Tag: canaratv news

DAKSHINA KANNADA HOME LATEST NEWS

ಮಂಗಳೂರು: ಭಾರತೀಯ ಸೇನೆಗೆ ಅರ್ಜಿ ಆಹ್ವಾನ

ಮಂಗಳೂರು:- ಭಾರತೀಯ ಸೇನೆಗೆ ಅಗ್ನಿವೀರ್ ಮತ್ತು ಶಾಶ್ವತ ವರ್ಗಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವೆಬ್‍ಸೈಟ್ www.joinindianarmy.nic.in ಮೂಲಕ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು. ಅಗ್ನಿವರ್ಗ ಮತ್ತು ಶಾಶ್ವತ ವರ್ಗಕ್ಕೆ ಫೆಬ್ರವರಿ 13 ರಿಂದ ಆನ್‍ಲೈನ್ ಅರ್ಜಿ ತೆರೆಯಲಾಗಿದೆ. ಜೂನ್ 1 ರಿಂದ ಜೂನ್ 15 ರವರೆಗೆ ತಾತ್ಕಾಲಿಕವಾಗಿ ಆನ್‍ಲೈನ್ ಪರೀಕ್ಷೆ ನಿಗದಿಪಡಿಸಲಾಗಿದೆ. ಅಗ್ನಿವೀರ್ ಜನರಲ್ ಡ್ಯೂಟಿ (ಜಿಡಿ) ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್ ಆಗಿರಬೇಕು. ಐದು ವಿಷಯಗಳಲ್ಲಿ ಒಟ್ಟು 45% ಅಂಕಗಳು ಹಾಗೂ […]

DAKSHINA KANNADA HOME LATEST NEWS

ಸಿ.ಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌: KSRTC ಬಸ್ ನಿಲ್ದಾಣಗಳಲ್ಲಿ ಲೈವ್‌ ಪ್ರಸಾರ

ಮಂಗಳೂರು:- ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ. 17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ. ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾರ್ಚ್ […]

DAKSHINA KANNADA HOME LATEST NEWS

ಪುತ್ತೂರಿನಲ್ಲಿ ಪಿಸ್ತೂಲ್ ತೋರಿಸಿ ಗುಂಡು ಹೊಡೆಯುವ ಬೆದರಿಕೆ: ಆರೋಪಿ ಬಂಧನ

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಪ್ರಯತ್ನಿಸಿದ ಘಟನೆ ಪುತ್ತೂರು ನಗರದಲ್ಲಿ ನಡೆದಿದೆ. ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಘಟನೆ ವಿವರ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಎಂಬವರು ಮಾ.2 ರಂದು ಪುತ್ತೂರಿನಿಂದ ಕೂರ್ನಡ್ಕಕ್ಕೆ ತನ್ನ ಕಾರಿನಲ್ಲಿ ಹೋಗುತ್ತಿದ್ದಾಗ, ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ಸುಮಾರು 30 ವರ್ಷ ಪ್ರಾಯದ ವ್ಯಕ್ತಿಯೊಬ್ಬ ಪಿರ್ಯಾದಿದಾರರ ಕಡೆಗೆ ಪಿಸ್ತೂಲ್ ನ್ನು […]

HOME

P.A ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್

ಮಂಗಳೂರು:  ಮಂಗಳೂರು ವಿಶ್ವವಿದ್ಯಾಲಯವು 2025ನೇ ಶೈಕ್ಷಣಿಕ ವರ್ಷದ ವಿವಿಧ ಪದವಿ ಕೋರ್ಸ್‌ಗಳ ರ‍್ಯಾಂಕ್ ಪಟ್ಟಿಯನ್ನು ಪ್ರಕಟಿಸಿದೆ. ಇದರಲ್ಲಿ  ಮಂಗಳೂರು ನಗರದ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಆಯಿಷತ್ ಲುತ್‌ಫಾ ನಜಾ ಕೆ.ಎ. (ನೋಂದಣಿ ಸಂಖ್ಯೆ: U05PA22S0023) ರವರು ಬಿ.ಎಸ್‌.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಕೋರ್ಸ್ ನಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ಒಟ್ಟು 4550 ಅಂಕಗಳಲ್ಲಿ 4220 ಅಂಕಗಳನ್ನು ಪಡೆದು ಶೇಕಡ 92.75 ಸಾಧನೆ ಮಾಡಿದ್ದು, 9.56 ಸಿಜಿಪಿಎ (CGPA) […]

