Tag: canaratv news

HOME LATEST NEWS

ಪ್ರಧಾನಿ ಮೋದಿ ಆಡಳಿತದ ಮೈಲಿಗಲ್ಲು: ಕದ್ರಿ ದೇವಸ್ಥಾನದಲ್ಲಿ ಬಿಜೆಪಿ ವತಿಯಿಂದ ವಿಶೇಷ ರಂಗ ಪೂಜೆ

ಮಂಗಳೂರು, ಜೂನ್ 10: ಪ್ರಧಾನಿ ನರೇಂದ್ರ ಮೋದಿಯವರು 4,399 ದಿನಗಳ ಯಶಸ್ವಿ ಆಡಳಿತ ಪೂರೈಸಿ, ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಿಗಲಿ ಮತ್ತು ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಕದ್ರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, […]

HOME LATEST NEWS NATIONAL

ಮೋದಿ ಸರ್ಕಾರದ 12 ವರ್ಷದಲ್ಲಿ ಆಡಳಿತ ಮತ್ತು ಹಣಕಾಸು ವ್ಯವಸ್ಥೆಯಲ್ಲಿ ಸಂಚಲನ ಸೃಷ್ಟಿಸಿದ ಡಿಜಿಟಲ್ ಸೇವೆಗಳು

ನವದೆಹಲಿ, ಜೂನ್ 10: ಮೋದಿ ಸರ್ಕಾರದ 12 ವರ್ಷಗಳ ಅವಧಿಯಲ್ಲಿ ಡಿಜಿಟಲ್ ಸೇವೆಗಳು ಭಾರತೀಯರ ದೈನಂದಿನ ಜೀವನವನ್ನು ಪರಿವರ್ತಿಸಿವೆ. ಯುಪಿಐ, ಜನ ಧನ್ ಖಾತೆ, ಆಧಾರ್, ಡಿಬಿಟಿ, ಫಾಸ್ಟ್‌ಟ್ಯಾಗ್‌ನಂತಹ ಯೋಜನೆಗಳು ಹಣಕಾಸು ಸೇರ್ಪಡೆ, ಆಡಳಿತದ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಿವೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ನಾಗರಿಕರಿಗೆ ಸುಲಭ ಹಾಗೂ ಸುಗಮ ಸೇವೆಗಳನ್ನು ಒದಗಿಸಿ, ಡಿಜಿಟಲ್ ನಂಬಿಕೆಯನ್ನು ಮೂಡಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತಾವಧಿಯಲ್ಲಿ ಭಾರತೀಯರ ದೈನಂದಿನ ಜೀವನವನ್ನು ಬದಲಾಯಿಸಿದ ಪ್ರಮುಖ ಡಿಜಿಟಲ್ ಸೇವೆಗಳು […]

HOME NATIONAL

ನೆಹರು ದಾಖಲೆ ಸರಿಗಟ್ಟಿದ ನರೇಂದ್ರ ಮೋದಿ: ಸುದೀರ್ಘ 12 ವರ್ಷ ಪ್ರಧಾನಿಯಾಗಿ ದಾಖಲೆ; ಎನ್‌ಡಿಎ ನಾಯಕರಿಂದ ಸನ್ಮಾನ

ನವದೆಹಲಿ: ಜೂನ್ 10 : ನರೇಂದ್ರ ಮೋದಿ ನಿರಂತರ ಪ್ರಧಾನಿಯಾಗಿ 12 ವರ್ಷ ಪೂರೈಸಿದ್ದು, ಭಾರತದ ಮಾಜಿ ಪ್ರಧಾನಿ ಜವಾಹರ್ ಲಾಲ್ ಅವರ ದಾಖಲೆಯನ್ನು ಸರಿಗಟ್ಟಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ನೆಹರೂ 4,398 ದಿನಗಳ ಕಾಲ ಪ್ರಧಾನಿಯಾಗಿದ್ರೆ, ಮೋದಿಯರು ಇಂದಿಗೆ ಆ ದಾಖಲೆಯನ್ನ ಮುರಿದು 4,399 ದಿನಗಳನ್ನು ಪೂರೈಸಿದ್ದಾರೆ. ಮೊದಲ ಬಾರಿಗೆ 2014 ಮೇ 26ರಂದು ಪ್ರಮಾಣವಚನ ಸ್ವೀಕರಿಸಿದ್ದ ನರೇಂದ್ರ ಮೋದಿಯವರು ಅಂದಿನಿಂದ ಇಂದಿನವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ […]

