Tag: canaratv news

COMMUNITY NEWS LATEST NEWS

ಫಾದರ್ ಮುಲ್ಲರ್ ಸ್ಕೂಲ್ ಆಫ್ ನರ್ಸಿಂಗ್ ಶಾಲೆ ಮತ್ತು ಕಾಲೇಜ್ ಆಫ್ ನರ್ಸಿಂಗ್ ಹಾಗೂ ಫಾದರ್ ಮುಲ್ಲರ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

ಮಂಗಳೂರು: ಮಂಗಳೂರಿನ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕಗಳಾದ ಫಾದರ್ ಮುಲ್ಲರ್ ಸ್ಕೂಲ್ ಆಫ್ ನರ್ಸಿಂಗ್, ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ಮತ್ತು ಫಾದರ್ ಮುಲ್ಲರ್ ಸ್ಪೀಚ್ ಆಂಡ್ ಹಿಯರಿಂಗ್ ಕಾಲೇಜುಗಳ ಪದವಿ ಪ್ರದಾನ ಸಮಾರಂಭ ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಂಸ್ಥೆಯ ಆಡಳಿತ ಮಂಡಳಿ, ಗಣ್ಯ ಅತಿಥಿಗಳು, 226 ಪದವೀಧರರು, ಅಧ್ಯಾಪಕರು, ಪೋಷಕರು ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪದವೀಧರ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರ ಶೈಕ್ಷಣಿಕ ಮೆರವಣಿಗೆಯೊಂದಿಗೆ […]

LATEST NEWS

ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಸಮಿತಿ ಘೋಷಣೆ

ಪುತ್ತೂರು: ಇರ್ದೆ ಶ್ರೀ ವಿಷ್ಣುಮೂರ್ತಿ ದೇವಾಲಯ ಗೋಪಾಲಕ್ಷೇತ್ರ ಮತ್ತು ಪೂಮಾಣಿ-ಕಿನ್ನಿಮಾಣಿ, ರಾಜನ್ ದೈವಗಳ ಕಡಿಕೆ ಚಾವಡಿಯಲ್ಲಿ ನಡೆಯಲಿರುವ ಜೀರ್ಣೋದ್ದಾರ ಕಾರ್ಯಗಳಿಗಾಗಿ ರಚಿಸಲಾಗಿರುವ ನೂತನ ಜೀರ್ಣೋದ್ದಾರ ಸಮಿತಿಯ ಘೋಷಣೆ ಹಾಗೂ ಸಾಮೂಹಿಕ ಹಾಲು ಪಾಯಸ ಸೇವೆ ಮತ್ತು ಸಾರ್ವಜನಿಕ ರಂಗಪೂಜೆ ಸೇವೆಗಳು ಎ.18ರಂದು ನಡೆಯಿತು. ಜೀರ್ಣೋದ್ದಾರ ಸಮಿತಿಯ ಗೌರವ ಅಧ್ಯಕ್ಷರಾಗಿರುವ ಶಾಸಕ ಅಶೋಕ್ ಕುಮಾ‌ರ್ ರೈಯವರು ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ಜೀರ್ಣೋದ್ದಾರಕ್ಕೆ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ 1.50 ಕೋಟಿ ಅಧಿಕ ವಾಗ್ದಾನ […]

HOME LATEST NEWS

ಕಾಂಗ್ರೆಸ್ ನಾಯಕರು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲಿ; ಅಭಿವೃದ್ಧಿ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ಸವಾಲು

ಮಂಗಳೂರು: “ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಪಾಠ ಮಾಡುವ ಕಾಂಗ್ರೆಸ್ ನಾಯಕರು, ಮೊದಲು ತಾವು ಅದನ್ನು ಪಾಲಿಸುತ್ತಿ ದ್ದೇವೆಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ” ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಇಂದಿನ ಪತ್ರಿಕಾಗೋಷ್ಠಿಯಲ್ಲಿ ಗುಡುಗಿದ್ದಾರೆ. ಕಾಂಗ್ರೆಸ್ ನಾಯಕರ ಆರೋಪಗಳಿಗೆ ಸಂಬಂಧಿಸಿದಂತೆ ಅವರು ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ಬಂದ ಅನುದಾನವೆಷ್ಟು ಮತ್ತು ಹಾಲಿ ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಅವಧಿಯಲ್ಲಿ ಬಂದ ಅನುದಾನ ಹಾಗೂ ಜಾರಿಯಾದ ಕಾಮಗಾರಿಗಳ ಬಗ್ಗೆ ಶ್ವೇತಪತ್ರ ಬಿಡುಗಡೆ […]