HOME UDUPI

ಮಧ್ಯಪ್ರಾಚ್ಯದಲ್ಲಿ ಶಾಂತಿಗಾಗಿ ಮಾ.8 ರಂದು ವಿಶೇಷ ಪ್ರಾರ್ಥನೆ ಸಲ್ಲಿಸಿ: ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ

ಉಡುಪಿ: ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ಎಂದು ಕರೆ ನೀಡಲಾಗಿದ್ದು ಅದರಂತೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದಲ್ಲಿ ಮಾರ್ಚ್ 8 ರಂದು ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಕ್ರೈಸ್ತ ಸಮುದಾಯಕ್ಕೆ ಮನವಿ ಮಾಡಿದ್ದಾರೆ. ಯುದ್ಧ ಮತ್ತು ಅಸ್ಥಿರತೆಯಿಂದ ಉಂಟಾಗುತ್ತಿರುವ ಮಾನವೀಯ ದುಃಖವು ವಿಶ್ವಮಾನವ ಕುಟುಂಬಕ್ಕೆ ಆಳವಾದ ಗಾಯವನ್ನುಂಟುಮಾಡುತ್ತಿದೆ. […]

DAKSHINA KANNADA HOME LATEST NEWS

ಇಂದು ಮಂಗಳೂರಿನಿಂದ ಗಲ್ಫ್‌ ರಾಷ್ಟ್ರಗಳಿಗೆ ತೆರಳುವ ವಿಮಾನಗಳು ರದ್ದು

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಾ.5ರಂದು ಮಂಗಳೂರು-ದೋಹಾ (ಐಎಕ್ಸ್ 821), ದೋಹಾ – ಮಂಗಳೂರು (ಐಎಕ್ಸ್ 822), ಮಂಗಳೂರು-ದುಬೈ (ಐಎಕ್ಸ್ 831), ದುಬೈ-ಮಂಗಳೂರು (ಐಎಕ್ಸ್ 832), ಮಂಗಳೂರು – ದುಬೈ (ಐಎಕ್ಸ್ 813), ಮಾ.6ರ ದುಬೈ-ಮಂಗಳೂರು (ಐಎಕ್ಸ್ 814), ಮಾ5ರ ಮಂಗಳೂರು-ಬಹರೇನ್(ಐಕ್ಸ್ 841), ಮಾ.6ರ ಬಹರೇನ್-ಮಂಗಳೂರು (ಐಎಕ್ಸ್ 842), ಮಾ.5ರ ಮಂಗಳೂರು-ಕುವೈತ್ (ಐಎಕ್ಸ್ 851), ಮಾ.6ರ ಕುವೈತ್-ಮಂಗಳೂರು (ಐಎಕ್ಸ್ 852), ಮಾ.5ರ ಮಂಗಳೂರು-ದಮ್ಮಾಮ್ (ಐಎಕ್ಸ್ 847), ಮಾ.6ರ ದಮ್ಮಾಮ್-ಮಂಗಳೂರು (ಐಎಕ್ಸ್ 848), ಮಾ.5ರ ಮಂಗಳೂರು-ಅಬುಧಾಬಿ (ಐಎಕ್ಸ್ 815), […]

DAKSHINA KANNADA HOME LATEST NEWS

“ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡ್ತೀನಿ” ಎಂದವನ ಹೆಡೆಮುರಿ ಕಟ್ಟಿದ ಪೊಲೀಸರು