LATEST NEWS

ಶಕ್ತಿನಗರ ಕಾಲೇಜಿನಲ್ಲಿ MRPL CSR ಯೋಜನೆಯಡಿ ನೂತನ ಸೌಲಭ್ಯಗಳ ಉದ್ಘಾಟನೆ: ಶಾಸಕ ವೇದವ್ಯಾಸ ಕಾಮತ್ ಶ್ಲಾಘನೆ

ಮಂಗಳೂರು, ಜೂನ್ 10: ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂಆರ್‌ಪಿಎಲ್ ಸಿ‌ಎಸ್‌ಆರ್ ಯೋಜನೆಯಡಿಯಲ್ಲಿ ನಿರ್ಮಿಸಲಾದ ಬಾಲಕಿಯರ ಮತ್ತು ಬಾಲಕರ ಶೌಚಾಲಯಗಳು, ನೀರಿನ ಸಂಪು ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಉದ್ಘಾಟನಾ ಸಮಾರಂಭವು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸ್ವಚ್ಛತೆಯ ದೃಷ್ಟಿಯಿಂದ ಇಂತಹ ಮೂಲಭೂತ ಸೌಕರ್ಯಗಳು ಅತ್ಯಂತ ಅಗತ್ಯವಾಗಿದ್ದು, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ನಮ್ಮ ಮನವಿಗೆ ಸ್ಪಂದಿಸಿ ಎಂಆರ್‌ಪಿಎಲ್ ನೀಡುತ್ತಿರುವ ಸಹಕಾರ […]

HOME LATEST NEWS

ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ; ತುರ್ತು ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ ‘ಹಳದಿ ಎಲೆ ರೋಗ’ ಮತ್ತು ‘ಎಲೆ ಚುಕ್ಕಿ ರೋಗ’ ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದ ಪ್ರಮುಖ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಈ ರೋಗಗಳ ವ್ಯಾಪಕ ಹರಡುವಿಕೆಯಿಂದಾಗಿ ರೈತರು ಎದುರಿಸುತ್ತಿರುವ ಗಂಭೀರ ಆರ್ಥಿಕ ಮತ್ತು […]

LATEST NEWS

ತುಳು ಸಿನಿಮಾರಂಗದಲ್ಲಿ ಮಿಂಚುತ್ತಿರುವ ಕೊಂಕಣಿ ಪ್ರತಿಭೆ ವೆನ್ಸಿಟಾ ಡಾಯಸ್: ಜೂನ್ 11ಕ್ಕೆ ಬಿಡುಗಡೆಯಾಗಲಿದೆ ‘ಕಜ್ಜ’