LATEST NEWS

ಆರ್ಯಭಟ ಪ್ರಶಸ್ತಿಗೆ ಡಾ.ಸಂಜೀವ ದಂಡೆಕೇರಿ ಆಯ್ಕೆ

ಮಂಗಳೂರು: ಬೆಂಗಳೂರಿನ ಆರ್ಯಭಟ ಕಲ್ಬರಲ್ ಆರ್ಗನೈಸೇಷನ್‌ ಸಂಸ್ಥೆಯು ರಾಷ್ಟ್ರ- ಅಂತರ್‌ ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದ ಅಸಾಧಾರಣ ಸಾಧಕರಿಗೆ ನೀಡುವ 51ನೇ ವರ್ಷದ ಅಂತರ್‌ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಕರಾವಳಿ ಕರ್ನಾಟಕದ ಶ್ರೇಷ್ಠ ನಾಟಕಕಾರ, ನಿರ್ದೇಶಕ ತುಳು ರಂಗಭೂಮಿ ಮತ್ತು ಚಿತ್ರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ಡಾ.ಸಂಜೀವ ದಂಡೆಕೇರಿ ಆಯ್ಕೆ ಯಾಗಿದ್ದಾರೆ. ನಾಟಕ ರಂಗದೊಂದಿಗೆ ಡಾ. ಸಂಜೀವ ದಂಡೆಕೇರಿ ಮಾಡಿರುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟನೆ ತಿಳಿಸಿದೆ. *ಆಯುರ್ವೇದ […]

COMMUNITY NEWS HOME LATEST NEWS

ಮಂಗಳೂರು ಧರ್ಮಕ್ಷೇತ್ರದ ಧರ್ಮಗುರುಗಳ ನೂತನ ವರ್ಗಾವಣೆ ಪಟ್ಟಿ ಬಿಡುಗಡೆ

ಮಂಗಳೂರು: ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯದ 62 ಧರ್ಮಗುರುಗಳ ವರ್ಗಾವಣೆ ಹಾಗೂ ನೂತನ ನೇಮಕಾತಿ ಪಟ್ಟಿ ಬಿಡುಗಡೆಯಾಗಿದೆ. ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ.ಪೀಟರ್‌ ಪಾವ್ಲ್‌ ಸಲ್ಡಾನ ಅವರ ಆದೇಶದ ಮೇರೆಗೆ ಈ ವರ್ಗಾವಣೆ ಮಾಡಲಾಗಿದ್ದು, ಧರ್ಮಕ್ಷೇತ್ರಗಳ ಆಧ್ಯಾತ್ಮಿಕ ಹಾಗೂ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದಾರೆ. ಈ ವರ್ಗಾವಣೆಯಲ್ಲಿ ಚರ್ಚ್‌ನ ಪಾದ್ರಿಗಳು, ಸಹಾಯಕ ಪಾದ್ರಿಗಳು, ಆಡಳಿತಾಧಿಕಾರಿಗಳು ಮತ್ತು ಧರ್ಮಕ್ಷೇತ್ರದ ಸಂಸ್ಥೆಗಳಿಗೆ ವಿಶೇಷ ನಿರ್ದೇಶಕರು ಸೇರಿದಂತೆ ನೇಮಕಾತಿಗಳು ನಡೆದಿವೆ. ಈ ನೇಮಕಾತಿಗಳು ಮೇ ಮತ್ತು ಜೂನ್ 2026 […]

COMMUNITY NEWS LATEST NEWS

ಮಂಗಳೂರು ಧರ್ಮಕ್ಷೇತ್ರಕ್ಕೆ ಐವರು ನೂತನ ಯಾಜಕರ ಸೇರ್ಪಡೆ: ಕುಲಶೇಖರ ಚರ್ಚ್‌ನಲ್ಲಿ ಭವ್ಯ ದೀಕ್ಷಾ ಪ್ರದಾನ ಸಮಾರಂಭ

ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ ಇತಿಹಾಸದಲ್ಲಿ ಒಂದು ಮಹತ್ವದ ಘಟನೆಯಾಗಿ, ಐವರು ಸೇವಾದರ್ಶಿಗಳು ಪರಮ ಪೂಜ್ಯ ಡಾ| ಪೀಟರ್ ಪಾವ್ಕ್ ಸಲ್ಮಾನ್ಯಾ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಇವರಿಂದ ಯಾಜಕ ದೀಕ್ಷೆಯನ್ನು ಪಡೆದರು. ಈ ಪವಿತ್ರ ಸಮಾರಂಭವು 2026ರ ಏಪ್ರಿಲ್ 16, ಗುರುವಾರದಂದು ಕುಲಶೇಖರದ ಪವಿತ್ರ ಶಿಲುಬೆ ಚರ್ಚ್‌ ನಲ್ಲಿ (Cordel Church) ಅತ್ಯಂತ ಭಕ್ತಿಭಾವದಿಂದ ಜರುಗಿತು.ಈ ಸಂಭ್ರಮದ ಬಲಿಪೂಜೆಯಲ್ಲಿ ಧರ್ಮಕ್ಷೇತ್ರದ ಶ್ರೇಷ್ಠಗರುಗಳಾದ ವಂ| ಮ್ಯಾಕ್ಸಿಮ್ ಎಲ್. ನೊರೊನ್ಹಾ ಧಾರ್ಮಿಕರ ಪಾಲನಾ ವಿಕಾರ್ ವಂ। ಡಾ| ಡೇನಿಯಲ್ ವೀಗಾಸ್ OP, […]