ಮಂಗಳೂರು: ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡ್ತೀನಿ ಎಂದು ಪ್ರಚೋದನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್‌ ಮಾಡಿದ್ದವನನ್ನು ಮಂಗಳೂರು ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಯನ್ನು ಶಂಕರ್ ಮಸ್ತಪ್ಪ ಮೊಗೆರ್ (35) ಎಂದು ಗುರುತಿಸಲಾಗಿದೆ. ಈತ ಉತ್ತರ ಕನ್ನಡ ಮೂಲದ ಭಟ್ಕಳದವ ಎಂದು ಮಾಹಿತಿ ದೊರೆತಿದೆ. ಇನ್‌ಸ್ಟಾಗ್ರಾಂನ ಪೋಸ್ಟ್‌ಗೆ “Support madi bro Ullal masjid hathira bomb blast madthini” ಎಂಬುದಾಗಿ ಇನ್‌ಸ್ಟಾಗ್ರಾಂನಲ್ಲಿ ಕಮೆಂಟ್‌ ಮಾಡಿದ್ದ. ಈ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಅಲರ್ಟ್‌ […]

DAKSHINA KANNADA HOME LATEST NEWS

RSSನ ಹಿರಿಯ ಕಾರ್ಯಕರ್ತ ಎಂ. ಸತೀಶ್ ಪ್ರಭು ನಿಧನ

ಮಂಗಳೂರು: ದಕ್ಷಿಣ ಕನ್ನಡದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡರಾಗಿದ್ದ ಸತೀಶ್ ಪ್ರಭು ಅವರು ಇಂದು ನಿಧನ ಹೊಂದಿದ್ದಾರೆ. ಬೆಳಗ್ಗೆ ಏಕಾಏಕಿ ಬ್ರೈನ್‌ ಹ್ಯಾಮರೇಜ್ ಗೆ ಒಳಗಾಗಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆಗೆ ನಿಧನ ಹೊಂದಿದ್ದಾರೆ. ಸತೀಶ್ ಪ್ರಭು ಅವರು ಪ್ರಸ್ತುತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳೂರಿನ ಕಾರ್‌ ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದರು. ಸಂಘನಿಕೇತನದಲ್ಲಿ ಕೇಶವ […]

DAKSHINA KANNADA HOME LATEST NEWS

ನಾಳೆ ಚಂದ್ರಗ್ರಹಣ: ಧರ್ಮಸ್ಥಳದಲ್ಲಿ ಪೂಜಾ ಸಮಯ ಬದಲಾವಣೆ

ಧರ್ಮಸ್ಥಳ : ಮಾರ್ಚ್ 3ಕ್ಕೆ ಚಂದ್ರಗ್ರಹಣ ಸಂಭವಿಸುತ್ತಿದ್ದು, ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಪೂಜಾ ಸಮಯ ಬದಲಾವಣೆ ಆಗಿದೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ದೇವರ ದರ್ಶನ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದು ಎಂದು […]

DAKSHINA KANNADA HOME LATEST NEWS

ಇಸ್ರೇಲ್-ಇರಾನ್ ಸಂಘರ್ಷ: ಮಂಗಳೂರು ವಿಮಾನ ಹಾರಾಟದಲ್ಲಿ ವ್ಯತ್ಯಯ

ಮಂಗಳೂರು: ಇಸ್ರೇಲ್ ಇರಾನ್ ಸಂಘರ್ಷದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ನಿಗದಿಯಾಗಿದ್ದ ಏರ್‌ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟವನ್ನ ಹಠಾತ್‌ ರದ್ದುಗೊಳಿಸಲಾಗಿದೆ. ಪ್ರಮುಖವಾಗಿ ದುಬೈಗೆ ತೆರಳುವ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಿದೇಶಕ್ಕೆ ಪ್ರಯಾಣ ಮಾಡುವ ಪ್ರಯಾಣಿಕರು ಆಯಾ ವಿಮಾನ ಸಂಸ್ಥೆಗಳು ಖಚಿತಪಡಿಸಿದ ಬಳಿಕವಷ್ಟೇ ವಿಮಾನ ನಿಲ್ದಾಣಕ್ಕೆ ಆಗಮಿಸಿ ಎಂದು ವಿಮಾನ ನಿಲ್ದಾಣ ಪ್ರಾಧಿಕಾರಿಗಳು ಮನವಿ ಮಾಡಿವೆ. ಮಂಗಳೂರು ಏರ್‌ಪೋರ್ಟ್‌ನಿಂದ ರದ್ದಾದ ವಿಮಾನಗಳು 9.25 ರ ಮಂಗಳೂರು – ಮಸ್ಕತ್ ಏರ್ […]