ಮಂಗಳೂರು, ಜೂನ್ 09: ಮಂಗಳೂರಿನ ಪ್ರತಿಭಾವಂತ ಮಗಳು ವೆನ್ಸಿಟಾ ಡಾಯಸ್ ಅವರು, ಜೂನ್ 11ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿರುವ ಬಹುನಿರೀಕ್ಷಿತ ತುಳು ಚಿತ್ರ ‘ಕಜ್ಜ’ದ ಮೂಲಕ ತುಳು ಸಿನಿಮಾರಂಗದಲ್ಲಿ ತಮ್ಮ ಹೆಜ್ಜೆಯನ್ನು ಮುಂದುವರಿಸುತ್ತಿದ್ದು, ಯುವ ಕನಸುಗಾರರಿಗೆ ಸ್ಫೂರ್ತಿಯಾಗಿದ್ದಾರೆ. ಕ್ಯಾಥೊಲಿಕ್ ಸಮುದಾಯದ ಹೆಮ್ಮೆಯ ಸದಸ್ಯೆ ಮತ್ತು ಭಾವನಾತ್ಮಕ ಕಲಾವಿದೆಯಾಗಿರುವ ವೆನ್ಸಿಟಾ, ಈಗಾಗಲೇ ‘ಅಸ್ಮಿತಾಯ್’ ಮತ್ತು ‘ಗಬ್ಬರ್ ಸಿಂಗ್’ನಂತಹ ಚಿತ್ರಗಳಲ್ಲಿನ ತಮ್ಮ ಅಭಿನಯದ ಮೂಲಕ ಮನರಂಜನಾ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ. ಅವರ ಶ್ರದ್ಧೆ ಮತ್ತು ಪ್ರತಿಭೆಗೆ ‘ಕೋಸ್ಟಲ್‌ವುಡ್ ಫಿಲ್ಮ್‌ಫೇರ್ ಅವಾರ್ಡ್ಸ್-2025’ರಲ್ಲಿ ‘ಅತ್ಯುತ್ತಮ […]

LATEST NEWS

ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆ: ಸಂತ ಅಲೋಶಿಯಸ್ ಗೊನ್ಜಾಗ ಶಾಲೆಯ ಯುವರಾಜ್‌ಗೆ ಚಿನ್ನ ಹಾಗೂ ಬೆಳ್ಳಿ ಪದಕಗಳ ಗರಿ

ಬೆಂಗಳೂರು, ಜೂನ್ 09: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಜೂನ್ 5ರಂದು ನಡೆದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಗೊನ್ಜಾಗ ಶಾಲೆಯ 9ನೇ ತರಗತಿ ‘ಬಿ’ ವಿಭಾಗದ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಪ್ರತಿಭಾವಂತ ವಿದ್ಯಾರ್ಥಿ 60 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಇದರೊಂದಿಗೆ ಉದ್ದ ಜಿಗಿತ ಸ್ಪರ್ಧೆಯಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕವನ್ನು […]

LATEST NEWS

ಡೊರ್ನಹಳ್ಳಿಯಲ್ಲಿ ಸಂತ ಅಂತೋನಿ ಯವರ ವಾರ್ಷಿಕ ಮಹೋತ್ಸವದ ಐದನೇ ದಿನದ ನೊವೆನಾ ಭಕ್ತಿ ಆಚರಣೆ

ಮೈಸೂರು, ಜೂನ್ 08: ಮೈಸೂರಿನ ಡೊರ್ನಹಳ್ಳಿಯಲ್ಲಿರುವ ಪ್ರಸಿದ್ಧ ಸಂತ ಅಂತೋನಿಯವರ ಬೆಸಿಲಿಕಾದಲ್ಲಿ ವಾರ್ಷಿಕ ಮಹೋತ್ಸವದ ಸಿದ್ಧತೆಯಾಗಿ ಐದನೇ ದಿನದ ನೊವೆನಾ ಪ್ರಾರ್ಥನೆಯು ಜೂನ್ 08 ಸೋಮವಾರ ಅತ್ಯಂತ ಭಕ್ತಿ ಶ್ರದ್ಧೆಗಳಿಂದ ನಡೆಯಿತು. ಈ ಪವಿತ್ರ ದಿವ್ಯ ಬಲಿಪೂಜೆಯ ನೇತೃತ್ವವನ್ನು ಮಡಿಕೇರಿಯ ಸಂತ ಮೈಕಲ್ ಚರ್ಚ್‌ನ ಧರ್ಮಗುರುಗಳಾದ ರೆ| ಫಾದರ್ ಪ್ಯಾಟ್ರಿಕ್ ಕ್ಸೇವಿಯರ್ ಅವರು ವಹಿಸಿದ್ದರು. ತಮ್ಮ ಧರ್ಮೋಪದೇಶದಲ್ಲಿ ಮಾತನಾಡಿದ ಫಾದರ್ ಪ್ಯಾಟ್ರಿಕ್ ಕ್ಸೇವಿಯರ್ ಅವರು, “ಸಂತ ಅಂತೋನಿಯವರ ಜೀವನ ಮತ್ತು ಬೋಧನೆಗಳನ್ನು ಮಾದರಿಯಾಗಿಟ್ಟುಕೊಂಡು ಪ್ರಾರ್ಥನೆ, ನಂಬಿಕೆ ಮತ್ತು […]

