಮಲೆ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಳದ ಪವಿತ್ರಪಾಣಿ ಕೇಶವ ಭಟ್ ಕೆ.ಕೂವೆತೋಟ ಮತ್ತು ಕೆ.ಶಾಂತಕುಮಾರಿ ದಂಪತಿ ಇಲ್ಲಿನ ಮಹಾಲಿಂಗೇಶ್ವರ ದೇವಳಕ್ಕೆ 2.640 ಕೆ.ಜಿ.ಯ, ₹ 7ಲಕ್ಷ ಮೌಲ್ಯದ ಬೆಳ್ಳಿ ಛತ್ರಿ (ಕೊಡೆ) ಯನ್ನು ಕೊಡುಗೆಯಾಗಿ ಶನಿವಾರ ನೀಡಿದರು. ದೇವಳದ ಒಂದು ಕಟ್ಟೆಯ ಪುನರ್ ನಿರ್ಮಾಣಕ್ಕೆ ₹ 25 ಲಕ್ಷ ದೇಣಿಗೆ ನೀಡುವುದಾಗಿ ತಿಳಿಸಿದರು. ಪ್ರಸ್ತುತ ವಿಟ್ಲ ಧನ್ವಂತರಿ ನಿಲಯ ನಿವಾಸಿಯಾಗಿರುವ ಕೂವೆತೋಟ ಮನೆತನದ ಕೇಶವ ಭಟ್ ಕೆ.ಕೂವೆತೋಟ ಮತ್ತು ಕೆ.ಶಾಂತಕುಮಾರಿ ದಂಪತಿ […]