COMMUNITY NEWS LATEST NEWS

ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ 36ನೇ ಪದವಿ ಪ್ರದಾನ ಸಮಾರಂಭ

ಮಂಗಳೂರು, ಏಪ್ರಿಲ್ 16: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 36ನೇ ಪದವಿ ಪ್ರದಾನ ಸಮಾರಂಭವು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಗುರುವಾರ ಅತ್ಯಂತ ಸಂಭ್ರಮದಿಂದ ಜರುಗಿತು.ಕಾರ್ಯಕ್ರಮಕ್ಕೆ ಪ್ರವೇಶದ್ವಾರದಿಂದ ಆಕರ್ಷಕ ಬ್ಯಾಂಡ್ ಹಾಗೂ ಭವ್ಯ ಮೆರವಣಿಗೆಯ ಮೂಲಕ ಚಾಲನೆ ನೀಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಸಂಸ್ಥೆಯ ಅಧ್ಯಕ್ಷರಾದಅತಿ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ,ಮುಖ್ಯ ಅತಿಥಿಗಳಾದ ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ […]

HOME LATEST NEWS

*ನಾರಿ ಶಕ್ತಿ ವಂದನ್‌ ಸಮ್ಮೇಳನ; ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ*

ಮಂಗಳೂರು: ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಐತಿಹಾಸಿಕವಾದ ’ನಾರಿ ಶಕ್ತಿ ವಂದನ್‌ ಅಧಿನಿಯಮʼದ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ವಿವಿಧ ಕ್ಷೇತ್ರಗಳ ಮಹಿಳೆಯರೊಂದಿಗೆ ಮಂಗಳೂರಿನಲ್ಲಿ ನಾರಿ ಶಕ್ತಿ ವಂದನ್‌ ಸಮ್ಮೇಳನ ಆಯೋಜಿಸಿದ್ದು, ಈ ವೇಳೆ ಮಹಿಳೆಯರು ವ್ಯಕ್ತಪಡಿಸಿರುವ ಅಭೂತಪೂರ್ವ ಬೆಂಬಲ, ಸಂತಸ ಹಾಗೂ ಕೃತಜ್ಞತೆ ಮಾತುಗಳನ್ನು ಪ್ರಧಾನಮಂತ್ರಿ ಮೋದಿ ಅವರಿಗೆ ತಲುಪಿಸುವುದಾಗಿ ತಿಳಿಸಿದರು. ದೇಶದಲ್ಲಿ ಮಹಿಳೆಯರಿಗೆ ರಾಜಕೀಯವಾಗಿ ಹೆಚ್ಚಿನ ಅವಕಾಶ-ಪ್ರಾತಿನಿಧ್ಯ ನೀಡುವ ಮೂಲಕ […]

HOME LATEST NEWS NATIONAL

ಗದ್ದಲದ ನಡುವೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ

ನವದೆಹಲಿ, ಏಪ್ರಿಲ್ 16: ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2026 ಮಂಡನೆಯಾಗಿದೆ. ದೇಶದ ಜನಸಂಖ್ಯೆಗೆ ಅನುಗುಣವಾಗಿ ಲೋಕಸಭೆಯ ಬಲವನ್ನು ಪ್ರಸ್ತುತ ಇರುವ 543 ರಿಂದ 850 ಸ್ಥಾನಗಳಿಗೆ ಹೆಚ್ಚಿಸುವ ಪ್ರಸ್ತಾವನೆ ಇದೆ. ಇದೇ ರೀತಿ ರಾಜ್ಯ ವಿಧಾನಸಭೆಗಳ ಸ್ಥಾನಗಳನ್ನೂ ವಿಸ್ತರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಕ್ಷೇತ್ರ ಪುನರ್ವಿಂಗಡಣೆಯ ನಂತರವಷ್ಟೇ ಇದು ಸಾಧ್ಯವಾಗಲಿದೆ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಲೋಕಸಭೆಯಲ್ಲಿ […]

LATEST NEWS

ಮಂಗಳೂರು ವಿವಿ ಮಟ್ಟದ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜು ತಂಡಕ್ಕೆ ಉಭಯ ವಿಭಾಗಗಳಲ್ಲಿ ಪ್ರಶಸ್ತಿ

ಮಂಗಳೂರು,ಏಪ್ರಿಲ್ 15: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಈ ರೋಚಕ ಕ್ರೀಡಾಕೂಟದಲ್ಲಿ ಮೂಡುಬಿದ್ರೆಯ ಆಳ್ವಾಸ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸಮಾರೋಪ ಸಮಾರಂಭ: ಪಂದ್ಯಾಟದ ಸಮಾರೋಪ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭವು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆವರೆಂಡ್ ಡಾ. ಸ್ಟ್ಯಾನಿ ಗೋವಿಯಸ್ ಅವರ ಅಧ್ಯಕ್ಷತೆಯಲ್ಲಿ […]