LATEST NEWS

ಬಡವರ ನೋವಿಗೆ ಸ್ಪಂದಿಸಿದ ಪುತ್ತೂರು ಶಾಸಕ ಅಶೋಕ್ ರೈ: ವೃದ್ಧೆಯ ಕಣ್ಣೀರು ಒರೆಸಿದ ಜನನಾಯಕ

ಪುತ್ತೂರು, ಜೂನ್ 08 : ಅಧಿಕಾರ ಎನ್ನುವುದು ಕೇವಲ ಕಚೇರಿಯ ಎಸಿ ರೂಮಿನಲ್ಲಿ ಕುಳಿತು ಆದೇಶ ಮಾಡುವುದಲ್ಲ, ಅದು ಜನರ ನಡುವೆ ಹೋಗಿ ಅವರ ಕಷ್ಟ ಸುಖಗಳಿಗೆ ಭಾಗಿಯಾಗುವುದು ಎಂಬುದನ್ನು ಪುತ್ತೂರು ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ಅವರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಬಲ್ನಾಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಶಾಸಕರ ಬಡವರ ಪರ ಕಾಳಜಿಗೆ ಸಾಕ್ಷಿಯಾಗಿದೆ. ಮೇಲಿನ ಚಿತ್ರವನ್ನು ನೋಡಿ, ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ರೈ ಅವರು ವೃದ್ದ ತಾಯಿಯೋರ್ವರಿಗೆ ಎರಡು ಕೈಗಳನ್ನು ಜೋಡಿಸಿ ಕೈ […]

LATEST NEWS

ಕಲಾಂಗಣದಲ್ಲಿ ಹಾಸ್ಯರಸ ಉಕ್ಕಿಸಿದ ‘ಉಪ್ರಾಂತ್‌ಚ್‌ ಕಳ್ಚೆಂ’ ನಾಟಕ

ಮಂಗಳೂರು: ಪ್ರಸಿದ್ಧ ಕೊಂಕಣಿ ಸಾಂಸ್ಕೃತಿಕ ಸಂಘಟನೆ ‘ಮಾಂಡ್‌ ಸೊಭಾಣ್‌’ ಇದರ ತಿಂಗಳ ಸರಣಿಯ 294 ನೇ ಕಾರ್ಯಕ್ರಮವು ಜೂನ್ 07 ರಂದು ಶಕ್ತಿನಗರದ ಕಲಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಸಂಗೀತ ಉಪಕರಣಗಳ ಮಾರಾಟ ಮಳಿಗೆ ‘ಸಿಂಫನಿ’ ಇದರ ಮಾಲಕರಾದ ಲೊಯ್‌ ನೊರೊನ್ಹಾ ಇವರು ಸಾಂಪ್ರದಾಯಿಕವಾಗಿ ಗಂಟೆ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಮಾಂಡ್ ಸೊಭಾಣ್ ಅಧ್ಯಕ್ಷರಾದ ಲುವಿ ಪಿಂಟೊ ಮತ್ತು ಕಾರ್ಯದರ್ಶಿ ರೊನಿ ಕ್ರಾಸ್ತಾ ಉಪಸ್ಥಿತರಿದ್ದರು. ಉದ್ಘಾಟನೆಯ ನಂತರ ಪ್ರಸಿದ್ಧ ‘ಕೊಮಿಡಿ ಕಂಪೆನಿ’ ನಾಟಕ […]